ಗಣಿನಾಡಲ್ಲಿ ಗೆದ್ದು ಬೀಗಿದ ದೇವೇಂದ್ರಪ್ಪ

ದಾಖಲೆ ವೀರಗೆ ಸೋಲಿನ ಉಡುಗೊರೆ•ಸ್ಥಳೀಯ ಅಭ್ಯರ್ಥಿಯ ಬೆನ್ನಿಗೆ ನಿಂತ ಮತದಾರ

Team Udayavani, May 24, 2019, 11:30 AM IST

24-May-12

ಬಳ್ಳಾರಿ: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸುತ್ತಿದ್ದಂತೆ ಕಾರ್ಯಕರ್ತರ ಸಂಭ್ರಮಾಚರಣೆ.

ಬಳ್ಳಾರಿ: ಗಣಿನಾಡು ಬಳ್ಳಾರಿ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವೈ.ದೇವೇಂದ್ರಪ್ಪ ಪ್ರತಿಸ್ಪರ್ಧಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ವಿ.ಎಸ್‌.ಉಗ್ರಪ್ಪ ವಿರುದ್ಧ 54,304 ಮತಗಳ ಅಂತರದಿಂದ ಭರ್ಜರಿ ಜಯ ದಾಖಲಿಸಿದ್ದು, ಉಪ ಚುನಾವಣೆಯಲ್ಲಿ ಗೆದ್ದಿದ್ದ ದಾಖಲೆ ವೀರ ಉಗ್ರಪ್ಪರಿಗೆ ಸಾರ್ವತ್ರಿಕ ಚುನಾವಣೆಯಲ್ಲಿ ಭಾರೀ ಮುಖಭಂಗವಾಗಿದೆ.

ಕಳೆದ ಉಪ ಚುನಾವಣೆಯಲ್ಲಿ ಆರಂಭದಿಂದಲೂ ಪ್ರತಿ ಸುತ್ತಿನ ಮತಗಳ ಎಣಿಕೆಯಲ್ಲೂ ಮುನ್ನಡೆ ಸಾಧಿಸಿದ್ದ ಕಾಂಗ್ರೆಸ್‌ ಅಭ್ಯರ್ಥಿ ವಿ.ಎಸ್‌.ಉಗ್ರಪ್ಪರಿಗೆ ಸಾರ್ವತ್ರಿಕ ಚುನಾವಣೆಯಲ್ಲಿ ಆರಂಭದಲ್ಲೇ ಹಿನ್ನಡೆ ಅನುಭವಿಸಿದರು. ಆರಂಭದ ಅಂಚೆ ಮತಗಳ ಎಣಿಕೆಯಲ್ಲಿ ಉಗ್ರಪ್ಪರಿಗೆ 3080, ಬಿಜೆಪಿಯ ವೈ.ದೇವೇಂದ್ರಪ್ಪರಿಗೆ 4579 ಮತಗಳು ಲಭಿಸಿದ್ದು, 1499 ಮತಗಳ ಮುನ್ನಡೆ ಸಾಧಿಸಿದ್ದರು. ನಂತರ ಆರಂಭವಾದ ವಿದ್ಯುನ್ಮಾನ ಮತಗಳ ಎಣಿಕೆಯಲ್ಲೂ ದೇವೇಂದ್ರಪ್ಪ ಅಲ್ಪ ಪ್ರಮಾಣದ ಮತಗಳ ಮುನ್ನಡೆಯ ನಾಗಾಲೋಟ ಮುಂದುವರಿಸಿದರು. ಮೊದಲ ಸುತ್ತಿನಲ್ಲಿ 34,770 ಮತಗಳನ್ನು ಪಡೆದ ದೇವೇಂದ್ರಪ್ಪ, 33,220 ಮತ ಗಳಿಸಿದ ಉಗ್ರಪ್ಪರಿಗಿಂತ 1,550 ಮತಗಳ ಮುನ್ನಡೆಯಾದರು. ಎರಡನೇ ಸುತ್ತಿನಿಂದ ಸತತ ಆರು ಸುತ್ತುಗಳವರೆಗೆ ಪ್ರತಿ ಸುತ್ತಿನಲ್ಲೂ ಹೆಚ್ಚು ಮತಗಳನ್ನು ಗಳಿಸುವ ಮೂಲಕ ಮುನ್ನಡೆ ಕಾಯ್ದುಕೊಂಡಿದ್ದ ದೇವೇಂದ್ರಪ್ಪ, 7ನೇ ಸುತ್ತಿನಲ್ಲಿ ಹಿನ್ನಡೆ ಅನುಭವಿಸಿದರು. ಕಾಂಗ್ರೆಸ್‌ನ ವಿ.ಎಸ್‌.ಉಗ್ರಪ್ಪ 746 ಮತಗಳ ಮುನ್ನಡೆ ಸಾಧಿಸಿದರು. ಇನ್ನು ಮುಂದೆ ಉಗ್ರಪ್ಪನವರೇ ಮುನ್ನಡೆ ಸಾಧಿಸಿ ಅಂತಿಮವಾಗಿ ಜಯ ಗಳಿಸಲಿದ್ದಾರೆ ಎಂಬ ನಿರೀಕ್ಷೆಯಲ್ಲಿದ್ದ ಕಾರ್ಯಕರ್ತರಿಗೆ 8ನೇ ಸುತ್ತಿನಲ್ಲಿ ಬಿಜೆಪಿಯ ದೇವೇಂದ್ರಪ್ಪ ಪುನಃ ಮುನ್ನಡೆಯಾಗಿ ಶಾಕ್‌ ನೀಡಿದರು. 8ನೇ ಸುತ್ತಿನಲ್ಲಿ ಕಾಂಗ್ರೆಸ್‌ನ ಉಗ್ರಪ್ಪಗೆ 2,67,749 ಮತಗಳ ಲಭಿಸಿದ್ದು, ಬಿಜೆಪಿಯ ದೇವೇಂದ್ರಪ್ಪರಿಗೆ 2,71,651 ಮತಗಳು ಲಭಿಸಿ, 3902 ಮತಗಳ ಮುನ್ನಡೆ ಸಾಧಿಸಿದರು.

