ಸಕಾಲಕ್ಕೆ ಮಳೆ ಬಾರದಿದ್ದರೆ ನೀರಿಗೆ ತೊಂದರೆ

ಬರಿದಾಗುತ್ತಿದೆ ಬೋರನ ಕಣಿವೆ ಜಲಾಶಯ • ಕೈಕೊಟ್ಟ ಮಳೆಯಿಂದ ನೀರಿನ ಮಟ್ಟ ಕುಸಿತ

Team Udayavani, May 23, 2019, 12:52 PM IST

tumkur-tdy-1..

ಹುಳಿಯಾರು ಪಟ್ಟಣಕ್ಕೆ ನೀರು ಪೂರೈಸುವ ಬೋರನ ಕಣಿವೆ ಜಲಾಶಯದ ನೀರಿನ ಮಟ್ಟ ತಳ ಸೇರಿದೆ.

ಹುಳಿಯಾರು: ಕಳೆದ ಎರಡು – ಮೂರು ವರ್ಷ ಗಳಿಂದ ಉತ್ತಮ ಮಳೆಯಾಗದ ಪರಿಣಾಮ ಕುಡಿಯುವ ನೀರಿನ ಸೆಲೆಯಾಗಿರುವ ಬೋರನ ಕಣಿವೆ ಜಲಾಶಯ ದಲ್ಲಿ ನೀರಿನ ಪ್ರಮಾಣ ಕುಸಿಯುತ್ತಿದೆ. 10-15 ದಿನಗಳಲ್ಲಿ ಮಳೆ ಬಾರದಿದ್ದರೆ ಪಟ್ಟಣಕ್ಕೆ ನೀರು ಸರಬರಾಜು ಮಾಡುವ ಜಾಕ್‌ವಾಲ್ಗೆ ನೀರು ಸಿಗದಾಗುತ್ತದೆ. ಪರಿ ಣಾಮ ಪಟ್ಟಣದಲ್ಲಿ ಕುಡಿಯುವ ನೀರಿನ ಹಾಹಾಕಾರ ಉಲ್ಭಣಿಸುವ ಲಕ್ಷಣಗಳು ಗೋಚರಿಸುತ್ತಿವೆ.

ಸುಮಾರು 2423.5 ಎಂಟಿಎಫ್‌ಸಿ ನೀರು ಸಂಗ್ರಹಿ ಸುವ ಸಾಮರ್ಥ್ಯ ಹೊಂದಿರುವ ಬೋರನ ಕಣಿವೆ ಜಲಾಶಯದಲ್ಲಿ 31 ಅಡಿ ನೀರು ನಿಲ್ಲುತ್ತದೆ. ಅದರಲ್ಲಿ ಹುಳಿಯಾರು ಪಟ್ಟಣಕ್ಕೆ ನಿತ್ಯ 2.08 ಮೀಲಿಯನ್‌ ಲೀಟರ್‌ ನೀರು ಪೂರೈಸಲಾಗುತ್ತದೆ. 675.12 ಹೆಕ್ಟೇರ್‌ ಅಚ್ಚುಕಟ್ಟು ಪ್ರದೇಶದ ಕೃಷಿ ಕೊಡಲಾಗುತ್ತದೆ. ಆದರೆ, ಕಳೆದ 2-3 ವರ್ಷಗಳಿಂದ ಕೃಷಿ ನೀರು ಕೊಟ್ಟೇ ಇಲ್ಲ. ಇದೀಗ ಜಲಾಶಯದಲ್ಲಿ ನೀರು ಐದಾರು ಅಡಿಗೆ ಕುಸಿ ದಿದ್ದು, ಕೆಲವೇ ದಿನಗಳಲ್ಲಿ ಹುಳಿಯಾರು ಪಟ್ಟಣಕ್ಕೂ ನೀರು ಅಲಭ್ಯವಾಗಲಿರುವುದು ಆತಂಕದ ಸಂಗತಿ.

ನಿತ್ಯ 2.08 ಮಿಲಿಯನ್‌ ಲೀಟರ್‌ ಅಗತ್ಯ: 2011ರ ಜನ ಗಣತಿ ಪ್ರಕಾರ 15 ಸಾವಿರ ಜನಸಂಖ್ಯೆ ಹೊಂದಿ ರುವ ಹುಳಿಯಾರು ಪಟ್ಟಣ ಈಗ ಇಪ್ಪತ್ತು ಸಾವಿರ ಜನಸಂಖ್ಯೆ ಮೀರಿದೆ. ಇವರಿಗೆ ನಿತ್ಯ 2.08 ಮಿಲಿಯನ್‌ ಲೀಟರ್‌ ನೀರಿನ ಬೇಡಿಕೆ ಇದೆ. ಆದರೆ, ಇವತ್ತು ಜಲಾಶಯದಿಂದ 1.2 ಮಿಲಿಯನ್‌ ಲೀಟರ್‌ ನೀರು ಮಾತ್ರ ಹರಿಸಲಾಗುತ್ತಿದೆ. ಇನ್ನುಳಿದ 0.88 ಮಿಲಿ ಯನ್‌ ಲೀಟರ್‌ ನೀರನ್ನು ಕೊಳವೆ ಬಾವಿಗಳಿಂದ ಪೂರೈಸಲಾಗುತ್ತಿದೆ ಎಂದು ಪಟ್ಟಣ ಪಂಚಾಯ್ತಿಯ ನೀರು ಪೂರೈಕೆ ಎಂಜಿನಿಯರ್‌ ಡಿ.ಮಂಜುನಾಥ್‌ ತಿಳಿಸಿದ್ದಾರೆ.

