ಹಣಕಾಸು ಕೊರತೆಯಿಂದ ಜಿಲ್ಲಾ ಕೇಂದ್ರ ಗ್ರಂಥಾಲಯ ಕಾಮಗಾರಿ ಸ್ಥಗಿತ


Team Udayavani, May 21, 2019, 6:20 AM IST

library

ಉಡುಪಿ: ನಗರದ ಜಿಲ್ಲಾ ಕೇಂದ್ರ ಗ್ರಂಥಾಲಯದ ಕಟ್ಟಡ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದ್ದು, ಒಳಾಂಗಣ ವಿನ್ಯಾಸಕ್ಕೆ ಹಣಕಾಸು ಕೊರತೆಯಿಂದ ಗ್ರಂಥಾಲಯದ ಕಾಮಗಾರಿ ಸ್ಥಗಿತಗೊಂಡಿದೆ.

5.35 ಕೋ ಅನುದಾನ
ನೂತನ ಡಿಜಿಟಲ್‌ ಗ್ರಂಥಾಲಯ ಅಜ್ಜರಕಾಡು ಸಮೀಪದ ಸುಮಾರು 20 ಸೆಂಟ್ಸ್‌ ಜಾಗದಲ್ಲಿ 5.35 ಕೋ.ರೂ. ವೆಚ್ಚದಲ್ಲಿ ಕಟ್ಟಡ ನಿರ್ಮಿಸುವ ಯೋಜನೆ ರೂಪಿಸಲಾಗಿತ್ತು. ಅದಕRಾಗಿ ಆಸ್ಕರ್‌ ಫೆರ್ನಾಂಡಿಸ್‌ ರಾಜ್ಯಸಭಾ ಸದಸ್ಯರ ನಿಧಿಯಿಂದ 99. 56 ಲ.ರೂ., ನಗರಾಭಿವೃದ್ಧಿ ಪ್ರಾಧಿಕಾರದಿಂದ 87.54 ಲ.ರೂ., ಗ್ರಂಥಾಲಯ ಇಲಾಖೆಯಿಂದ 1 ಕೋ., ಲೋಕಸಭಾ ಸದಸ್ಯೆ ಶೋಭಾ ಕರಂದ್ಲಾಜೆಯವರ ಸಂಸದರ ನಿಧಿಯಿಂದ 5 ಲ. ರೂ. ಸೇರಿದಂತೆ ಒಟ್ಟು 3.35 ಕೋ. ಕಟ್ಟಡ ನಿರ್ಮಾಣಕ್ಕೆ ಬಳಕೆ ಮಾಡಲಾಗಿದೆ.

ಒಳಾಂಗಣ ವಿನ್ಯಾಸ ಬಾಕಿ
ಕಟ್ಟಡ ಕಾಮಗಾರಿ ಪೂರ್ಣಗೊಂಡು ಮೂರು ತಿಂಗಳು ಕಳೆದಿವೆ. ಚುನಾವಣೆ ನೀತಿ ಸಂಹಿತೆ ಹಾಗೂ ಹಣಕಾಸು ಕೊರತೆಯಿಂದ ಒಳಾಂಗಣ ವಿನ್ಯಾಸ ಕಾಮಗಾರಿ ಸ್ಥಗಿತಗೊಂಡಿದೆ. ಒಳಾಂಗಣ ವಿನ್ಯಾಸಕ್ಕೆ ಇನ್ನೂ 2 ಕೋ ಅಗತ್ಯವಿದೆ.

ಹೈಟೆಕ್‌ ಮಾದರಿ ವಿನ್ಯಾಸ
ಹೊಸದಾಗಿ ನಿರ್ಮಾಣವಾಗಲಿರುವ ಜಿಲ್ಲಾ ಕೇಂದ್ರ ಗ್ರಂಥಾಲಯ ಕಟ್ಟಡ ಹೈಟೆಕ್‌ ಮಾದರಿಯಲ್ಲಿ ವಿನ್ಯಾಸಗೊಳಿಸಲಾಗಿದೆ. ಅತ್ಯಾಧುನಿಕ ಮಾದರಿಯ ತಂತ್ರಜ್ಞಾನ ಸೌಲಭ್ಯಗಳನ್ನು ಆಳವಡಿಸಲಾಗಿದೆ. ತಳಮಹಡಿ ಸೇರಿದಂತೆ ಒಟ್ಟು ನಾಲ್ಕು ಮಹಡಿಗಳಿವೆ.

