ಪೂರ್ವ ಮುಂಗಾರು: ಕೃಷಿ ಚಟುವಟಿಕೆ ಚುರುಕು

ಕಳೆದ 4-5 ದಿನಗಳಿಂದ ಸುರಿಯುತ್ತಿರುವ ಮಳೆ • ಹತ್ತಿ, ಹೊಗೆಸೊಪ್ಪು ನಾಟಿಗೆ ಮುಂದಾದ ತಾಲೂಕಿನ ರೈತರು

Team Udayavani, May 21, 2019, 9:43 AM IST

MAYSORE-TDY-1..

ಎಚ್.ಡಿ.ಕೋಟೆ: ಕಳೆದ 4-5 ದಿನಗಳಿಂದ ಎಚ್.ಡಿ. ಕೋಟೆ ಮತ್ತು ಸರಗೂರು ಪಟ್ಟಣ ಸೇರಿದಂತೆ ತಾಲೂಕಿನ ಹಲವೆಡೆ ಉತ್ತಮ ಮಳೆಯಾಗುತ್ತಿದ್ದು ರೈತರು ಹರ್ಷಗೊಂಡಿದ್ದಾರೆ.

ಮಾರ್ಚ್‌ ಮತ್ತು ಏಪ್ರಿಲ್ನಲ್ಲಿ ನಿರೀಕ್ಷಿತ ಪ್ರಮಾಣ ದಲ್ಲಿ ಪೂರ್ವ ಮುಂಗಾರು ಆಗಮನವಾಗದ ಕಾರಣ ವಾಡಿಕೆ ಮಳೆ ಆಗಿರಲಿಲ್ಲ. ಹೀಗಾಗಿ ರೈತರಲ್ಲಿ ಆತಂಕ ಮೂಡಿಸಿತ್ತು.

ತಾಲೂಕು ಮಳೆಯಾಶ್ರಿತ ಪ್ರದೇಶವಾಗಿದ್ದು ನೀರಾ ವರಿಗಿಂತ ಖುಷ್ಕಿ ಪ್ರದೇಶವನ್ನು ಹೆಚ್ಚು ಪ್ರಮಾಣದಲ್ಲಿ ಹೊಂದಿದೆ. ಇಲ್ಲಿನ ರೈತರು ಹತ್ತಿ, ಹೊಗೆ ಸೊಪ್ಪನ್ನು ಪ್ರಮುಖ ವಾಣಿಜ್ಯ ಬೆಳೆಯನ್ನಾಗಿಸಿ ಕೊಂಡಿದ್ದು, ಹೆಚ್ಚಿನ ಪ್ರಮಾಣದಲ್ಲಿ ಬೆಳೆಯುತ್ತಾರೆ. ಹೀಗಾಗಿ ನಿರೀಕ್ಷಿತ ಪ್ರಮಾಣದಲ್ಲಿ ಪೂರ್ವ ಮುಂಗಾರು ಮಳೆ ಆಗದ ಪರಿಣಾಮ ರೈತರು ಕಂಗಾಲಾಗಿದ್ದರು.

ಈ ಬಾರಿ ಉತ್ತಮ ಬೆಳೆ ನಿರೀಕ್ಷೆಯೊಂದಿಗೆ ಮಾರ್ಚ್‌ ಕೊನೇ ವಾರದಲ್ಲಿ ಬಿದ್ದ ಒಂದೆರಡು ಮಳೆಗೆ ತಮ್ಮ ಜಮೀನುಗಳನ್ನು ಹದಗೊಳಿಸಿದರೂ, ಪೂರ್ವ ಮುಂಗಾರು ಕೈಕೊಟ್ಟಿತ್ತು.

ಕಳೆದ 4-5 ದಿನದಿಂದ ತಾಲೂಕಿನ ಎಲ್ಲೆಡೆ ದಿನಲೂ ಭರ್ಜರಿ ಮಳೆ ಆಗುತ್ತಿರುವುದರಿಂದ ರೈತರಲ್ಲಿ ಮಂದ ಹಾಸ ಮೂಡಿದ್ದು, ಕೃಷಿ ಚಟುವಟಿಕೆ ಚುರುಕು ಗೊಂಡಿದೆ. ತಾಲೂಕಿನೆಲ್ಲೆಡೆ ರೈತ ಕುಟುಂಬ ಬಿತ್ತನೆ ಕಾರ್ಯದಲ್ಲಿ ತೊಡಗಿದೆ.

ತಾಲೂಕುವಾರು ಮಳೆ ಪ್ರಮಾಣ: ತಾಲೂಕಿನಲ್ಲಿ ಇಲ್ಲಿಯವರೆಗೆ 170.04 ಮಿ.ಮೀ ವಾಡಿಕೆ ಮಳೆ ಯಾಗಬೇಕಿತ್ತು. ಆದರೆ, ಮೇ 17ರ ಶುಕ್ರವಾರದವರಗೆ 162.02 ಮಿ.ಮೀ ಮಳೆಯಾಗಿದೆ. ಶೇ.5 ರಷ್ಟು ಮಳೆ ಪ್ರಮಾಣ ಕೊರತೆ ಕಂಡು ಬಂದಿದ್ದರೂ, ಜಿಲ್ಲೆಯಲ್ಲಿ ಪಿರಿಯಾಪಟ್ಟಣ ತಾಲೂಕು ಹೊರತುಪಡಿಸಿ ಎಚ್.ಡಿ. ಕೋಟೆ ತಾಲೂಕಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಿದೆ.

