ಮಂಗನಕಾಯಿಲೆ: ಲಸಿಕೆ ಪರೀಕ್ಷೆಗೆ ಮುಂದಾದ ಸರ್ಕಾರ


Team Udayavani, May 23, 2019, 2:23 PM IST

benglre-tdy-4..

ಬೆಂಗಳೂರು: ಮಲೆನಾಡಿನಲ್ಲಿ ಮಾರಣಾಂತಿಕ ಮಂಗನ ಕಾಯಿಲೆ ತೀವ್ರವಾಗಿ ವಿಸ್ತರಿಸುತ್ತಿರುವ ಬೆನ್ನಲ್ಲೇ ಕಾಯಿಲೆಗೆ ನೀಡಲಾಗುವ ಲಸಿಕೆಯ ಸಾಮರ್ಥ್ಯ ಪರೀಕ್ಷೆಗೆ ಸರ್ಕಾರ ಮುಂದಾಗಿದ್ದು, ಈ ಸಂಬಂಧ ಕೇಂದ್ರ ಆರೋಗ್ಯ ಸಚಿವಾಲಯಕ್ಕೆ ಪತ್ರ ಬರೆದಿದೆ.

‘ಸುಮಾರು 2-3 ದಶಕಗಳ ಹಿಂದೆ ಮಂಗನ ಕಾಯಿಲೆ (ಕ್ಯಾಸನೂರು ಫಾರೆಸ್ಟ್‌ ಡಿಸೀಸ್‌)ಗೆ ಲಸಿಕೆ ಕಂಡು ಹಿಡಿಯಲಾಗಿದೆ. ಆದರೆ, ಈಗಲೂ ಆ ಲಸಿಕೆ ಅಷ್ಟೇ ಪರಿಣಾಮಕಾರಿಯಾಗಿದೆಯೇ ಅಥವಾ ಸಾಮರ್ಥ್ಯ ಕಡಿಮೆ ಆಗಿದೆಯೇ ಎಂಬುದರ ಪರೀಕ್ಷೆ ನಡೆಸಬೇಕು. ಜತೆಗೆ ಹೊಸ ಲಸಿಕೆ ಕಂಡು ಹಿಡಿಯಬೇಕು’ ಎಂದು ಕೇಂದ್ರ ಆರೋಗ್ಯ ಸಚಿವಾಲಯಕ್ಕೆ ಈಚೆಗೆ ರಾಜ್ಯ ಆರೋಗ್ಯ ಇಲಾಖೆ ಪತ್ರ ಬರೆದಿದೆ. ಇದಕ್ಕೆ ಪೂರಕವಾಗಿ ಸ್ಪಂದಿಸಿರುವ ಕೇಂದ್ರ ಆರೋಗ್ಯ ಸಚಿವಾಲಯವು ಮೂರು ಮಂದಿ ತಜ್ಞರ ತಂಡವನ್ನು ರಾಜ್ಯಕ್ಕೆ ಕಳುಹಿಸಿತ್ತು. ಆ ತಂಡವು ಸುಮಾರು 10-12 ದಿನಗಳ ಕಾಲ ಅಧ್ಯಯನ ನಡೆಸಿದ್ದು, ಸಂಬಂಧಪಟ್ಟ ಇಲಾಖೆಯೊಂದಿಗೆ ಚರ್ಚಿಸಿ ಶೀಘ್ರ ಸೂಕ್ತ ನಿರ್ಧಾರ ಕೈಗೊಳ್ಳುವ ಭರವಸೆ ನೀಡಿದೆ ಎಂದು ಮೂಲಗಳು ತಿಳಿಸಿವೆ.

