ರೈತರ ಬಿಕ್ಕಟ್ಟು ಪರಿಹಾರಕ್ಕೆ ರಾಜಿ ರಹಿತ ಹೋರಾಟ ಅಗತ್ಯ

The solution to the peasant crisis not requires compromise

Team Udayavani, May 22, 2019, 11:54 AM IST

hubali-tdy-2..

ಧಾರವಾಡ: ಕವಿಸಂನಲ್ಲಿ ನೀರಸಾಗರ ಕೆರೆಗೆ ನೀರು ತುಂಬಿಸುವಂತೆ ಆಗ್ರಹಿಸಿ ರೈತ-ಕೃಷಿ ಕಾರ್ಮಿಕರ ಸಂಘಟನೆಯಿಂದ ಹಮ್ಮಿಕೊಂಡಿದ್ದ ರೈತರ ಸಮಾವೇಶದಲ್ಲಿ ಎಸ್‌.ಆರ್‌. ಹಿರೇಮಠ ಮಾತನಾಡಿದರು.

ಧಾರವಾಡ: ರೈತರ ಬಿಕ್ಕಟ್ಟು ಪರಿಹಾರಕ್ಕೆ ರಾಜಿ ರಹಿತ ಹೋರಾಟ ಕಟ್ಟಬೇಕಿದೆ ಎಂದು ಸಾಮಾಜಿಕ ಹೋರಾಟಗಾರ ಎಸ್‌.ಆರ್‌. ಹಿರೇಮಠ ಹೇಳಿದರು.

ಕವಿಸಂನಲ್ಲಿ ನೀರಸಾಗರ ಕೆರೆಗೆ ನೀರು ತುಂಬಿಸುವಂತೆ ಆಗ್ರಹಿಸಿ ರೈತ-ಕೃಷಿ ಕಾರ್ಮಿಕರ ಸಂಘಟನೆಯಿಂದ ಹಮ್ಮಿಕೊಂಡಿದ್ದ ರೈತರ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

ಇಂದು ಸರ್ಕಾರಗಳೇ ತಮ್ಮ ಮೂಗಿನಡಿಯಲ್ಲಿ ಕೆರೆಗಳ ಒತ್ತುವರಿಗೆ ಕುಮ್ಮಕ್ಕು ಕೊಡುತ್ತಿವೆ. ನೀರಿನ ಮೂಲಗಳನ್ನು ಬರಡು ಮಾಡುವ ಹುನ್ನಾರದಲ್ಲಿವೆ. ಈ ಎಲ್ಲ ಹುನ್ನಾರಗಳನ್ನು ಸೋಲಿಸಬೇಕು. ನೀರಸಾಗರ ಕೆರೆಗೆ ನೀರು ತುಂಬಿಸುವ ವ್ಯಾಪಕವಾದ ಈ ಹೋರಾಟವನ್ನು ಎಲ್ಲರೂ ಸೇರಿ ಕಟ್ಟಿ ಬೆಳೆಸಬೇಕಿದೆ. ಆ ದಿಕ್ಕಿನಲ್ಲಿ ಎಲ್ಲರೂ ಸಜ್ಜಾಗಬೇಕು ಎಂದರು.

ಆರ್‌ಕೆಎಸ್‌ ರೈತ ಸಂಘಟನೆ ರಾಜ್ಯ ಖಜಾಂಚಿ ವಿ. ನಾಗಮ್ಮಾ ಮಾತನಾಡಿ, ಇಂದು ಕುಡಿಯುವ ನೀರಿಗೆ ತತ್ವಾರವಿದ್ದರೂ ಕಾರ್ಪೊರೇಟ್ ಕಂಪನಿಗಳಿಗೆ ನೀರಿನ ಪೂರೈಕೆ ಮಾಡಲಾಗುತ್ತಿದೆ. ಸರ್ಕಾರಗಳು ಜನಪರವಾಗಿ ಕೆಲಸ ಮಾಡಿದರೆ ನೀರಸಾಗರ ಕೆರೆಗೆ ಕೇವಲ ಒಂದು ವರ್ಷದಲ್ಲೇ ನೀರು ತುಂಬಿಸುವುದು ದೊಡ್ಡ ವಿಷಯವಲ್ಲ. ಆದರೆ ಈ ಸರ್ಕಾರಗಳು ಜನಪರವಾಗಿಲ್ಲ. ಆದ್ದರಿಂದ ಹೋರಾಟದ ಮೂಲಕ ಸರ್ಕಾರಕ್ಕೆ ಎಚ್ಚರಿಕೆ ನೀಡಬೇಕಿದೆ. ಎಲ್ಲ ಗ್ರಾಮದ ರೈತರು ಪ್ರಬಲ ಹೋರಾಟ ಬೆಳೆಸಬೇಕು ಎಂದು ಹೇಳಿದರು.

