ಮನಸ್ಸು ಶುದ್ಧವಿದ್ದರೆ ನೆಮ್ಮದಿ ಪ್ರಾಪ್ತಿ

•ಸತ್ಸಂಗ ಒತ್ತಡ ಜೀವನದಿಂದ ಮುಕ್ತಿಯ ಕಡೆಗೆ ಕೊಂಡೊಯ್ಯುವ ಸನ್ಮಾರ್ಗ

Team Udayavani, May 23, 2019, 10:44 AM IST

HAVERI-TDY-2..

ರಾಣಿಬೆನ್ನೂರ: ಸಿದ್ಧಾರೂಢ ಮಠದಲ್ಲಿ ಇಂಚಲ ಶಿವಯೋಗೀಶ್ವರ ಸಾಧು ಸಂಸ್ಥಾನ ಮಠದ ಡಾ| ಶಿವಾನಂದ ಭಾರತಿ ಶ್ರೀಗಳ ತುಲಾಭಾರ ನೆರವೇರಿಸಲಾಯಿತು.

ರಾಣಿಬೆನ್ನೂರ: ಮನುಜ ತನ್ನ ಜೀವಿತ ಕಾಲದಲ್ಲಿ ಮನಸ್ಸು, ಬುದ್ಧಿ, ಚಿತ್ತ ಎಲ್ಲಿಯವರೆಗೂ ಶುದ್ಧವಾಗಿಡುವುದಿಲ್ಲವೋ ಅಲ್ಲಿಯವರೆಗೂ ಶಾಂತಿ, ನೆಮ್ಮದಿ, ಸಂತೃಪ್ತಿ ಹಾಗೂ ಮುಕ್ತಿ ಸಿಗುವುದಿಲ್ಲ ಎಂದು ಇಂಚಲ ಶಿವಯೋಗೀಶ್ವರ ಸಾಧು ಸಂಸ್ಥಾನಮಠದ ಡಾ| ಶಿವಾನಂದ ಭಾರತಿ ಸ್ವಾಮೀಜಿ ಹೇಳಿದರು.

ಬುಧವಾರ ಸುಕ್ಷೇತ್ರ ಖಂಡೇರಾಯನಹಳ್ಳಿ ಗ್ರಾಮದ ಸಿದ್ಧಾರೂಢ ಮಠದಲ್ಲಿ ಸದ್ಗುರು ಸಿದ್ಧಾರೂಢ ಸ್ವಾಮಿಯವರ ಜಯಂತಿ ಅಂಗವಾಗಿ ನಡೆಸುವ 23ನೇ ವೇದಾಂತ ಪರಿಷತ್‌, ಡಾ| ಶಿವಾನಂದ ಭಾರತಿ ಸ್ವಾಮೀಜಿಗಳವರ 79ನೇ ಜಯಂತ್ಯುತ್ಸವ ಹಾಗೂ ಶಿಲಾ ಮಂಟಪದಲ್ಲಿ ಶಿವಲಿಂಗ ಮೂರ್ತಿ ಸ್ಥಾಪನೆ ಮತ್ತು ಉಚಿತ ಸಾಮೂಹಿಕ ವಿವಾಹ ಸಮಾರಂಭ ಉದ್ಘಾಟಿಸಿ ಆಶೀರ್ವಚನ ನೀಡಿದರು.

ಮನುಷ್ಯನ ಮನಸ್ಸು, ಬುದ್ದಿ, ಚಿತ್ತಗಳನ್ನು ತನ್ನ ಹಿಡಿತದಲ್ಲಿ ಇಟ್ಟುಕೊಂಡು ಸದ್ಗುರುವಿನ ಉಪದೇಶ ಆಲಿಸಿದಾಗಲೇ ಮನುಜ ಸದ್ಗತಿ ಪಡೆಯಲು ಸಾಧ್ಯ. ಸತ್ಸಂಗ ಮನುಷ್ಯನನ್ನು ಒತ್ತಡ ಜೀವನದಿಂದ ಮುಕ್ತಿಯ ಕಡೆಗೆ ಕೊಂಡೊಯ್ಯುವ ಸನ್ಮಾರ್ಗವಾಗಿದೆ ಎಂದರು.

