ಅಭ್ಯರ್ಥಿ ಹಣೆಬರಹ ನಾಳೆ ಬಯಲು

•ಜಿಲ್ಲಾಧಿಕಾರಿ ಸ್ಟ್ರಾಂಗ್‌ ರೂಂ ಪರಿಶೀಲನೆ•ಪ್ರತಿ ಕ್ಷೇತ್ರದಿಂದ 5 ವಿವಿ ಪ್ಯಾಟ್ ಮತ ಎಣಿಕೆ

Team Udayavani, May 22, 2019, 9:54 AM IST

kopala-tdy-1..

ಕೊಪ್ಪಳ: ಮತ ಎಣಿಕಾ ಕಾರ್ಯದ ಕೊಠಡಿಗಳ ಸಿದ್ಧತೆ ಕುರಿತು ಜಿಲ್ಲಾಧಿಕಾರಿ ಪರಿಶೀಲನೆ ನಡೆಸಿದರು.

ಕೊಪ್ಪಳ: ಲೋಕಸಭಾ ಕ್ಷೇತ್ರದ ಮತ ಎಣಿಕೆ ಮೇ 23ರಂದು ನಗರದ ಗವಿಸಿದ್ದೇಶ್ವರ ಮಹಾವಿದ್ಯಾಲಯದಲ್ಲಿ ಬೆಳಗ್ಗೆ 8ರಿಂದ ಆರಂಭವಾಗಲಿದ್ದು, ಜಿಲ್ಲಾಡಳಿತ ಸಕಲ ಸಿದ್ದತೆ ಮಾಡಿಕೊಂಡಿದೆ. ಒಟ್ಟು 569 ಸಿಬ್ಬಂದಿಯನ್ನು ನೇಮಕ ಮಾಡಿದ್ದು, ಪ್ರತಿ ಕ್ಷೇತ್ರಕ್ಕೆ 68 ಸಿಬ್ಬಂದಿ ಕಾರ್ಯ ನಿರ್ವಹಿಸಲಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಪಿ. ಸುನೀಲ್ಕುಮಾರ ಹೇಳಿದರು.

ನಗರದ ಗವಿಸಿದ್ದೇಶ್ವರ ಮಹಾವಿದ್ಯಾಲಯದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಸ್ಟ್ರಾಂಗ್‌ ರೂಂ ಹಾಗೂ ಸಿದ್ಧತೆ ಪರಿಶೀಲನೆ ಬಳಿಕ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದರು. ಒಂದು ತಿಂಗಳಿಂದ ಮತಯಂತ್ರ ಇರುವ ಕೊಠಡಿಗಳಿಗೆ ಬಿಗಿ ಭದ್ರತೆ ಒದಗಿಸಲಾಗಿದೆ. ಸಿಎಪಿಎಫ್‌, ಪೊಲೀಸ್‌ ಪಡೆ ಸೇರಿ ಇತರೆ ತಂಡಗಳು ಅಚ್ಚುಕಟ್ಟಾಗಿ ಕಾರ್ಯ ನಿರ್ವಹಿಸಿವೆ. ಇನ್ನೂ ಕಾಲೇಜಿನ ಕೆಳ ಕೊಠಡಿಗಳಲ್ಲಿ ಸಿಂಧನೂರು, ಮಸ್ಕಿ, ಕನಕಗಿರಿ, ಸಿರಗುಪ್ಪಾ ಕ್ಷೇತ್ರಗಳ ಮತಯಂತ್ರಗಳನ್ನು ಇರಿಸಲಾಗಿದೆ. ಮೊದಲ ಮಹಡಿಯಲ್ಲಿ ಕುಷ್ಟಗಿ, ಗಂಗಾವತಿ, ಕೊಪ್ಪಳ ಹಾಗೂ ಯಲಬುರ್ಗಾ ಕ್ಷೇತ್ರದ ಮತಯಂತ್ರಗಳನ್ನು ಇರಿಸಲಾಗಿದೆ. ಪ್ರತಿ ಮತ ಕ್ಷೇತ್ರಕ್ಕೆ 68 ಸಿಬ್ಬಂದಿ ನೇಮಕ ಮಾಡಲಾಗಿದೆ. ಎಂಟೂ ಕ್ಷೇತ್ರಕ್ಕೆ 569 ಸಿಬ್ಬಂದಿ ನಿಯೋಜನೆ ಮಾಡಲಾಗಿದೆ ಎಂದರು.

