ರತ್ನಮಂಜರಿ ಹುಡುಗನ ಹೊಸ ಸಿನಿಮಾ

ಆ್ಯಕ್ಷನ್‌ ಥ್ರಿಲ್ಲರ್‌ಗೆ ಗೌಸ್‌ಪೀರ್‌ ಆ್ಯಕ್ಷನ್‌-ಕಟ್‌

Team Udayavani, May 25, 2019, 3:00 AM IST

Rajcharan-(1)

ದಿಗಂತ್‌ ಅಭಿನಯದ “ಶಾರ್ಪ್‌ ಶೂಟರ್‌’ ಚಿತ್ರ ನಿರ್ದೇಶಿಸಿದ್ದ ಗೌಸ್‌ಪೀರ್‌, ಆ ಚಿತ್ರದ ಬಳಿಕ ಬೇರೇನು ಮಾಡುತ್ತಿದ್ದಾರೆ ಎಂಬ ಪ್ರಶ್ನೆ ಸಹಜವಾಗಿತ್ತು. ಆ ಪ್ರಶ್ನೆಗೆ ಅವರೀಗ ಹೊಸ ಚಿತ್ರವೊಂದನ್ನು ನಿರ್ದೇಶನ ಮಾಡುತ್ತಿರುವ ಉತ್ತರ ಸಿಕ್ಕಿದೆ. ಹೌದು, ಇದುವರೆಗೆ ಗೀತ ಸಾಹಿತಿಯಾಗಿ, ಸಂಭಾಷಣೆಕಾರರಾಗಿದ್ದ ಆವರು, “ಶಾರ್ಪ್‌ಶೂಟರ್‌’ ಚಿತ್ರ ನಿರ್ದೇಶನದ ಬಳಿಕ ಎರಡನೇ ಚಿತ್ರ ನಿರ್ದೇಶನಕ್ಕೆ ಅಣಿಯಾಗಿದ್ದಾರೆ.

ಆ ಚಿತ್ರಕ್ಕಿನ್ನೂ ನಾಮಕರಣ ಮಾಡಿಲ್ಲ. ಈ ಬಾರಿ ಗೌಸ್‌ಪೀರ್‌ ಬಹುತೇಕ ಹೊಸಬರ ಜೊತೆ ಕೆಲಸ ಮಾಡುವ ನಿರ್ಧಾರ ಮಾಡಿದ್ದಾರೆ. ಇನ್ನೂ ಹೆಸರಿಡದ ಗೌಸ್‌ಪೀರ್‌ ನಿರ್ದೇಶನದ ಚಿತ್ರಕ್ಕೆ ರಾಜ್‌ಚರಣ್‌ ಹೀರೋ. “ರತ್ನಮಂಜರಿ’ ಚಿತ್ರದ ಮೂಲಕ ಹೀರೋ ಆಗಿ ಎಂಟ್ರಿ ಕೊಟ್ಟ ರಾಜ್‌ಚರಣ್‌ಗೆ ಇದು ಎರಡನೇ ಸಿನಿಮಾ. ಅವರೊಂದಿಗೆ ವಿಕ್ರಾಂತ್‌ ಹೆಗ್ಡೆ ಎಂಬ ಮತ್ತೂಬ್ಬ ಹೀರೋ ಕೂಡ ನಟಿಸುತ್ತಿದ್ದಾರೆ.

ಈ ಹಿಂದೆ ಇವರು “ಸೋಜಿಗ’ ಚಿತ್ರದಲ್ಲಿ ನಟಿಸಿದ್ದರು. ಇನ್ನು, ಚಿತ್ರದಲ್ಲಿ ಮೂವರು ನಾಯಕಿಯರಿದ್ದಾರೆ. ಅವರ ಆಯ್ಕೆ ಇನ್ನಷ್ಟೇ ನಡೆಯಬೇಕಿದೆ. ಉಳಿದಂತೆ ನಾಲ್ಕೈದು ಮಂದಿ ಸಹ ಕಲಾವಿದರು ನಟಿಸುತ್ತಿದ್ದಾರೆ. ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸುತ್ತಿರುವ ಗೌಸ್‌ಪೀರ್‌, ಕಥೆ ಕುರಿತು ಹೇಳುವುದಿಷ್ಟು.

