ತೆಲಂಗಾಣದಲ್ಲಿ ಕೆಸಿಆರ್‌ ಗರ್ವಭಂಗ

ಭಗ್ನವಾಯಿತು ಕಿಂಗ್‌ಮೇಕರ್‌ ಆಗುವ ಕನಸು

Team Udayavani, May 24, 2019, 1:21 PM IST

tl

ಕಳೆದ ವರ್ಷದ ಡಿಸೆಂಬರ್‌ನಲ್ಲಿ ತೆಲಂಗಾಣ ವಿಧಾನ  ಸಭೆಗೆ ನಡೆದಿದ್ದ ಚುನಾವಣೆಯಲ್ಲಿ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್‌) ಭರ್ಜರಿ ಜಯ ಸಾಧಿಸಿತ್ತು. 119 ವಿಧಾನಸಭಾ ಕ್ಷೇತ್ರಗಳ ಪೈಕಿ 88ರಲ್ಲಿ ಹಾಲಿ ಆಡಳಿತ ಪಕ್ಷ ಗೆದ್ದಿತ್ತು. ಅದೇ ಮಾದರಿಯಲ್ಲಿ 17ರ ಪೈಕಿ 16ನ್ನು ಅನಾಯಾಸವಾಗಿ ಗೆದ್ದುಕೊಳ್ಳಬಹುದು ಎಂದು ನಿರೀಕ್ಷೆ ಮಾಡಿದ್ದರು. ಆದರೆ ಅವರ ನಿರೀಕ್ಷೆ ಸುಳ್ಳಾಗಿದೆ. ಟಿಆರ್‌ಎಸ್‌ 10 ಕ್ಷೇತ್ರಗಳಲ್ಲಿ ಗೆದ್ದರೆ, ಚಂದ್ರಶೇಖರ ರಾವ್‌ ಅವರ ಭದ್ರ ಕೋಟೆಯಲ್ಲಿ ಬಿಜೆಪಿ-4, ಕಾಂಗ್ರೆಸ್‌-3, ಎಐಎಂಐಎಂ-1 ಕ್ಷೇತ್ರಗಳಲ್ಲಿ ಗೆದ್ದುಕೊಂಡಿದೆ.

ಅಡಿಲಾಬಾದ್‌ನಲ್ಲಿ ಬಿಜೆಪಿಯ ಸೋಯಂ ಬಾಪು ರಾವ್‌ ಟಿಆರ್‌ಎಸ್‌ನ ಗೋಡಂ ನಾಗೇಶ್‌ ವಿರುದ್ಧ, ನಿಜಾಮಾಬಾದ್‌ನಲ್ಲಿ ಬಿಜೆಪಿಯ ಅರ ವಿಂದ ಧರ್ಮಪುರಿ ಟಿಆರ್‌ಎಸ್‌ ಅಭ್ಯರ್ಥಿ, ಹಾಲಿ ಸಂಸದೆ ಕೆ.ಕವಿತಾ ವಿರುದ್ಧ ಗೆಲವು ಸಾಧಿಸಿದ್ದಾರೆ. ಟಿಆರ್‌ಎಸ್‌ನ ಪ್ರಮುಖ ನಾಯಕ, ಹಾಲಿ ಸಂಸದ ವಿನೋದ್‌ ಕುಮಾರ್‌ ಬಿನಪ್ಪಲ್ಲಿ ಬಿಜೆಪಿಯ ಬಂಡಿ ಸಂಜಯ ಕುಮಾರ್‌ ವಿರುದ್ಧ ಕರೀಂನಗರ್‌ನಲ್ಲಿ ಸೋಲು ಅನುಭವಿಸಿದ್ದಾರೆ. ಇನ್ನು ಸಿಕಂದರಾಬಾದ್‌ನಲ್ಲಿ ಜಿ.ಕಿಶನ್‌ ರೆಡ್ಡಿ ಜಯ ಸಾಧಿಸಿದ್ದಾರೆ.

ನಲಗೊಂಡಾದಲ್ಲಿ ಕಾಂಗ್ರೆಸ್‌ನ ಉತ್ತಮ ಕುಮಾರ್‌ ರೆಡ್ಡಿ ಗುತ್ತ ಸುಖೇಂದರ್‌ ರೆಡ್ಡಿ ವಿರುದ್ಧ ಜಯಸಾಧಿಸಿದ್ದಾರೆ. ಬೋಂಗಿರ್‌ನಲ್ಲಿ ಕಾಂಗ್ರೆಸ್‌ನ ಕೋಮಟಿ ರೆಡ್ಡಿ ವೆಂಕಟ ರೆಡ್ಡಿ ಟಿಆರ್‌ಎಸ್‌ನ ಡಾ. ಬೂರಾ ನರಸಯ್ಯ ಗೌಡ್‌ ವಿರುದ್ಧ ಜಯ ಸಾಧಿಸಿ ದ್ದಾರೆ. ಇತ್ತೀಚೆಗೆ ಪ್ರಕಟವಾಗಿರುವ ಚುನಾವಣೋತ್ತರ ಸಮೀಕ್ಷೆಗಳಲ್ಲಿಯೂ ಕೂಡ ಟಿಆರ್‌ಎಸ್‌ ಉತ್ತಮ ಸಾಧನೆ ಮಾಡಲಿದೆ ಎಂದು ಪ್ರಸ್ತಾಪ ಮಾಡಲಾಗಿತ್ತು. ಫೆಡರಲ್‌ ಫ್ರಂಟ್‌ ರಚನೆ ಮಾಡುವ ಉದ್ದೇಶದಿಂದಲೇ ಹೈದರಾಬಾದ್‌ ಲೋಕಸಭಾ ಕ್ಷೇತ್ರದಲ್ಲಿ ಅಸಾದುದ್ದೀನ್‌ ಒವೈಸಿ ಅವರ ಎಎಂಐಎಂ ಪಕ್ಷದ ಜತೆಗೆ ಹೊಂದಾಣಿಕೆ ಮಾಡಿಕೊಂಡಿದ್ದರು ಮತ್ತು ಆ ಕ್ಷೇತ್ರದಲ್ಲಿ ಟಿಆರ್‌ಎಸ್‌ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿರಲಿಲ್ಲ.