ತಳಮಹಡಿಯಲ್ಲಿ ವಾಹನ ನಿಲುಗಡೆ, ಲಿಫ್ಟ್, ಮೆಟ್ಟಿಲು, ಜನರೇಟರ್‌ ಹಾಗೂ ಪುಸ್ತಕ ಸಂಗ್ರಹ ಕೊಠಡಿ ನಿರ್ಮಿಸಲಾಗಿದೆ. ನೆಲ ಮಹಡಿಯಲ್ಲಿ ಹಿರಿಯ ನಾಗರಿಕರ ಕೊಠಡಿ, ಮಕ್ಕಳ ಒಳಾಂಗಣ ಕ್ರೀಡೆ ಹಾಗೂ ಮಕ್ಕಳ ಪುಸ್ತಕ ವಿಭಾಗ, ದಿನಪತ್ರಿಕೆಗಳ ವಿಭಾಗ, ವಾರ ಹಾಗೂ ತಿಂಗಳ ಪತ್ರಿಕೆಗಳಿಗೆ ಪ್ರತ್ಯೇಕ ವಿಭಾಗಗಳಾಗಿ ವಿಂಗಡಿಸಲಾಗಿದೆ.

ಮೊದಲ ಮಹಡಿಯು ಕಂಪ್ಯೂಟರ್‌ ಕೊಠಡಿ, ಡಿಜಿಟಲ್‌ ಗ್ರಂಥಾಲಯ, ಕಿರು ಸಭಾಂಗಣ ನಿರ್ಮಿಸಲಾಗಿದೆ. ಎರಡನೇ ಮಹಡಿಯಲ್ಲಿ 100 ಜನರು ಕುಳಿತುಕೊಳ್ಳುವ ಸಭಾಂಗಣ, ಕಚೇರಿ, ಓದುವ ಕೊಠಡಿಯನ್ನು ಒಳಗೊಂಡಿದೆ.

ಸ್ಪರ್ಧಾತ್ಮಕ ಪರೀಕ್ಷೆ ತಯಾರಿ
ಗ್ರಂಥಾಲಯದಲ್ಲಿ ಐಎಎಸ್‌, ಕೆಎಎಸ್‌, ಐಎಎಸ್‌ ಮುಂತಾದ ಸಿವಿಲ್‌ ಸರ್ವಿಸ್‌ ಪರೀûಾರ್ಥಿಗಳಿಗೆ ಅನುಕೂಲವಾಗುವಂತೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿದೆ. ತರಬೇತಿ ನೀಡಲು ಕಿರು ಸಭಾಂಗಣ ಹಾಗೂ ಅಧ್ಯಯನಕ್ಕೆ ಪ್ರತ್ಯೇಕ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

24×7 ವಿದ್ಯುತ್‌ ಸಂಪರ್ಕ
ವಿದ್ಯಾರ್ಥಿಗಳಿಗೆ, ಸಾರ್ವ ಜನಿಕರಿಗೆ, ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸಲು ಅನುಕೂಲವಾಗುವಂತೆ ಗ್ರಂಥಾಲಯಕ್ಕೆ 24×7 ವಿದ್ಯುತ್‌ ಸಂಪರ್ಕ ಒದಗಿಸಲಾಗುತ್ತದೆ. ಅದಕ್ಕೆ ಪೂರಕ ಜನರೇಟರ್‌ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ನೆಲ ಮಹಡಿಯಲ್ಲಿ ಏಕಕಾಲಕ್ಕೆ 50ಕ್ಕೂ ಹೆಚ್ಚಿನ ದ್ವಿಚಕ್ರ ವಾಹನಗಳನ್ನು ನಿಲುಗಡೆ ಮಾಡಬಹುದು. ಕಟ್ಟಡ ಮುಂಭಾಗ ಇಂಟರ್‌ ಲಾಕ್‌ ಹಾಕಲಾಗಿದೆ.

