ಇನ್ನೂ ಹಲವರಿಗೆ ರೋಷಾವೇಶ: ಶೋಭಾ ಕರಂದ್ಲಾಜೆ


Team Udayavani, May 23, 2019, 6:09 AM IST

shobha

ಉಡುಪಿ: ಮಾಜಿ ಸಚಿವ ರೋಷನ್‌ ಬೇಗ್‌ ಅವರಂತೆ ಹಲವು ಶಾಸಕರಿಗೆ ಅಸಮಾಧಾನ ಇದೆ. ರಾಜ್ಯ ಸರಕಾರ ದುರ್ಬಲ ಮತ್ತು ಅಸ್ಥಿರ ಆಗಿದೆ.ರೋಷನ್‌ ಬೇಗ್‌, ಎಚ್. ವಿಶ್ವನಾಥ್‌, ಎಸ್‌.ಟಿ. ಸೋಮಶೇಖರ್‌ ಅವರೂ ಅಸಮಾಧಾನ ಹೊರ ಹಾಕಿದ್ದಾರೆ. ರಮೇಶ್‌ ಜಾರಕಿಹೋಳಿ ಕಾಂಗ್ರೆಸ್‌ ನಾಯಕರಕೈಗೆ ಸಿಗುತ್ತಿಲ್ಲ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ, ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.

ಉಡುಪಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಕಾಂಗ್ರೆಸ್‌ – ಜೆಡಿಎಸ್‌ನವರು ಜನಹಿತ ಮರೆತು ಅಧಿಕಾರ ಉಳಿಸಲೋಸುಗ ಶಾಸಕರನ್ನು ಹಿಡಿದಿಟ್ಟುಕೊಳ್ಳುವ ಯತ್ನ ಮಾಡುತ್ತಿದ್ದಾರೆ. ಬರಗಾಲದಿಂದ ಜೀವಿಗಳು ತತ್ತರಿಸಿವೆ. ಸರಕಾರ ಇದ್ದರೂ ಒಂದೇ ಬಿದ್ದರೂ ಒಂದೇ. ಇಷ್ಟೆಲ್ಲ ಗೊಂದಲ ಇದ್ದರೂ ಸರಕಾರವನ್ನು ಹೇಗೆ ನಿಭಾಯಿಸುತ್ತಿದ್ದಾರೆಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಉತ್ತರ ಕೊಡಬೇಕು ಎಂದರು.

ಲೋಕ-ರಾಜ್ಯಸಭೆಯಲ್ಲಿ ಬಹುಮತ

ಮತದಾನೋತ್ತರ ಸಮೀಕ್ಷೆ ನರೇಂದ್ರ ಮೋದಿ ಸರಕಾರದ ಪರವಾಗಿದೆ. ಸಮೀಕ್ಷೆ ಪ್ರಕಾರ 325ರಿಂದ 350 ಸ್ಥಾನಗಳು ಎನ್‌ಡಿಎ ಪಾಲಾಗಲಿವೆ. ದೇಶದ ಹಲವಾರು ನಿರ್ಣಯಗಳಿಗೆ ಮೂರನೆಯ ಎರಡರಷ್ಟು ಬಹುಮತ ಬೇಕು. ಈ ಬಾರಿ ಲೋಕಸಭೆ,ರಾಜ್ಯಸಭೆಯಲ್ಲಿ ಬಹುಮತ ಸಿಗಲಿದೆ ಎಂದರು.

ಅತ್ಯಧಿಕ ಬಹುಮತ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಹಿಂದಿಗಿಂತಲೂ ಹೆಚ್ಚಿನ ಅಂತರದಲ್ಲಿ ಗೆಲುವು ಸಾಧಿಸಲಿದ್ದೇವೆ. ದಕ್ಷಿಣ ಭಾರತದಲ್ಲೇ ಕರ್ನಾಟಕದಲ್ಲಿ ಅತಿ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಸಂಸದರು ಆಯ್ಕೆಯಾಗಲಿದ್ದಾರೆ. ರಾಜ್ಯದಿಂದ 20ಕ್ಕೂ ಹೆಚ್ಚು ಸಂಸದರು ಪ್ರಧಾನಿ ಮೋದಿಯವರ ಕೈ ಬಲ ಪಡೆಸುತ್ತಾರೆ. ಎಂದು ಶೋಭಾ ವಿಶ್ವಾಸ ವ್ಯಕ್ತಪಡಿಸಿದರು.

ಆಗೇಕೆ ಸಂಶಯ ಬರಲಿಲ್ಲ?