ಸೋತ ಕವಿತಾ
ನಿಜಾಮಾಬಾದ್‌ ಕ್ಷೇತ್ರದಲ್ಲಿ ಪ್ರಮುಖ ಪಕ್ಷಗಳ ಅಭ್ಯರ್ಥಿಗಳಲ್ಲದೆ, 185 ಮಂದಿ ರೈತರು ಕಣದಲ್ಲಿದ್ದರು. ಕೆಂಪು ಜೋಳಕ್ಕೆ ತೆಲಂಗಾಣ ಸರ್ಕಾರ ಸೂಕ್ತ ರೀತಿಯ ಬೆಲೆ ನೀಡಲಿಲ್ಲ ಎಂದು ಆರೋಪಿಸಿ ರೈತರು ಸ್ಪರ್ಧೆ ಮಾಡಿದ್ದರು. ಈ ಕ್ಷೇತ್ರದಿಂದ ಸ್ಪರ್ಧೆ ಮಾಡಿದ ಪ್ರಮುಖರಲ್ಲಿ ಸಿಎಂ ಪುತ್ರಿ ಕೆ.ಕವಿತಾ ಪ್ರಮುಖರಾಗಿದ್ದಾರೆ. ಅವರು ಬಿಜೆಪಿಯ ಧರ್ಮಪುರಿ ಅರವಿಂದ ವಿರುದ್ಧ ಸೋಲು ಅನುಭವಿಸಿದ್ದಾರೆ.

ಹಿನ್ನಡೆಗೆ ಕಾರಣ
ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ಬಳಿಕ ಟಿಆರ್‌ಎಸ್‌ ಮುಖ್ಯಸ್ಥ ಕೆ.ಚಂದ್ರಶೇಖರ ರಾವ್‌ ರಾಷ್ಟ್ರ ರಾಜಕಾರಣದಲ್ಲಿ ಮಿಂಚುವ ಆಸೆ ಹೊಂದಿದರು. ಫೆಡರಲ್‌ ಫ್ರಂಟ್‌ ರಚನೆ ಹುಮ್ಮಸ್ಸಿನಲ್ಲಿದ್ದ ಅವರು ಪ್ರಚಾರದತ್ತ ಹೆಚ್ಚಿನ ಗಮನ ಕೊಡಲಿಲ್ಲ. ಪ್ರಧಾನಿ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಅವರ ಬಿರುಸಿನ ಪ್ರಚಾರದ ಮುಂದೆ ಇತರ ಪಕ್ಷಗಳು ಮಂಕಾದವು.

ದಕ್ಷಿಣದಲ್ಲಿ ಬಿಜೆಪಿ ಸಾಧನೆ ಮಾಡುತ್ತಿದೆ ಎನ್ನುವುದಕ್ಕೆ ತೆಲಂಗಾಣದಲ್ಲಿನ ಪಕ್ಷದ ಸಾಧನೆ ಗಮನಾರ್ಹ. ಪಕ್ಷದ ಅಭ್ಯರ್ಥಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ.
ಮುರಳೀಧರ ರಾವ್‌, ಬಿಜೆಪಿ ನಾಯಕ


ಗೆದ್ದ ಪ್ರಮುಖರು

ಉತ್ತಮ ರೆಡ್ಡಿ, ನಲಗೊಂಡಾ
ಕೋಮಟಿ ರೆಡ್ಡಿ ವೆಂಕಟ ರೆಡ್ಡಿ, ಬೋಂಗಿರ್‌
ಸೋಯಂ ಬಾಪುರಾವ್‌, ಅಡಿಲಾಬಾದ್‌
ಅಸಾದುದ್ದೀನ್‌ ಒವೈಸಿ, ಹೈದರಾಬಾದ್‌
ಬಂಡಿ ಸಂಜಯ ಕುಮಾರ್‌, ಕರೀಂನಗರ

ಸೋತ ಪ್ರಮುಖರು
ಕೆ.ಕವಿತಾ, ನಿಜಾಮಾಬಾದ್‌
ಅನಿಲ್‌ ಕುಮಾರ್‌ ಗಾಲಿ, ಮೇದಕ್‌
ಆಗಂ ಚಂದ್ರಶೇಖರ್‌, ಪೆದ್ದಂಪಲ್ಲಿ
ದೊಮ್ಮಟಿ ಸಂಭಯ್ಯ, ವರಂಗಲ್‌
ಡಾ.ಮಲ್ಲು ರವಿ, ನಗರಕರ್ನೂಲು

ಟಾಪ್ ನ್ಯೂಸ್

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.