ಹೂಳು ತುಂಬಿದ ಕಡವಿನಕಟ್ಟೆ ಜಲಾಶಯ

•ಹಣ ಮಂಜೂರಾದರೂ ಡ್ಯಾಂ ಸೈಟ್ ಅರ್ಧಂಬರ್ಧ ದುರಸ್ತಿ: ಜನರ ಆಕ್ರೋಶ

Team Udayavani, May 21, 2019, 10:41 AM IST

uk-tdy.01

ಭಟ್ಕಳ: ನೀರೇ ಇಲ್ಲದ ಕಡವಿನಕಟ್ಟೆ ಜಲಾಶಯ.

ಭಟ್ಕಳ: ಪುರಸಭೆ, ಜಾಲಿ ಪಪಂ, ಶಿರಾಲಿ, ಮಾವಿನಕುರ್ವೆಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಕಡವಿನಕಟ್ಟೆ ಡ್ಯಾಂ ಹೂಳು ತುಂಬಿ ನೀರೇ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದ್ದು ಸಂಬಂಧಪಟ್ಟ ಅಧಿಕಾರಿಗಳ ನಿರ್ಲಕ್ಷದಿಂದ ಜನ ಪರದಾಡುವಂತಾಗಿದೆ.

ಹಲವಾರು ವರ್ಷಗಳಿಂದ ಹೂಳು ತೆಗೆಯುವಂತೆ ಆಗ್ರಹಿಸಲಾಗಿದ್ದರೂ ಸಂಬಂಧ ಪಟ್ಟ ಇಲಾಖೆ ನಿರ್ಲಕ್ಷ್ಯದಿಂದ ಇಂದು ಜನರು ಹನಿ ನೀರಿಗಾಗಿ ಸಂಕಷ್ಟ ಪಡುವಂತಾಗಿದೆ. ಕಳೆದ ಸುಮಾರು ಒಂದು ದಶಕದ ಹಿಂದೆ ಕಡವಿನಕಟ್ಟೆ ಡ್ಯಾಂ ರಿಪೇರಿಗಾಗಿ ಹಣ ಮಂಜೂರಾಗಿತ್ತು. ಡ್ಯಾಂ ಸೈಟ್‌ನಲ್ಲಿ ರಿಪೇರಿ ಕಾರ್ಯ ವಹಿಸಿಕೊಂಡ ಗುತ್ತಿಗೆದಾರರು ಕೆಲಸ ಮುಗಿಸಿದ್ದು ಗೇಟ್ ವಾಲ್ವ್ ರಿಪೇರಿ ಮಾಡಬೇಕಾಗಿದ್ದರೂ ತಾಂತ್ರಿಕ ಕಾರಣ ನೀಡಿ ಹಾಗೆಯೇ ಬಿಟ್ಟಿದ್ದು ಇನ್ನಷ್ಟು ಪರಿಸ್ಥಿತಿ ಬಿಗಡಾಯಿಸಲು ಕಾರಣವಾಯಿತು. ಅಲ್ಲದೇ ಅಂದು ರಿಪೇರಿ ಮಾಡುವ ಸಮಯದಲ್ಲಿ ನೀರಿನ ಒತ್ತಡವನ್ನು ತಡೆಯಲು ಡ್ಯಾಂ ಸೈಟ್ ಒಳಗಡೆಯಲ್ಲಿ ತುಂಬಿದ್ದ ಮಣ್ಣನ್ನು ಸಂಪೂರ್ಣ ತೆಗೆಯುವುದರೊಳಗಾಗಿ ಮಳೆ ಆರಂಭವಾಗಿದ್ದರಿಂದ ಅಲ್ಲಿದ್ದ ಮಣ್ಣನ್ನು ಹಾಗೆಯೇ ಬಿಟ್ಟ ಗುತ್ತಿಗೆದಾರರಿಗೆ ಬಿಲ್ ಪಾವತಿಯಾಗಲು ಯಾವುದೇ ಅಡ್ಡಿಯಾಗಿಲ್ಲ. ಇದರಿಂದ ಮುಂದಿನ ವರ್ಷದಿಂದ ಡ್ಯಾಂ ಒಳಗಡೆ ನೀರು ಸಂಗ್ರಹಣೆ ಕಡಿಮೆಯಾಗುತ್ತಾ ಬಂತಲ್ಲದೇ ಇಂದು ಸಂಪೂರ್ಣ ಒಣಗಿದೆ.

