ಜೂ.15ರ ನಂತರ ಮೋಡ ಬಿತ್ತನೆ
ಕೃಷಿ ಸಚಿವ ಶಿವಶಂಕರರೆಡ್ಡಿ ಹೇಳಿಕೆ • ಜಿಲ್ಲಾಡಳಿತದಿಂದ ಬರ ಪರಿಸ್ಥಿತಿ ಕುರಿತು ಪ್ರಗತಿ ಪರಿಶೀಲನೆ
Team Udayavani, May 22, 2019, 3:26 PM IST
ಚಿಕ್ಕಬಳ್ಳಾಪುರ ನಗರದ ಜಿಪಂ ಸಭಾಂಗಣದಲ್ಲಿ ಮಧ್ಯಾಹ್ನ ಕೃಷಿ ಸಚಿವ ಎನ್.ಎಚ್.ಶಿವಶಂಕರರೆಡ್ಡಿ ಬರ ಪರಿಸ್ಥಿತಿ ಕುರಿತು ಹಮ್ಮಿಕೊಂಡಿದ್ದ ಸಭೆಯಲ್ಲಿ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.
ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಪ್ರಸ್ತುತ ಶೇ.45 ರಷ್ಟು ಮಳೆ ಕೊರತೆ ಉಂಟಾಗಿ ಭೀಕರ ಬರಗಾಲ ಉಂಟಾಗಿರುವ ಪರಿಣಾಮ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಪರಿಸ್ಥಿತಿ ಸಮಸ್ಯೆಯಿದ್ದು, ಜೂ.15 ರ ನಂತರ ರಾಜ್ಯದಲ್ಲಿ ಮೋಡ ಬಿತ್ತನೆ ಕಾರ್ಯ ನಡೆಯಲಿದೆ ಎಂದು ಕೃಷಿ ಸಚಿವ ಎನ್.ಹೆಚ್.ಶಿವಶಂಕರರೆಡ್ಡಿ ತಿಳಿಸಿದರು.
ನಗರದ ಜಿಪಂ ಸಭಾಂಗಣದಲ್ಲಿ ಮಂಗಳವಾರ ಮಧ್ಯಾಹ್ನ ಜಿಲ್ಲೆಯ ಬರ ಪರಿಸ್ಥಿತಿ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ನಡೆಸಿದ ಅವರು, ಕಳೆದ ವರ್ಷ ತಾಂತ್ರಿಕ ಕಾರಣಗಳಿಂದ ಹಾಗೂ ತಡವಾಗಿದ್ದರಿಂದ ಸರ್ಕಾರ ಮೋಡ ಬಿತ್ತನೆ ಕಾರ್ಯ ಮಾಡಿರಲಿಲ್ಲ. ಆದರೆ ಈ ವರ್ಷ ಮೋಡ ಬಿತ್ತನೆಗೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಮೋಡ ಬಿತ್ತನೆ ನಡೆಸಲಾಗುವುದು ಎಂದರು.
300 ಕ್ಕೂ ಹೆಚ್ಚು ಹಳ್ಳಿಗಳಲ್ಲಿ ನೀರಿನ ಸಮಸ್ಯೆ: ಚುನಾವಣಾ ನೀತಿ ಸಂಹಿತೆ ಇದ್ದರೂ ಕೂಡ ಬರ ಪರಿಸ್ಥಿತಿಯನ್ನು ಜಿಲ್ಲಾಡಳಿತ ಸಮರ್ಥವಾಗಿ ನಿಭಾಯಿಸಿದೆ. ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಉಂಟಾಗಿಲ್ಲ. ಜಿಲ್ಲೆಯಲ್ಲಿ 300 ಕ್ಕೂ ಹೆಚ್ಚು ಹಳ್ಳಿಗಳಲ್ಲಿ ನೀರಿನ ಸಮಸ್ಯೆ ಇದ್ದರೂ ಖಾಸಗಿ ಕೊಳವೆ ಬಾವಿ ಹಾಗೂ ಟ್ಯಾಂಕÃ್ಗಳ ಮೂಲಕ ನೀರು ಸರಬರಾಜು ಮಾಡಲಾಗಿದೆ ಎಂದು ಸಚಿವರು ತಿಳಿಸಿದರು.
75 ಲಕ್ಷ ಸಸಿ: ಜಿಲ್ಲಾಡಳಿತ ಸಮಾರೋಪಾದಿಯಲ್ಲಿ ಕುಡಿಯುವ ನೀರು ಒದಗಿಸಲು ಕ್ರಮ ಕೈಗೊಳ್ಳಬೇಕು. ಮಳೆಗಾಲದ ಸಂದರ್ಭದಲ್ಲಿ 75 ಲಕ್ಷ ಸಸಿಗಳನ್ನು ನೆಡಬೇಕು. ಕೆರೆ, ಕುಂಟೆಗಳ ಒತ್ತುವರಿ ತೆರವುಗೊಳಿಸಿ ಕೆರೆಗಳಲ್ಲಿರುವ ಜಾಲಿ ಮರಗಳನ್ನು ತೆರವುಗೊಳಿಸುವಂತೆ ಸೂಚಿಸಿದರು.
