ಮತ ಎಣಿಕೆ ಕೇಂದ್ರದ ಬಗ್ಗೆಯೇ ಆಕ್ಷೇಪ; ಕಾರ್ಯಕರ್ತರ ಪರದಾಟ!


Team Udayavani, May 24, 2019, 6:00 AM IST

2305MLR101

Opposition to vote counting center; Workers Fight!

ಮಹಾನಗರ: ಇದೇ ಮೊದಲ ಬಾರಿಗೆ ದ.ಕ. ಲೋಕಸಭಾ ಕ್ಷೇತ್ರದ ಮತ ಎಣಿಕೆ ನಗರದಿಂದ ಸಂಪೂರ್ಣ ಹೊರಗೆ ಸುರ ತ್ಕಲ್‌ನಲ್ಲಿ ನಡೆದ ಹಿನ್ನೆಲೆಯಲ್ಲಿ ಸುಳ್ಯ, ಪುತ್ತೂರು, ಬೆಳ್ತಂಗಡಿ ಭಾಗದ ಪಕ್ಷದ ಕಾರ್ಯ ಕರ್ತರಿಗೆ ಮತ ಎಣಿಕೆ ಕೇಂದ್ರಕ್ಕೆ ಬರಲು ಸಮಸ್ಯೆ ಎದುರಾಯಿತು.

ಜತೆಗೆ, ಹೆದ್ದಾರಿ ಸಂಚಾರ ನಿರ್ಬಂಧದ ಹಿನ್ನೆಲೆ ಯಲ್ಲಿ ಬಹುತೇಕ ಕಾರ್ಯಕರ್ತರು ಮತ ಎಣಿಕೆ ಕೇಂದ್ರದತ್ತ ಬರಲು ಪರದಾ ಡುವಂತಾ ಯಿತು. ಹೀಗಾಗಿ ಇದೇ ಮೊದಲ ಬಾರಿಗೆ ಮತ ಎಣಿಕೆ ಕೇಂದ್ರದ ಸುತ್ತ ಕಾರ್ಯ ಕರ್ತರೇ ಇರಲಿಲ್ಲ. ಬದಲಾಗಿ ಪೊಲೀಸ್‌ ಬಂದೋಬಸ್ತ್ ಮಾತ್ರ ಕಾಣಿಸುತ್ತಿತ್ತು.

ಮತ ಎಣಿಕೆಗೆ ಬರೋಬ್ಬರಿ 1 ತಿಂಗಳು ಕಾಯಬೇಕಾದ ಹಿನ್ನೆಲೆಯಲ್ಲಿ ಭದ್ರತೆಯ ದೃಷ್ಟಿಯಿಂದ ಹಾಗೂ ವಿವಿ ಪ್ಯಾಟ್‌ಗಳನ್ನು ಇಡಲು ಸೂಕ್ತ ಸ್ಥಳಾವಕಾಶದ ಅಗತ್ಯದ ಕಾರಣದಿಂದ ಮತ ಎಣಿಕೆ ಕೇಂದ್ರವನ್ನು ಈ ಬಾರಿ ಸುರತ್ಕಲ್‌ಗೆ ಶಿಫ್ಟ್ ಮಾಡಲಾಗಿತ್ತು. ಕೊಣಾಜೆಯ ಮಂಗಳೂರು ವಿ.ವಿ.ಯಲ್ಲಿ ಮತ ಎಣಿಕೆ ಮಾಡುವ ಬಗ್ಗೆಯೂ ಒಂದೊಮ್ಮೆ ಜಿಲ್ಲಾಡಳಿತ ಚರ್ಚಿಸಿ, ಕೊನೆಗೆ ಸುರತ್ಕಲ್‌ ಕೇಂದ್ರವನ್ನು ಆಯ್ಕೆ ಮಾಡಿತ್ತು.

2009ರ ದ.ಕ. ಲೋಕಸಭಾ ಚುನಾವಣೆ ಮತ ಎಣಿಕೆ ಮಂಗಳೂರಿನ ಕೆನರಾ ಕಾಲೇಜು ಆವರಣದಲ್ಲಿ ನಡೆದಿತ್ತು. ಇದರಿಂದಾಗಿ ನಗರ ಮಧ್ಯಭಾಗದಲ್ಲಿ ಸಂಚಾರ ದಟ್ಟಣೆ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಿಂದ ಅನಂತರದ (2014) ಮತ ಎಣಿಕೆ ನಗರದಿಂದ ಸ್ವಲ್ಪ ಹೊರವಲಯದ ಬೋಂದೆಲ್‌ ಮಹಾತ್ಮಾ ಗಾಂಧಿ ಸಂಯುಕ್ತ ಪದವಿಪೂರ್ವ ಕಾಲೇಜಿಗೆ ಸ್ಥಳಾಂತರ ವಾಗಿತ್ತು. ಕಳೆದ ಬಾರಿಯ ವಿಧಾ ನಸಭಾ ಚುನಾವಣೆ ಮತ ಎಣಿಕೆಯೂ ಬೋಂದೇಲ್‌ನಲ್ಲಿಯೇ ನಡೆದಿತ್ತು. ಜತೆಗೆ, ಮಂಗÙ ‌ೂರಿನ ಕೆಪಿಟಿ, ಪಾದುವ ಹೈಸ್ಕೂಲ್‌, ಸ್ಟೇಟ್‌ಬ್ಯಾಂಕ್‌ ಬಳಿಯ ರೊಸಾರಿಯೋ ಕಾಲೇಜಿನ ಆವರಣದಲ್ಲಿ ವಿವಿಧ ಚುನಾ ವಣೆಯ ಮತ ಎಣಿಕೆ ನಡೆದಿತ್ತು.

