ಕ್ಷೇತ್ರ ಮಹಮೆ

2ಡಿ, 3ಡಿಯಲ್ಲಿ ಕುರುಕ್ಷೇತ್ರ ರೆಡಿ

Team Udayavani, May 24, 2019, 6:00 AM IST

q-22

“ಈ ಸಿನಿಮಾದ ನಿಜವಾದ ಹೀರೋ ನಿರ್ಮಾಪಕ ಮುನಿರತ್ನ’
– ಹೀಗೆ ಹೇಳಿ ಪಕ್ಕದಲ್ಲಿ ಕುಳಿತಿದ್ದ ನಿರ್ಮಾಪಕ ಮುನಿರತ್ನ ಅವರತ್ತ ನೋಡಿದರು ನಿರ್ದೇಶಕ ನಾಗಣ್ಣ. ಅವರು ಹೀಗೆ ಹೇಳಲು ಕಾರಣ “ಕುರುಕ್ಷೇತ್ರ’ದಿಂದ ಬಹುತಾರಾಗಣದ ಸಿನಿಮಾವನ್ನು ನಿರ್ಮಾಪಕ ಮುನಿರತ್ನ ನಿಭಾಯಿಸಿದ ರೀತಿ. ಅದೇ ಕಾರಣದಿಂದ ಅವರನ್ನು ಹೀರೋ ಅಂದಿದ್ದು. ನಿರ್ದೇಶಕ ನಾಗಣ್ಣ ಅವರಿಗೆ “ಕುರುಕ್ಷೇತ್ರ’ ಮತ್ತೂಂದು ಹೊಸ ಅನುಭವವಂತೆ. ಬಹುತಾರಾಗಣದ ಅದ್ಧೂರಿ ಚಿತ್ರವನ್ನು ನಿರ್ದೇಶಿಸುವಲ್ಲಿ ಕಲಾವಿದರು, ತಂತ್ರಜ್ಞರು ಕೊಟ್ಟ ಪ್ರೋತ್ಸಾಹವನ್ನು ಮರೆಯುವಂತಿಲ್ಲ ಎಂದರು. ಇನ್ನು, ಅಂಬರೀಶ್‌ ಅವರು ಅನಾರೋಗ್ಯವಿದ್ದರೂ ಬಂದು ತಮ್ಮ ಚಿತ್ರೀಕರಣದ ಜೊತೆಗೆ ತಮ್ಮ ಡಬ್ಬಿಂಗ್‌ ಕೂಡಾ ಮುಗಿಸಿಕೊಟ್ಟ ಬಗ್ಗೆ ಹೇಳಿದರು ನಾಗಣ್ಣ. ಚಿತ್ರ 2ಡಿ ಹಾಗೂ 2ಡಿಯಲ್ಲಿ ತಯಾರಾ­ಗಿದ್ದು, 3ಡಿಯಲ್ಲಿ ಯಾವುದೇ ತೊಂದರೆಯಾ­ಗದಂತೆ ಅದಕ್ಕೆ ಬೇಕಾದ ತಂತ್ರಜ್ಞಾನ­ದೊಂದಿಗೆ ಚಿತ್ರೀಕರಿಸ­ಲಾಗಿದೆ ಎಂದರು.

