ಹಕ್ಕು ಪತ್ರ ಕೊಟ್ರೂ ಅಧಿಕಾರಿಗಳು ನಿವೇಶನ ಕೊಡಲಿಲ್ಲ

ಬಾನಂದೂರು ಫ‌ಲಾನುಭವಿ ಕುಟುಂಬಗಳ ಅಳಲು | 17 ವರ್ಷಗಳೇ ಕಳೆದರೂ ನಿವೇಶನವಿಲ್ಲ

Team Udayavani, May 22, 2019, 4:32 PM IST

rn-tdy-3..

ರಾಮನಗರ ತಾಲೂಕು ಬಿಡದಿ ಬಳಿಯ ಬಾನಂದೂರಿನ ಆಶ್ರಯ ಯೋಜನೆಯಡಿಯ ಫ‌ಲಾನುಭವಿಗಳು ತಮಗೆ ನೀಡಿರುವ ನಿವೇಶ ಹಕ್ಕು ಪತ್ರಗಳನ್ನು ಪ್ರದರ್ಶಿಸಿದರು.

ರಾಮನಗರ: ತಾಲೂಕು ಆಡಳಿತ ನೀಡಿರುವ ಆಶ್ರಯ ಯೋಜನೆಯಡಿಯ ನಿವೇಶನ ಹಕ್ಕು ಪತ್ರ 1992ನೇ ಇಸವಿಯಿಂದ ಕೈಲಿದೆ. ಸ್ವಂತ ಸೂರು ನಿರ್ಮಿಸಿಕೊಳ್ಳಬೇಕು ಎಂಬ ಹಂಬಲವಿದೆ. ಆದರೆ ಸರ್ಕಾರ ನೀಡಿರುವ ನಿವೇಶನ ಎಲ್ಲಿದೆ ಅಂತಲೇ ಗೊತ್ತಿಲ್ಲ. ನಿವೇಶನ ತೋರಿಸಬೇಕಾದ ಅಧಿಕಾರಿಗಳು ಕೈಕಟ್ಟಿ ಕುಳಿತು ಬಿಟ್ಟಿದ್ದಾರೆ!

ಹೀಗೆ ಅಲವತ್ತುಕೊಂಡಿದ್ದು ತಾಲೂಕಿನ ಬಿಡದಿ ಪುರಸಭೆ ವ್ಯಾಪ್ತಿಯ ಬಾನಂದೂರು ಗ್ರಾಮದ 23 ಕುಟುಂಬಗಳು. ಸುದ್ದಿಗಾರರ ಬಳಿ ತಮ್ಮ ನೋವು ತೋಡಿಕೊಂಡ ಈ ‘ಫ‌ಲಾನುಭವಿಗಳು’ ಬಾನಂದೂರು ಗ್ರಾಮದ ಸರ್ವೇ ಸಂಖ್ಯೆ 111ರಲ್ಲಿ 1991-92ನೇ ಸಾಲಿನಲ್ಲಿ ಬಾನಂದೂರಿನಲ್ಲಿ ವಾಸ ಮಾಡುತ್ತಿದ್ದ ನಿವೇಶನ ರಹಿತ ಬಡವರನ್ನು ಗುರುತಿಸಿ ತಾಲೂಕು ಆಡಳಿತ ಹಕ್ಕುಪತ್ರ ನೀಡಿದೆ. ಆದಿಚುಂಚನಗಿರಿ ಮಹಾಸಂಸ್ಥಾನ ಪೀಠಾಧ್ಯಕ್ಷರಾಗಿದ್ದ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರ ಕಾಳಜಿಯನ್ನು ಅರಿತ ಅಂದಿನ ಶಾಸಕರಾಗಿದ್ದ ಸಿ.ಎಂ.ಲಿಂಗಪ್ಪ ಅವರು ಈ ಬಡ ಕುಟುಂಬಗಳನ್ನು ಆಯ್ಕೆ ಮಾಡಿ ಸದರಿ ಸರ್ವೇ ಸಂಖ್ಯೆ ಭೂಮಿಯಲ್ಲಿ ತಲಾ 30×40 ನಿವೇಶನಗಳಿಗೆ ಹಕ್ಕು ಪತ್ರಗಳನ್ನು ವಿತರಿಸಿದ್ದರು. ಹೀಗೆ ವಿತರಣೆಯಾದ ಹಕ್ಕುಪತ್ರಗಳಲ್ಲಿ ತಹಸೀಲ್ದಾರರ ಸಹಿ ಮತ್ತು ಅಧಿಕೃತ ಮುದ್ರೆ ಇದೆ. ಆದರೆ ಅಧಿಕಾರಿಗಳು ಈ ಕುಟುಂಬಗಳಿಗೆ ನಿವೇಶನಗಳನ್ನು ಗುರುತಿಸಿ ಕೊಡಲಿಲ್ಲ ಎಂದು ಈ ಕುಟುಂಬಗಳು ಆಕ್ಷೇಪಿಸಿವೆ.