ಓದುಗರ ಬೇಡಿಕೆ ಈಡೇರಿಕೆಗೆ ಕಾಲ ಸನ್ನಿಹಿತ
ನಗರದಲ್ಲಿ ಒಂದು ಸುಸಜ್ಜಿತ ಕೇಂದ್ರ ಗ್ರಂಥಾಲಯ ನಿರ್ಮಾಣವಾಗಬೇಕು. ಎಲ್ಲ ಸೌಲಭ್ಯಗಳು ಗ್ರಂಥಾಲ ಯದಲ್ಲಿ ಸಿಗಬೇಕು ಎನ್ನುವುದು ಓದುಗರರ ಹಲವು ದಶಕಗಳ ಆಸೆಯಾಗಿತ್ತು. ಆದರೆ, ಇದೀಗ ನನಸಾಗುವ ಕಾಲ ಸನ್ನಿಹಿತವಾಗಿದೆ. ಬಾಕಿ ಕಾಮಗಾರಿ ವಿಳಂಬ ಮಾಡದೆ ನಿಗದಿತ ಅವಧಿಯೊಳಗೆ ಕಟ್ಟಡ ಕಾಮಗಾರಿ ಪೂರ್ಣಗೊಳಿಸಿ ಅನುಕೂಲ ಮಾಡಿಕೊಡಬೇಕು ಎನ್ನುವುದು ಓದುಗರ ಒತ್ತಾಸೆಯಾಗಿದೆ.

ವಿನ್ಯಾಸಕ್ಕೆ 2 ಕೋ.
ಕಟ್ಟಡ ಕಾಮಗಾರಿ ಸುಮಾರು 3.35 ಕೋ. ವೆಚ್ಚದಲ್ಲಿ ಪೂರ್ಣಗೊಳಿಸಲಾಗಿದೆ. ಒಳಾಂಗಣ ವಿನ್ಯಾಸಕ್ಕೆ ಸುಮಾರು 2 ಕೋ. ಅಗತ್ಯವಿದೆ. ಸಿಆರ್‌ಎಸ್‌ ಅನುದಾನ ಬಿಡುಗಡೆಯಾದ ತತ್‌ಕ್ಷಣ ಬಾಕಿಯಿರುವ ಕೆಲಸ ಆರು ತಿಂಗಳ ಒಳಗೆ ಪೂರ್ಣಗೊಳಿಸಲಾಗುತ್ತದೆ.
-ಅರುಣ್‌ಕುಮಾರ್‌, ನಿರ್ಮಿತಿ ಕೇಂದ್ರದ ಯೋಜನಾಧಿಕಾರಿ

ಓದುಗರಿಗೆ ಉತ್ತಮ ತಾಣ
ಗ್ರಂಥಾಲಯವನ್ನು ವಿನೂತನ ಮಾದರಿಯ ಕಟ್ಟಡ ನಿರ್ಮಿಸಲಾಗಿದ್ದು, ಎಲ್ಲ ರೀತಿಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಗ್ರಂಥಾಲಯಕ್ಕೆ ಭೇಟಿ ನೀಡುವ ಹವ್ಯಾಸ ಹೊಂದಿರುವ ಓದುಗರಿಗೆ ಉತ್ತಮ ತಾಣವಾಗಲಿದೆ. ಅತ್ಯಂತ ನಿಶ್ಯಬ್ದ ವಾತಾವಾರಣದಲ್ಲಿ ಹೆಚ್ಚು ಪುಸ್ತಕಗಳನ್ನು ಓದಲು ಓದುಗರಿಗೆ ಅವಕಾಶ ಲಭಿಸಲಿದೆ.
-ನಳಿನಿ, ಮುಖ್ಯ ಗ್ರಂಥಾಲಯಾಧಿಕಾರಿ, ಉಡುಪಿ

ಟಾಪ್ ನ್ಯೂಸ್

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.