ವಾದ್ರಾ ನಿರೀಕ್ಷಣಾ ಜಾಮೀನು ರದ್ದು ಕೋರಿ ದಿಲ್ಲಿ ಹೈಕೋರ್ಟಿಗೆ ಜಾರಿ ನಿರ್ದೇಶನಾಲಯ
Team Udayavani, May 24, 2019, 3:55 PM IST
ಹೊಸದಿಲ್ಲಿ : ಹಣಕಾಸು ಅಕ್ರಮ ಕೇಸಿಗೆ ಸಂಬಂಧಿಸಿ ರಾಬರ್ಟ್ ವಾದ್ರಾಗೆ ಮಂಜೂರು ಮಾಡಲಾಗಿದ್ದ ನಿರೀಕ್ಷಣಾ ಜಾಮೀನನ್ನು ರದ್ದು ಮಾಡುವಂತೆ ಕೋರಿ ಜಾರಿ ನಿರ್ದೇಶನಲಾಯ ದಿಲ್ಲಿ ಹೈಕೋರ್ಟ್ ಮೆಟ್ಟಲೇರಿದೆ.
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಭಾವ, ರಾಬರ್ಟ್ ವಾದ್ರಾ ಗೆ ಕಳೆದ ಎಪ್ರಿಲ್ 1ರಂದು ವಿಚಾರಣಾ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.
ವಾದ್ರಾಗೆ ನಿರೀಕ್ಷಣಾ ಜಾಮೀನು ಮಂಜೂರಾಗಿರುವುದು ತನಿಖಾ ಪ್ರಕ್ರಿಯೆಗೆ ಹಾನಿಕರವಾಗಿದೆ ಎಂದು ಜಾರಿ ನಿರ್ದೇಶನಾಲಯ, ಪ್ರಾಸಿಕ್ಯೂಟರ್ ಡಿ ಪಿ ಸಿಂಗ್ ಮೂಲಕ ದಿಲ್ಲಿ ಹೈಕೋರ್ಟಿಗೆ ಸಲ್ಲಿಸಿರುವ ಅರ್ಜಿಯಲ್ಲಿ ಹೇಳಿದೆ.
ವಾದ್ರಾ ಮಾತ್ರವಲ್ಲದೆ ಆತನ ನಿಕಟವರ್ತಿಯಾಗಿರುವ ಮನೋಜ್ ಅರೋರಾ ಗೆ ಕೂಡ ನಿರೀಕ್ಷಣಾ ಜಾಮೀನು ಮಂಜೂರು ಮಾಡಿರುವುದನ್ನು ಜಾರಿ ನಿರ್ದೇಶನಾಲಯ ಪ್ರಶ್ನಿಸಿದೆ.
ವಾದ್ರಾ ಅವರು ಲಂಡನ್ ನ 12, ಬ್ರಾನ್ಸ್ಟನ್ ಚೌಕದಲ್ಲಿ 19 ಲಕ್ಷ ಪೌಂಡ್ ಮೌಲ್ಯದ ಆಸ್ತಿಯನ್ನು ಖರೀದಿಸಿರುವ ವಿಷಯದಲ್ಲಿ ಹಣಕಾಸು ಅಕ್ರಮ ಕೇಸನ್ನು ಎದುರಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
MUST WATCH
ಹೊಸ ಸೇರ್ಪಡೆ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