ವಿವಿಪ್ಯಾಟ್ ಮೇಲೆ ವಿಪಕ್ಷ ನಾಯಕರು ಸಂಶಯ ವ್ಯಕ್ತಪಡಿಸುತ್ತಿರುವ ಬಗ್ಗೆ ಕೇಳಿದಾಗ ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಗೆದ್ದಾಗ ವಿವಿಪ್ಯಾಟ್‌ಗೆ ಏನಾಗಿತ್ತು? ವಿಪಕ್ಷಗಳ ಆರೋಪ ‘ಕುಣಿಯೋಕೆ ಬಾರದವ ನೆಲ ಡೊಂಕು’ ಎನ್ನುವ ಗಾದೆಯಂತಾಗಿದೆ. ಗೆಲ್ಲುವುದಕ್ಕೆ ಆಗೋದಿಲ್ಲ ಎಂದು ಈ ಸಂಶಯ ವ್ಯಕ್ತಪಡಿಸುತ್ತಿದ್ದಾರೆ ಎಂದರು.

ಮತಯಂತ್ರ ದುರ್ಬಲವಲ್ಲ

ಪ್ರಪಂಚದಲ್ಲೇ ಅತ್ಯಂತ ಉತ್ತಮ ತಾಂತ್ರಿಕ ವ್ಯವಸ್ಥೆ ಇದೆ. ಮತಯಂತ್ರ ಯಾರ ಕಾಲದಲ್ಲಿ ಆಗಿದೆ? ಈ ಕುರಿತು ಎರಡು ಬಾರಿ ಯುಪಿಎ ಅಧಿಕಾರಕ್ಕೆ ಬಂದಾಗ ಆಕ್ಷೇಪಿಸಿಲ್ಲ ಏಕೆ? ಮತಯಂತ್ರ ದುರ್ಬಲವಾಗಿಲ್ಲ. ವಿಪಕ್ಷ ದುರ್ಬಲವಾಗಿದೆ. ಅವರ ಮನಸ್ಸೂ ದುರ್ಬಲವಾಗಿದೆ, ಮಹಾ ಘಟಬಂಧನ ದುರ್ಬಲವಾಗಿದೆ ಎಂದು ಶೋಭಾ ಲೇವಡಿ ಮಾಡಿದರು.

ಕಾಂಗ್ರೆಸ್‌ ಪಕ್ಷದ ಶಾಸಕರನ್ನು ಬಿಜೆಪಿಯು ಸೆಳೆಯುವುದಿಲ್ಲ. ಪಕ್ಷ ಬಿಟ್ಟ ಅನಂತರ ಶಾಸಕರನ್ನು ಬಿಜೆಪಿ ಮಾತನಾಡಿಸುತ್ತದೆ. ಬಿಜೆಪಿ ಒಂದು ದೊಡ್ಡ ಸಮುದ್ರವಿದ್ದಂತೆ. ಯಾರೂ ಬಿಜೆಪಿಗೆ ಬರಬಹುದು ಎಂದರು.

ಜನತಾ ಜನಾರ್ದನನನ್ನು ಮರೆತ ಸಿಎಂ

ಮುಖ್ಯಮಂತ್ರಿಗಳ ದೇವಸ್ಥಾನಗಳ ಭೇಟಿ ಕುರಿತು ಪ್ರಶ್ನಿಸಿದಾಗ, ಜನಸೇವೆಯೇ ಜನಾರ್ದನನ ಸೇವೆ ಎಂದು ಹಿರಿಯರು ಹೇಳಿದ್ದಾರೆ. ಮುಖ್ಯಮಂತ್ರಿಯಾದವರು ಇದನ್ನು ಪಾಲಿಸಬೇಕು. ಆದರೆ ಅವರು ಜನತಾ ಸೇವೆ ಬಿಟ್ಟು ಬಿಟ್ಟಿದ್ದಾರೆ. ಜನಾರ್ದನ- ದೇವರು ಕೈ ಹಿಡಿಯಬಹುದು ಎನ್ನುವುದು ಅವರ ನಂಬಿಕೆ ಇರಬಹುದು. ಕರ್ತವ್ಯ ನಿಭಾಯಿಸದವನನ್ನು ದೇವರೂ ಕೈ ಹಿಡಿಯುವುದಿಲ್ಲ. ಇದನ್ನು ಅರಿತು ಕೆಲಸ ಮಾಡಿದರೆ ಅವರಿಗೆ ಒಳ್ಳೆಯದಾಗಬಹುದು ಎಂದರು.

ಟಾಪ್ ನ್ಯೂಸ್

1-lorry

West Bengal;ಝಾರ್ಖಂಡ್‌ನಿಂದ ಬರುವ ವಾಹನಕ್ಕೆ ನಿಷೇಧ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

13

Udupi: ಅಪಾಯಕಾರಿಯಾಗಿ ಬಸ್‌ ಚಾಲನೆ: ಪ್ರಕರಣ ದಾಖಲು

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

sand

Malpe: ಮರಳು ಅಕ್ರಮ ಸಂಗ್ರಹ, ಕೇಸು ದಾಖಲು

kurkalu: ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ

kurkalu: ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-lorry

West Bengal;ಝಾರ್ಖಂಡ್‌ನಿಂದ ಬರುವ ವಾಹನಕ್ಕೆ ನಿಷೇಧ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.