ಬೆಳ್ತಂಗಡಿ ತಾ|: 2,000 ಹೆಕ್ಟೇರ್‌ನಲ್ಲಿ ಭತ್ತ ಬೆಳೆಯುವ ಗುರಿ


Team Udayavani, May 22, 2019, 6:00 AM IST

z-10

ಬೆಳ್ತಂಗಡಿ: ವರ್ಷದಿಂದ ವರ್ಷಕ್ಕೆ ಭತ್ತ ಬೆಳೆಯುವವರ ಸಂಖ್ಯೆ ಕಡಿಮೆಯಾಗುತ್ತಿರುವ ನಡುವೆಯೂ ತಾ| ಕೃಷಿ ಇಲಾಖೆಯಿಂದ ಪ್ರಸ್ತುತ 2,000 ಸಾವಿರ ಹೆಕ್ಟೇರ್‌ನಲ್ಲಿ ಭತ್ತ ಬೆಳೆಯುವ ಗುರಿ ಹೊಂದಲಾಗಿದೆ. ಪ್ರಸಕ್ತ 50 ಕ್ವಿಂಟಾಲ್‌ ಭತ್ತ ಬಿತ್ತನೆ ಬೀಜ ದಾಸ್ತಾನು ಇರಿಸಿದೆ.

ಎಂಒ4 ತಳಿಗೆ ಮಾತ್ರ ಬೇಡಿಕೆ
3 ಹೋಬಳಿಗಳಾಗ ಬೆಳ್ತಂಗಡಿ, ಕೊಕ್ಕಡ ವೇಣೂರು ಪ್ರದೇಶಗಳಲ್ಲಿ ವಿವಿಧ ಕಾರಣಗಳಿಂದ ಕಳೆದ 2 ವರ್ಷಗಳಲ್ಲಿ ಸಾವಿರ ಹೆಕ್ಟೇರ್‌ಗೂ ಅಧಿಕ ಭತ್ತ ಬೆಳೆಯುವವರ ಸಂಖ್ಯೆ ಗಣನೀಯ ಇಳಿಕೆಯಾಗಿದೆ. ಈ ನಿಟ್ಟಿನಲ್ಲಿ ಕೃಷಿ ಇಲಾಖೆ ಭತ್ತ ಬೆಳೆಗೆ ಹೆಚ್ಚಿನ ಪ್ರೋತ್ಸಾಹ ಒದಗಿಸುತ್ತಿದ್ದು, ಅವಶ್ಯ ಯಂತ್ರೋಪಕರಣಗಳನ್ನು ಶೇ. 90 ಸಬ್ಸಿಡಿಯಲ್ಲಿ ನೀಡುತ್ತಿದೆ. ತಾ|ನ ರೈತರಿಂದ ಎಂಒ4 (ಭದ್ರಾ) ತಳಿಗೆ ಮಾತ್ರ ಬೇಡಿಕೆ ಬಂದಿರುವುದರಿಂದ 50 ಕ್ವಿಂ. ದಾಸ್ತಾನು ಮಾಡಲಾಗಿತ್ತು. ಈ ಬಾರಿ ಪೂರ್ವ ಮುಂಗಾರು ಕೈಕೊಟ್ಟಿರುವುದರಿಂದ ಸದ್ಯ 1 ಕ್ವಿಂ. ಬಿತ್ತನೆ ಬೀಜ ಮಾರಾಟ ಆಗಿದ್ದು, 49 ಕ್ವಿಂ. ದಾಸ್ತಾನು ಉಳಿದು ಕೊಂಡಿದೆ. ಕಳೆದ ಬಾರಿ ಬೇಡಿಕೆ ಅನುಸಾರ ಎಂಒ4, ಉಮಾ, ಜ್ಯೋತಿ, ಜಯಾ ವಿತರಿಸಲಾಗಿತ್ತು.