ಇನ್ನು 9ನೇ ಸುತ್ತಿನಿಂದ ದೇವೇಂದ್ರಪ್ಪ ಎಲ್ಲೂ ಹಿಂತಿರುಗಿ ನೋಡಿದ್ದೇ ಇಲ್ಲ. 9ನೇ ಸುತ್ತಿನಲ್ಲಿ 9937 ಇದ್ದ ಅಂತರ 10ನೇ ಸುತ್ತಿಗೆ 14,529ಕ್ಕೆ, 11ನೇ ಸುತ್ತಿಗೆ 21,099, 12ನೇ ಸುತ್ತಿಗೆ 28,899 ಮತಗಳಿಗೆ ಏರಿಕೆಯಾಯಿತು. ಬಿಜೆಪಿಯ ಅಂತರ ಹೆಚ್ಚುತ್ತಿದ್ದಂತೆ ಕಮಲ ಪಾಳೆಯದಲ್ಲಿ ಗೆಲುವಿನ ನಗೆ ಬೀರಿದರೆ, ಸೋಲನ್ನು ಖಚಿತಪಡಿಸಿಕೊಂಡ ಕಾಂಗ್ರೆಸ್‌ ಅಭ್ಯರ್ಥಿ ವಿ.ಎಸ್‌.ಉಗ್ರಪ್ಪ ಎಣಿಕೆ ಕೇಂದ್ರದಿಂದ ಹೊರನಡೆದರು. ಪ್ರತಿ ಸುತ್ತಿನಲ್ಲಿ ಕಾಂಗ್ರೆಸ್‌ಗಿಂತ ಬಿಜೆಪಿ ಪಕ್ಷಕ್ಕೆ ಸರಾಸರಿ 4 ಸಾವಿರಕ್ಕೂ ಹೆಚ್ಚು ಮತಗಳು ಲಭಿಸುತ್ತಿದ್ದುದು ಬಿಜೆಪಿ ಅಂತರ ಕುಸಿಯದಿರಲು ಕಾರಣವಾಯಿತು. ಅಂತಿಮವಾಗಿ 19 ಸುತ್ತುಗಳ ಮುಕ್ತಾಯಕ್ಕೆ ಕಾಂಗ್ರೆಸ್‌ನ ವಿ.ಎಸ್‌.ಉಗ್ರಪ್ಪರಿಗೆ 5,60,681 ಮತಗಳು, ಬಿಜೆಪಿಯ ದೇವೇಂದ್ರಪ್ಪಗೆ 6,16,388 ಮತಗಳು ಲಭಿಸಿ 55,707 ಮತಗಳ ಅಂತರದಿಂದ ಭರ್ಜರಿ ಜಯ ದಾಖಲಿಸಿದರು. ಕೇವಲ 7 ತಿಂಗಳ ಮಟ್ಟಿಗೆ ಕಾಂಗ್ರೆಸ್‌ ವಶದಲ್ಲಿದ್ದ ಜಿಲ್ಲೆಯ ಲೋಕಸಭೆ ಕ್ಷೇತ್ರದ ಮೇಲೆ ಪುನಃ ಕಮಲ ಅರಳಿಸಿದರು.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.