ರಾಜಕೀಯ ಪಕ್ಷಗಳ ಅಭ್ಯರ್ಥಿಗಳಿಗೆ 117 ಏಜೆಂಟರ್‌ ನೇಮಕಕ್ಕೆ ಅವಕಾಶ ಕಲ್ಪಿಸಲಾಗಿದೆ. ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ಚುನಾವಣಾ ವೀಕ್ಷಕರಾಗಿ ರಣ ವಿಜಯ್‌ ಯಾದವ್‌ ಹಾಗೂ ಉರ್ಮಿಳಾ ಸುರೇಂದರ್‌ ಶುಕ್ಲಾ ಅವರನ್ನು ಭಾರತ ಚುನಾವಣಾ ಆಯೋಗವು ನೇಮಕ ಮಾಡಿದೆ. ಈ ಇಬ್ಬರು ಅಧಿಕಾರಿಗಳು ತಲಾ 4 ಕ್ಷೇತ್ರಗಳ ಮತ ಎಣಿಕೆಯ ವೀಕ್ಷಕರಾಗಿ ಕಾರ್ಯ ನಿರ್ವಹಿಸಲಿದ್ದಾರೆ ಎಂದರು.

ಬೆಳಗ್ಗೆ 7:45ಕ್ಕೆ ಸ್ಟ್ರಾಂಗ್‌ ರೂಂ ಓಪನ್‌: ಮೇ 23ರ ಬೆಳಗ್ಗೆ 7:45ಕ್ಕೆ ಚುನಾವಣಾ ವೀಕ್ಷಕರ, ಮತ ಎಣಿಕಾ ವೀಕ್ಷಕರ ಸಮಕ್ಷಮದಲ್ಲಿ ಸ್ಟ್ರಾಂಗ್‌ ರೂಂ ತೆರೆಯಲಾಗುವುದು. ಅಂಚೆ ಮತಗಳ ಎಣಿಕೆ ಕಾರ್ಯ ಬೆಳಗ್ಗೆ 8ರಿಂದ ಆರಂಭವಾಗಲಿದೆ. ಆಗ ಎಲ್ಲ ಎಂಟೂ ಕ್ಷೇತ್ರಗಳ ಮತ ಎಣಿಕಾ ಕಾರ್ಯ ಆರಂಭವಾಗಲಿದೆ. ಪ್ರತಿ ಸುತ್ತಿನ ಫಲಿತಾಂಶವು ಸುವಿಧಾ ಎನ್ನುವ ವೆಬ್‌ಸೈಟ್‌ನಲ್ಲಿ ಪ್ರಕಟವಾಗಲಿದೆ. ಸಾರ್ವಜನಿಕವಾಗಿ ಮೈಕ್‌ ಮೂಲಕ ಫಲಿತಾಂಶವನ್ನು ಪ್ರಕಟ ಮಾಡಲಾಗುವುದು. ಜೊತೆಗೆ ಎಲ್ಇಡಿ ಪರದೆ ಮೂಲಕ ಪ್ರದರ್ಶನ ಮಾಡಲಾಗುವುದು ಎಂದರು.