ಬಿಗಿ ಭದ್ರತೆಯ ವ್ಯವಸ್ಥೆಗೆ ಈ ಬಾರಿ ಮತದಾನ ಕೇಂದ್ರವನ್ನು ಮಂಗಳೂರಿನ ಹೊರ ವಲಯದ ಸುರತ್ಕಲ್‌ಗೆ ಸ್ಥಳಾಂತರಿ ಸಲಾಗಿತ್ತು ಎಂದು ಜಿಲ್ಲಾಧಿಕಾರಿ ತಿಳಿಸಿದ್ದರು. ಮತ ಎಣಿಕೆಯನ್ನು ವಿವಿಧ ರೀತಿಯಲ್ಲಿ ಸುಗಮ ಮತ್ತು ಸುವ್ಯವಸ್ಥಿತವಾಗಿಸಲು ಎನ್‌ಐಟಿಕೆ ಆವರಣ ಆಯ್ಕೆ ಮಾಡಲಾಗಿತ್ತು.

ಬೋಂದೆಲ್‌ ಎಂಜಿಸಿಯಲ್ಲಿ ಮತ ಎಣಿಕೆ ಮಾಡುವ ಸಂದರ್ಭ ಮಂಗಳೂರು ವಿಮಾನ ನಿಲ್ದಾಣ ರಸ್ತೆಯನ್ನು ಬೋಂದೆಲ್‌ ಚರ್ಚ್‌ ಬಳಿಯಿಂದ ಬೋಂದೆಲ್‌ ವೃತ್ತದ ತನಕ ಬೆಳಗ್ಗೆಯಿಂದ ಮಧ್ಯಾಹ್ನದ ತನಕ ಬಂದ್‌ ಮಾಡಬೇಕಾಗುತ್ತದೆ. ಇದರಿಂದ ವಿಮಾನ ನಿಲ್ದಾಣಕ್ಕೆ ಹೋಗುವವರಿಗೆ ತೊಂದರೆ ಯಾಗುತ್ತದೆ. ಕಳೆದ ಎರಡು ಬಾರಿಯೂ ಈ ಸಮಸ್ಯೆ ಎದುರಾಗಿತ್ತು. ಜತೆಗೆ, ನಗರದ ಕಾಲೇಜು ಆವರಣದಲ್ಲಿ ಮತ ಎಣಿಕೆ ನಡೆಸಿದರೆ ಪಕ್ಷಗಳ ಬೆಂಬಲಿಗರು ಜಮಾಯಿಸುವುದರಿಂದ ಪಾರ್ಕಿಂಗ್‌ ಸಮಸ್ಯೆ ಎದುರಾಗುತ್ತದೆ. ಈ ಎಲ್ಲ ಉದ್ದೇಶಗಳಿಂದ ಮತ ಎಣಿಕೆ ಕೇಂದ್ರವನ್ನು ನಗರದಿಂದ ಹೊರ ವಲಯಕ್ಕೆ ಬದಲಾಯಿಸಲಾಗಿತ್ತು. ಆದರೆ, ಎನ್‌ಐಟಿಕೆಯ ಮುಂಬಾಗ ಹೆದ್ದಾರಿ ಇರುವ ಕಾರಣದಿಂದ ಉಡುಪಿ-ಕಾಸರಗೋಡು ಭಾಗಕ್ಕೆ ತೆರಳುವ ವಾಹನಗಳು ಮಾತ್ರ ದಿನಪೂರ್ತಿ ಸಮಸ್ಯೆ ಅನುಭವಿಸುವಂತಾಯಿತು. ಹೆದ್ದಾರಿ ಬದಿಯಲ್ಲಿ ಮತ ಎಣಿಕೆ ಮಾಡಿ ಎಲ್ಲರಿಗೂ ಸಮಸ್ಯೆಯಾಯಿತು ಎಂದು ಸಾರ್ವಜನಿಕರು ಆಕ್ಷೇಪಿಸಿದ ಘಟನೆಯೂ ನಡೆಯಿತು.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.