ಭಾರೀ ಮಳೆ-ಗಾಳಿಗೆ 5 ಮನೆ ಜಖಂ
•ನಾಲ್ಕು ಜಾನುವಾರು ಸಾವು•ನೊಂದ ಕುಟುಂಬಗಳಿಂದ ಪುನರ್ವಸತಿ ಕಲ್ಪಿಸಲು ಮನವಿ
Team Udayavani, May 21, 2019, 7:32 AM IST
ಕೂಡ್ಲಿಗಿ: ತಾಲೂಕಿನ ಹೊಸಹಳ್ಳಿ ಮತ್ತು ಗುಡೇಕೋಟೆ ಹೋಬಳಿ ವ್ಯಾಪ್ತಿಯಲ್ಲಿ ಹಲವು ಗ್ರಾಮಗಳಲ್ಲಿ ಗುಡುಗು ಮತ್ತು ಬಿರುಗಾಳಿ ಸಹಿತ ಮಳೆಯಾಗಿದ್ದು, ಬಿರುಗಾಳಿ ಪರಿಣಾಮ 5 ಮನೆಗಳ ಜಖಂಗೊಂಡ ಘಟನೆ ರವಿವಾರ ತಡರಾತ್ರಿ ನಡೆದಿದೆ.
ತಾಲೂಕಿನ ಗುಡೇಕೋಟೆ ಹೋಬಳಿಯ ಗಂಡಬೊಮ್ಮನಹಳ್ಳಿ ಗ್ರಾಪಂ ವ್ಯಾಪ್ತಿಯ ನುಂಕನಹಳ್ಳಿ ಗ್ರಾಮದಲ್ಲಿ ಬಿರುಗಾಳಿ ಸಹಿತ ಸಾಧಾರಣ ಮಳೆಗೆ ಗ್ರಾಮದ ಗ್ರಾಮದ ಕಾಂಚನಮ್ಮ, ಭಾಗ್ಯಮ್ಮ, ರತ್ನಮ್ಮ, ಹೇಮಾವತಿ, ಸಾಕಮ್ಮ ಎಂಬುವರ 5 ವಾಸದ ಮನೆಗಳು ಜಖಂ ಆಗಿದ್ದು, ಮನೆ ಕಳೆದುಕೊಂಡ ರೈತ ಕುಟುಂಬಗಳು ಬೀದಿಗೆ ಬಿದ್ದಿದ್ದು, ಕಂದಾಯ ಇಲಾಖೆ ಇವರಿಗೆ ಪುನರ್ವಸತಿ ಕಲ್ಪಿಸಿಕೊಡಬೇಕೆಂದು ನೊಂದ ಕುಟುಂಬಗಳು ತಾಲೂಕು ಆಡಳಿತಕ್ಕೆ ಒತ್ತಾಯಿಸಿದ್ದಾರೆ.
ತಡರಾತ್ರಿ ಗುಡುಗು ಸಹಿತ ಬಿರುಗಾಳಿ ಮಳೆ ಆರಂಭವಾಗಿದ್ದನ್ನು ತಿಳಿದು ತಾಲೂಕಿನ ಪಿಚ್ಚಾರಹಟ್ಟಿ ಗ್ರಾಮದಲ್ಲಿ ಇಮಾಮ್ ಸಾಬ್ ಮರದಡಿ ಕಟ್ಟಿದ್ದ ಎತ್ತುಗಳನ್ನು ಮನೆಯೊಳಗೆ ಕಟ್ಟಲು ಯತ್ನಿಸುತ್ತಿರುವಾಗ ಮನೆಯ ಒಡೆಯನನ್ನು ಕೊಂಬಿನಿಂದ ತಿವಿಯುವ ಮೂಲಕ ದೂರ ತಳ್ಳಿದೆ. ಮನೆ ಮಾಲೀಕ ಅಲ್ಲಿಂದ ಮನೆಯೊಳಗೆ ಹೋಗುವಷ್ಟರಲ್ಲಿ ಎತ್ತುಗಳಿಗೆ ಸಿಡಿಲು ಬಡಿದಿದೆ. ಮಾಲೀಕನ ಕಣ್ಣೆದುರಿಗೆ ಎರಡು ಎತ್ತು ಸಾವನ್ನಪ್ಪಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಸದಾನಂದ ಗೌಡ
Bellary; ದಲಿತಕೇರಿಯಲ್ಲಿ ಒಡಾಡಿ ಶ್ರೀರಾಮುಲು ಪರ ಮತಯಾಚನೆ ಮಾಡಿದ ಯದುವೀರ್ ಒಡೆಯರ್
ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ
ಎಸಿ ಗ್ಯಾಸ್ ಸ್ಫೋಟ; ಐವರಿಗೆ ಗಾಯ, ಒಬ್ಬರ ಸ್ಥಿತಿ ಗಂಭೀರ
HDK ಹೇಳುತ್ತಿದ್ದದ್ದು ಪ್ರಜ್ವಲ್ ಪೆನ್ಡ್ರೈವ್ ಇರಬೇಕು: ಜಮೀರ್
MUST WATCH
ಹೊಸ ಸೇರ್ಪಡೆ
Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?
RCB ವೆಂಟಿಲೇಟರ್ ಆಫ್ ಮಾಡಲಾಗಿದೆ, ಆದರೂ ಐಸಿಯುನಲ್ಲಿದೆ: ಅಜಯ್ ಜಡೇಜಾ
Pen drive case; ಇಂದೇ ಪ್ರಜ್ವಲ್ ರೇವಣ್ಣ ಎಸ್ಐಟಿ ಮುಂದೆ ಶರಣು?
BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!
ICC ಚಾಂಪಿಯನ್ಸ್ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್ನ ರಶೀದ್ ಲತೀಫ್