ಕಾಂಗ್ರೆಸ್‌ ಪಾಳಯದಲ್ಲೀಗ ಅಸಹನೀಯ ಮೌನ “ರಾಗಾ’!


Team Udayavani, May 24, 2019, 6:00 AM IST

q-43

ನವದೆಹಲಿ: ಸತತ ಎರಡು ತಿಂಗಳ ಚುನಾವಣೆ ಪ್ರಚಾರ ರ್ಯಾಲಿಗಳಲ್ಲಿ “ಚೌಕಿದಾರ್‌ ಚೋರ್‌ ಹೈ’ ಎಂದು ಅಬ್ಬರಿಸಿದ ಕಾಂಗ್ರೆಸ್‌ ಪಾಳಯದಲ್ಲೀಗ ಮೌನರಾಗ! ದೇಶದೆಲ್ಲೆಡೆ ಉತ್ತಮ ಫ‌ಲಿತಾಂಶದ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್‌ ಮುಖಂಡರ ನಿರೀಕ್ಷೆಗಳೆಲ್ಲಾ ಹುಸಿಯಾಗಿದ್ದು, ಕಾಂಗ್ರೆಸ್‌ನ ಅದರಲ್ಲೂ ಗಾಂಧಿ ಕುಟುಂಬದ ಭದ್ರ ಕೋಟೆಯೇ ಆಗಿದ್ದ ಅಮೇಥಿಯಲ್ಲಿ ಸ್ವತಃ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿಯೇ ಸೋಲನು ಭವಿಸಿರುವುದು ಪಕ್ಷಕ್ಕಾದ ದೊಡ್ಡ ಹಿನ್ನಡೆ ಎಂದೇ ವಿಶ್ಲೇಷಿಸಲಾಗುತ್ತಿದೆ.
2009ರ ಚುನಾವಣೆ ನಂತರ ಸತತ ಎರಡು ದೊಡ್ಡ ಮಟ್ಟದ ಸೋಲುಂಡು ಕಂಗೆಟ್ಟಿರುವ ಕೈ ಮುಖಂಡರು ಈಗ ಆತ್ಮಾವಲೋಕನಕ್ಕೆ ನಿಂತಿದ್ದಾರೆ.

ಇತ್ತ, ಬೆಳಗ್ಗೆ 11 ಗಂಟೆ ಸುಮಾರಿಗೆ ಎನ್‌ಡಿಎ 300ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುತ್ತಿದ್ದಂತೆ ದೆಹಲಿಯಲ್ಲಿನ ರಾಹುಲ್‌ ಗಾಂಧಿ ನಿವಾಸಕ್ಕೆ ತೆರಳಿದ ಸಹೋದರಿ ಪ್ರಿಯಾಂಕ ವಾದ್ರಾ, ಸಹೋದರನೊಂದಿಗೆ ಕೆಲ ಕಾಲ ಚರ್ಚಿಸಿದರು. ಇದಾದ ಕೆಲವೇ ಗಂಟೆಗಳಲ್ಲಿ ಸೋನಿಯಾ ಗಾಂಧಿ ಅವರನ್ನು ಭೇಟಿಯಾದ ರಾಹುಲ್‌ ಹಾಗೂ ಪ್ರಿಯಾಂಕ, ಪಕ್ಷದ ದಯನೀಯ ಸೋಲಿನ ಕುರಿತು ಅರ್ಧ ಗಂಟೆಗೂ ಹೆಚ್ಚು ಸಮಯ ಚರ್ಚಿಸಿದರು ಎನ್ನಲಾಗಿದೆ.

ಮೂಲಗಳ ಪ್ರಕಾರ ಕಾಂಗ್ರೆಸ್‌ ಇಷ್ಟೊಂದು ಹೀನಾಯ ಸೋಲನ್ನು ನಿರೀಕ್ಷಿಸಿರಲಿಲ್ಲ. ಅದರಲ್ಲೂ ತನ್ನ ಆಡಳಿತವಿರುವ ಕರ್ನಾಟಕ, ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಾದರೂ ಪಕ್ಷ ಉತ್ತಮ ಸಾಧನೆ ತೋರಬಹುದು ಎಂಬ ಗಾಂಧಿ ಕುಟುಂ ಬದ ನಿರೀಕ್ಷೆ ಕೂಡ ಹುಸಿಯಾಗಿದೆ.

