ಒಡಿಶಾದಲ್ಲಿ ಮತ್ತೂಮ್ಮೆ ಬೀಸಿದ ಬಿಜೆಡಿ ಅಲೆ


Team Udayavani, May 24, 2019, 6:00 AM IST

PTI5_23_2019_000347A

ಭುವನೇಶ್ವರ: ದೇಶಾದ್ಯಂತ ನರೇಂದ್ರ ಮೋದಿ ಮೋಡಿ ಮಾಡಿದ್ದರೆ, ಒಡಿಶಾದಲ್ಲಿ ಮಾತ್ರ ನವೀನ್‌ ಪಟ್ನಾಯಕ್‌ ಅವರದ್ದೇ ಅಲೆ. ಬಿಜು ಜನತಾ ದಳ (ಬಿಜೆಡಿ)ವನ್ನು ಭಾರಿ ಬಹುಮತದೊಂದಿಗೆ ಮತ್ತೂಮ್ಮೆ ಅಧಿಕಾರಕ್ಕೆ ತರುವಲ್ಲಿ ಅವರು ಯಶಸ್ವಿಯಾಗಿದ್ದಾರೆ.

ಮೋದಿ ಅಲೆಯ ನಡುವೆಯೂ ವಿಧಾನಸಭಾ ಚುನಾವಣೆಯಲ್ಲಿ ಕಳೆದ ಬಾರಿಗಿಂತ ನವೀನ್‌ ಪಟ್ನಾಯಕ್‌ ನೇತೃತ್ವದ ಬಿಜೆಡಿ ಎರಡು ಸ್ಥಾನಗಳನ್ನು ಹೆಚ್ಚು ಗೆದ್ದು ಬೀಗಿದೆ. ಒಟ್ಟಾರೆ 146 ಸ್ಥಾನಗಳ ಪೈಕಿ 111 ಕ್ಷೇತ್ರಗಳಲ್ಲಿ ಬಿಜೆಡಿ ಗೆಲುವಿನ ನಗೆ ಬೀರಿದೆ. ಸುಮಾರು ಎರಡೂವರೆ ದಶಕಗಳಿಂದ ಒಡಿಶಾದಲ್ಲಿ ಪಾರುಪತ್ಯ ಸಾಧಿಸುತ್ತಿರುವ 72 ವರ್ಷದ ನವೀನ್‌ ಪಟ್ನಾಯಕ್‌, ಸತತ ಐದನೇ ಬಾರಿಗೆ ಒಡಿಶಾ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಲಿದ್ದಾರೆ.

ಸರ್ಕಾರ ರಚನೆಗೆ ಬಿಜೆಡಿಗೆ ಅವಶ್ಯಕತೆ ಇದ್ದದ್ದು 72 ಸ್ಥಾನಗಳು. ಆದರೆ, ಆ ಪಕ್ಷಕ್ಕೆ 111 ಸ್ಥಾನಗಳು ಲಭಿಸಿವೆ. 2014ರ ವಿಧಾನಸಭಾ ಚುನಾವಣೆಯಲ್ಲಿ 117 ಕ್ಷೇತ್ರಗಳಲ್ಲಿ ಅದು ಗೆಲುವು ಸಾಧಿಸಿತ್ತು. ಅದಕ್ಕೂ ಹಿಂದೆ 103 ಸ್ಥಾನಗಳನ್ನು ಗೆದ್ದು, ಸರ್ಕಾರ ರಚನೆ ಮಾಡಿತ್ತು. ಪ್ರತಿ ಬಾರಿಯ ಚುನಾವಣೆಯಲ್ಲಿಯೂ ನವೀನ್‌ ಪಟ್ನಾಯಕ್‌ ಅವರು ತಮ್ಮ ಜನಪ್ರಿಯತೆಯನ್ನು ಹಾಗೇ ಉಳಿಸಿಕೊಂಡಿರುವುದಕ್ಕೆ ಇದು ಸಾಕ್ಷಿಯಾಗಿದೆ. ಇನ್ನು 22 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿರುವ ಬಿಜೆಪಿ, ಇಲ್ಲಿ ಪ್ರತಿಪಕ್ಷ ಸ್ಥಾನ ಅಲಂಕರಿಸಲಿದೆ.

