ಕಾಂಗ್ರೆಸ್‌ ಸೋಲಿಗೆ ಕಾರಣವೇನು?


Team Udayavani, May 24, 2019, 6:10 AM IST

congress

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್‌ ಗೆಲುವು ಸಾಧಿಸುವುದಕ್ಕೆ ಶತಾಯಗತಾಯ ಪ್ರಯತ್ನ ನಡೆಸಿದ್ದರೂ ಯಶಸ್ಸು ಕಾಣದಿರಲು ಕಾರಣಗಳೇನು ಎಂಬ ಬಗ್ಗೆವಿಶ್ಲೇಷಣೆ, ಪಕ್ಷದೊಳಗೂ ಆತ್ಮಾವಲೋಕನ ಆರಂಭಗೊಂಡಿದೆ.

ಈ ಬಾರಿಯ ಚುನಾವಣೆಯಲ್ಲಿ ಜಿಲ್ಲೆಯ ಪಾಲಿಗೆ ಕಾಂಗ್ರೆಸ್‌ನಲ್ಲಿ ಟಕೆಟ್‌ ಹಂಚಿಕೆ ಗೊಂದಲ ಮತ್ತು ಕೊನೆಕ್ಷಣದಲ್ಲಿ ಅಭ್ಯರ್ಥಿಯನ್ನು ಘೋಷಣೆ ಮಾಡಿರುವುದು ಹಿನ್ನಡೆಗೆ ಮುಖ್ಯ ಕಾರಣಗಳಲ್ಲೊಂದು ಎಂಬುದಾಗಿ ವಿಶ್ಲೇಷಿಸಲಾಗುತ್ತಿದೆ. ನಾಮಪತ್ರ ಸಲ್ಲಿಕೆಗೆ ಕೇವಲ ಮೂರು ದಿನಗಳಷ್ಟೇ ಬಾಕಿಯಿರುವಾಗ ಮಿಥುನ್‌ ರೈ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿತ್ತು.

ಇದರಿಂದಾಗಿ ಮಿಥುನ್‌ ರೈ ಅವರಿಗೆ ಚುನಾವಣಾ ಕಾರ್ಯತಂತ್ರ ರೂಪಿಸಲು ಹೆಚ್ಚಿನ ಕಾಲಾವಕಾಶ ದೊರಕಿರಲಿಲ್ಲ. ಜತೆಗೆ ಪ್ರಚಾರ ನಡೆಸುವುದಕ್ಕೆ ದೊರಕಿದ್ದು ಕೇವಲ 25 ದಿನ ಮಾತ್ರ. ಬಿಜೆಪಿಯಲ್ಲಿ ನಳಿನ್‌ ಅವರೇ ಅಭ್ಯರ್ಥಿ ಎಂಬುದು ಚುನಾವಣೆಗಿಂತ ವರ್ಷದ ಮೊದಲೇ ಬಹುತೇಕ ನಿರ್ಧಾರವಾಗಿ ಆ ದಿಕ್ಕಿನಲ್ಲಿ ಪಕ್ಷ ಸಂಘಟನೆಯತ್ತ ಜಿಲ್ಲಾ ನಾಯಕರು-ಕಾರ್ಯಕರ್ತರು ತೊಡಗಿಸಿಕೊಂಡಿದ್ದರು.

ಮತ್ತೂಂದೆಡೆ ಕಾಂಗ್ರೆಸ್‌ ಕಡೆಯಿಂದ ಈ ಬಾರಿ ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದ ಪ್ರಭಾವಿ ನಾಯಕರಾರೂ ಪ್ರಚಾರಕ್ಕೆ ಜಿಲ್ಲೆಗೆ ಬಂದಿರಲಿಲ್ಲ. ರಾಜ್ಯ ಮಟ್ಟದ ನಾಯಕರಾದ ಡಿಕೆಶಿ, ದಿನೇಶ್‌ ಗುಂಡೂರಾವ್‌, ಸಿ.ಎಂ. ಇಬ್ರಾಹಿಂ, ಡಾ| ಜಯಮಾಲಾ ಬಿಟ್ಟರೆ ಇನ್ನಿತರ ಪ್ರಮುಖ ನಾಯಕರು ಬಂದಿರಲಿಲ್ಲ. ಮುಖ್ಯಮಂತ್ರಿ ಕುಮಾರಸ್ವಾಮಿ ಕೂಡ ಹೆಸರಿಗಷ್ಟೇ ಸುಳ್ಯದಲ್ಲಿ ಸಭೆಯಲ್ಲಿ ಭಾಗವಹಿಸಿದ್ದರು. ಪಕ್ಷದ ಸ್ಟಾರ್‌ ಪ್ರಚಾರಕರಾಗಿ ಶತ್ರುಘ್ನ ಸಿನ್ಹಾ ಮಾತ್ರ ಮುಡಿಪಿನಲ್ಲಿ ಒಂದು ಪ್ರಚಾರ ಸಭೆಯಲ್ಲಿ ಭಾಗವಹಿಸಿ ತೆರಳಿದ್ದರು.