ಈ ವೇಳೆ ಫ‌ಲಾನುಭವಿ ಒಬ್ಬರಾದ ಕ್ಯಾತಯ್ಯ ಮಾತನಾಡಿ, ತಮ್ಮ ಭೂಮಿ ತೋರಿಸಿ ಎಂದು ಅನೇಕ ಬಾರಿ ತಾಲೂಕು ಆಡಳಿತಕ್ಕೆ ಮನವಿ ಮಾಡಿಕೊಂಡರು ಉಪಯೋಗವಾಗಲಿಲ್ಲ . ಹಿಂದೆ ಇದ್ದ ಗ್ರಾಮಪಂಚಾಯ್ತಿ ಅಧಿಕಾರಿ, ರೆವಿನ್ಯು ಇನ್ಸ್‌ಪೆಕ್ಟರ್‌, ತಹಸೀಲ್ದಾರರು, ಉಪವಿಭಾಗಧಿಕಾರಿಗಳು ಹೀಗೆ ಎಲ್ಲರನ್ನು ಭೇಟಿ ಮಾಡಿದರೂ ಉಪಯೋಗವಾಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಕಮ್ಮಲಮ್ಮ ಎಂಬ ಮಹಿಳೆ ಮಾತನಾಡಿ, ಕುಟುಂಬ ದೊಡ್ಡದಾಗಿದೆ. ಬಾಡಿಗೆ ಮನೆಗಳಲ್ಲಿ ವಾಸಿಸಬೇಕಾದ ಅನಿವಾರ್ಯತೆ ಇದೆ. ಹಕ್ಕುಪತ್ರ ಕೊಟ್ಟರೆ ವಿನಹ ಸೈಟು ಎಲ್ಲಿದೆ ಅಂತ ತೋರಿಸಿಕೊ ಟ್ಟಿಲ್ಲ. ನಿವೇಶನ ಗುರುತು ಮಾಡಿ ಕೊಟ್ಟರೆ ಹೇಗೋ ಒಂದು ಸೂರು ಮಾಡಿಕೊಳ್ತೀವಿ. ಈಗ ಸೂರು ಇಲ್ಲ, ನಿವೇಶನವೂ ಇಲ್ಲ ಎಂಬಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಬಾನಂದೂರು ಗ್ರಾಮ ಇದೀಗ ಬಿಡದಿ ಪುರಸಭೆಯ ವ್ಯಾಪ್ತಿಗೆ ಒಳಪಟ್ಟಿದೆ. ಪುರಸಭಾ ಸದಸ್ಯ ಶಿವಕುಮಾರ್‌ ಸಹ ಈ ಕುಟುಂಬಗಳಿಗೆ ದನಿಯಾಗಿದ್ದಾರೆ. ಸರ್ವೇ ಸಂಖ್ಯೆ 111 ಗೋಮಾಳ ಪ್ರದೇಶ. ಆದರೆ ಕೆಲವು ಖಾಸಗಿ ವ್ಯಕ್ತಿಗಳು ಕಬಳಿಕೆ ಆಗುತ್ತಿದೆ. ಇಡೀ ಭೂಮಿಯನ್ನು ಅನ್ಯ ಕಾರ್ಯಗಳಿಗೆ ಮಂಜೂರು ಮಾಡಿಸುವ ಷಡ್ಯಂತ್ರ ನಡೆಯುತ್ತಿದೆ ಎಂದು ದೂರಿದ್ದಾರೆ. ಕೂಡಲೇ ಸಂಬಂಧ ಪಟ್ಟ ಅಧಿಕಾರಿಗಳು ಹಕ್ಕುಪತ್ರ ಇರುವವರಿಗೆ ಭೂಮಿ ಗುರುತಿಸಿ ಕೊಡಬೇಕಾಗಿದೆ ಎಂದು ಒತ್ತಾಯಿಸಿದರು.

ಟಾಪ್ ನ್ಯೂಸ್

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.