“ಇದೊಂದು ಆ್ಯಕ್ಷನ್‌ ಥ್ರಿಲ್ಲರ್‌ ಸಿನಿಮಾ. ಇಲ್ಲಿ ಹೀರೋ ಅನ್ನುವುದಕ್ಕಿಂತ ಕಥೆಯೇ ನಾಯಕ, ನಾಯಕಿ. ಒಬ್ಬ ತಾನು ಅಂದುಕೊಂಡಿದ್ದನ್ನು ಎಷ್ಟೇ ಕಷ್ಟವಾದರೂ ಸರಿ, ಅದನ್ನು ಮಾಡಿ ಮುಗಿಸುವಾತ. ಇನ್ನೊಬ್ಬ ತನ್ನ ಬದುಕಲ್ಲಿ ಯಾವುದನ್ನೂ ಗಂಭೀರವಾಗಿ ಪರಿಗಣಿಸದ, ಸಿಲ್ಲಿಯಾಗಿಯೇ ಎಲ್ಲವನ್ನು ನೋಡುವಾತ.

ಲೈಫ್ ಅನ್ನು ತುಂಬಾ ಸುಲಭವಾಗಿ ತೆಗೆದುಕೊಳ್ಳುವ ಹುಡುಗನೊಬ್ಬ ಶ್ರೀಮಂತ ಹುಡುಗಿಯೊಬ್ಬಳನ್ನು ಪಟಾಯಿಸಿ, ಲೈಫ‌ಲ್ಲಿ ಸೆಟ್ಲ ಆಗಿಬಿಡಬೇಕು ಎಂಬ ಆಸೆ. ಅದರಂತೆ ಅಂಥದ್ದೊಂದು ಶ್ರೀಮಂತ ಹುಡುಗಿ ಅವನ ಲವ್‌ಗೆ ಬೀಳುತ್ತಾಳೆ. ಇನ್ನೇನು ತಾನು ಅವಳಿಗೆ ಮೋಸ ಮಾಡುತ್ತಿದ್ದೇನೆ ಎಂಬ ಅರಿವಾಗಿ, ನಿಜ ಹೇಳಲು ಹೊರಡುವ ಮೊದಲೇ ಆಕೆಗೆ ಅವನೊಬ್ಬ ಚೀಟರ್‌ ಅನ್ನೋದು ಗೊತ್ತಾಗಿ ಬ್ರೇಕಪ್‌ ಆಗಿಬಿಡುತ್ತೆ.

ಅಂಥಾ ಸಮಯದಲ್ಲಿ ಅವನಿಗೊಂದು ಡೀಲ್‌ ಸಿಗುತ್ತೆ. ಅದು ಕಿಡ್ನಾಪ್‌ ಮಾಡುವ ದೊಡ್ಡ ಡೀಲ್‌. ಯಾರನ್ನು ಕಿಡ್ನಾಪ್‌ ಮಾಡಬೇಕು, ಯಾಕೆ ಕಿಡ್ನಾಪ್‌ ಮಾಡಬೇಕು, ಮಾಡಿದರೆ ಏನಾಗುತ್ತೆ ಅನ್ನೋದೇ ಕಥೆಯ ತಿರುಳು’ ಎನ್ನುತ್ತಾರೆ ಗೌಸ್‌ಪೀರ್‌.