ಹೋಬಳಿವಾರು ಪ್ರಮಾಣ: ಕಸಬಾ 174.04 ವಾಡಿಕೆ ಮಳೆಗೆ, 151.06 ಮಿ.ಮೀ ಆಗಿ ಶೇ.12 ಕೊರತೆಯಾಗಿದೆ. ಅಂತರಸಂತೆ 172 ಮಿ.ಮೀ ವಾಡಿಕೆ ಮಳೆಗೆ 180.01 ಮಿ.ಮೀ ಮಳೆಯಾಗಿದ್ದು ಶೇ.5 ಹೆಚ್ಚು ಮಳೆಯಾಗಿದೆ. ಕಂದಲಿಕೆ 172.03 ವಾಡಿಕೆ ಮಳೆಗೆ 177 ಮಿ.ಮೀ ಮಳೆಯಾಗಿದ್ದು ಶೇ.3 ಹೆಚ್ಚಾಗಿದೆ. ಸರಗೂರು 169.50 ಮಿ.ಮೀ ವಾಡಿಕೆ ಮಳೆಗೆ 125.06 ಮಿ.ಮೀ ಆಗಿದ್ದು ಶೇ.26 ಕೊರತೆ ಕಂಡು ಬಂದಿದೆ. ಹಂಪಾಪುರ ಹೋಬಳಿ 162.50 ವಾಡಿಕೆ ಮಳೆಗೆ 139.01 ಮಿ.ಮೀ ಮಳೆ ಬಿದ್ದಿದ್ದು ಶೇ.14 ಕಡಿಮೆ ಮಳೆಯಾಗಿದೆ.

ಅಂತರಸಂತೆ ಹೋಬಳಿಯಲ್ಲಿ ಶೇ.5 ಹೆಚ್ಚು ಮಳೆಯಾದರೆ, ಸರಗೂರು ಹೋಬಳಿಯಲ್ಲಿ ಶೇ.26 ಕಡಿಮೆ ಮಳೆಯಾಗಿದೆ.

ಚುರುಕುಗೊಂಡ ಬಿತ್ತನೆ ಕಾರ್ಯ: ತಾಲೂಕಿನಲ್ಲಿ 67715 ಹೆಕ್ಟೇರ್‌ನಲ್ಲಿ ಬಿತ್ತನೆ ಗುರಿ ಹೊಂದಿದ್ದು, ಇಲ್ಲಿವರೆಗೆ 25790 ಹೆಕ್ಟೇರ್‌ (ಶೇ.38) ಪ್ರದೇಶದಲ್ಲಿ ಮಾತ್ರ ಬಿತ್ತನೆ ಕಾರ್ಯ ನಡೆದಿದೆ. ಪ್ರಮುಖವಾಗಿ ಹತ್ತಿ 20280 ಹೆಕ್ಟೇರ್‌, ಹೊಗೆ ಸೊಪ್ಪು 1035 ಹೆಕ್ಟೇರ್‌, ಮುಸುಕಿನ ಜೋಳ 2400 ಹೆಕ್ಟೇರ್‌, ದ್ವಿ-ಧಾನ್ಯಗಳಲ್ಲಿ ಹೆಸರು 246 ಹೆಕ್ಟೇರ್‌, ಅಲಸಂದೆ 1250 ಹೆಕ್ಟೇರ್‌, ಉದ್ದು 175 ಹೆಕ್ಟೇರ್‌, ಎಳ್ಳು 175 ಹೆಕ್ಟೇರ್‌ನಲ್ಲಿ ಮಾತ್ರ ಬಿತ್ತನೆ ಮುಗಿದಿದೆ.

ಒಟ್ಟಾರೆ ಪ್ರಾರಂಭದಲ್ಲಿ ಪೂರ್ವ ಮುಂಗಾರು ನಿರೀಕ್ಷಿತ ಮಟ್ಟದಲ್ಲಿ ಬಾರದಿದ್ದರೂ ತಡವಾಗದರೂ ಆಗಮಿಸಿ ತಾಲೂಕಿನಾದ್ಯಂತ ಮಳೆಯಾಗುತ್ತಿರು ವುದರಿಂದ ರೈತರಲ್ಲಿ ಮಂದಹಾಸ ಮೂಡಿಸಿದೆ. ಉತ್ತಮ ಬೆಳೆ ನಿರೀಕ್ಷೆ ಹೊತ್ತು ದಿನಪೂರ್ತಿ ಕೃಷಿ ಚಟುವಟಿಕೆಯಲ್ಲಿ ಕುಟುಂಬ ಸಮೇತ ತೊಡಗಿಕೊಂಡಿದ್ದಾರೆ.

● ಬಿ.ನಿಂಗಣ್ಣ ಕೋಟೆ

ಟಾಪ್ ನ್ಯೂಸ್

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.