ಸಾನ್ನಿಧ್ಯ ವಹಿಸಿದ್ದ ಲಿಂಗನಾಯಕನಹಳ್ಳಿಯ ಚನ್ನವೀರ ಸ್ವಾಮೀಜಿ ಮಾತನಾಡಿ, ಶಿವಾವತಾರಿ ಭೂಲೋಕವಾಸಿ ಸಿದ್ಧಾರೂಢರು ಸರ್ವ ಜೀವಿಗಳಿಗೂ ಸುಖ, ಶಾಂತಿ, ನೆಮ್ಮದಿ, ಮುಕ್ತಿ ಪಡೆಯಲೆಂಬ ಸಂಕಲ್ಪದಿಂದ ಜಾತಿ, ಮತ, ಪಂಥಗಳ ಭೇದವಿಲ್ಲದೆ ಶಾಂತಿ ಮಂತ್ರವನ್ನು ಬೋಧಿಸಿದ ಮಹಾತ್ಮರು. ಅಂತವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆದಾಗ ಜಾತಿಯ ಸೋಂಕು ತಗುಲದೆ ಸರ್ವರೂ ಒಂದಾಗಿ ಬಾಳಲು ಸಾಧ್ಯ. ಅಲ್ಲದೆ ಸತ್ಸಂಗವು ಜನ್ಮಜನ್ಮಾಂತರ ಪಾಪಕರ್ಮವೆಲ್ಲ ನಾಶವಾಗಿ ಮುಕ್ತಿ ಪಡೆಯಲು ಸಾಧ್ಯ ಎಂದು ನುಡಿದರು.

ಹಂಪಿ ಹೇಮಕೂಟದ ವಿದ್ಯಾನಂದ ಭಾರತಿ ಶ್ರೀಗಳು ಮಾತನಾಡಿ, ಪ್ರತಿಯೊಬ್ಬ ಮನುಷ್ಯನಲ್ಲಿ ಮನೆ ಮಾಡಿಕೊಂಡಿರುವ ದುಷ್ಟ ಗುಣಗಳನ್ನು ಸಂಹರಿಸಿ ಸುಗುಣವಂತರನ್ನಾಗಿಸುವ ಮಾರ್ಗವೆ ಸತ್ಸಂಗ. ಭಕ್ತಿ, ಜ್ಞಾನ, ವೈರಾಗ್ಯ ಮೋಕ್ಷ ಸಂಪಾದನೆಯ ಮಾರ್ಗಗಳಾದರೆ, ದೀನ ದಲಿತರ, ಅನಾಥರ ಕಲ್ಯಾಣಕ್ಕಾಗಿ ಸಲ್ಲಿಸುವ ನಿಸ್ವಾರ್ಥ ಸೇವೆ ನಿಜವಾದ ಧರ್ಮ ಕಾರ್ಯವಾಗಿದೆ ಎಂದು ಹೇಳಿದರು.

ಹುಬ್ಬಳ್ಳಿಯ ಸಚ್ಚಿದಾನಂದ ಶ್ರೀಗಳು ಮಾತನಾಡಿ, ಹಲವು ಜನ್ಮಗಳ ಪುಣ್ಯದ ಫಲವಾಗಿ ಮನುಷ್ಯ ಜನ್ಮ ಪ್ರಾಪ್ತಿಯಾಗಿದೆ. ‘ಪರೋಪಕಾರಂ ಇದಂ ಶರೀರಂ’ ಎಂಬಂತೆ ಪ್ರತಿಯೊಬ್ಬ ಮನುಷ್ಯನು ತನ್ನ ಜೀವಿತಾವಧಿಯಲ್ಲಿ ಪುಣ್ಯದ ಕಾರ್ಯಗಳನ್ನು ಮಾಡುವುದರೊಂದಿಗೆ ಭಗವಂತನ ಕೃಪೆಗೆ ಪಾತ್ರರಾಗಬೇಕು ಎಂದು ತಿಳಿಸಿದರು.

ದಾವಣಗೆರೆ ಜಡಿಸಿದ್ದೇಶ್ವರ ಮಠದ ಶಿವಾನಂದ ಶ್ರೀಗಳು ಮಾತನಾಡಿ, ಭಕ್ತನು ದೇವರಿಗೆ ಸಲ್ಲಿಸುವ ಭಕ್ತಿಯಲ್ಲಿ ಯಾವುದೇ ರೀತಿಯ ಸ್ವಾರ್ಥದ ಫಲಾಪೇಕ್ಷೆ ಇರಬಾರದು. ಮೂಢನಂಬಿಕೆ ಬರಬಾರದು. ಭಕ್ತಿ ನಿಧಾನವಾದರೂ ಪ್ರಧಾನವಾಗಿರಬೇಕು. ಅಂತಹ ಭಕ್ತನಿಗೆ ಮಾತ್ರ ದೇವರು ಒಲಿಯುವನು ಎಂದರು.