ವಿಮಾ ಅಧಿಕಾರಿಗಳು ಕಚೇರಿಯಲ್ಲಿರಿ: ವಿಮೆ ಮಾಡಿಸುವ ರೈತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ವಿಮಾ ಕಂಪನಿಗಳ ಪ್ರತಿನಿಧಿಗಳು ಪ್ರತಿ ತಾಲೂಕಿನ ಕೃಷಿ ಇಲಾಖೆ ಕಚೇರಿಯಲ್ಲಿ ಇರಬೇಕು. ಈ ಕುರಿತು ವಿಮಾ ಕಂಪನಿಯವರ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳಬೇಕು ಎಂದು ಕೃಷಿ ಅಧಿಕಾರಿಗೆ ತಿಳಿಸಿದರು.
ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗದಂತೆ ಎಚ್ಚರ ವಹಿಸಬೇಕು. ಅಗತ್ಯ ಇರುವ ಕಡೆ ಮೇವು ವಿತರಿಸಲು ಮೇವು ಬ್ಯಾಂಕ್ ತೆರೆಯುವಂತೆ ಸೂಚಿಸಿದರು.
1.54 ಲಕ್ಷ ಹೆಕೇrರ್ ಬಿತ್ತನೆ ಗುರಿ: ಜಿಲ್ಲಾ ಜಂಟಿ ಕೃಷಿ ಇಲಾಖೆ ನಿರ್ದೇಶಕಿ ಎಲ್.ರೂಪ ಮಾತನಾಡಿ, ಮುಂಗಾರಿನಲ್ಲಿ ಜಿಲ್ಲೆಯಲ್ಲಿ ಒಟ್ಟು 1,54,000 ಹೆಕೇrರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿದೆ. ಪ್ರಸಕ್ತ ಸಾಲಿನಲ್ಲಿ 17,800 ಕ್ವಿಂಟಲ್ ವಿವಿಧ ಬಿತ್ತನೆ ಬೀಜಗಳಿಗೆ ಬೇಡಿಕೆ ಇದ್ದು, 1040.4ಕ್ವಿಂಟಲ್ ಬಿತ್ತನೆ ಬೀಜ ಲಭ್ಯವಿದೆ.
ರಾಗಿ, ಮುಸುಕಿನ ಜೋಳ, ತೊಗರಿ, ಅಲಸಂಧೆ, ನೆಲಗಡಲೆ ಬೀಜಗಳ ಬಿತ್ತನೆಗೆ ಆದ್ಯತೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು. ಸಭೆಯಲ್ಲಿ ಪಶುಪಾಲನಾ ಇಲಾಖೆ, ನೇರಗಾ ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಮಾಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ಮಾತನಾಡಿ, ಜಿಲ್ಲೆಯಲ್ಲಿ ಬರದಿಂದ ನೀರಿನ ಸಮಸ್ಯೆ ಉಂಟಾಗಿರುವ ಗ್ರಾಮಗಳ ಕುರಿತು, ಕೈಗೊಂಡಿರುವ ಪರಿಹಾರ ಕಾಮಗಾರಿಗಳು, ಅಂತರ್ಜಲ ಹೆಚ್ಚಳಕ್ಕೆ ಜಿಲ್ಲಾಡಳಿತ ಕೈಗೊಂಡಿರುವ ಸಿದ್ಧತೆಗಳು, ಕಲ್ಯಾಣಿಗಳ ಸ್ವಚ್ಛತೆ, ಕೆರೆ, ಕುಂಟೆಗಳ ಒತ್ತುವರಿ ತೆರವು ಕುರಿತು ಸಚಿವರ ಗಮನ ಸೆಳೆದರು.
ಸಭೆಯಲ್ಲಿ ಜಿಪಂ ಸಿಇಒ ಗುರುದತ್ ಹೆಗಡೆ, ಅಪರ ಜಿಲ್ಲಾಧಿಕಾರಿ ಆರತಿ ಆನಂದ್, ಉಪ ವಿಭಾಗಾಧಿಕಾರಿ ಬಿ.ಶಿವಸ್ವಾಮಿ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಚಿನ್ನದ ನಾಡಿನ ಕಲಾವಿದೆ ವಿದ್ಯಾಶ್ರೀ ಪ್ರತಿಭೆ ಅನಾವರಣ-ನೃತ್ಯಗಂಗಾ ಪ್ರದರ್ಶನ
BJP ಕುರುಬ ಸಮುದಾಯಕ್ಕೆ ಒಂದೂ ಟಿಕೆಟ್ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ
ಅಮಿತಾಭ್ ಟು ಶಾರುಖ್: ಇಂದು ಕೋಟಿ ಕುಳರಾದ ಈ ನಟರ ಮೊದಲ ಸಂಪಾದನೆ ಎಷ್ಟಾಗಿತ್ತು ಗೊತ್ತಾ?
Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ
Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