ಮಂಡ್ಯದಲ್ಲಿ ಜೆಡಿಎಸ್- ಸುಮಲತಾ ಬೆಂಬಲಿಗರ ನಡುವೆ ಘರ್ಷಣೆ
ಬಿಯರ್ ಬಾಟಲ್,ಚೂರಿಯಿಂದ ಹಲ್ಲೆ
Team Udayavani, May 24, 2019, 10:17 AM IST
ಮಂಡ್ಯ: ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟವಾದ ಬೆನ್ನಲ್ಲೆ ಮದ್ದೂರಿನಲ್ಲಿ ಪಕ್ಷೇತರ ಸಂಸದೆ ಸುಮಲತಾ ಬೆಂಬಲಿಗರು ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ.
ಕೊಳಗೆರೆ ಗೇಟ್ ಬಳಿ ಘರ್ಷಣೆ ನಡೆದಿದ್ದು, ಬಿಯರ್ ಬಾಟಲಿಗಳು, ಚೂರಿ ಹಿಡಿದು ಹೊಡೆದಾಟ ನಡೆಸಲಾಗಿದೆ. ಗಲಾಟೆ ನಡೆಯುತ್ತಿದ್ದಂತೆ ತಕ್ಷಣ ಪೊಲೀಸರು ಸ್ಥಳಕ್ಕಾಗಮಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ.
ಜಿಲ್ಲಾದ್ಯಂತ ನಿಷೇಧಾಜ್ಞೆ ಜಾರಿ ಮಾಡಲಾಗಿದ್ದು ಎಲ್ಲೆಡೆ ಕಟ್ಟೆಚ್ಚರ ವಹಿಸಲಾಗಿದೆ.
ರಾಜ್ಯದಲ್ಲೇ ಹೈವೋಲ್ಟೇಜ್ ಕದನಕ್ಕೆ ಸಾಕ್ಷಿಯಾಗಿದ್ದ ಮಂಡ್ಯ ಕ್ಷೇತ್ರದಲ್ಲಿ ಹೆಚ್ಚುವರಿ ಭದ್ರತೆ ಕೈಗೊಳ್ಳಲಾಗಿದೆ.
ಸಮಲತಾ ಅವರು ಜೆಡಿಎಸ್ನ ನಿಖೀಲ್ ಕುಮಾರಸ್ವಾಮಿ ವಿರುದ್ಧ 1,25,876 ಮತಗಳ ಅಂತರದಿಂದ ಅಭೂತಪೂರ್ವ ಗೆಲುವು ದಾಖಲಿಸಿದ್ದರು.