5 ವಿವಿಪ್ಯಾಟ್ ಮತ ಎಣಿಕೆ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಪ್ರತಿ ವಿಧಾನಸಭಾ ಮತ ಕ್ಷೇತ್ರದ ಮತ ಎಣಿಕೆ ಮುಕ್ತಾಯದ ಬಳಿಕ ಆ ಕ್ಷೇತ್ರದಲ್ಲಿನ 5 ವಿವಿಪ್ಯಾಟ್‌ಗಳಲ್ಲಿನ ಚೀಟಿಗಳ ಎಣಿಕೆ ಪ್ರಕ್ರಿಯೆ ನಡೆಯಲಿದೆ. ಇದನ್ನು ಲಾಟರಿ ಮೂಲಕ ಆಯ್ಕೆ ಮಾಡಿ ಅನುಕ್ರಮವಾಗಿ ವಿವಿ ಪ್ಯಾಟ್‌ಗಳಲ್ಲಿನ ಚೀಟಿ ಎಣಿಕೆ ಮಾಡಲಾಗುವುದು. ವಿವಿ ಪ್ಯಾಟ್‌ನ ಮತ ಎಣಿಕೆ ಮುಕ್ತಾಯದ ನಂತರವಷ್ಟೇ ಫಲಿತಾಂಶವನ್ನು ಪ್ರಕಟ ಮಾಡಲಾಗುವುದು ಎಂದರು.

ಮೊದಲು ಅಂಚೆ ಮತ ಎಣಿಕೆ: ಈ ವರೆಗೂ 2562 ಮತಗಳು ಜಿಲ್ಲಾಡಳಿತಕ್ಕೆ ತಲುಪಿದ್ದು, ಮೇ. 22ರ ವರೆಗೂ ಅಂಚೆ ಮತಗಳನ್ನು ಸ್ವೀಕಾರ ಮಾಡಲಾಗುವುದು. ಆ ನಂತರ ಅಂಚೆ ಮತಗಳನ್ನು ಸ್ವೀಕಾರ ಮಾಡಲ್ಲ. ಅಲ್ಲದೇ, ಮೊದಲು ಅಂಚೆ ಮತಗಳನ್ನು ಎಣಿಕೆ ಮಾಡಲಾಗುವುದು. ಬಳಿಕ ಇವಿಎಂ ಯಂತ್ರದ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಲಿದೆ ಎಂದರು.

ಮೆರವಣಿಗೆ ಮಾಡುವಂತಿಲ್ಲ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತ ಕೇಂದ್ರದ ಹೊರಗೆ ಸೇರಿದಂತೆ ಜಿಲ್ಲೆ ಎಲ್ಲೂ ಮೆರವಣಿಗೆ ಮಾಡುವಂತಿಲ್ಲ. ಅಭ್ಯರ್ಥಿಗಳು ಗೆದ್ದರೂ ನಿಯಮ ಉಲ್ಲಂಘಿಸುವಂತಿಲ್ಲ. ಈ ಬಗ್ಗೆ ಪಕ್ಷಗಳ ಅಭ್ಯರ್ಥಿಗಳ ಕರೆದು ಸಭೆ ಮಾತನಾಡಲಾಗುವುದು ಎಂದರು.

ಎಸ್‌ಪಿ ರೇಣುಕಾ ಸುಕುಮಾರ ಮಾತನಾಡಿ, ಮತ ಎಣಿಕೆಯ ದಿನದಂದು ಎಣಿಕಾ ಕೇಂದ್ರ ಸೇರಿ ಜಿಲ್ಲಾದ್ಯಂತ ವಿವಿಧ ಬಿಗಿ ಬಂದೋಬಸ್ತ್ ಒದಗಿಸಲಾಗುವುದು. ಎಸ್‌ಪಿ, 2 ಡಿಎಸ್‌ಪಿ, 500 ಗೃಹರಕ್ಷಕ ದಳ, 12 ಕೆಎಸ್‌ಆರ್‌ಪಿ, ಡಿಆರ್‌ 3, ಸಿಐಎಸ್‌ಎಫ್‌ ಸೇರಿ 2 ಸಾವಿರ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಮತ ಎಣಿಕಾ ಕೇಂದ್ರದಲ್ಲಿ ಮಾಧ್ಯಮ ಪ್ರತಿನಿಧಿಗಳನ್ನು ಬಿಟ್ಟರೆ ಮತ್ತ್ತ್ಯಾರು ಮೊಬೈಲ್ ಬಳಕೆ ಮಾಡುವಂತ್ತಿಲ್ಲ. ಕಾನೂನು ಸುವ್ಯವಸ್ಥೆಗೆ ಎಲ್ಲರೂ ಸಹಕಾರ ನೀಡಬೇಕೆಂದರು.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.