ಸಮಸ್ಯೆಗಳ ಆಗರ ಅಕ್ಕಮಹಾದೇವಿ ಸಭಾಂಗಣ

ಕೆಟ್ಟು ನಿಂತಿರುವ ಲಿಫ್ಟ್ | ಸಭಾಂಗಣಕ್ಕೆ ತೆರಳಲು ಜನರಿಗೆ ಪ್ರಯಾಸ | ದಿವ್ಯಾಂಗರಿಗೆ ದುಸ್ತರ

Team Udayavani, May 22, 2019, 2:21 PM IST

bglre-tdy-3..

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ಅಕ್ಕ ಮಹಾದೇವಿ ಸಭಾಂಗಣ ಸಮಸ್ಯೆಗಳ ಆಗರ ವಾಗಿದೆ. ಹೀಗಾಗಿ ದುಡ್ಡು ಕೊಟ್ಟು ಸಭಾಂಗಣ ದೊಳಗೆ ಕಾರ್ಯಕ್ರಮ ನಡೆಸಿದವರು ಸಮಾರಂಭ ಮುಗಿದ ನಂತರ ಯಾಕಾದರೂ, ಈ ಸಭಾಂಗಣ ಬುಕ್‌ ಮಾಡಿದೆವೋ ಎಂದು ನರಳುವಂತಾಗಿದೆ.

ಪುಂಡಲೀಕ ಹಾಲಂಬಿ ಅವರು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿದ್ದ ವೇಳೆ ಆರಂಭವಾಗಿದ್ದ ಈ ಕಟ್ಟಡ ಕಾಮಗಾರಿ ಹಾಲಿ ಅಧ್ಯಕ್ಷರ ಅವಧಿಯಲ್ಲಿ ಮುಕ್ತಾಯವಾಯಿತು. ಕರ್ನಾಟಕ ವಸತಿ ನಿಗಮ ಸುಮಾರು 4.20 ಕೋಟಿ ರೂ. ವೆಚ್ಚದಲ್ಲಿ ಶತಮಾನೋತ್ಸವ ಭವನ ನಿರ್ಮಾಣ ಮಾಡಿದೆ. ಆದರೆ ಕನ್ನಡ ಸಾಹಿತ್ಯ ಪರಿಷತ್ತಿನ ಹಾಲಿ ಆಡಳಿತ ಮಂಡಳಿಯ ಕೆಲವು ತೀರ್ಮಾನಗಳಿಂ ದಾಗಿ ಅಕ್ಕಮಹಾದೇವಿ ಸಭಾಂಗಣ ಸಮಸ್ಯೆಯ ಆಗರವಾಗಿಯೇ ಉಳಿದು ಕೊಂಡಿದೆ.

ಕೈ ಬಿಟ್ಟ ಆತ್ಯಾಧುನಿಕ ಆಡಿಟೋರಿಯಂ ಫ್ಲಾನ್‌: ಪುಂಡಲೀಕ ಹಾಲಂಬಿ ಅವರು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿದ್ದ ವೇಳೆ ಅಕ್ಕ ಮಹಾದೇವಿ ಸಭಾಂಗಣವನ್ನು ವಿಶೇಷ ತಂತ್ರ ಜ್ಞಾನ ಬಳಸಿ ನಿರ್ಮಿಸುವ ಆಲೋಚನೆ ಹೊಂದಿ ದ್ದರು. ಅದೇ ರೀತಿಯಲ್ಲಿ ಸಭಾಂಗಣದ ನಕಾಶೆ ಕೂಡ ಸಿದ್ಧವಾಗಿತ್ತು. ಆದರೆ ಅವರು, ಬಯಸಿದ ರೀತಿಯಲ್ಲಿ ಆಡಿಟೋರಿಯಂ ಸಿದ್ಧವಾಗಿಲ್ಲ.

ಕನ್ನಡ ಸಾಹಿತ್ಯ ಪರಿಷತ್ತಿನಲ್ಲೂ ಆತ್ಯಾಧುನಿಕ ತಂತ್ರಜ್ಞಾನ ಹೊಂದಿದ ಆಡಿಟೋರಿಯಂ ಇರಲಿ ಎಂಬ ಉದ್ದೇಶ ಕೂಡ ಅವರದ್ದಾಗಿತ್ತು. ಆದರೆ ಹವಾ ನಿಯಂತ್ರಿತ ಥಿಯೇಟರ್‌ ಮಾಡಿದರೆ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಸುವರ ಮೇಲೆ ಹೆಚ್ಚಿನ ಬಾಡಿಗೆ ಹೇರಬೇಕಾಗುತ್ತದೆ. ಹೀಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಸಲು ಮುಂದೆ ಬರುವುದಿಲ್ಲ ಎಂಬ ಉದ್ದೇಶದಿಂದಾಗಿ ಈ ಹಿಂದೆ ಮಾಡಲಾಗಿದ್ದ ಮೂಲ ಯೋಜನೆಯನ್ನು ಕೈ ಬಿಡಲಾಗಿದೆ. ಇದೇ ಈಗ ಸಭಾಂಗಣದೊಗಿನ ದ್ವನಿವರ್ಧಕ ವ್ಯವಸ್ಥೆಯಲ್ಲಿ ಕಂಡು ಬಂದಿರುವ ಸಮಸ್ಯೆಗೆ ಒಂದು ಕಾರಣವಾಗಿದೆ ಹೆಸರು ಹೇಳಲು ಇಚ್ಛಿಸದ ಕನ್ನಡ ಸಾಹಿತ್ಯ ಪರಿಷತ್ತಿನ ಹಿರಿಯ ಸದಸ್ಯರೊಬ್ಬರು ದೂರಿದ್ದಾರೆ.

ಸಭಿಕರಿಗೆ ಕಿರಿಕಿರಿ: ಅಕ್ಕಮಹಾದೇವಿ ಸಭಾಂಗಣ ದಲ್ಲಿ ವಿವಿಧ ಸಂಘಟನೆಗಳು ಹಮ್ಮಿಕೊಳ್ಳುವ ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿಗಳು ಭಾಗವ ಹಿಸುತ್ತಾರೆ. ದೊಡ್ಡ ಸಂಖ್ಯೆಯಲ್ಲಿ ಸಾಹಿತ್ಯಾಭಿಮಾನಿ ಗಳು ಸೇರುತ್ತಾರೆ. ಆದರೆ ಧ್ವನಿ ಗ್ರಹಣದ ವ್ಯವಸ್ಥೆ ಸರಿಯಾಗಿ ಇಲ್ಲದೇ ಇರುವುದರಿಂದ ಯಾರು ಏನ್‌ ಹೇಳುತ್ತಾರೋ ಎಂಬುವುದೇ ತಿಳಿಯುವು ದಿಲ್ಲ. ಹೀಗಾಗಿ ಈ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯುವ ವೇಳೆ ಸಭಿಕರು ಕಿರಿಕಿರಿ ಅನುಭವಿ ಸಬೇಕಾಗುತ್ತದೆ. ಈ ಅವ್ಯವಸ್ಥೆಯ ಬಗ್ಗೆ ಸಭಿಕರ ಮುಂದೆಯೇ ಹಿರಿಯ ಸಾಹಿತಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

● ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.