ನೀರಿನ ಸಮಸ್ಯೆ: ಪ.ಪೂ. ತರಗತಿ ಪ್ರಾರಂಭ ಮುಂದೂಡಿಕೆ
Team Udayavani, May 21, 2019, 6:25 AM IST
ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಹೆಚ್ಚಿರುವ ಹಿನ್ನೆಲೆಯಲ್ಲಿ ಕೆಲವು ಖಾಸಗಿ ಕಾಲೇಜುಗಳು ತರಗತಿ ಆರಂಭದ ದಿನಾಂಕವನ್ನೇ ಮುಂದೂಡಿವೆ. ಆದರೆ ಸರಕಾರಿ ಪಪೂ ಕಾಲೇಜುಗಳ ತರಗತಿಗಳು ನಿಗದಿತ ದಿನವಾದ ಸೋಮವಾರದಂದೇ ಆರಂಭಗೊಂಡಿದೆ.
ದ.ಕ. ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಳ್ಳುತ್ತಿದೆ. ಈಗಾಗಲೇ ಜಿಲ್ಲಾಡಳಿತವು ನಾಲ್ಕು ದಿನ ನೀರು ಪೂರೈಕೆ, ನಾಲ್ಕು ದಿನ ಸ್ಥಗಿತ ಮಾಡುವುದಾಗಿ ಪ್ರಕಟಿಸಿದೆ. ಈ ಸಂದರ್ಭದಲ್ಲಿ ಪಿಯು ತರಗತಿಗಳನ್ನು ಆರಂಭಿಸಿದರೆ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಬಹುದು ಎಂದು ಮುನ್ನೆಚ್ಚರಿಕೆಯಾಗಿ ಕೆಲವು ಖಾಸಗಿ ಕಾಲೇಜುಗಳ ಆಡಳಿತ ಮಂಡಳಿಗಳ ಪ್ರಮುಖರು ತರಗತಿ ಆರಂಭವನ್ನು ಮುಂದೂಡುವ ನಿರ್ಧಾರ ಕೈಗೊಂಡಿದ್ದಾರೆ. ಈ ಕಾಲೇಜುಗಳಲ್ಲಿ ಮೇ 27, 28 ದ್ವಿತೀಯ ಪಿಯುಸಿ ಮತ್ತು 29ರಂದು ಪ್ರಥಮ ಪಿಯುಸಿ ತರಗತಿಗಳು ಆರಂಭಗೊಳ್ಳಲಿವೆ. ಇನ್ನು ಕೆಲವು ಕಾಲೇಜುಗಳಲ್ಲಿ ಪ್ರಥಮ ಪಿಯುಸಿ ತರಗತಿಗಳು ಜೂನ್ ತಿಂಗಳಲ್ಲಿ ಆರಂಭಗೊಳ್ಳಲಿವೆ ಎಂಬುದಾಗಿ ಕಾಲೇಜು ಸಿಬಂದಿ ಮಾಹಿತಿ ನೀಡಿದ್ದಾರೆ.
ತೀವ್ರ ನೀರಿನ ಸಮಸ್ಯೆ ಇದಿರಿಸುತ್ತಿರುವ ಉಡುಪಿ ನಗರದ ಒಂದೆರಡು ಕಾಲೇಜುಗಳು ಸೋಮವಾರ ತರಗತಿಗಳನ್ನು ಆರಂಭಿಸಲಿಲ್ಲ. ಒಂದು ಸಂಸ್ಥೆಯಲ್ಲಿ ಮೇ 27ರಂದು, ಇನ್ನೊಂದರಲ್ಲಿ ಜೂ.1ರಂದು ವಿದ್ಯಾರ್ಥಿಗಳನ್ನು ಬರಲು ತಿಳಿಸಿದ್ದಾರೆ.
“ನೀರಿನ ಸಮಸ್ಯೆ ಇರುವುದು ಹೌದು. ಕೆಲವು ಸಂಸ್ಥೆಗಳನ್ನು ಹೊರತುಪಡಿಸಿ ಉಳಿದೆಲ್ಲ ಕಡೆ ತರಗತಿ ಗಳು ಆರಂಭಗೊಂಡಿವೆ. ಇಲ್ಲಿ ಬ್ರಿಡ್ಜ್ ಕೋರ್ಸ್ನ್ನು ಮೂರ್ನಾಲ್ಕು ದಿನಗಳ ಕಾಲ ನಡೆಸುತ್ತಾರೆ’ ಎಂದು ಡಿಡಿಪಿಯು ತಿಳಿಸಿದ್ದಾರೆ.
ಹಾಸ್ಟೆಲ್ಗಳಲ್ಲಿ ನೀರಿನ ಸಮಸ್ಯೆ
ವಿದ್ಯಾರ್ಥಿ ನಿಲಯಗಳಲ್ಲಿ ನೀರು ಹೆಚ್ಚು ಬೇಕಾಗುತ್ತದೆ. ಆದರೆ ನೀರಿನ ಸಮಸ್ಯೆ ಇರುವಾಗ ನಿಗದಿತ ದಿನಾಂಕದಂದು ತರಗತಿ ಆರಂಭಿಸಿದರೆ ವಿದ್ಯಾರ್ಥಿಗಳ ಬಳಕೆಗೆ ನೀರಿಲ್ಲದಾಗುತ್ತದೆ. ಈ ಹಿನ್ನೆಲೆಯಲ್ಲಿ ತರಗತಿ ಆರಂಭ ಮುಂದೂಡಲಾಗಿದೆ ಎಂದು ನಗರದ ಕಾಲೇಜೊಂದರ ಉಪ ಪ್ರಾಂಶುಪಾಲರು “ಉದಯವಾಣಿ’ಗೆ ತಿಳಿಸಿದ್ದಾರೆ. ಆದರೆ ಸರಕಾರಿ ಕಾಲೇಜುಗಳಲ್ಲದೆ, ಬೆರಳೆಣಿಕೆಯಷ್ಟು ಖಾಸಗಿ ಕಾಲೇಜುಗಳಲ್ಲಿ ನಿಗದಿತ ದಿನಾಂಕದಂದೇ ತರಗತಿಗಳು ಆರಂಭವಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ
MUST WATCH
ಹೊಸ ಸೇರ್ಪಡೆ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
Manipal ಆಸ್ಪತ್ರೆಯ ಡಾ.ರಾಮದಾಸ್ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್ ಸೇವೆ ಆರಂಭ
ರಜಿನಿಕಾಂತ್ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್ ನೋಟಿಸ್ ಕಳುಹಿಸಿದ ಇಳಯರಾಜ
Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ
ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