ಕೈಕೊಟ್ಟ ಪೂರ್ವ ಮುಂಗಾರು: ಕಳೆದ ವರ್ಷವೂ ಸಹ ಜಲಾಶಯದ ನೀರಿನ ಮಟ್ಟ ತೀವ್ರ ಕುಸಿತ ಕಂಡು ನೀರಿನ ಹಾಹಾಕಾರ ಸೃಷ್ಟಿಯಾಗಿತ್ತು. ಅಷ್ಟರಲ್ಲಾಗಲೇ ಮುಂಗಾರು ಮಳೆ ಬಿದ್ದ ಪರಿಣಾಮ ಈ ವರ್ಷದ ಬೇಸಿಗೆ ವರೆವಿಗೂ ನೀರು ಲಭ್ಯವಾಗಿದೆ. ಆದರೆ, ಈ ವರ್ಷ ಪೂರ್ವ ಮುಂಗಾರು ಮಳೆ ಕೈಕೊಟ್ಟಿದ್ದು ಜಲಾ ಶಯದ ನೀರಿನ ಮಟ್ಟ ಗಣನೀಯವಾಗಿ ಕುಸಿ ಯುತ್ತಿದೆ. ಈಗಾಗಲೇ ಹುಳಿಯಾರು ಪಟ್ಟಣಕ್ಕೆ ನೀರು ಸರಬರಾಜು ಮಾಡುವ ಜಾಕ್‌ವಾಲ್ಗೆ ನೀರು ಲಭ್ಯ ವಾಗದಿದ್ದರಿಂದ 3 ಬಾರಿ ಜೆಸಿಬಿ ಮೂಲಕ ಚಾನಲ್ ತೆಗೆದು ಜಾಕ್‌ವಾಲ್ಗೆ ನೀರು ಹರಿಸಿ ಪಟ್ಟಣಕ್ಕೆ ನೀರು ಪೂರೈಸಲಾಗುತ್ತಿದೆ.

ಕೊಳಚೆ ನೀರು ಸರಬರಾಜು: ಪ್ರಸ್ತುತ ಬೋರನ ಕಣಿವೆ ಜಲಾಶಯದಿಂದ ಲಭ್ಯವಾಗುತ್ತಿರುವ ನೀರು ಡೆಟ್ ವಾಟರ್‌ ಆಗಿದ್ದು, ನೂರಾರು ವರ್ಷಗಳಿಂದ ಸಂಗ್ರಹವಾದ ನೀರಾಗಿದೆ. ಈ ನೀರಿನಲ್ಲಿ ಜಲಚರಗಳ, ಪ್ರಾಣಿಪಕ್ಷಿಗಳ ಮಲ ಮೂತ್ರದ ಜೊತೆ ಹಳ್ಳಗಳಿಂದ ಹರಿದು ಬಂದ ತ್ಯಾಜ್ಯ ಬೆರೆತು ವಿಪರೀತ ಕೊಳಚೆ ಯಾಗಿದೆ. ಜಾಕ್‌ವಾಲ್ ಬಳಿ ಹೋದರೂ ಸಾಕು ಮೂಕು ಮುಚ್ಚಿಕೊಳ್ಳುವಷ್ಟು ದುರ್ನಾತ ಬೀರುವ ಕಲುಶಿತ ನೀರಾಗಿದೆ. ಈ ನೀರು ಕುಡಿಯುವುದಿರಲಿ ಸ್ನಾನ ಮಾಡುವುದಕ್ಕೂ ಯೋಗ್ಯವಾಗಿಲ್ಲ. ಆದರೆ. ನೀರಿನ ಹಾಹಾಕಾರ ಎದುರಿಸಲು ಸತ್ಯ ಮುಚ್ಚಿಟ್ಟು ಅಧಿಕಾರಿಗಳು ನೀರು ಸರಬರಾಜು ಮಾಡುತ್ತಿದ್ದಾರೆ.