ಡ್ಯಾಂ ಹೂಳೆತ್ತುವ ಕುರಿತು ಸ್ವತಃ ಶಾಸಕ ಸುನೀಲ್ ನಾಯ್ಕ ಅವರು ಭೇಟಿ ಕೊಟ್ಟು ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ ಸೂಚನೆ ಕೊಟ್ಟು ಆರು ದಿನಗಳು ಕಳೆದರೂ ಕೂಡಾ ಇನ್ನೂ ತನಕ ಯಾವುದೇ ಸೂಕ್ತ ಕ್ರಮ ಜರುಗಿಸಿಲ್ಲ ಎನ್ನುವುದು ಬೇಸರದ ಸಂಗತಿ. ಓರ್ವ ಜನಪ್ರತಿನಿಧಿಗಳ ಮಾತಿಗೇ ಈ ರೀತಿಯ ನಿರ್ಲಕ್ಷ ಮಾಡಿದರೆ ಇನ್ನು ಜನಸಾಮಾನ್ಯರ ಧ್ವನಿಗೆ ಬೆಲೆ ಇದೆಯೇ ಎನ್ನುವುದು ಇಲ್ಲಿ ನಾಗರಿಕರು ಕೇಳುವ ಪ್ರಶ್ನೆಯಾಗಿದೆ.

ಕಳೆದ ಮೂರು ದಶಕಗಳಿಗೂ ಹೆಚ್ಚು ಕಾಲದಿಂದ ಪುರಸಭೆಯವರು ನೀರನ್ನು ಉಪಯೋಗಿಸುತ್ತಾ ಬಂದಿದ್ದು ಇನ್ನೂ ತನಕ ಪುರಸಭೆಯಿಂದ ಡ್ಯಾಂ ನಿರ್ವಹಣೆಗೆ ಹಣ ಖರ್ಚು ಮಾಡಿದ್ದು ಇಲ್ಲ ಎನ್ನುವ ಮಾಹಿತಿ ಸ್ವತಹ ಶಾಸಕರ ಎದುರೇ ಬಹಿರಂಗ ಗೊಂಡಿದ್ದು, ಜಾಲಿ ಪಪಂ, ಮಾವಿನಕುರ್ವೆ ಹಾಗೂ ಶಿರಾಲಿ ಗ್ರಾಪಂಗಳು ನೀರೆತ್ತಿಕೊಂಡು ಹೋಗುತ್ತಿರುವುದು ಮಾತ್ರವಾಗಿದ್ದು ನೀರಿನ ಸಂಗ್ರಹದ ಬಗ್ಗೆಯಾಗಲೀ, ನೀರಿನ ನಿರ್ವಹಣೆ ಬಗ್ಗೆಯಾಗಲೀ ಯಾವುದೇ ಯೋಜನೆ ರೂಪಿಸಿಲ್ಲ ಎನ್ನುವುದು ಮಾತ್ರ ವಿಪರ್ಯಾಸವಾಗಿದೆ. ಚಿಕ್ಕ ನೀರಾವರಿ ಇಲಾಖೆ ವತಿಯಿಂದ ರೈತರ ಜಮೀನಿಗೆ ನೀರುಣಿಸಲು ಕಟ್ಟಿದ ಡ್ಯಾಂ ನೀರನ್ನು ಕುಡಿಯುವ ನೀರಿನ ಉಪಯೋಗ ಮಾಡುತ್ತಾ ಬಂದಿದ್ದರೂ ಯಾವುದೇ ನಿರ್ವಹಣೆ ಮಾಡದಿರುವ ಕುರಿತು ಶಾಸಕರು ತರಾಟೆಗೆ ತೆಗೆದುಕೊಂಡು ಇರುವ ಅನುದಾನ ಬಳಸಿ ಹೂಳೆತ್ತುವಂತೆ ಸೂಚಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ.

