ಕಾಂಗ್ರೆಸ್‌ ಶಾಸಕರ ಕ್ಷೇತ್ರಗಳಲ್ಲೇ ಬಿಜೆಪಿ ಭರ್ಜರಿ ಲೀಡ್‌


Team Udayavani, May 24, 2019, 3:39 PM IST

kopp-2

ಕೊಪ್ಪಳ: ಸ್ಥಳೀಯ ಲೋಕ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸಂಗಣ್ಣ ಕರಡಿ ಅವರ ಗೆಲುವಿನ ಓಟ ಕುಗ್ಗಿಲ್ಲ. ಆದರೆ ಕಾಂಗ್ರೆಸ್‌ಗೆ ರಾಜಕೀಯ ರಣತಂತ್ರ, ಮೈತ್ರಿಯಾಟವೇ ಲೆಕ್ಕಕ್ಕೇ ಸಿಗದಂತಾಗಿದೆ. ಕೈ ಶಾಸಕರ ಕ್ಷೇತ್ರದಲ್ಲಿಯೇ ಕಮಲಕ್ಕೆ ಲೀಡ್‌ ಸಿಕ್ಕಿದ್ದು ಕಾಂಗ್ರೆಸ್‌ ಶಾಸಕರಿಗೆ ಇರಿಸು-ಮುರಿಸು ತಂದಿರಿಸಿದೆ.

ಹೌದು. ಕೊಪ್ಪಳ ವಿಧಾನಸಭಾ ಕ್ಷೇತ್ರ ಕೈ ಶಾಸಕ ರಾಘವೇಂದ್ರ ಹಿಟ್ನಾಳ ಹಿಡಿತದಲ್ಲಿದ್ದರೂ ಕಮಲಕ್ಕೆ ಮುನ್ನಡೆ ಸಿಕ್ಕಿದೆ. ಈ ಕ್ಷೇತ್ರದಲ್ಲಿ ಕರಡಿಗೆ ಮೈನಸ್‌ ಆಗಲಿದೆ ಎನ್ನು ಲೆಕ್ಕಾಚಾರ ಕೇಳಿ ಬಂದರೂ ಅಲ್ಪಸಂಖ್ಯಾತ, ದಲಿತ ಸೇರಿ ಹಿಂದುಳಿದ ಮತಗಳು ಕರಡಿ ಕೈ ಹಿಡಿದಿವೆ. ಇನ್ನು ಕುಷ್ಟಗಿ ಕ್ಷೇತ್ರದಲ್ಲಿ ಕಾಂಗ್ರೆಸ್‌ ಶಾಸಕ ಅಮರೇಗೌಡ ಬಯ್ನಾಪುರ ಇದ್ದರೂ ಕಮಲಕ್ಕೆ ಮುನ್ನಡೆ ಸಿಕ್ಕಿದೆ. ಇಲ್ಲಿ ಕಮಲದ ನಾಯಕ ಕೆ. ಶರಣಪ್ಪ, ಮಾಜಿ ಶಾಸಕ ದೊಡ್ಡನಗೌಡ ಪಾಟೀಲ್ ಕಮಲಕ್ಕೆ ಆಸರೆಯಾದರೆ, ಕೈನ ಫಾರವರ್ಡ್‌ ಮತಗಳು ಕಮಲಕ್ಕೆ ಬಂದಿವೆ ಎನ್ನುವ ಲೆಕ್ಕಾಚಾರ ಹೇಳುತ್ತಿದೆ.

ಇನ್ನು ಗಂಗಾವತಿ, ಕನಕಗಿರಿ, ಯಲಬುರ್ಗಾ ಕ್ಷೇತ್ರಗಳಲ್ಲಿ ಹಾಲಿ ಬಿಜೆಪಿ ಶಾಸಕರಿದ್ದು, ಈ ಮೂರು ಕ್ಷೇತ್ರಗಳಲ್ಲಿ ಕಮಲಕ್ಕೆ ಲೀಡ್‌ ಕೊಟ್ಟಿವೆ. ಗಂಗಾವತಿಯಲ್ಲಿ ಲಿಂಗಾಯತ, ದಲಿತ, ನಾಯಕ ಮತ ಕೈ ಹಿಡಿದಿದ್ದರೆ, ಯಲಬುರ್ಗಾದಲ್ಲಿ ಬಣಜಿಗ, ಗಾಣಿಗ, ಪಂಚಮಸಾಲಿ ಸಮುದಾಯದ ಮತ ಪ್ಲಸ್‌ ಆಗಿವೆ. ಇದು ಕಮಲಕ್ಕೆ ಆಸರೆಯಾಗಿದ್ದರೆ, ಕನಕಗಿರಿಯಲ್ಲಿ ಎಸ್‌ಸಿ, ಎಸ್‌ಟಿ ಸೇರಿ ಲಿಂಗಾಯತ ಮತ ಕಮಲಕ್ಕೆ ವರದಾನವಾಗಿವೆ. ಅಚ್ಚರಿಯಿಂದರೆ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಶಿವರಾಜ ತಂಗಡಗಿ ಕ್ಷೇತ್ರದಲ್ಲೇ ಮತ್ತೆ ಕಮಲಕ್ಕೆ ಪ್ಲಸ್‌ ಆಗಿದೆ.