ಶ್ರೀಮಠದ ಪೀಠಾಧಿಪತಿ ನಾಗರಾಜಾನಂದ ಸ್ವಾಮೀಜಿ, ಚಳಗೇರಿಯ ಕಟಗಿಹಳ್ಳಿ ಮಠದ ಡಾ| ಮಹಾಂತೇಶ್ವರ ಶ್ರೀಗಳು, ಹದಡಿ ಚಂದ್ರಗಿರಿ ಮಠದ ಮುರಳಿಧರ ಮಠದ ಶ್ರೀಗಳು, ನಿಜಗುಣ ಶಿವಯೋಗಿಗಳ ಕೈವಲ್ಯ ಪದ್ಧತಿಯ ಒಂದು ‘ಚರಣದ ಮತಿಗೆ ಮಂಗಲವಿವುದಾವದುತ್ತಮರ ಸಂಗ’ ವಿಷಯ ಕುರಿತು ಉಪದೇಶಾಮೃತ ನೀಡಿದರು.

ಮಾಜಿ ಸಚಿವ ರುದ್ರಪ್ಪ ಲಮಾಣಿ, ಗ್ರಾಪಂ ಅಧ್ಯಕ್ಷ ಚೋಳಪ್ಪ ಕಚ್ಚರಬಿ, ಎಪಿಎಂಸಿ ಸದಸ್ಯ ಸುರೇಶ ಬೀರಾಳ, ಶ್ರೀಮಠದ ಅಧ್ಯಕ್ಷ ಫಕ್ಕೀರಪ್ಪಗೌಡ್ರ, ಜನಾರ್ಧನ ಕಡೂರ, ಡಾ| ಎಂ.ಸುನಿತಾ, ಅರುಣಸ್ವಾಮಿ ಹಿರೇಮಠ, ನ್ಯಾಯವಾದಿ ಎಂ.ಬಿ.ಚಿನ್ನಪ್ಪನವರ, ಜಗದೇವಪ್ಪ ಮಾಕನೂರ, ಜಟ್ಟೆಪ್ಪ ಕರೆಗೌಡ್ರ, ಗುಡ್ಡಪ್ಪ ಗೌಡ್ರ, ಸಿ.ಎನ್‌.ನಾಗರಾಜ, ಗೋಪಾಲ ಕೊಡ್ಲೇರ, ದಾನೇಶ ಲಮಾಣಿ, ಡಾಕೇಶ ಲಮಾಣಿ ಇದ್ದರು.

ಟಾಪ್ ನ್ಯೂಸ್

1-wqqewqeq

Hubli; ಜನರಲ್ಲಿ ಪೊಲೀಸರ ಬಗ್ಗೆ ನಂಬಿಕೆ ಹೋಗಿದೆ: ಎಡಿಜಿಪಿ ಹಿತೇಂದ್ರ

1-qweeqw

Kundapura; ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿಯೂ ವಿಧಿವಶ!

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

13-doctor

Health: ಸದಾ ಎಚ್ಚರದಿಂದಿರಿ: ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಿ

Basavakalyana; ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

Basavakalyana; ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

12-

Heat Weather: ಹಬೆಯಾಡುತ್ತಿರುವ ವಸುಂಧರೆ

11-candle

UV Fusion: ಆಯಸ್ಸು ಅಳಿಯುವ ಮುನ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

ಶಿಕ್ಷಕ ವೃತ್ತಿ ಅತ್ಯಂತ ಪವಿತ್ರ: ಚಕ್ರವರ್ತಿ ಸ್ವಾಮೀಜಿ

ಶಿಕ್ಷಕ ವೃತ್ತಿ ಅತ್ಯಂತ ಪವಿತ್ರ: ಚಕ್ರವರ್ತಿ ಸ್ವಾಮೀಜಿ

ಅಬ್ಬಾ…ತರಕಾರಿ ಬಲು ದುಬಾರಿ..! ಗ್ರಾಹಕರ ಜೇಬಿಗೆ ಕತ್ತರಿ

ಅಬ್ಬಾ…ತರಕಾರಿ ಬಲು ದುಬಾರಿ..! ಗ್ರಾಹಕರ ಜೇಬಿಗೆ ಕತ್ತರಿ

ಬ್ಯಾಡಗಿ- ಮದುವೆ ಮೂಲ ಅರ್ಥ ಕಳೆದುಕೊಳ್ತಿದೆ: ಸ್ವಾಮೀಜಿ

ಬ್ಯಾಡಗಿ- ಮದುವೆ ಮೂಲ ಅರ್ಥ ಕಳೆದುಕೊಳ್ತಿದೆ: ಸ್ವಾಮೀಜಿ

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

MUST WATCH

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

ಹೊಸ ಸೇರ್ಪಡೆ

1-wqqewqeq

Hubli; ಜನರಲ್ಲಿ ಪೊಲೀಸರ ಬಗ್ಗೆ ನಂಬಿಕೆ ಹೋಗಿದೆ: ಎಡಿಜಿಪಿ ಹಿತೇಂದ್ರ

1-qweeqw

Kundapura; ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿಯೂ ವಿಧಿವಶ!

1-aaa

Kaup: ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ

Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.