ಎಸ್‌ಯುಸಿಐ(ಕಮ್ಯುನಿಸ್ಟ್‌) ಪಕ್ಷದ ರಾಜ್ಯ ಸಮಿತಿ ಸದಸ್ಯ ರಾಮಾಂಜನಪ್ಪ ಆಲ್ದಳ್ಳಿ ಮಾತನಾಡಿ, ಹುಬ್ಬಳ್ಳಿ, ಕುಂದಗೋಳ ಹಾಗೂ ಕಲಘಟಗಿ ತಾಲೂಕಿನ ಸುಮಾರು 20-25 ಹಳ್ಳಿಗಳಿಗೆ ಕುಡಿಯುವ ನೀರು ಮತ್ತು ಕೃಷಿಗೆ ಆಧಾರವಾಗಿದ್ದ ನೀರಸಾಗರ ಕೆರೆ ಇಂದು ಬತ್ತಿ ಬೆಂಗಾಡಾಗಿದೆ. ಕೃಷಿಯನ್ನೇ ನಂಬಿರುವ ರೈತರು ಹೊಲಗಳಲ್ಲಿ ಹೊಸ ಬೋರ್‌ವೆಲ್ಗಳನ್ನು 500 ಅಡಿ ಆಳ ಕೊರೆಸಿದರೂ ಅಲ್ಪ-ಸ್ವಲ್ಪ ನೀರು ಸಿಗುವುದು ಕಷ್ಟವಾಗಿದೆ. ಈ ಭಾಗದ ರೈತರ ಬದುಕು ಹಸನಾಗಬೇಕಾದರೆ ನೀರಸಾಗರ ಕೆರೆಗೆ ನೀರು ತುಂಬಬೇಕಾಗಿದೆ ಎಂದರು.

ಆರ್‌ಕೆಎಸ್‌ ರೈತ ಸಂಘಟನೆ ಜಿಲ್ಲಾ ಕಾರ್ಯದರ್ಶಿ ಶರಣು ಗೋನವಾರ ಅಧ್ಯಕ್ಷತೆ ವಹಿಸಿದ್ದರು. ಪತ್ರಕರ್ತ ವೆಂಕನಗೌಡ ಪಾಟೀಲ, ಲಕ್ಷ್ಮಣ ಜಡಗನ್ನವರ, ಅಲ್ಲಾವುದ್ದಿನ ಅಡ್ಲಿ, ಸದಸ್ಯರಾದ ಕಲ್ಲಪ್ಪ ರಾಮನಾಳ, ಪಕ್ಕೀರಪ್ಪ ಕೋಟಿ ಇನ್ನಿತರರಿದ್ದರು.

ಹೋರಾಟಕ್ಕೆ ಸಮಿತಿ ರಚನೆ; ಗಡುವು ನೀಡಲು ತೀರ್ಮಾನ

ನೀರಸಾಗರ ಕೆರೆಗೆ ನೀರು ತುಂಬಿಸುವಂತೆ ಸರ್ಕಾರವನ್ನು ಒತ್ತಾಯಿಸುವ ಮುಖ್ಯ ಗೊತ್ತುವಳಿಯನ್ನು ಸಮಾವೇಶದಲ್ಲಿ ಮಂಡಿಸಿ ಅಂಗೀಕರಿಸಲಾಯಿತು. ಕೆರೆಯ ಸುತ್ತಮುತ್ತಲಿನ ಹಳ್ಳಿಗಳ 30ಕ್ಕೂ ಹೆಚ್ಚು ರೈತರನ್ನೊಳಗೊಂಡ ನೀರಸಾಗರ ಕೆರೆ ಹೋರಾಟ ಸಮಿತಿ ರಚಿಸಲಾಯಿತು. ಮುಂದಿನ ದಿನಗಳಲ್ಲಿ ಸಮಿತಿ ನೇತೃತ್ವದಲ್ಲಿ ಹೋರಾಟ ಮುಂದುವರಿಸಲು ತೀರ್ಮಾನಿಸಲಾಯಿತು. ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿ ಗಡುವು ನೀಡಲು ತೀರ್ಮಾನಿಸಲಾಯಿತು. ಆ ಗಡುವಿನೊಳಗೆ ಪ್ರತಿಕ್ರಿಯಿಸದಿದ್ದರೆ ಪ್ರಬಲ ಹೋರಾಟ ಕೈಗೆತ್ತಿಕೊಳ್ಳಲು ನಿರ್ಣಯಿಸಲಾಯಿತು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.