100 ಕ್ವಿಂಟಾಲ್‌ ವಿತರಣೆ ಗುರಿ
ಮೂರು ಹೋಬಳಿಗಳಲ್ಲಿ ಮುಂಗಾರು ಪೂರ್ವ 2,000 ಹೆಕ್ಟೇರ್‌ ಗುರಿ ಹೊಂದಿದ್ದು, ಹಿಂಗಾರಿನಲ್ಲಿ 850 ಹೆಕ್ಟೇರ್‌ ಭತ್ತ ಬೆಳೆಯುವ ಗುರಿ ಹೊಂದಲಾಗಿದೆ. ಭೂ ಪರಿವರ್ತನೆ, ರಬ್ಬರ್‌ ಬೆಳೆ, ಅಡಿಕೆ ತೋಟ, ಪಡೀಲು ಬಿಟ್ಟಿರುವುದರಿಂದ ಭತ್ತ ಬೆಳೆಯುವವರ ಸಂಖ್ಯೆ ಇಳಿಮುಖವಾಗುತ್ತಿದೆ ಎಂಬುದು ಆತಂಕಕಾರಿ. ಕಳೆದ ಬಾರಿ 119 ಕ್ವಿಂಟಾಲ್‌ ಬಿತ್ತನೆ ಬೀಜ ಮಾರಾಟವಾಗಿದೆ. ಮುಂಗಾರಿ ನಲ್ಲಿ 63 ಕ್ವಿಂಟಾಲ್‌, ಹಿಂಗಾರಿನಲ್ಲಿ 56 ಕ್ವಿಂಟಾಲ್‌ ಭತ್ತ ವಿತರಿಸಲಾಗಿದೆ. ಈ ಬಾರಿಯೂ 100 ಕೆ.ಜಿ. ವಿತರಿಸುವ ಗುರಿ ಹೊಂದಲಾಗಿದೆ ಎಂದು ತಾಂತ್ರಿಕ ಕೃಷಿ ಅಧಿಕಾರಿ ಹುಮೇರ್‌ ಜಬೀನ್‌ ತಿಳಿಸಿದ್ದಾರೆ.

 ಬೇಡಿಕೆಗೆ ಅನುಸಾರ ಬಿತ್ತನೆ ಬೀಜ
3 ಹೋಬಳಿಗೆ 50 ಕ್ವಿಂಟಾಲ್‌ ಬಿತ್ತನೆ ಬೀಜ ಲಭ್ಯವಾಗಿದ್ದು, ಬೇರೆಡೆ ದಾಸ್ತಾನು ಕೊರತೆಯಿಂದ ಬೆಳ್ತಂಗಡಿ ಕೃಷಿ ಇಲಾಖೆಯಲ್ಲೇ ಸಂಗ್ರಹಿಸಿಡಲಾಗಿದೆ. ರೈತರ ಬೇಡಿಕೆಗೆ ಅನುಸಾರವಾಗಿ ಬಿತ್ತನೆ ಬೀಜ ಪಡೆಯಬಹುದು. ಬೇಡಿಕೆ ಹೆಚ್ಚಿದ್ದಂತೆ ಹೆಚ್ಚುವರಿಯಾಗಿ ತರಿಸಲಾಗುವುದು.
 - ಪ್ರೇಮಾ ಡಿ. ಕಾಮ್ಲೆ, ಸಹಾಯಕ ಕೃಷಿ ನಿರ್ದೇಶಕರು

ಕೃಷಿ ಇಲಾಖೆಯಲ್ಲಿ 5 ಎಕ್ರೆ ಭತ್ತ ಗದ್ದೆ
ಬೆಳ್ತಂಗಡಿ ಕೃಷಿ ಇಲಾಖೆಯ ಬೀಜ ಉತ್ಪಾದನ ಕೇಂದ್ರದಲ್ಲಿ 5 ಎಕ್ರೆ ಗದ್ದೆ ಹೊಂದಿದ್ದು, ಪ್ರತಿ ವರ್ಷ ಭತ್ತ ಬೆಳೆಯಲಾಗುತ್ತಿದೆ. ಬೆಳೆದ ಭತ್ತವನ್ನು ಫಾರ್ಮೇಷನ್‌ ಪಕ್ರಿಯೆಗೆ ಬಳಸಿ ಶಿವಮೊಗ್ಗಕ್ಕೆ ಕಳುಹಿಸಲಾಗುತ್ತದೆ. ಬಳಿಕ ಅಲ್ಲಿಂದ ಸಬ್ಸಿಡಿ ಮುಖೇನ ಅವಶ್ಯವಿರುವ ಕೃಷಿ ಇಲಾಖೆಗೆ ಹಸ್ತಾಂತರಿಸುವ ಕೆಲಸ ನಿರಂತರವಾಗಿ ಸಾಗುತ್ತಿದೆ. ಕಳೆದ ಬಾರಿ 70 ಕೆ.ಜಿ.ಯ 112 ಬ್ಯಾಗ್‌ ಭತ್ತ ಬೆಳೆಯಲಾಗಿದೆ. ಉಳಿದ ಸ್ಥಳಗಳಲ್ಲಿ ಸೆಣಬು ಬೆಳೆಯಲಾಗುತ್ತಿದೆ.