ಎಲ್ಲೂ ನಡೆಯದ ಮೈತ್ರಿಯಾಟ: ಸಿಂಧನೂರು ಕ್ಷೇತ್ರ ಜೆಡಿಎಸ್‌ ಹಿಡಿತದಲ್ಲಿದ್ದರೂ ವೆಂಕಟರಾವ್‌ ನಾಡಗೌಡರ ಕೈ-ಕಮಲ ಸಮಬಲಕ್ಕೆ ಯತ್ನಿಸಿದ್ದಾರೆ. ಆದರೆ ಉಳಿದಂತೆ ಯಾವ ಕ್ಷೇತ್ರದಲ್ಲೂ ಕಾಂಗ್ರೆಸ್‌ಗೆ ಮೈತ್ರಿ ಲಾಭವಾಗಿಲ್ಲ. ಈ ಕ್ಷೇತ್ರದಲ್ಲಿ ಲಿಂಗಾಯತ ಪ್ರಾಬಲ್ಯವಿದ್ದು, ಮೋದಿ ಅಲೆಯೂ ಹೆಚ್ಚು ಶಕ್ತಿ ನೀಡಿದೆ. ಇನ್ನೂ ಮಸ್ಕಿ ಕ್ಷೇತ್ರದಲ್ಲಿ ಕಾಂಗ್ರೆಸ್‌ ಶಾಸಕ ಪ್ರತಾಪಗೌಡ ಪಾಟೀಲ್ ಇದ್ದರೂ ಬಿಜೆಪಿಗೆ ಹೆಚ್ಚು ಮುನ್ನಡೆ ಬಂದಿವೆ. ಲಿಂಗಾಯತ, ಎಸ್‌ಸಿ, ಎಸ್‌ಟಿ ಮತಗಳು ಕಮಲಕ್ಕೆ ಪ್ಲಸ್‌ ಆಗಿವೆ.

ಸಿರಗುಪ್ಪಾ ಕ್ಷೇತ್ರ ಬಿಜೆಪಿ ಶಾಸಕ ಸೋಮಲಿಂಗಪ್ಪರ ಹಿಡಿತದಲ್ಲಿದ್ದರೂ ಕಮಲಕ್ಕೆ 12,134 ಮತಗಳ ಹಿನ್ನಡೆಯಾಗಿದೆ. ವಿಶೇಷವೆಂದರೆ, ಎಂಟೂ ಕ್ಷೇತ್ರಗಳಲ್ಲಿ 3 ಕ್ಷೇತ್ರದಲ್ಲಿ ಕಾಂಗ್ರೆಸ್‌ ಶಾಸಕರಿದ್ದರೂ ಕಮಲಕ್ಕೆ ಪ್ಲಸ್‌ ಆಗಿದ್ದರೆ, ಜೆಡಿಎಸ್‌ನ ಮೈತ್ರಿ ಲೆಕ್ಕಕ್ಕಿಲ್ಲದಂತಾಗಿದೆ. ಇನ್ನೂ ನೆಚ್ಚಿದ್ದ ಸಿರಗುಪ್ಪಾ ಕ್ಷೇತ್ರದಲ್ಲೇ ಕಮಲಕ್ಕೆ ಹಿನ್ನಡೆ ಸಿಕ್ಕಿದೆ.

ಕೈಗೆ ಸಿಗುತ್ತಿಲ್ಲ ರಣತಂತ್ರದಾಟ: ಕಾಂಗ್ರೆಸ್‌ ಭಾರಿ 6 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುವ ನಿರೀಕ್ಷೆಯನ್ನಿಟ್ಟಿತ್ತು. ಯಲಬುರ್ಗಾ, ಮಸ್ಕಿ ಕ್ಷೇತ್ರಗಳ ಅನುಮಾನವಿತ್ತು. ಆದರೆ ಕಾಂಗ್ರೆಸ್‌ನ ಎಲ್ಲ ಲೆಕ್ಕಾಚಾರ ಉಲಾr ಹೊಡೆದಿವೆ.

ಕಳೆದ ಬಾರಿಗಿಂತ ಹೆಚ್ಚು ಲೀಡ್‌

ಕಳೆದ ಬಾರಿಯ ಎಂಪಿ ಚುನಾವಣೆಯಲ್ಲಿ ಸಂಗಣ್ಣ ಕರಡಿ ಅವರು 486383 ಮತಗಳನ್ನು ಪಡೆದಿದ್ದರೆ, ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದ ಬಸವರಾಜ ಹಿಟ್ನಾಳ 453969 ಮತ ಪಡೆದಿದ್ದರು. ಅಂದರೆ 32414 ಮುನ್ನಡೆ ಪಡೆದಿದ್ದರು. ಈ ಬಾರಿ ಸಂಗಣ್ಣ ಅವರು 586783 ಮತ ಪಡೆದಿದ್ದರೆ, ರಾಜಶೇಖರ ಹಿಟ್ನಾಳ 548386 ಮತ ಪಡೆದಿದ್ದು, ಕರಡಿ ಅವರು 38,397 ಮತ ಮುನ್ನಡೆ ಸಾಧಿಸಿದ್ದಾರೆ

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.