ಹೂಳೆತ್ತುವುದಾಗಿ ಭರವಸೆ ನೀಡಿದ ಅಧಿಕಾರಿಗಳು ಕೂಡಾ ಇತ್ತ ಸುಳಿಯದೇ ಯಾವುದೇ ಕಾರ್ಯವಾಗಿಲ್ಲ. ಪುರಸಭಾ ಮುಖ್ಯಾಧಿಕಾರಿಗಳು ಕಡವಿನಕಟ್ಟೆ ಡ್ಯಾಂ ಕೆಳಗಡೆಯಿಂದ ಕಾಲುವೆ ಮಾಡಿಕೊಟ್ಟು ಪಂಪ್‌ಹೌಸ್‌ಗೆ ನೀರು ಬರುವಂತೆ ಕಾಮಗಾರಿ ಮಾಡುತ್ತಿರುವುದು ಬಿಟ್ಟರೆ ಬೇರೆ ಯಾವುದೇ ಕೆಲಸವಾಗಿಲ್ಲ. ಈ ಕುರಿತು ಶಾಸಕರ ಮಾತಿಗೂ ಬೆಲೆ ಇಲ್ಲ ಎನ್ನುವಂತಾಗಿದ್ದು, ಈ ಬಾರಿಯೂ ಹೂಳೆತ್ತದೇ ಹೋದರೆ ಮುಂದಿನ ವರ್ಷ ಮಾರ್ಚ್‌ನಲ್ಲಿಯೇ ನೀರಿಲ್ಲ ಎನ್ನುವ ಪರಿಸ್ಥಿತಿ ನಿರ್ಮಾಣವಾದರೆ ಆಶ್ಚರ್ಯವಿಲ್ಲ. ಇನ್ನಾದರೂ ಅಧಿಕಾರಿಗಳು ವಿಶೇಷ ಅನುದಾನ ಬಿಡುಗಡೆ ಮಾಡಿಸಿಕೊಂಡು ಮಳೆ ಆರಂಭ‌ಕ್ಕೆ ಮುನ್ನ ಕನಿಷ್ಠ 100 ಲಾರಿಗಷ್ಟು ಮಣ್ಣನ್ನಾದರೂ ಹೊರ ಹಾಕಿದರೆ ಜನತೆ ನಿಟ್ಟುಸಿರು ಬಿಡುವಂತಾಗುವುದಂತೂ ಸತ್ಯ.

•ಆರ್ಕೆ, ಭಟ್ಕಳ

ಟಾಪ್ ನ್ಯೂಸ್

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Farooq Abdullah

ಪಾಕಿಸ್ತಾನದವರೇನು ಬಳೆ ಧರಿಸಿ ಕುಳಿತಿಲ್ಲ..; ವಿವಾದಾತ್ಮಕ ಹೇಳಿಕೆ ನೀಡಿದ ಫಾರೂಕ್ ಅಬ್ದುಲ್ಲಾ

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Delhi Police has busted a fake spice racket at Karawal Nagar

Delhi Police; ಮರದ ಪುಡಿ, ಕೆಮಿಕಲ್ ಬಳಸಿ ಮಸಾಲೆ ಪದಾರ್ಥ ತಯಾರು; ಮೂವರ ಬಂಧನ

Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!

Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-sirsi

Sirsi: ಯಾರನ್ನೂ ಯಾವತ್ತೂ ಪ್ಲೀಸ್ ಮಾಡಬೇಡಿ, ಪ್ರೀತಿ ಮಾಡಿ ಸಾಕು: ಹುಕ್ಕೇರಿ ಶ್ರೀ

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

ಭಾರತ್‌ ಜೋಡೋದಿಂದ ದೇಶದ ಜನರ ಮನಸ್ಸು ಬೆಸೆದ ರಾಗಾ: ಡಿಕೆಶಿ

1–dsdsadd

Honnavar; ಖಾಸಗಿ ಬಸ್‌ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Farooq Abdullah

ಪಾಕಿಸ್ತಾನದವರೇನು ಬಳೆ ಧರಿಸಿ ಕುಳಿತಿಲ್ಲ..; ವಿವಾದಾತ್ಮಕ ಹೇಳಿಕೆ ನೀಡಿದ ಫಾರೂಕ್ ಅಬ್ದುಲ್ಲಾ

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.