ಭತ್ತ ಬೆಳೆ-ಬಿತ್ತನೆ ಬೀಜ
ಭತ್ತ ಬೆಳೆಯುವ ಗುರಿ- 2,000 ಹೆಕ್ಟೇರ್‌ 
ಹೋಬಳಿ (ಹೆಕ್ಟೇರ್‌) ಬೆಳ್ತಂಗಡಿ-850, ವೇಣೂರು-850, ಕೊಕ್ಕಡ-350
ಲಭ್ಯ ಭತ್ತ ಬಿತ್ತನೆ ಬೀಜ- 49 ಕ್ವಿಂ.
ಮಾರಾಟ – 1 ಕ್ವಿಂ.
ಬೆಲೆ (1 ಕೆ.ಜಿ.) -30 ರೂ.
ಮಿತಿ – ಒಬ್ಬ ರೈತನಿಗೆ ಎಕ್ರೆಗೆ 25 ಕೆ.ಜಿ.

ಚೈತ್ರೇಶ್‌ ಇಳಂತಿಲ

ಟಾಪ್ ನ್ಯೂಸ್

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

13-doctor

Health: ಸದಾ ಎಚ್ಚರದಿಂದಿರಿ: ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಿ

Basavakalyana; ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

Basavakalyana; ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

12-

Heat Weather: ಹಬೆಯಾಡುತ್ತಿರುವ ವಸುಂಧರೆ

11-candle

UV Fusion: ಆಯಸ್ಸು ಅಳಿಯುವ ಮುನ್ನ

10-ಉವ-ಉಸಿಒನ

Madhur Temple: ಏಕದಂತನ ಚಿತ್ರವೇ ಮೂರ್ತಿ ಆದ ಪರಿ

CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ

CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal ಖೋಟಾ ನೋಟು ವಿನಿಮಯ ದಂಧೆ ಪ್ರಕರಣ ; ಆರೋಪಿಗಳಿಂದ 506 ಖೋಟಾ ನೋಟುಗಳ ವಶ

Bantwal ಖೋಟಾ ನೋಟು ವಿನಿಮಯ ದಂಧೆ ಪ್ರಕರಣ ; ಆರೋಪಿಗಳಿಂದ 506 ಖೋಟಾ ನೋಟುಗಳ ವಶ

Uppinangady ಮರದಿಂದ ಬಿದ್ದು ಗಾಯಗೊಂಡ ವ್ಯಕ್ತಿ ಸಾವು

Uppinangady ಮರದಿಂದ ಬಿದ್ದು ಗಾಯಗೊಂಡ ವ್ಯಕ್ತಿ ಸಾವು

lರಾಜ್ಯದಲ್ಲಿ 12 ವರ್ಷಗಳಲ್ಲಿ 881ಸಾವು! ಸಿಡಿಲಾಘಾತದಿಂದ ಸಾವು ಬೆಳಗಾವಿ,ಬೀದರ್‌ನಲ್ಲೇ ಹೆಚ್ಚು

ರಾಜ್ಯದಲ್ಲಿ 12 ವರ್ಷಗಳಲ್ಲಿ 881ಸಾವು! ಸಿಡಿಲಾಘಾತದಿಂದ ಸಾವು ಬೆಳಗಾವಿ,ಬೀದರ್‌ನಲ್ಲೇ ಹೆಚ್ಚು

Bantwal ಎರಡೂಕಾಲು ಎಕ್ರೆ ವಿಸ್ತೀರ್ಣ; ಅಭಿವೃದ್ಧಿ ಆಗದೇ ಜೀರ್ಣ

Bantwal ಎರಡೂಕಾಲು ಎಕ್ರೆ ವಿಸ್ತೀರ್ಣ; ಅಭಿವೃದ್ಧಿ ಆಗದೇ ಜೀರ್ಣ

Dharmasthala ಯಾತ್ರಾರ್ಥಿ ಮಹಿಳೆಯ ಬ್ಯಾಗಿನಿಂದ ಚಿನ್ನಾಭರಣ ಕಳವು

Dharmasthala ಯಾತ್ರಾರ್ಥಿ ಮಹಿಳೆಯ ಬ್ಯಾಗಿನಿಂದ ಚಿನ್ನಾಭರಣ ಕಳವು

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ

Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

15-rain

Rain: ಕಳಸ ತಾಲೂಕಿನಾದ್ಯಂತ ಭಾರೀ ಗಾಳಿ-ಮಳೆ; ಜನಜೀವನ ಅಸ್ತವ್ಯಸ್ತ, ವಿದ್ಯುತ್ ಸಂಪರ್ಕ ಕಡಿತ

ರಾಜ್ಯ ಯಾವ ದಿಕ್ಕಿನತ್ತ ಸಾಗುತ್ತಿದೆ…: ಪ್ರದೀಪ ಶೆಟ್ಟರ

Hubli; ರಾಜ್ಯ ಯಾವ ದಿಕ್ಕಿನತ್ತ ಸಾಗುತ್ತಿದೆ…: ಪ್ರದೀಪ ಶೆಟ್ಟರ

14-panaji

Panaji: ಅಪಾಯಕಾರಿ ಮರ ಕಡಿಯಲು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.