ಕೊಪ್ಪಳದಲ್ಲಿ ಮತ್ತೆ ಕರಡಿ ಕುಣಿತ; ನಡೆಯದ ಹಿಟ್ನಾಳ್‌ ಹವಾ


Team Udayavani, May 24, 2019, 5:50 AM IST

q-34

ಕೊಪ್ಪಳ: ಬಿಸಿಲನಾಡು ಕೊಪ್ಪಳ ಲೋಕಸಭಾ ಕ್ಷೇತ್ರ ಮೂರನೇ ಅವಧಿಗೂ ಕೇಸರಿಮಯವಾಗಿದೆ. ಹಾಲಿ ಸಂಸದ ಸಂಗಣ್ಣ ಕರಡಿ ಕುಣಿತದ ನಾಗಾಲೋಟ ಮುಂದುವರಿದಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಅವರ ಪ್ರತಿಷ್ಠೆಯ ಕ್ಷೇತ್ರವಾಗಿದ್ದ ಕೊಪ್ಪಳದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ರಾಜಶೇಖರ ಹಿಟ್ನಾಳ ಸೋಲನುಭವಿಸಿದ್ದಾರೆ. ಸಂಗಣ್ಣ ಕರಡಿ ಟಿಕೆಟ್‌ ಪಡೆಯಲು ಹೈಕಮಾಂಡ್‌ ಮಟ್ಟದಲ್ಲಿ ಭಾರಿ ಪ್ರಯತ್ನ ನಡೆಸಿ ಕೊನೆಯ ಹಂತಕ್ಕೆ ಟಿಕೆಟ್‌ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದರು.

ಟಿಕೆಟ್‌ ಸಿಗುತ್ತಿದ್ದಂತೆ ತಮ್ಮ ಪಡೆಯೊಂದಿಗೆ ಎಂಟೂ
ವಿಧಾನಸಭಾ ಕ್ಷೇತ್ರದಲ್ಲಿ ಟೆಂಪಲ್‌ ರನ್‌ ನಡೆಸಿ, ಮಠಾಧಿಧೀಶರನ್ನು ಭೇಟಿ ಮಾಡಿದ್ದರು. ಕರಡಿಗೆ ಮೋದಿಯ ಅಲೆ, ಯುವಕರ ದೇಶಭಕ್ತಿಯೇ ದೊಡ್ಡ ಶಕ್ತಿಯಾಗಿ ಪರಿಣಮಿಸಿತು. ಕಾಂಗ್ರೆಸ್‌ ಅಭ್ಯರ್ಥಿ ರಾಜಶೇಖರ ಹಿಟ್ನಾಳ ಅವರು ಸಿದ್ದರಾಮಯ್ಯ ಬೆನ್ನು ಬಿದ್ದು, ನಾನಾ ಪ್ರಯತ್ನ ನಡೆಸಿ ಟಿಕೆಟ್‌ ಪಡೆಯುವಲ್ಲಿ ಯಶಸ್ವಿಯಾಗಿದ್ದರು. ಕೊನೆ ಗಳಿಗೆಯಲ್ಲಿ ಕೈ ಮುಖಂಡರಲ್ಲಿ ಟಿಕೆಟ್‌ಗೆ ನಡೆದ ಭಿನ್ನಮತ ಹಿಟ್ನಾಳ ಸೋಲಿಗೆ ಕಾರಣವಾಗಿರುವುದನ್ನು ಅಲ್ಲಗಳೆಯುವಂತಿಲ್ಲ.

