ಈಗಲೇ ಸಿದ್ಧವಾಗುತ್ತಿದೆ ನೂತನ ಸರಕಾರದ ಮೊದಲ 100 ದಿನಗಳ ಆರ್ಥಿಕ ಅಜೆಂಡಾ


Team Udayavani, May 23, 2019, 11:29 AM IST

Arun-Jaitley-730

ಹೊಸದಿಲ್ಲಿ : 2019ರ ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಇಂದು ಗುರವಾರ ಬಿರುಸಿನಿಂದ ಸಾಗುತ್ತಿರುವಂತೆಯೇ ಬಿಜೆಪಿ ನೇತೃತ್ವದ ಎನ್‌ಡಿಎ 343 ಕ್ಷೇತ್ರಗಳಲ್ಲಿ ಭರ್ಜರಿ ಮುನ್ನಡೆಯನ್ನು ಸಾಧಿಸಿದ್ದು ಮತ್ತೆ ಅಧಿಕಾರಕ್ಕೆ ಮರಳುವುದು ಬಹುತೇಕ ಖಚಿತವಾಗುತ್ತಿರುವಂತೆಯೇ  ಇತ್ತ ಕೇಂದ್ರ ಹಣಕಾಸು ಸಚಿವ ಅರುಣ್‌ ಜೇತ್ಲಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಸೂಚನೆಯ ಪ್ರಕಾರ ಬಿಜೆಪಿ ನೇತೃತ್ವದ ಹೊಸ ಸರಕಾರದ ಮೊದಲ 100 ದಿನಗಳ ಆರ್ಥಿಕ ಅಜೆಂಡಾ ರೂಪಿಸುವಲ್ಲಿ ಬ್ಯುಸಿಯಾಗಿದ್ದಾರೆ.

ಖಾಸಗಿ ಬಂಡವಾಳ ಹೂಡಿಕೆ, ಬೃಹತ್‌ ಪ್ರಮಾಣದ ಉದ್ಯೋಗ ಸೃಷ್ಟಿ ಮತ್ತು ಕೃಷಿ ವಲಯಕ್ಕೆ ಹೆಚ್ಚಿನ ಪರಿಹಾರ ಕೊಡುವುದು ಈ ಅಜೆಂಡಾದಲ್ಲಿ ಮುಖ್ಯವಾಗಿವೆ ಎಂದು ಮೂಲಗಳು ತಿಳಿಸಿವೆ.

ಜತೆಗೆ ಈ ಅಜೆಂಡಾದಲ್ಲಿ  ಪ್ರತ್ಯಕ್ಷ ಮತ್ತು ಪರೋಕ್ಷ ತೆರಿಗೆ ವಸೂಲಾತಿಯನ್ನು ಸುಧಾರಿಸುವುದು, ಜಿಎಸ್‌ಟಿ ತೆರಿಗೆ ಸ್ಲಾಬ್‌ಗಳನ್ನು ಸರಳೀಕರಿಸುವುದು ಕೂಡ ಸೇರಿದೆ ಎಂದು ಮೂಲಗಳು ತಿಳಿಸಿವೆ.

ಬಹುತೇಕ ಈ ವರ್ಷ ಜುಲೈ ತಿಂಗಳಲ್ಲಿ ಮಂಡಿಸಲಾಗುವ 2019-20ರ ಸಾಲಿನ ಅಂತಿಮ ಬಜೆಟ್‌ ನಲ್ಲಿ, ಈಗಾಗಲೇ ಮಧ್ಯಾವಧಿ ಬಜೆಟ್‌ ನಲ್ಲಿ ಪ್ರಕಟಿಸಲಾಗಿರುವಂತೆ, ಆದಾಯ ತೆರಿಗೆ ಸಂಬಂಧಿತ ಟ್ಯಾಕ್ಸ್‌ ಸ್ಲಾಬ್‌ ಗಳಿಗೆ ಬದಲಾವಣೆ ತರುವುದು ಕೂಡ ಈ ಅಜೆಂಡಾದಲ್ಲಿನ ಮುಖ್ಯ ವಿಷಯವಾಗಿದೆ.

ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಇತರ ಎಲ್ಲ ಸಚಿವಾಲಯಗಳಿಗೆ ಮತ್ತು ಇಲಾಖೆಗಳಿಗೆ ಬಿಜೆಪಿ ನೇತೃತ್ವದ ಹೊಸ ಎನ್‌ಡಿಎ ಸರಕಾರದ ಮೊದಲ 100 ದಿನಗಳ ಅಜೆಂಡಾ ತಯಾರಿಸುವಂತೆ ಸೂಚಿಸಿರುವುದಾಗಿ ಮೂಲಗಳು ತಿಳಿಸಿವೆ.

ಹೊಸ ಸರಕಾರದ ಮುಂದಿನ ಕೆಲವೇ ದಿನಗಳಲ್ಲಿ ಅಧಿಕಾರಕ್ಕೆ ಬರಲಿದೆ.

ಕೈಗಾರಿಕೆ ಬೆಳವಣಿಗೆ, ಸಾಲ ನೀಡಿಕೆ ಪ್ರಮಾಣ ಹೆಚ್ಚಳ, ಬ್ಯಾಂಕಿಂಗ್‌ ವಲಯದ ಬಲವೃದ್ಧಿ, ಮತ್ತು ನಿಧಿ ಒದಗಣೆ ಆಗದ ಕ್ಷೇತ್ರಗಳಿಗೆ ನಿಧಿ ಒದಗಿಸುವುದೇ ಮೊದಲಾದ ವಿಷಯಗಳಿಗೆ 100 ದಿನಗಳ ಅಜೆಂಡಾ ದಲ್ಲಿ ಆದ್ಯತೆ ನೀಡುವಂತೆ ಪ್ರಧಾನಿ ಮೋದಿ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2011

ಬೆಂಗಳೂರಿನಲ್ಲೊಂದು ಟೈ ರೋಮಾಂಚನ

rajani-kanth

ಮೋದಿಯೂ ವರ್ಚಸ್ವಿ ನಾಯಕ

smruthi-irani

ಬರಿಗಾಲಲ್ಲೇ ವಿನಾಯಕ ದೇಗುಲಕ್ಕೆ ತೆರಳಿದ್ದ ಸ್ಮತಿ!

Asshivrda

ಮಾಜಿ ರಾಷ್ಟ್ರಪತಿ ಪ್ರಣಬ್ ರ ಆಶೀರ್ವಾದ ಪಡೆದ ಪ್ರಧಾನಿ ನರೇಂದ್ರ ಮೋದಿ

Lalu-head-scratch-700

ರಾಜೀನಾಮೆ ನೀಡುವ ರಾಹುಲ್‌ ನಿರ್ಧಾರ ಆತ್ಮಾಹುತಿಯದ್ದು : ಲಾಲು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.