ಇದು ಮೋದಿಯ ವಿಜಯವಲ್ಲ, ಆದರೆ ಜನರ ಭರವಸೆಯ ಗೆಲುವು: ಪ್ರಧಾನಿ ಮೋದಿ
Team Udayavani, May 23, 2019, 9:03 PM IST
ನವದೆಹಲಿ: ಈ ಬಡ ಫಕೀರನ ಜೋಳಿಗೆಯನ್ನು ನೀವು ಪ್ರೀತಿಯ ಆಶೀರ್ವಾದಿಂದ ತುಂಬಿಸಿದ್ದೀರಿ. ನನಗೆ ದೇಶ ಮುನ್ನಡೆಸಲು ಪ್ರಚಂಡ ಬಹುಮತ ಕೊಟ್ಟಿದ್ದೀರಿ. ನಮ್ಮ ದೇಶವನ್ನು ಸಮೃದ್ದಗೊಳಿಸಲು ನಮ್ಮೆಲ್ಲರ ಶ್ರಮ ಅಗತ್ಯ. 5 ವರ್ಷದಲ್ಲಿ ದೇಶವನ್ನು ಹೊಸ ಹಾದಿಗೆ ಕೊಂಡೊಯ್ಯುವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
2019ರ ಲೋಕಸಭೆ ಚುನಾವಣೆಯ ಫಲಿತಾಂಶ ಗುರುವಾರ ಪ್ರಕಟವಾದ ಬಳಿಕ ಸಂಜೆ ದೆಹಲಿ ಪಕ್ಷದ ಕೇಂದ್ರ ಕಚೇರಿಯಲ್ಲಿ ಮಾತನಾಡಿದ ಅವರು, 2014ರಲ್ಲಿ ನನ್ನ ಬಗ್ಗೆ ಗೊತ್ತಿಲ್ಲದಿದ್ದರೂ ನನಗೆ ಆಶೀರ್ವಾದ ಮಾಡಿದ್ದೀರಿ. ಈಗ 2019ರಲ್ಲಿ ನನ್ನ ಬಗ್ಗೆ ತಿಳಿದುಕೊಂಡು ಗೆಲ್ಲಿಸಿದ್ದೀರಿ. ಬಹುಮತದ ಮೂಲಕ ನನ್ನ ಮೇಲೆ ಹೊಸ ಜವಾಬ್ದಾರಿ ಹೊರಿಸಿದ್ದೀರಿ ಎಂದರು.
ಸುಮ್ಮನೆ ಕೆಲಸ ಮಾಡಲ್ಲ, ನಿಷ್ಠೆಯಿಂದ ಸೇವೆ ಮಾಡುತ್ತೇನೆ. ಈಗ ನಮ್ಮ ದೇಶವನ್ನು ಸರ್ವಮತದಿಂದ ಮುನ್ನಡೆಸಬೇಕಾಗಿದೆ. ನಮ್ಮ ವಿರೋಧಿಗಳಿದ್ದರೂ ಜೊತೆಗೆ ಕೊಂಡೊಯ್ಯಬೇಕಾಗಿದೆ ಎಂದು ಹೇಳಿದರು. ಈ ಚುನಾವಣೆಯಲ್ಲಿಯೇ ಮೊದಲ ಬಾರಿಗೆ ಬೆಲೆ ಏರಿಕೆ ಮತ್ತು ಭ್ರಷ್ಟಾಚಾರ ಪ್ರಮುಖ ವಿಷಯವಾಗಿರಲಿಲ್ಲ ಎಂದು ಮೋದಿ ಅಭಿಪ್ರಾಯ ವ್ಯಕ್ತಪಡಿಸಿದರು.
ದೇಶದಲ್ಲಿ ಎರಡು ವಿಧದ ಜಾತಿಗಳಿವೆ. ಒಂದು ಬಡತನ, ಮತ್ತೊಂದು ಯಾವುದಾದರೂ ರೀತಿಯಿಂದಲಾದರೂ ಕೊಡುಗೆ ನೀಡುವ ಮೂಲಕ ಬಡತನವನ್ನು ನಿರ್ಮೂಲನೆ ಮಾಡಬೇಕೆನ್ನುವ ಜನ ಎಂದು ಮೋದಿ ಪ್ರತಿಪಾದಿಸಿದರು.
ನಮ್ಮ ದೇಶದಲ್ಲಿ ನಮಗೆ ಸಂವಿಧಾನವೇ ಪರಮೋಚ್ಛ. 1984ರಲ್ಲಿ ಬಿಜೆಪಿ ಕೇವಲ 2 ಸ್ಥಾನಗಳಲ್ಲಿ ಮಾತ್ರ ಗೆಲುವು ಸಾಧಿಸಿತ್ತು. ನಾವು ಈಗ ಎರಡನೇ ಬಾರಿ ಅಧಿಕಾರಕ್ಕೇರಿದ್ದೇವೆ. ಇದು ಮೋದಿಯ ವಿಜಯವಲ್ಲ, ಇದು ಭರವಸೆಯ ಮತ್ತು ಜನರ ಮಹಾತ್ವಾಕಾಂಕ್ಷೆಯ ಗೆಲುವಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು