ಗ್ರಾಪಂ ಕಚೇರಿಗಳಲ್ಲಿ ಆಧಾರ್‌ ನೋಂದಣಿ ಬಂದ್‌!

ಬ್ಯಾಂಕ್‌ಗಳಲ್ಲಿ ದಿನಕ್ಕೆ 20ರಿಂದ 25 ಟೋಕನ್‌ ವಿತರಣೆ

Team Udayavani, May 22, 2019, 4:17 PM IST

22-May-27

ಸಿರುಗುಪ್ಪ: ನಗರದ ತಾಲೂಕು ಕಚೇರಿಯಲ್ಲಿ ಆಧಾರ್‌ ನೋಂದಣಿಗೆ ಕೇವಲ 2 ಟೋಕನ್‌ ನೀಡಲಾಗುತ್ತದೆ ಎಂದು ಬರೆದ ಪ್ರತಿ.

ಸಿರುಗುಪ್ಪ: ತಾಲೂಕಿನಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಾರಿಗೊಂಡಿರುವ ಮಾದರಿ ನೀತಿ ಸಂಹಿತೆ ಪರಿಣಾಮ ತಾಲೂಕು ಕಚೇರಿ ಸೇರಿದಂತೆ ತಾಲೂಕಿನ ಗ್ರಾಪಂಗಳಲ್ಲಿ ಆಧಾರ್‌ ನೋಂದಣಿ ಪ್ರಕ್ರಿಯೆ ಕಳೆದ 2ತಿಂಗಳಿನಿಂದ ಸ್ಥಗಿತಗೊಂಡಿರುವುದರಿಂದ ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳಿಗೆ ಆಧಾರ್‌ ಕಾರ್ಡ್‌ ಮಾಡಿಸಲು ಪೋಷಕರು ಪರದಾಡುವ ದೃಶ್ಯಗಳು ಸಾಮಾನ್ಯವಾಗಿವೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪ್ರತಿಯೊಂದು ಯೋಜನೆಗೂ ಈಗ ಆಧಾರ್‌ ಕಾರ್ಡ್‌ ಕಡ್ಡಾಯಗೊಳಿಸಿರುವುದರಿಂದ ಆಧಾರ್‌ಗೆ ಹೆಚ್ಚಿನ ಮಹತ್ವ ಬಂದಿದೆ. ಆದರೆ ಕಾಲಮಿತಿಯೊಳಗೆ ಆಧಾರ್‌ ಕಾರ್ಡ್‌ ಸಿಗದೆ ಸರ್ಕಾರದ ಸೌಲಭ್ಯಗಳು ಜನ ಸಾಮಾನ್ಯರಿಗೆ ದೂರವಾಗಿ ಸರ್ಕಾರಿ ಯೋಜನೆಗಳ ಲಾಭ ಜನರ ಪಾಲಿಗೆ ಸಿಗದಂತಾಗುತ್ತಿದೆ.

ತಾಲೂಕಿನಾದ್ಯಂತ ಶಾಲಾ ಕಾಲೇಜುಗಳು 2019-20ನೇ ಸಾಲಿನ ಶೈಕ್ಷಣಿಕ ವರ್ಷದ ಆರಂಭಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿವೆ. ದಾಖಲಾತಿ ಪ್ರಕ್ರಿಯೆಗಳು ಎಲ್ಲ ಕಡೆ ಪ್ರಾರಂಭವಾಗಿವೆ. ಆದರೆ ಬ್ಯಾಂಕ್‌ ಖಾತೆ ತೆರೆಯುವುದರಿಂದ ಹಿಡಿದು ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಮಾಡಿಸಲು ಹಾಗೂ ಶಾಲಾ ಕಾಲೇಜುಗಳಲ್ಲಿ ದಾಖಲಾತಿಗಾಗಿ ಆಧಾರ್‌ ಸಂಖ್ಯೆ ಕೊಡುವುದು ಕಡ್ಡಾಯಗೊಳಿಸಿರುವುದರಿಂದ ಸದ್ಯ ಆಧಾರ್‌ ಕಾರ್ಡ್‌ಗೆ ಪರದಾಡುವ ದೃಶ್ಯಗಳು ಕಂಡು ಬರುತ್ತಿವೆ.

ಲೋಕಸಭಾ ಚುನಾಣೆಯ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಗ್ರಾಪಂ ಕಚೇರಿಗಳಲ್ಲಿ ಮಾಡಲಾಗುತ್ತಿದ್ದ ಆಧಾರ್‌ ನೋಂದಣಿ ಪ್ರಕ್ರಿಯೆಗಳು ಸ್ಥಗಿತಗೊಂಡಿದ್ದು ಜನ ಸಾಮಾನ್ಯರು ಆಧಾರ್‌ನೋಂದಣಿಗೆ ಪರದಾಡಬೇಕಾಗಿದೆ. ತಾಲೂಕಿನ ಕೆಲವು ವಾಣಿಜ್ಯ ಬ್ಯಾಂಕ್‌ಗಳಲ್ಲಿ ಆಧಾರ್‌ ನೋಂದಣಿಗೆ ಅವಕಾಶ ಮಾಡಿಕೊಡಲಾಗಿದ್ದರೂ ಸಾಕಷ್ಟು ವಿಳಂಬವಾಗುತ್ತಿದೆ. ದಿನಕ್ಕೆ ಕೇವಲ 20ರಿಂದ 25ಜನರಿಗೆ ಆಧಾರ್‌ ನೋಂದಣಿಗೆ ಬ್ಯಾಂಕ್‌ಗಳು ಟೋಕನ್‌ ವಿತರಿಸುತ್ತಿವೆ. ನಗರದ ಮುಖ್ಯ ಅಂಚೆ ಕಛೇರಿಯಲ್ಲಿ ಆಧಾರ್‌ ನೋಂದಣಿ ಮಾಡಲಾಗುತ್ತಿದ್ದು, ರಾತ್ರಿ 2ಗಂಟೆಗೆ ಬಂದು ಸಾಲುಗಟ್ಟಿ ನಿಂತರು ಟೋಕನ್‌ ಸಿಗದ ಪರಿಸ್ಥಿತಿ ನಿಮಾಣವಾಗಿದೆ.