1957ರಲ್ಲಿ ಮೊದಲ ಬಾರಿಗೆ ಕ್ಯಾಸನೂರು ಕಾಡಿನಲ್ಲಿ ಕಾಣಿಸಿಕೊಂಡ ಮಂಗನ ಕಾಯಿಲೆಗೆ 1991-92ರಲ್ಲಿ ಲಸಿಕೆ ಕಂಡು ಹಿಡಿಯಲಾಯಿತು. ಹೆಬ್ಟಾಳದಲ್ಲಿರುವ ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆ ಈ ಲಸಿಕೆಯನ್ನು ತಯಾರಿಸುತ್ತಿರುವ ದೇಶದ ಏಕೈಕ ಸಂಸ್ಥೆಯಾಗಿದೆ. ಸಾಮಾನ್ಯವಾಗಿ ಕಾಯಿಲೆಯಿಂದ ಮಂಗ ಅಥವಾ ಮನುಷ್ಯ ಸಾವನ್ನಪ್ಪಿದರೆ ಅಥವಾ ಉಣ್ಣೆಗಳಲ್ಲಿ ಈ ಕಾಯಿಲೆಗೆ ಕಾರಣವಾದ ವೈರಸ್‌ಗಳು ಕಂಡು ಬಂದ ಜಾಗದಿಂದ ಐದು ಕಿ.ಮೀ.ಸುತ್ತ ವಾಸಿಸುವ ಪ್ರತಿಯೊಬ್ಬರಿಗೂ ತಿಂಗಳ ಅಂತರದಲ್ಲಿ ಮೂರು ಲಸಿಕೆಗಳನ್ನು ಹಾಕಲಾಗುತ್ತದೆ. ಪ್ರಸಕ್ತ ಸಾಲಿನಲ್ಲಿ ಪ್ರಕರಣಗಳು ಹೆಚ್ಚಾಗಿದ್ದರಿಂದ ಆತಂಕಗೊಂಡ ಜನ ಲಸಿಕೆ ಹಾಕಿಸಿಕೊಳ್ಳಲು ಮುಂದೆ ಬಂದರು. ಉಳಿದ ವರ್ಷಗಳಲ್ಲಿ ಸ್ವತಃ ಮನೆ ಬಾಗಿಲಿಗೆ ಹೋದರೂ, ಲಸಿಕೆ ಹಾಕಿಸಿಕೊಳ್ಳಲು ಮುಂದೆ ಬರುವುದಿಲ್ಲ ಎಂಬುದು ಆರೋಗ್ಯ ಇಲಾಖೆ ಆರೋಪ.

ಹೊಸ ಲಸಿಕೆ; ಹೊರಗುತ್ತಿಗೆಗೆ ಚಿಂತನೆ: ಈ ಹಿನ್ನೆಲೆಯಲ್ಲಿ ಒಮ್ಮೆ ಲಸಿಕೆ ಹಾಕಿದರೆ ಕನಿಷ್ಠ ಐದು ವರ್ಷ ರಕ್ಷಣೆ ನೀಡುವ ಸಾಮರ್ಥ್ಯ ಇರುವಂತಹ ಹೊಸ ಲಸಿಕೆ ಅಭಿವೃದ್ಧಿಪಡಿಸಬೇಕು ಎನ್ನುವುದು ನಮ್ಮ ಉದ್ದೇಶ. ಹೊಸ ಲಸಿಕೆ ಕಂಡು ಹಿಡಿಯುವುದರ ಜತೆಗೆ ಲಸಿಕೆಗೆ ಬೇಡಿಕೆ ಹೆಚ್ಚುತ್ತಿರುವುದರಿಂದ ಸಾಧ್ಯವಾದರೆ ಖಾಸಗಿ ಕಂಪನಿಗಳಿಗೆ ಪೂರೈಕೆ ಜವಾಬ್ದಾರಿ ವಹಿಸಬೇಕು. ಈ ಮಧ್ಯೆ, ಪ್ರಸ್ತುತ ಇರುವ ಲಸಿಕೆಯ ಸಾಮರ್ಥ್ಯ ಕಡಿಮೆ ಆಗಿದೆಯೇ ಅಥವಾ ಇಲ್ಲವೇ ಎಂಬುದರ ಬಗ್ಗೆಯೂ ಅಧ್ಯಯನ ನಡೆಸುವಂತೆ ಮನವಿ ಮಾಡಲಾಗಿದೆ ಎಂದು ಆರೋಗ್ಯ ಇಲಾಖೆ ಜಂಟಿ ನಿರ್ದೇಶಕ ಸಜ್ಜನ್‌ ಶೆಟ್ಟಿ ಸ್ಪಷ್ಟಪಡಿಸಿದರು.

