ಮಳೆ-ಗಾಳಿಗೆ ಧರೆಗುರುಳಿದ ವಿದ್ಯುತ್ ಕಂಬ-ಮರ
ಗ್ರಾಮಲೆಕ್ಕಾಧಿಕಾರಿ-ಹೆಸ್ಕಾಂ ಅಧಿಕಾರಿಗಳ ಭೇಟಿ-ಪರಿಶೀಲನೆ
Team Udayavani, May 22, 2019, 7:44 AM IST
ಗುಳೇದಗುಡ್ಡ: ಕೊಂಕಣಕೊಪ್ಪ ಗ್ರಾಮದಲ್ಲಿ ಬಿರುಗಾಳಿ-ಮಳೆಗೆ ಬಿದ್ದಿರುವ ವಿದ್ಯುತ್ ಕಂಬ.
ಗುಳೇದಗುಡ್ಡ: ಮಂಗಳವಾರ ಸಂಜೆ ಬೀಸಿದ ಗಾಳಿ- ಗುಡುಗು ಸಿಡಿಲು ಸಮೇತ ಸುರಿದ ಮಳೆಗೆ ಕೊಂಕಣಕೊಪ್ಪ ಗ್ರಾಮದಲ್ಲಿ ಸುಮಾರು 15 ವಿದ್ಯುತ್ ಕಂಬಗಳು, ಮರಗಳು ಧರೆಗುರುಳಿವೆ.
ಗ್ರಾಮದಲ್ಲಿ ಬೀಸಿದ ಗಾಳಿಯ ರಭಸಕ್ಕೆ ಗ್ರಾಮದ ಪ್ರಮುಖ ರಸ್ತೆಗಳಲ್ಲಿನ, ಓಣಿಗಳಲ್ಲಿನ ಸುಮಾರು 15 ವಿದ್ಯುತ್ ಕಂಬಗಳು, ಗ್ರಾಮದಲ್ಲಿ 20ಕ್ಕೂ ಹೆಚ್ಚು ಮರಗಿಡಗಳು ಬಿದ್ದಿವೆ. ಗ್ರಾಮದ ಶಾಲೆಯ ಶೌಚಾಲಯದ ತಗಡುಗಳು, ಕಲ್ಮೇಶ್ವರ ದೇವಸ್ಥಾನದ ಕಳಸವು ಗೋಪುರದ ಸಮೇತ ಕೆಳಗೆ ಬಿದ್ದಿದೆ.
ಗ್ರಾಮದಲ್ಲಿ ಅನೇಕ ಮನೆಗಳ ತಗಡುಗಳು ಹಾರಿ ಹೋಗಿವೆ. ಗ್ರಾಮದಲ್ಲಿ ಬೀಸಿದ ಗಾಳಿ, ಮಳೆಯಿಂದ ಯಾವುದೇ ಜೀವ ಹಾನಿಯಾಗಿಲ್ಲ. ಗ್ರಾಮದಲ್ಲಿ ಬೀಸಿದ ಗಾಳಿಯಿಂದ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿತ್ತು.
ಗಾಳಿ-ಮಳೆಯಿಂದ ಹಾನಿಯಾದ ಸ್ಥಳಕ್ಕೆ ಗ್ರಾಮಲೆಕ್ಕಾಧಿಕಾರಿ ಎಂ.ಎಸ್.ತೊಟಗೇರಿ ಭೇಟಿ ನೀಡಿ, ಹಾನಿಯಾದ ಮಾಹಿತಿ ಪಡೆದುಕೊಂಡರು. ಹೆಸ್ಕಾಂ ಅಧಿಕಾರಿಗಳು ಸಹ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸಿಡಿಲು ಬಡಿದು ತೆಂಗಿನ ಮರಕ್ಕೆ ಹಾನಿ
ಗುಳೇದಗುಡ್ಡ: ಕೊಂಕಣಕೊಪ್ಪ ಗ್ರಾಮದಲ್ಲಿ ಬೀಸಿದ ಗಾಳಿಗೆ ಬಿದ್ದಿರುವ ಮನೆಯ ತಗಡುಗಳು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!