ನಿರ್ಮಾಪಕ ಮುನಿರತ್ನ ಈ ಚಿತ್ರವನ್ನು ಆಗಸ್ಟ್‌ 09 ರಂದು ತೆರೆಕಾಣಿಸಲು ಮುಂದಾಗಿದ್ದಾರೆ. ಚಿತ್ರ ಕನ್ನಡ, ತೆಲುಗು, ತಮಿಳು, ಹಿಂದಿ ಹಾಗೂ ಮಲಯಾಳಂ­ನಲ್ಲಿ ತಯಾರಾಗಿದ್ದು, ಏಕಕಾಲಕ್ಕೆ ವಿಶ್ವದಾದ್ಯಂತ ಎಲ್ಲಾ ಭಾಷೆಗಳಲ್ಲೂ ಬಿಡುಗಡೆಯಾಗಲಿದೆಯಂತೆ. ಚಿತ್ರ ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗಳಿಗೆ ಡಬ್‌ ಆಗಿದೆ. ಚಿತ್ರದ ಪಾತ್ರಗಳ ಧ್ವನಿಗೆ ಹೊಂದಿಕೆಯಾಗುವವರಿಂದಲೇ ಡಬ್ಬಿಂಗ್‌ ಮಾಡಿಸಲಾಗಿದೆಯಂತೆ. ಪಾತ್ರಗಳ ಮೂಲ ಧ್ವನಿಗೆ ಡಬ್ಬಿಂಗ್‌ ಹೊಂದಿಕೆಯಾಗದೇ ಇದ್ದರೆ ಚೆನ್ನಾಗಿರುವುದಿಲ್ಲ ಎಂಬ ಕಾರಣಕ್ಕೆ ಪಾತ್ರಕ್ಕೆ ಹೊಂದಿಕೆಯಾಗುವವರಿಂದಲೇ ಡಬ್ಬಿಂಗ್‌ ಮಾಡಿಸಲಾಗಿದೆಯಂತೆ. ಇನ್ನು, ಎಲ್ಲವೂ ಅಂದುಕೊಂಡಂತೆ ಆಗಿದ್ದರೆ “ಕುರುಕ್ಷೇತ್ರ’ ಚಿತ್ರ ಇಷ್ಟೊತ್ತಿಗಾಗಲೇ ಬಿಡುಗಡೆಯಾಗಬೇಕಿತ್ತು. ಆದರೆ, ತಡವಾಗಿ ಈಗ ಬಿಡುಗಡೆಯ ಹಂತಕ್ಕೆ ಬಂದಿದೆ. ಇದಕ್ಕೆ ಕಾರಣ ಗ್ರಾಫಿಕ್ಸ್‌ ಕೆಲಸ ಎನ್ನುತ್ತಾರೆ. ಚಿತ್ರದಲ್ಲಿ ತುಂಬಾ ಗ್ರಾಫಿಕ್‌ ಕೆಲಸ ಇದ್ದ ಕಾರಣ ಚಿತ್ರ ತಡವಾಗಿದೆಯೇ ಹೊರತು, ಬೇರೆ ಯಾವುದೇ ಕಾರಣದಿಂದಲ್ಲ ಎನ್ನುವುದು ಚಿತ್ರತಂಡದ ಮಾತು. ನಿರ್ದೇಶಕ ನಾಗಣ್ಣ ಅವರ “ಸಂಗೊಳ್ಳಿ ರಾಯಣ್ಣ’ ಚಿತ್ರ ನೋಡಿ, “ಕುರುಕ್ಷೇತ್ರ’ ಚಿತ್ರಕ್ಕೆ ಆಯ್ಕೆ ಮಾಡಿದ್ದಾಗಿ ಹೇಳಿದರು ಮುನಿರತ್ನ.

ಜೊ.ನಿ.ಹರ್ಷ “ಕುರುಕ್ಷೇತ್ರ’ ಚಿತ್ರದ ಸಂಕಲನಕಾರರು. ಈ ಚಿತ್ರ ಅವರ ಕೆರಿಯರ್‌ನಲ್ಲೇ ಒಂದು ಸಾಹಸ ಮತ್ತು ಹೆಮ್ಮೆಯಂತೆ. ಸುಮಾರು 100 ಗಂಟೆಗಳ ಚಿತ್ರೀಕರಿಸಿದ ದೃಶ್ಯವನ್ನು 2.55 ನಿಮಿಷಕ್ಕೆ ಇಳಿಸುವುದು ಸುಲಭವಲ್ಲ. ಆ ಕೆಲಸವನ್ನು ತಮ್ಮ ತಂಡದೊಂದಿಗೆ ಸೇರಿ ಹರ್ಷ ಮಾಡಿದ್ದಾರೆ. ಅವರಿಗೆ ಒಟ್ಟೊಟ್ಟಿಗೆ ಐದು ಸಿನಿಮಾಗಳಿಗೆ ಕೆಲಸ ಮಾಡಿದ ಅನುಭವ “ಕುರುಕ್ಷೇತ್ರ’ವೊಂದರಲ್ಲೇ ಸಿಕ್ಕಿತಂತೆ.
ಚಿತ್ರದ ಆಡಿಯೋ ಹಕ್ಕನ್ನು ಲಹರಿ ಸಂಸ್ಥೆ ಪಡೆದಿದ್ದು, ಚಿತ್ರ ಮೂಡಿಬಂದಿರುವ ಹಾಗೂ ಹಾಡುಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

9-kushtagi

Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.