ಇಷ್ಟಾದರೂ ಬೇಸಿಗೆಯೊಂದಿಗೆ ಪಟ್ಟಣದ ಅನೇಕ ವಾರ್ಡ್‌ಗಳಲ್ಲಿ ನೀರಿನ ಹಾಹಾಕಾರ ಕೂಡ ಆರಂಭವಾಗಿದೆ. ಇಂದಿಗೂ ಅನೇಕ ವಾರ್ಡ್‌ಗಳಲ್ಲಿ 10-15 ದಿನಕ್ಕೊಮ್ಮೆ ನೀರು ಪೂರೈಸಲಾಗುತ್ತಿದೆ. ಅನೇಕ ಕಡೆಗಳಲ್ಲಿ ನಿತ್ಯಕರ್ಮಗಳಿಗೆ ಸಹ ನೀರಿಲ್ಲದೇ ಜನರು ಪಟ್ಟಣ ಪಂಚಾಯ್ತಿಗೆ ಹಿಡಿಶಾಪ ಹಾಕು ತ್ತಿದ್ದಾರೆ. ದುಡ್ಡು ಕೊಟ್ಟು ನೀರು ಕೊಂಡು ಜೀವನ ನಡೆಸುತ್ತಿದ್ದಾರೆ. ಇದೀಗ ಜಲಾಶಯ ಒಣಗಿ, ಸಕಾಲಕ್ಕೆ ಮಳೆ ಬಾರದೆ, ಕೊಳವೆ ಬಾವಿಗಳು ಒಣಗಿದರೆ ಉಂಟಾಗುವ ಜಲಕಂಟಕ ನಿಭಾಯಿಸಲು ಪಟ್ಟಣ ಪಂಚಾಯ್ತಿ ಯಾವ ರೀತಿಯಲ್ಲಿ ಸಿದ್ಧತೆ ಮಾಡಿ ಕೊಳ್ಳುತ್ತದೆ ಎನ್ನುವುದನ್ನು ಕಾಯ್ದು ನೋಡಬೇಕಿದೆ.

● ಎಚ್.ಬಿ.ಕಿರಣ್‌ ಕುಮಾರ್‌

ಟಾಪ್ ನ್ಯೂಸ್

1-qweqwqe

IPL ಅಭಿಷೇಕ್ ಸ್ಫೋಟಕ ಆಟ: ಪಂಜಾಬ್ ವಿರುದ್ಧ ಹೈದರಾಬಾದ್ ಗೆ 4 ವಿಕೆಟ್ ಜಯ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ ಬಲಿಯಾದವು 10ಕುರಿಗಳು!

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ 10 ಕುರಿಗಳು ಸಾವು

1-wqewewqe

Iran ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ‘ಹಾರ್ಡ್ ಲ್ಯಾಂಡಿಂಗ್; ರಕ್ಷಣ ಕಾರ್ಯ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

1-qweewqe

Ayodhya; ‘ಮಂದಿರ-ಮಸೀದಿ’ಸಮಸ್ಯೆಯಲ್ಲ,ಅಭಿವೃದ್ಧಿ ಬಯಸುತ್ತೇವೆ ಎಂದ ಮುಸ್ಲಿಮರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minister Parameshwara ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಹದಗೆಟ್ಟಿಲ್ಲ

Minister Parameshwara ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಹದಗೆಟ್ಟಿಲ್ಲ

1-wewqewq

Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ

1-qwewqewqe

Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್

1——-qweweqw

Dr.G. Parameshwara ಹೆಸರು ದುರ್ಬಳಕೆ: ಕಾಂಗ್ರೆಸ್ ನಿಂದ ಮೊಹಮ್ಮದ್ ಜುಬೇರ್ ಉಚ್ಛಾಟನೆ

Kunigal: ಪ್ರತ್ಯೇಕ ಅಪಘಾತ; ಇಬ್ಬರು ಸಾವು

Kunigal: ಪ್ರತ್ಯೇಕ ಅಪಘಾತ; ಇಬ್ಬರು ಸಾವು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-qweq-eeqw

Ajekar;ಕೆರೆಗೆ ಮೀನು ಹಿಡಿಯಲು ತೆರಳಿದ್ದ ಮಾವ-ಅಳಿಯ ಮುಳುಗಿ ಸಾವು

1-qweqwqe

IPL ಅಭಿಷೇಕ್ ಸ್ಫೋಟಕ ಆಟ: ಪಂಜಾಬ್ ವಿರುದ್ಧ ಹೈದರಾಬಾದ್ ಗೆ 4 ವಿಕೆಟ್ ಜಯ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ ಬಲಿಯಾದವು 10ಕುರಿಗಳು!

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ 10 ಕುರಿಗಳು ಸಾವು

1-wqewewqe

Iran ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ‘ಹಾರ್ಡ್ ಲ್ಯಾಂಡಿಂಗ್; ರಕ್ಷಣ ಕಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.