ಜೂ.29ಕ್ಕೆ ಚೇಂಬರ್‌ ಚುನಾವಣೆ ಸಾಧ್ಯತೆ

ಪ್ರದರ್ಶಕರ ವಲಯದಿಂದ ಅಧ್ಯಕ್ಷ ಸ್ಥಾನಕ್ಕೆ ರಾಕ್‌ಲೈನ್‌ ಸ್ಪರ್ಧೆ

Team Udayavani, May 23, 2019, 4:39 PM IST

1-a

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಜೂನ್‌ 29 ರಂದು ಬಹುತೇಕ ಚುನಾವಣೆ ನಡೆಯುವ ಸಾಧ್ಯತೆ ದಟ್ಟವಾಗಿದೆ. ಈ ಬಾರಿ ಪ್ರದರ್ಶಕ ವಲಯಕ್ಕೆ ಅಧ್ಯಕ್ಷ ಸ್ಥಾನ ಮೀಸಲಿದ್ದು, ಪ್ರದರ್ಶಕರ ವಲಯದಿಂದ ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್‌ ಅವರು ವಾಣಿಜ್ಯ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ನಡೆಸಲಿದ್ದಾರೆ. ರಾಕ್‌ಲೈನ್‌ ವೆಂಕಟೇಶ್‌ ಅವರು, ವಿತರಕ, ನಿರ್ಮಾಪಕ ಹಾಗು ಪ್ರದರ್ಶಕ ಈ ಮೂರು ವಲಯದಲ್ಲೂ ಸದಸ್ಯರಾಗಿದ್ದಾರೆ. ಹಾಗಾಗಿ, ಈ ಬಾರಿ ಪ್ರದರ್ಶಕರ ವಲಯಕ್ಕೆ ಅಧ್ಯಕ್ಷ ಸ್ಥಾನ ಮೀಸಲಾಗಿರುವುದರಿಂದ ಅಧ್ಯಕ್ಷ ಸ್ಥಾನಕ್ಕೆ ರಾಕ್‌ಲೈನ್‌ ವೆಂಕಟೇಶ್‌ ಸ್ಪರ್ಧೆಗಿಳಿಯಲಿದ್ದಾರೆ.

ಈಗಾಗಲೇ ರಾಕ್‌ಲೈನ್‌ ವೆಂಕಟೇಶ್‌ ಅವರು, ಈ ಹಿಂದೆ ನಿರ್ಮಾಪಕರ ವಲಯದಿಂದ ಎರಡು ಬಾರಿ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಈಗ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿ ಸ್ಪರ್ಧೆಗಿಳಿಯಲಿದ್ದಾರೆ. ಕಳೆದ ಬಾರಿ ವಿತರಕ ವಲಯಕ್ಕೆ ಅಧ್ಯಕ್ಷ ಸ್ಥಾನ ಮೀಸಲಾಗಿತ್ತು. ಆ ವಲಯದಿಂದ ಎಸ್‌.ಎ.ಚಿನ್ನೇಗೌಡ ಅವರು ಅಧ್ಯಕ್ಷ ಸ್ಥಾನದಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಒಂದು ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಜೂ.29 ರಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಚುನಾವಣೆ ನಡೆಸಲು ನಿರ್ಧರಿಸಲಾಗಿದೆ ಎನ್ನಲಾಗಿದೆ.

ಮಂಡಳಿಯ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳಾಗಿ ನರಸಿಂಹಲು, ಜಯರಾಜು, ಥಾಮಸ್‌ ಡಿಸೋಜ ಅವರುಗಳು ಸ್ಪರ್ಧೆಗಿಳಿಯಲಿದ್ದಾರೆ ಎಂಬು ಮಾತುಗಳು ಸಹ ಕೇಳಿಬರುತ್ತಿವೆ. ಅಂತೆಯೇ ಮಂಡಳಿಯ ಇತರೆ ಸ್ಥಾನಗಳಾದ ಉಪಾಧ್ಯಕ್ಷ, ಖಚಾಂಚಿ, ಗೌರವ ಕಾರ್ಯದರ್ಶಿ ಹಾಗು ಕಾರ್ಯದರ್ಶಿ ಸ್ಥಾನಗಳಿಗೆ ಎಲ್ಲಾ ವಲಯಗಳಿಂದಲೂ ಸ್ಪರ್ಧಿಸಬಹುದಾಗಿದೆ. ಈ ಪೈಕಿ ನಿರ್ಮಾಪಕರ ವಲಯದಿಂದ ಕಾರ್ಯದರ್ಶಿ ಸ್ಥಾನದ ಆಕಾಂಕ್ಷಿಗಳಾಗಿ ನಿರ್ಮಾಪಕರಾದ ಎನ್‌.ಎಂ.ಸುರೇಶ್‌ ಮತ್ತು ಎಂ.ಜಿ.ರಾಮಮೂರ್ತಿ ಅವರುಗಳ ಹೆಸರುಗಳು ಸಹ ಚಾಲ್ತಿಯಲ್ಲಿವೆ. ಖಚಾಂಚಿ ಸ್ಥಾನದ ಆಕಾಂಕ್ಷಿಯಾಗಿ ನಾರಾಯಣ ರೆಡ್ಡಿ ಎಂಬುವವರ ಹೆಸರು ಕೇಳಿಬರುತ್ತಿದೆ.

ಮೇ.23 (ಇಂದು) ಲೋಕಸಭೆ ಚುನಾವಣೆ ಫ‌ಲಿತಾಂಶ ಪ್ರಕಟಗೊಂಡಿದೆ. ಈಗ ಫಿಲ್ಮ್ ಚೇಂಬರ್‌ ಚುನಾವಣೆಯ ಸರದಿ. ಜೂ.29 ರಂದು ಮಂಡಳಿ ಚುನಾವಣೆ ನಡೆದರೆ ಯಾರೆಲ್ಲಾ ಸ್ಪರ್ಧೆಗಿಳಿಯುತ್ತಾರೆ, ಜಯದ ಮಾಲೆ ಯಾರ ಕೊರಳಿಗೆ ಬೀಳಲಿದೆ ಎಂಬುದನ್ನು ಕಾದು ನೋಡಬೇಕು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.