ದಿಲ್ಲಿ ವರೆಗೆ ಶೋಭಾ ಪಯಣ


Team Udayavani, May 24, 2019, 6:05 AM IST

shobha–2

ಉಡುಪಿ: ದ್ವಿತೀಯ ಬಾರಿಗೆ ಪುನರಾಯ್ಕೆಯಾದ ಶೋಭಾ ಕರಂದ್ಲಾಜೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಚಾರ್ವಾಕ ಮೂಲದವರು. ಬೆಂಗಳೂರು ಮತ್ತು ಮಣಿಪಾಲದಲ್ಲಿ ಉದ್ಯೋಗಿಯಾಗಿದ್ದರು. ಬಿಜೆಪಿ ಉಡುಪಿ ನಗರ, ಬಳಿಕ ಜಿಲ್ಲಾ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾದರು, ಪ್ರಸ್ತುತ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ.

ಸುನಾಮಿ ಸಂದರ್ಭ
ಸುನಾಮಿ ದುರಂತ ಸಂದರ್ಭ ತಮಿಳುನಾಡಿನ ನಾಗಪಟ್ಟಣಂಗೆ ಧಾವಿಸಿ ನೆರವು ಕಾರ್ಯಗಳಲ್ಲಿ ಭಾಗಿಯಾಗಿದ್ದರು. ರಾಜ್ಯ 2009ರಲ್ಲಿ ಭೀಕರ ನೆರೆ ಹಾವಳಿಗೆ ತುತ್ತಾದಾಗ ಮಂತ್ರಾಲಯ, ರಾಯಚೂರು ಜಿಲ್ಲೆಗಳಿಗೆ ಧಾವಿಸಿ ಪರಿಹಾರ ಕಾರ್ಯಗಳಲ್ಲಿ ತೊಡಗಿದ್ದರು. ಶಬರಿಮಲೆಯಲ್ಲಿ 2010ರಲ್ಲಿ ಕಾಲು¤ಳಿತ ನಡೆದಾಗಲೂ ಧಾವಿಸಿ ಸೇವೆಗಳಲ್ಲಿ ತೊಡಗಿದ್ದರು.

ಎಂಡೋ ಪೀಡಿತರ ಸೇವೆ
ಅಧಿಕಾರ ಇಲ್ಲದಾಗಲೂ ಎಂಡೋಪೀಡಿತ ಪ್ರದೇಶಗಳಲ್ಲಿ ಅಂಗವಿಕಲರ ಸಂಕಷ್ಟಗಳನ್ನು ಸರಕಾರದ ಗಮನಕ್ಕೆ ತಂದು ಪರಿಹಾರ ಮತ್ತು ಮಾಸಾಶನ ಕೊಡಿಸುವಲ್ಲಿ ಯಶಸ್ವಿಯಾದರು.

ಮೈಸೂರಿನ ಉಸ್ತುವಾರಿ ಸಚಿವೆಯಾಗಿ ಅವರು ನಡೆಸಿದ ಅದ್ದೂರಿ ದಸರಾ ವಿಶ್ವದ ಗಮನ ಸೆಳೆದಿತ್ತು. ಮೈಸೂರು, ತಲಕಾಡಿನ ಅಭಿವೃದ್ಧಿಗಾಗಿ ಗುಣಮಟ್ಟದ ಕಾಮಗಾರಿ ನಡೆಯುವಂತೆ ಮಾಡಿದರು.

ಪಂ.ರಾಜ್‌ ಇಲಾಖೆ ನಂ. 1
ಗ್ರಾಮೀಣಾಭಿವೃದ್ಧಿ ಮತ್ತು ಪಂ.ರಾಜ್‌ ಸಚಿವೆಯಾಗಿ ಗ್ರಾಮೀಣ ಪ್ರದೇಶದ ಅಭಿವೃದ್ಧಿಯಲ್ಲಿ ಆ ವರ್ಷದಲ್ಲಿ ನಮ್ಮ ರಾಜ್ಯ ನಂ. 1 ಆಗುವ ಅದ್ಭುತ ಸಾಧನೆ ಮಾಡಿದರು. ಇಂಧನ ಸಚಿವೆಯಾಗಿ ವಿದ್ಯುತ್‌ ಉತ್ಪಾದನೆ ಮತ್ತು ವಿತರಣೆ ಕಡೆಗೆ ವಿಶೇಷ ಗಮನ ನೀಡಿದರು.

ನಕಲಿ ಪಡಿತರ ಚೀಟಿ ಪತ್ತೆ
ಆಹಾರ ಮತ್ತು ನಾಗರಿಕ ಪೂರೈಕೆ ಸಚಿವೆಯಾಗಿ ಇಲಾಖೆಯಲ್ಲಿ ಪಾರದರ್ಶಕತೆ ತಂದರು. ಇದು ಮುಂದೆ ದೇಶಕ್ಕೆ ಮಾದರಿಯಾಯಿತು. ಗ್ರಾಮೀಣಾಭಿವೃದ್ಧಿ ಮತ್ತು ಪಂ.ರಾಜ್‌ ಇಲಾಖೆಯಲ್ಲಿ ಕಡಿಮೆ ಅವಧಿಯಲ್ಲಿ ಕೂಡ ಆ ಇಲಾಖೆಗಳಿಗೆ ಹೊಸ ಕಾಯಕಲ್ಪ ನೀಡಿದ್ದರು.

ಸಂಸದೆಯಾಗಿ ಸಾಧನೆ
ಉಡುಪಿ ಜಿಲ್ಲೆಯಲ್ಲಿ ಕೇಂದ್ರೀಯ ವಿದ್ಯಾಲಯ ಆರಂಭಿಸಿದ್ದು, ರಾ. ಹೆದ್ದಾರಿಗಳ ಉನ್ನತೀಕರಣ, ವಿವಿಧ ರಾಜ್ಯ ಹೆದ್ದಾರಿಗಳು ಮತ್ತು ಜಿಲ್ಲಾ ಮುಖ್ಯ
ರಸ್ತೆಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆ ಗೇರಿಸುವ ಕೆಲಸ ಮಾಡಿದರು. ಕೇಂದ್ರ ಪುರಸ್ಕೃತ ಅಭಿವೃದ್ಧಿ ಯೋಜನೆಗಳ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಅಧ್ಯಕ್ಷೆಯಾಗಿ ಉದ್ಯೋಗ ಖಾತರಿ ಯೋಜನೆ ಅನುಷ್ಠಾನದಲ್ಲಿ ಕೊನೆಯ ಸ್ಥಾನದಲ್ಲಿದ್ದ ಉಡುಪಿ ಜಿಲ್ಲೆಯನ್ನು ರಾಜ್ಯದಲ್ಲಿಯೇ  ಮೊದಲ ಸ್ಥಾನಕ್ಕೇರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಟಾಪ್ ನ್ಯೂಸ್

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2011

ಬೆಂಗಳೂರಿನಲ್ಲೊಂದು ಟೈ ರೋಮಾಂಚನ

rajani-kanth

ಮೋದಿಯೂ ವರ್ಚಸ್ವಿ ನಾಯಕ

smruthi-irani

ಬರಿಗಾಲಲ್ಲೇ ವಿನಾಯಕ ದೇಗುಲಕ್ಕೆ ತೆರಳಿದ್ದ ಸ್ಮತಿ!

Asshivrda

ಮಾಜಿ ರಾಷ್ಟ್ರಪತಿ ಪ್ರಣಬ್ ರ ಆಶೀರ್ವಾದ ಪಡೆದ ಪ್ರಧಾನಿ ನರೇಂದ್ರ ಮೋದಿ

Lalu-head-scratch-700

ರಾಜೀನಾಮೆ ನೀಡುವ ರಾಹುಲ್‌ ನಿರ್ಧಾರ ಆತ್ಮಾಹುತಿಯದ್ದು : ಲಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.