ಬಹುತೇಕ ಮಜವಾಗಿಯೇ ಸಾಗುವ ಈ ಚಿತ್ರದಲ್ಲಿ ಮೂರು ಭರ್ಜರಿ ಫೈಟ್ಸ್‌, ಮೂರು ಹಾಡುಗಳು ಇರಲಿವೆ. ಬಕ್ಕೇಶ್‌ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ. ಅವರಿಗೆ ಕಾರ್ತಿಕ್‌ ಸಾಥ್‌ ನೀಡುತ್ತಿದ್ದಾರೆ. ಯೋಗಿ ಛಾಯಾಗ್ರಹಣ ಮಾಡುತ್ತಿದ್ದಾರೆ. ಸಂದೇಶ್‌ ಸಂಕಲನ ಮಾಡುತ್ತಿದ್ದಾರೆ. ಸುಮಾರು 40 ದಿನಗಳ ಕಾಲ ಎರಡು ಹಂತದಲ್ಲಿ ಬಹುತೇಕ ಬೆಂಗಳೂರಲ್ಲೇ ಚಿತ್ರೀಕರಣ ನಡೆಯಲಿದೆ.

ಕ್ಲೈಮ್ಯಾಕ್ಸ್‌ ಹೊರಗಡೆ ನಡೆಸುವ ಯೋಚನೆ ಚಿತ್ರತಂಡಕ್ಕಿದೆ. ಅಂದಹಾಗೆ, ಹರಿಸಿರಿ ಎಂಟರ್‌ ಟೈನ್‌ಮೆಂಟ್ಸ್‌ ಬ್ಯಾನರ್‌ನಲ್ಲಿ ಉಮಾಶಂಕರ್‌ (ಆನಂದ್‌) ಚಿತ್ರ ನಿರ್ಮಾಣ ಮಾಡುತ್ತಿದ್ದು, ಇದು ಅವರ ಮೊದಲ ನಿರ್ಮಾಣದ ಚಿತ್ರ. ಜುಲೈನಲ್ಲಿ ಚಿತ್ರೀಕರಣಕ್ಕೆ ಚಾಲನೆ ಸಿಗಲಿದೆ.

ಟಾಪ್ ನ್ಯೂಸ್

To India’s youth get jobs, Modi should retire: Rahul Gandhi

Unemployment; ಭಾರತದ ಯುವಕರಿಗೆ ಕೆಲಸ ಸಿಗಬೇಕಾದರೆ ಮೋದಿ ನಿವೃತ್ತಿಯಾಗಬೇಕು: ರಾಹುಲ್ ಗಾಂಧಿ

ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

IPL 2024; ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’

“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’

1-24-monday

Daily Horoscope: ಅವಿವಾಹಿತರಿಗೆ ಯೋಗ್ಯ ಸಂಗಾತಿ ಸಿಗುವ ಭರವಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vikasa parva Kannada movie

Kannada Movie; ಸೆನ್ಸಾರ್ ಪಾಸಾದ ‘ವಿಕಾಸ ಪರ್ವ’

Biography of Mother Teresa in web series

Mother Teresa; ವೆಬ್‌ ಸೀರೀಸ್‌ನಲ್ಲಿ ಮದರ್‌ ತೆರೇಸಾ ಜೀವನ ಚರಿತ್ರೆ

Re Release; ಭರ್ಜರಿ ಓಪನಿಂಗ್‌ ಪಡೆದ ಉಪ್ಪಿ ‘ಎ’

Re Release; ಭರ್ಜರಿ ಓಪನಿಂಗ್‌ ಪಡೆದ ಉಪ್ಪಿ ‘ಎ’

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

vijay raghavendra’s swapna mantapa movie

Kannada Cinema; ‘ಸ್ವಪ್ನ ಮಂಟಪ’ದಲ್ಲಿ ವಿಜಯ ರಾಘವೇಂದ್ರ-ರಂಜನಿ; ಬರಗೂರು ನಿರ್ದೇಶನ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

To India’s youth get jobs, Modi should retire: Rahul Gandhi

Unemployment; ಭಾರತದ ಯುವಕರಿಗೆ ಕೆಲಸ ಸಿಗಬೇಕಾದರೆ ಮೋದಿ ನಿವೃತ್ತಿಯಾಗಬೇಕು: ರಾಹುಲ್ ಗಾಂಧಿ

ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

IPL 2024; ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.