ಈ ನಡುವೆ ದೇಶದೆಲ್ಲೆಡೆ ಕಾಂಗ್ರೆಸ್‌ಗೆ ಭಾರೀ ಹಿನ್ನಡೆಯಾಗುತ್ತಿರುವಂತೆ ದೆಹಲಿಯಲ್ಲಿನ ಎಐಸಿಸಿ ಕಚೇರಿ ಸೇರಿದಂತೆ ಬಹುತೇಕ ಎಲ್ಲ ರಾಜ್ಯಗಳ ಕಾಂಗ್ರೆಸ್‌ ಕಚೇರಿಗಳಲ್ಲಿ ಮೌನ ಆವರಿಸಿತ್ತು. ಒಂದೆಡೆ ಬಿಜೆಪಿ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿದ್ದರೆ, ಕಾಂಗ್ರೆಸಿಗರು ಮೌನರಾಗದ ಮೊರೆ ಹೋಗಿದ್ದರು.

ಡಿಸೆಂಬರ್‌ ಸಂಭ್ರಮ ಮಾಯ: 2018ರ ಡಿಸೆಂಬರ್‌ನಲ್ಲಿ ನಡೆದ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಉತ್ತಮ ಫ‌ಲಿತಾಂಶವನ್ನೇ ಪಡೆದಿದ್ದ ಕಾಂಗ್ರೆಸ್‌, ಕೇವಲ ಐದು ತಿಂಗಳ ಅಂತರದಲ್ಲಿ ರಾಜಸ್ಥಾನ ಹಾಗೂ ಮಧ್ಯ ಪ್ರದೇಶಗಳಲ್ಲಿ ಹೀನಾಯ ಸೋಲನುಭವಿಸಿದೆ. ತೆಲಂಗಾಣದಲ್ಲಿ ಎನ್‌ಡಿಎ 5 ಸ್ಥಾನ ಗಳಿಸಿರುವುದೂ ಕಾಂಗ್ರೆಸ್‌ ಪಾಲಿಗೆ ನುಂಗಲಾರದ ತುತ್ತಾಗಿದೆ.

8 ಕ್ಷೇತ್ರಗಳ ಸೋಲಿನ ಹೊಣೆ
ಈ ನಡುವೆ ಉತ್ತರ ಪ್ರದೇಶದಲ್ಲಿ ಮಹಾಘಟಬಂಧನ್‌ 8 ಕ್ಷೇತ್ರಗಳಲ್ಲಿ ಸೋಲನುಭವಿಸಲು ಕಾಂಗ್ರೆಸ್‌ ಕಾರಣ ಎಂದು ಮಿತ್ರಪಕ್ಷಗಳು ನೇರ ಆರೋಪ ಮಾಡಿವೆ. ಬಿಜೆಪಿಯ ಮನೇಕಾ ಗಾಂಧಿ ಸ್ಪರ್ಧಿಸಿ ಗೆದ್ದಿರುವ ಸುಲ್ತಾನ್‌ಪುರ, ಬರಾಬಂಕಿ, ಬಿಜೂರ್‌, ಧರೂರಹಾ, ಕೈರಾಣ, ಶರಾವಸ್ತಿ ಮತ್ತು ಸೀತಾಪುರದಲ್ಲಿ ಘಟಬಂಧನ್‌ ಅಭ್ಯರ್ಥಿಗಳು ಸೋಲಲು ಕಾಂಗ್ರೆಸ್‌ ಕಾರಣ ಎನ್ನಲಾಗಿದೆ.

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2011

ಬೆಂಗಳೂರಿನಲ್ಲೊಂದು ಟೈ ರೋಮಾಂಚನ

rajani-kanth

ಮೋದಿಯೂ ವರ್ಚಸ್ವಿ ನಾಯಕ

smruthi-irani

ಬರಿಗಾಲಲ್ಲೇ ವಿನಾಯಕ ದೇಗುಲಕ್ಕೆ ತೆರಳಿದ್ದ ಸ್ಮತಿ!

Asshivrda

ಮಾಜಿ ರಾಷ್ಟ್ರಪತಿ ಪ್ರಣಬ್ ರ ಆಶೀರ್ವಾದ ಪಡೆದ ಪ್ರಧಾನಿ ನರೇಂದ್ರ ಮೋದಿ

Lalu-head-scratch-700

ರಾಜೀನಾಮೆ ನೀಡುವ ರಾಹುಲ್‌ ನಿರ್ಧಾರ ಆತ್ಮಾಹುತಿಯದ್ದು : ಲಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.