ಬಹಳಷ್ಟು ಜನ ಆಧಾರ್‌ ಕಾರ್ಡ್‌ನ್ನು ಹೊಸದಾಗಿ ಪಡೆಯುವುದಕ್ಕಿಂತ ತಿದ್ದುಪಡಿಗೆ ಹೆಚ್ಚು ಅರ್ಜಿಗಳು ಹಾಕುತ್ತಿರುವುದರಿಂದ ನೋಂದಣಿ ಕೇಂದ್ರಗಳು ಜನರಿಂದ ತುಂಬಿ ತುಳುಕುತ್ತಿವೆ. ಕಾಲಮಿತಿಯೊಳಗೆ ಅರ್ಜಿ ಹಾಕಲು ಸಾಧ್ಯವಾಗದೆ ಆಧಾರ್‌ ನೋಂದಣಿ ಕೇಂದ್ರಗಳಿಗೆ ನಿತ್ಯವೂ ಪರದಾಡುವಂತಾಗಿದೆ. ತಾಲೂಕಿನ 27 ಗ್ರಾಪಂಗಳಲ್ಲಿ ಆಧಾರ್‌ ಕಾರ್ಡ್‌ ನೋಂದಣಿಗೆ ಅವಕಾಶ ನೀಡಲಾಗಿದೆ. ಆದರೆ ತಾಂತ್ರಿಕ ಸಮಸ್ಯೆಗಳಿಂದ ಗ್ರಾಪಂಗಳಲ್ಲಿ ಆಧಾರ್‌ ಕಾರ್ಡ್‌ ನೋಂದಣಿ ಕಾರ್ಯ ಮಾಡಲು ಸಾಧ್ಯವಾಗುತ್ತಿಲ್ಲ.

ತಾಲೂಕಿನಲ್ಲಿ ಆಧಾರ್‌ ನೋಂದಣಿಗೆ ಶಾಶ್ವತ ಕೇಂದ್ರ ತೆರೆಯದೇ ಇರುವುದರಿಂದ ಜನ ಆಧಾರ್‌ ನೋಂದಣಿಗೆ ಪರದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನಾದರೂ ಸರ್ಕಾರ ಶಾಶ್ವತ ಆಧಾರ್‌ ನೋಂದಣಿ ಕೇಂದ್ರ ಸ್ಥಾಪನೆಗೆ ಕ್ರಮ ಕೈಗೊಳ್ಳಬೇಕು. ಗ್ರಾಪಂ ಕಚೇರಿಗಳಲ್ಲಿ ಆಧಾರ್‌ ನೋಂದಣಿ ಕಾರ್ಯ ಮಾಡುವಂತೆ ಕ್ರಮ ಕೈಗೊಳ್ಳಬೇಕು.
•ಎಸ್‌.ರಫಿ, ಸ್ಥಳೀಯ ನಿವಾಸಿ.

ಗ್ರಾಪಂ ಕಚೇರಿಗಳಲ್ಲಿ ಆಧಾರ್‌ ನೋಂದಣಿ ಮಾಡಲು ತಾಂತ್ರಿಕ ಸಮಸ್ಯೆ ಉಂಟಾಗಿದ್ದು, ಮೇ 27ರ ನಂತರ ಗ್ರಾಪಂ ಕಚೇರಿಗಳಲ್ಲಿ ಆಧಾರ್‌ ನೋಂದಣಿ ಪ್ರಕ್ರಿಯೆ ನಡೆಯುವಂತೆ ಕ್ರಮ ಕೈಗೊಳ್ಳಲಾಗುವುದು.
• ಶಿವಪ್ಪ ಸುಬೇದಾರ್‌, ತಾಪಂ, ಇ.ಒ.

ತಾಲೂಕಿನಲ್ಲಿ ಆಧಾರ್‌ ಕಾರ್ಡ್‌ಗಾಗಿ ಜನರು ಪರದಾಡುತ್ತಿರುವುದನ್ನು ತಪ್ಪಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು, ಗ್ರಾಪಂ ಕಚೇರಿಗಳಲ್ಲಿ ಆಧಾರ್‌ ನೋಂದಣಿ ಮಾಡಿಸಲು ಕ್ರಮ ಕೈಗೊಳ್ಳಲಾಗುವುದು.
•ದಯಾನಂದ್‌ ಪಾಟೀಲ್, ತಹಶೀಲ್ದಾರ್‌.

ಟಾಪ್ ನ್ಯೂಸ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sirsi

Modi ಬಂದಿದ್ದು ಕಾಂಗ್ರೆಸ್‌ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sirsi

Modi ಬಂದಿದ್ದು ಕಾಂಗ್ರೆಸ್‌ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.