ಗೆದ್ದ ಪ್ರಮುಖರು

• ಅಮರ ಪ್ರಸಾದ ಸತ್ಪತಿ, ಮುಖ್ಯ ಸಚೇತಕ, (ಬಿಜೆಡಿ) ಬರ್ಚಾನಾ •ಮುಖೇಶ್‌ ಕುಮಾರ್‌ ಪಾಲ್, (ಬಿಜೆಡಿ) ಪಲ್ಲಹಾರ •ಲಕ್ಷ್ಮಣ್‌ ಮುಂಡಾ (ಐಸಿಪಿಎಂ-) ಬೊನಾಯಿ

ಸೋತ ಪ್ರಮುಖರು

•ಅಶೋಕ್‌ ಮೊಹಾಂತಿ, (ಬಿಜೆಪಿ) ಪಲ್ಲಹಾರ •ಅಮರ್‌ ಕುಮಾರ್‌ ನಾಯಕ್‌, (ಬಿಜೆಪಿ)ಬರ್ಚಾನಾ •ಅಜಯ್‌ ಕುಮಾರ್‌ ಸಮಲ್, (ಕಾಂಗ್ರೆಸ್‌) ಬರ್ಚಾನಾ

ವಿರೋಧ ಪಕ್ಷ ಸ್ಥಾನದಿಂದಲೂ ಕಾಂಗ್ರೆಸ್‌ ವಂಚಿತ!

ಕಾಂಗ್ರೆಸ್‌ಗೆ ದೇಶಾದ್ಯಂತ ಇರುವ ಸ್ಥಿತಿಯೇ ಒಡಿಶಾದಲ್ಲೂ ಇದೆ. ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಮತ್ತಷ್ಟು ಕಳಪೆ ಪ್ರದರ್ಶನ ನೀಡಿದ ಕಾಂಗ್ರೆಸ್‌, ಅಧಿಕೃತ ವಿರೋಧ ಪಕ್ಷದ ಸ್ಥಾನವನ್ನೂ ಕಳೆದುಕೊಂಡಿದೆ. ಕಳೆದ ಬಾರಿ 16 ಸ್ಥಾನಗಳನ್ನು ಗಳಿಸಿದ್ದ ಕಾಂಗ್ರೆಸ್‌, ಈ ಬಾರಿ 11ಕ್ಕೆ ಕುಸಿದಿದೆ. ಇನ್ನು, 10 ಸ್ಥಾನಗಳನ್ನು ಗೆದ್ದು, ಈ ಮೊದಲು ಮೂರನೇ ಸ್ಥಾನದಲ್ಲಿದ್ದ ಬಿಜೆಪಿ, ಈ ಬಾರಿ 22 ಸ್ಥಾನಗಳಲ್ಲಿ ಜಯ ಗಳಿಸಿ ಪ್ರತಿಪಕ್ಷ ಸ್ಥಾನ ಅಲಂಕರಿಸಿದೆ.

ಸತತ ಎರಡನೇ ಬಾರಿಗೆ ಮೋದಿ ಅಲೆಯನ್ನು ಮೀರಿ ನವೀನ್‌ ಅಧಿಕಾರದ ಚುಕ್ಕಾಣಿ ಹಿಡಿಯುತ್ತಿದ್ದಾರೆ. ಇದರರ್ಥ ರಾಷ್ಟ್ರೀಯ ಟ್ರೆಂಡ್‌ನ್ನು ಕೂಡ ನಾವು ಹಿಂದಿಕ್ಕಿದ್ದೇವೆ.
– ಅಮರ್‌ ಪಟ್ನಾಯಕ್‌, ಬಿಜೆಡಿ ವಕ್ತಾರ

ಟಾಪ್ ನ್ಯೂಸ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2011

ಬೆಂಗಳೂರಿನಲ್ಲೊಂದು ಟೈ ರೋಮಾಂಚನ

rajani-kanth

ಮೋದಿಯೂ ವರ್ಚಸ್ವಿ ನಾಯಕ

smruthi-irani

ಬರಿಗಾಲಲ್ಲೇ ವಿನಾಯಕ ದೇಗುಲಕ್ಕೆ ತೆರಳಿದ್ದ ಸ್ಮತಿ!

Asshivrda

ಮಾಜಿ ರಾಷ್ಟ್ರಪತಿ ಪ್ರಣಬ್ ರ ಆಶೀರ್ವಾದ ಪಡೆದ ಪ್ರಧಾನಿ ನರೇಂದ್ರ ಮೋದಿ

Lalu-head-scratch-700

ರಾಜೀನಾಮೆ ನೀಡುವ ರಾಹುಲ್‌ ನಿರ್ಧಾರ ಆತ್ಮಾಹುತಿಯದ್ದು : ಲಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.