ಬಿಜೆಪಿ ಪರವಾಗಿ ಪ್ರಧಾನಿ ಮೋದಿಯವರೇ ಚುನಾವಣಾ ಪ್ರಚಾರ ನಡೆಸಿ ಆನೆಬಲ ತಂದಿದ್ದರು. ಮೋದಿ ಮೋಡಿಗೆ ಪ್ರತಿಯಾಗಿ ಕಾಂಗ್ರೆಸ್‌ನ ರಾಷ್ಟ್ರೀಯ ಪ್ರಭಾವಿ ನಾಯಕರನ್ನು ಜಿಲ್ಲೆಗೆ ಕರೆಸುವುದಕ್ಕೆ ಸಾಧ್ಯವಾಗಿರಲಿಲ್ಲ.
ಅಭ್ಯರ್ಥಿ ಆಯ್ಕೆ ವಿಳಂಬವಾದ ಪರಿಣಾಮ ಬೂತ್‌ ಮಟ್ಟದಲ್ಲಿಯೂ ಪರಿಣಾಮಕಾರಿಯಾಗಿ ಪ್ರಚಾರ ನಡೆಸುವುದಕ್ಕೆ ಕಾಂಗ್ರೆಸ್‌ಗೆ
ಸಾಧ್ಯವಾಗಿರಲಿಲ್ಲ. ಬಿಜೆಪಿಯು ತಳಮಟ್ಟದಲ್ಲಿಯೂ ಮೂರು ಸುತ್ತಿನ ಪ್ರಚಾರ ನಡೆಸಿತ್ತು. ಅದರಲ್ಲಿಯೂ ಬಿಜೆಪಿ ಶಾಸಕರನ್ನು ಹೊಂದಿರುವ ಜಿಲ್ಲೆಯ ಏಳು ವಿಧಾನಸಭೆ ಕ್ಷೇತ್ರಗಳಲ್ಲಿ ಆಯಾ ಶಾಸಕರೇ ಪ್ರಚಾರದ ಹೊಣೆ ಹೊತ್ತಿದ್ದರು.

ಈ ಎಲ್ಲ ಅಂಶಗಳ ಹೊರತಾಗಿ ಕ್ಷೇತ್ರದಲ್ಲಿ ಪ್ರಚಾರದ ವೇಳೆಯೂ ಜಿಲ್ಲೆಯ ಹಿರಿಯ ಮತ್ತು ಪ್ರಮುಖ ನಾಯಕರ ಅಸಹಕಾರ ಮೇಲ್ನೋಟಕ್ಕೆ ಕಾಣಿಸುತ್ತಿತ್ತು. ಆಯಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಲ್ಲಿನ ಮಾಜಿ ಶಾಸಕರು ಅಥವಾ ಹಿರಿಯ ನಾಯಕರು ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದರೇ ವಿನಾ ಜಿಲ್ಲೆಯ ಎಲ್ಲ ನಾಯಕರು ಒಟ್ಟಾಗಿ ಚುನಾವಣೆ ಸಭೆಗಳಲ್ಲಿ ಅಥವಾ ಪ್ರಚಾರದಲ್ಲಿ ಕಾಣಿಸಿಕೊಂಡಿರಲಿಲ್ಲ. ಇದು ಕೂಡ ಕಾಂಗ್ರೆಸ್‌ನ ಹಿನ್ನಡೆಗೆ ಕಾರಣವಾಗಿರಬಹುದು ಎನ್ನುವ ವಿಶ್ಲೇಷಣೆ ಇದೆ.

ಟಾಪ್ ನ್ಯೂಸ್

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Team India’s T20 World Cup 2024 Jersey Leaked

T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2011

ಬೆಂಗಳೂರಿನಲ್ಲೊಂದು ಟೈ ರೋಮಾಂಚನ

rajani-kanth

ಮೋದಿಯೂ ವರ್ಚಸ್ವಿ ನಾಯಕ

smruthi-irani

ಬರಿಗಾಲಲ್ಲೇ ವಿನಾಯಕ ದೇಗುಲಕ್ಕೆ ತೆರಳಿದ್ದ ಸ್ಮತಿ!

Asshivrda

ಮಾಜಿ ರಾಷ್ಟ್ರಪತಿ ಪ್ರಣಬ್ ರ ಆಶೀರ್ವಾದ ಪಡೆದ ಪ್ರಧಾನಿ ನರೇಂದ್ರ ಮೋದಿ

Lalu-head-scratch-700

ರಾಜೀನಾಮೆ ನೀಡುವ ರಾಹುಲ್‌ ನಿರ್ಧಾರ ಆತ್ಮಾಹುತಿಯದ್ದು : ಲಾಲು

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.