ರಾಜ್ಯಮಟ್ಟದ ಮಕ್ಕಳ ಸಂಘಟನೆಗಳ ಒಕ್ಕೂಟ ರಚನೆಗೆ ನಿರ್ಣಯ


Team Udayavani, May 23, 2019, 4:21 PM IST

hubali-tdy-1..

ಧಾರವಾಡ: ನಗರದಲ್ಲಿ ನಡೆದ ಮಕ್ಕಳ ಸಮಾವೇಶದಲ್ಲಿ ಪರಿಸರ ತಜ್ಞ ಪಿ.ವಿ.ಹಿರೇಮಠ ಮಾತನಾಡಿದರು.

ಧಾರವಾಡ: ಇಲ್ಲಿ ನಡೆದ ಮಕ್ಕಳ ಲೋಕದ ಮನಸುಗಳ ಚಿಂತನಾ ಸಮಾವೇಶದಲ್ಲಿ ರಾಜ್ಯಮಟ್ಟದ ಮಕ್ಕಳ ಸಂಘಟನೆಗಳ ಒಕ್ಕೂಟ ರಚಿಸಲು ನಿರ್ಣಯ ಕೈಗೊಳ್ಳಲಾಗಿದೆ.

ಒಕ್ಕೂಟ ರಚನೆಗೆ ಸಂಬಂಧಿಸಿದಂತೆ ಕಾರ್ಯ ನಿರ್ವಹಿಸಲು ಸಂಚಾಲಕರನ್ನಾಗಿ ಶಂಕರ ಹಲಗತ್ತಿ ಅವರನ್ನು ಆಯ್ಕೆ ಮಾಡಲಾಯಿತು.

ಅತಿಥಿಯಾಗಿದ್ದ ಪರಿಸರ ತಜ್ಞ ಪಿ.ವಿ. ಹಿರೇಮಠ ಮಾತನಾಡಿ, ಮುಂಬರುವ ಅಪಾಯ ಅರಿತು ಮಕ್ಕಳನ್ನು ಜಾಗೃತಗೊಳಿಸಬೇಕಾದರೆ ಅದಕ್ಕೊಂದು ಸಮರ್ಥವಾದ ಸಂಘಟನೆ ಇರಬೇಕು. ಆ ನಿಟ್ಟಿನಲ್ಲಿ ಪರಸರ ವಿನಾಶದಿಂದ ನಾವು ಎದುರಿಸುತ್ತಿರುವ ಸಮಸ್ಯೆಗಳ ಅರಿವು ಮೂಡಿಸುವ ಕಾರ್ಯ ತುರ್ತಾಗಿ ನಡೆಯಬೇಕು ಎಂದರು.

ಸಮಾರೋಪ ಸಮಾರಂಭದಲ್ಲಿ ಮೂರು ಪ್ರಮುಖ ವಿಷಯಗಳ ಕುರಿತು ಘೋಷಿಸಲಾಯಿತು. ಸರ್ವರೂ ಚಪ್ಪಾಳೆ ತಟ್ಟಿ ಈ ಮೂರೂ ಘೋಷಣೆಗಳನ್ನು ಅನುಮೋದಿಸುವ ಮೂಲಕ ಮಂಡಿಸಲಾಯಿತು. ಡಾ|ನಿಂಗು ಸೊಲಗಿ ಘೋಷಿಸಿದರು. ಅವು ಇಂತಿವೆ.

1)ಯಾವುದೇ ಸರಕಾರಿ ಯೋಜನೆಗಳು ರೂಪುಗೊಳ್ಳುವಾಗ, ಅನುಷ್ಠಾನಗೊಳ್ಳುವಾಗ ಮಕ್ಕಳ ಕೇಂದ್ರಿತ ಆಗು ಹೋಗುಗಳ ಬಗ್ಗೆ ಪರಾಮರ್ಶಿಸಿ ನಿರ್ಣಯ ಕೈಗೊಳ್ಳಲು ಮಕ್ಕಳ ಕ್ಷೇತ್ರದ ತಜ್ಞರ ಸಮಿತಿಯೊಂದನ್ನು ಸರಕಾರ ರಚಿಸಿ, ಈ ಸಮಿತಿ ಸಲಹೆ ಮೇರೆಗೆ ಕಾರ್ಯ ಅನುಷ್ಠಾನಗೊಳಿಸುವುದು.

2)ಕರ್ನಾಟಕ ರಾಜ್ಯ ಬಾಲವಿಕಾಸ ಅಕಾಡೆಮಿ, ಬಾಲಭವನ, ಮೊದಲಾದ ಸರಕಾರದ ಅಧಿಧೀನದಲ್ಲಿರುವ ಮಕ್ಕಳ ಕಾರ್ಯ ಕ್ಷೇತ್ರದ ಸಂಸ್ಥೆ, ಅಕಾಡೆಮಿ, ನಿಗಮ-ಮಂಡಳಿಗಳ ಯಾವುದೇ ಸ್ಥಾನಕ್ಕೆ ನೇಮಕ ಮಾಡುವಾಗ ಮಕ್ಕಳ ಸಾಹಿತ್ಯ-ಸಾಂಸ್ಕೃತಿಕ, ಸಂಘಟನೆ ಕ್ಷೇತ್ರದ ಗಣ್ಯರನ್ನೇ ನೇಮಕ ಮಾಡಬೇಕು.

3)ಶಾಲಾ ಶಿಕ್ಷಣದಲ್ಲಿನ ಗೊಂದಲಗಳ ನಿವಾರಣೆಯೊಂದಿಗೆ ಮಕ್ಕಳ ಸೃಜನಶೀಲತೆಯ ಪೋಷಣೆಯ ನಿಟ್ಟಿನಲ್ಲಿ ಸೂಕ್ತ ಕಾರ್ಯ ಯೋಜನೆ ರೂಪಿಸಬೇಕು. ವಿಶೇಷ ಚೇತನ ಮಕ್ಕಳಿಗಾಗಿ ತಾಲೂಕು ಕೇಂದ್ರದಲ್ಲಿ ಸಂಯೋಜಿತ ಶಾಲಾ ಶಿಕ್ಷಣಕ್ಕೆ ಪೂರಕ ಮಕ್ಕಳ ಸ್ನೇಹಿ ವಾತಾವಣವಿರುವ, ಎಲ್ಲ ಸೌಲಭ್ಯ ಹೊಂದಿರುವ ಸಮನ್ವಯ ಸಂಪನ್ಮೂಲ ತರಬೇತಿ ಶಾಲೆಗಳ ನಿರ್ಮಾಣವಾಗಬೇಕು ಎಂದು ಘೋಷಿಸಲಾಯಿತು.

ಟಾಪ್ ನ್ಯೂಸ್

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.