ಶಿವಮೊಗ್ಗದ ಸೊರಬ ತಾಲೂಕಿಗೆ ಸೀಮಿತವಾಗಿದ್ದ ಮಂಗನ ಕಾಯಿಲೆ ಪ್ರಕರಣಗಳು ಪ್ರತಿ ವರ್ಷ 20ರಿಂದ 30 ದಾಖಲಾಗುತ್ತಿದ್ದವು. ಈ ಬಾರಿ 15 ಜನ ಸಾವನ್ನಪ್ಪಿದ್ದು, ಸುಮಾರು 50ಕ್ಕೂ ಅಧಿಕ ಪ್ರಕರಣಗಳು ಪತ್ತೆ ಆಗಿವೆ. ಅಲ್ಲದೆ, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಮೈಸೂರು, ಚಿಕ್ಕಮಗಳೂರು, ಹಾಸನಕ್ಕೂ ವಿಸ್ತರಿಸಿದೆ. ರಾಜ್ಯದಲ್ಲೇ ಬರುವ ವರ್ಷಕ್ಕೆ 5.17 ಲಕ್ಷ ಲಸಿಕೆಗಳಿಗಾಗಿ ಆರೋಗ್ಯ ಇಲಾಖೆಯು ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆಗೆ ಪ್ರಸ್ತಾವನೆ ಸಲ್ಲಿಸಿದೆ. ಈ ಮಧ್ಯೆ, ಮಹಾರಾಷ್ಟ್ರ, ಕೇರಳ, ಗೋವಾದಲ್ಲೂ ಮಂಗನ ಕಾಯಿಲೆ ಕಾಣಿಸಿಕೊಂಡಿದ್ದು, ಅಲ್ಲಿಂದಲೂ ಲಸಿಕೆಗೆ ಬೇಡಿಕೆ ಬರಲಿದೆ. ಆದ್ದರಿಂದ ಆರೋಗ್ಯ ಇಲಾಖೆಯಿಂದ ಪ್ರತ್ಯೇಕ ಯೂನಿಟ್ ಜತೆಗೆ ಹೊಸ ಲಸಿಕೆ ಅಭಿವೃದ್ಧಿಪಡಿಸಿ, ಅದರ ಪೂರೈಕೆಯನ್ನು ಖಾಸಗಿ ಔಷಧ ಕಂಪನಿಗಳಿಗೆ ವಹಿಸುವಂತೆ ಕೋರಲಾಗಿದೆ ಎಂದು ಮಾಹಿತಿ ನೀಡಿದರು.

ಸಾಮರ್ಥ್ಯ ಕುಗ್ಗಲು ಸಾಧ್ಯವಿಲ್ಲ:

ಈಗಿರುವ ಲಸಿಕೆಯ ಸಾಮರ್ಥ್ಯ ಕಡಿಮೆಯಾಗಲು ಸಾಧ್ಯವಿಲ್ಲ. ಬೇಕಿದ್ದರೆ ಇದೇ ಲಸಿಕೆಯ ಸಾಮರ್ಥ್ಯವನ್ನು ಹೆಚ್ಚಿಸಲು ಅವಕಾಶ ಇದೆ. ಇನ್ನು ಕಾಯಿಲೆ ವಿಸ್ತರಣೆ ಹಾಗೂ ಅದರ ತಡೆಗೆ ಲಸಿಕೆಯ ಬೇಡಿಕೆ ಹೆಚ್ಚುತ್ತಿರುವುದರಿಂದ ಹೊಸ ಲಸಿಕೆಗಳನ್ನು ಅಭಿವೃದ್ಧಿಪಡಿಸುವ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯುತ್ತಿವೆ ಎಂದು ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆಯ ಹೆಸರು ಹೇಳಲಿಚ್ಛಿಸದ ವಿಜ್ಞಾನಿಯೊಬ್ಬರು ‘ಉದಯವಾಣಿ’ಗೆ ತಿಳಿಸಿದರು.
● ವಿಜಯಕುಮಾರ್‌ ಚಂದರಗಿ

ಟಾಪ್ ನ್ಯೂಸ್

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.