ಹಿಟ್ನಾಳ ಕುಟುಂಬ ರಾಜಕಾರಣವೂ ಸೋಲಿಗೆ ಕಾರಣವಾಗಿದೆ ಎನ್ನುವ ವಿಶ್ಲೇಷಣೆ ಕ್ಷೇತ್ರದಲ್ಲಿ ನಡೆದಿದೆ.
ಒಟ್ಟಿನಲ್ಲಿ 2009ರಿಂದ ಬಿಜೆಪಿಯ ಗೆಲುವಿನ ನಾಗಾಲೋಟ ಮುಂದುವರೆದಿದ್ದು ಮೂರನೇ ಅವಧಿಗೆ ಕೊಪ್ಪಳ ಕ್ಷೇತ್ರ ಮತ್ತೆ ಕಮಲದ ಹಿಡಿತದಲ್ಲಿದೆ. ಪ್ರಧಾನಿ ಮೋದಿ ಕ್ಷೇತ್ರಕ್ಕೆ ಬಂದು ಹೋದ ಮೇಲಂತೂ ಬಿಜೆಪಿ ಅಲೆ ಜೋರಾಗಿದ್ದು, ಭಾರಿ ಪೈಪೋಟಿ ನಡೆಸಿದ್ದ ಕಾಂಗ್ರೆಸ್‌ ಹಿನ್ನಡೆ ಸಾಧಿಸಲು ಮೋದಿ
ಸಮಾವೇಶ ಕೂಡ ಪ್ರಬಲ ಕಾರಣವಾಯಿತು. ರಾಜಶೇಖರ ಹಿಟ್ನಾಳ ಎಂಟೂ ಕ್ಷೇತ್ರಗಳ ಮೇಲೆ ಭಾರಿ ನಿರೀಕ್ಷೆಯನ್ನಿಟ್ಟಿದ್ದರು. ಆದರೆ ಸಿರಗುಪ್ಪಾ ಒಂದೇ ಕ್ಷೇತ್ರದಲ್ಲಿ ಮಾತ್ರ 12 ಸಾವಿರ ಮತ ಮುನ್ನಡೆ ಪಡೆದಿದ್ದು, ಬಿಟ್ಟರೆ ಮತ್ಯಾವ ಕ್ಷೇತ್ರದಲ್ಲೂ ಮುನ್ನಡೆ ಸಿಗಲೇ ಇಲ್ಲ. ಅಚ್ಚರಿಯಂದರೆ ಸಹೋದರ ರಾಘವೇಂದ್ರ ಹಿಟ್ನಾಳ ಪ್ರತಿನಿಧಿ ಸುವ ಕೊಪ್ಪಳ ಕ್ಷೇತ್ರದಲ್ಲೇ 11,678 ಮತಗಳ ಹಿನ್ನಡೆ ಅನುಭವಿಸಿದ್ದಾರೆ. ಸಿಂಧನೂರು, ಕುಷ್ಟಗಿ, ಗಂಗಾವತಿ ಕ್ಷೇತ್ರಗಳ ಮೇಲೆ ಹೆಚ್ಚಿನ ನಿರೀಕ್ಷೆಯಿಟ್ಟಿದ್ದ ಕಾಂಗ್ರೆಸ್‌ಗೆ ಹಿನ್ನಡೆಯಾಗಿದೆ. ಸಿಂಧನೂರು ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್‌ ಶಾಸಕ ವೆಂಕಟರಾವ್‌ ನಾಡಗೌಡ ಇದ್ದರೂ ಸಹಿತ ಕಾಂಗ್ರೆಸ್‌ಗೆ ಬಲ ನೀಡಿಲ್ಲ. ಮೈತ್ರಿ ಧರ್ಮದ ಲೆಕ್ಕಾಚಾರ ಕೈ ಹಿಡಿದಿಲ್ಲ. ಸಿಂಧನೂರು ಕ್ಷೇತ್ರದಲ್ಲೂ ಕಾಂಗ್ರೆಸ್‌ 80 ಮತಗಳ ಹಿನ್ನಡೆ ಅನುಭವಿಸಿದೆ. ಉಳಿದಂತೆ ಏಳೂ ಕ್ಷೇತ್ರಗಳು ಕಾಂಗ್ರೆಸ್‌ಗೆ ಕೈ ಕೊಟ್ಟಿವೆ.

ಮೋದಿ ಅಲೆ, ಯುವಕರ ದೇಶಾಭಿಮಾನ, ನಾನು ಮಾಡಿದ ಅಭಿವೃದ್ಧಿ ಕೆಲಸಗಳಿಗೆ ಮತದಾರರು ಆಶೀರ್ವಾದ ಮಾಡಿದ್ದಾರೆ. ಅವರಿಗೆ ನಾನು ಚಿರಋಣಿಯಾಗಿದ್ದೇನೆ.
ಸಂಗಣ್ಣ ಕರಡಿ, ವಿಜೇತ ಬಿಜೆಪಿ ಅಭ್ಯರ್ಥಿ

ನೂತನ ಸಂಸದರಿಗೆ ಅಭಿನಂದನೆ. ಕ್ಷೇತ್ರದಲ್ಲಿ ಮತದಾರರ ತೀರ್ಪಿಗೆ ನಾನು ತಲೆ ಬಾಗುತ್ತೇನೆ. ಸೋಲಿನ ಕುರಿತು ಪರಾಮರ್ಶೆ ಮಾಡಬೇಕಿದೆ. ಮತದಾರರು ಕೈ ಹಿಡಿಯುವ ವಿಶ್ವಾಸವಿತ್ತು.
ರಾಜಶೇಖರ ಹಿಟ್ನಾಳ,, ಕಾಂಗ್ರೆಸ್‌ ಪರಾಜಿತ ಅಭ್ಯರ್ಥಿ

ಟಾಪ್ ನ್ಯೂಸ್

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.