ಕುಟುಂಬ ರಾಜಕಾರಣ ಧಿಕ್ಕರಿಸಿದ ಮಂಡ್ಯದ ಜನ


Team Udayavani, May 25, 2019, 5:00 AM IST

mandya

ಮಂಡ್ಯ: ಸಕ್ಕರೆ ನಾಡಲ್ಲಿ ಕುಟುಂಬ ರಾಜಕಾರಣದ ಅಧಿಪತ್ಯ ಸ್ಥಾಪಿಸಲು ಹೊರಟ ಜೆಡಿಎಸ್‌ಗೆ ಜಿಲ್ಲೆಯ ಮತದಾರರು ತಕ್ಕ ಪಾಠ ಕಲಿಸಿದ್ದಾರೆ. ಹೊರಗಿನ ನಾಯಕತ್ವಕ್ಕೆ ಮಣೆ ಹಾಕದ ಜನರು, ಸ್ಥಳೀಯ ನಾಯಕತ್ವಕ್ಕಷ್ಟೇ ಪ್ರಾಧಾನ್ಯತೆ ನೀಡಿದ್ದಾರೆ. ಜೆಡಿಎಸ್‌ ಸೋಲಿಗೆ ಜಿಲ್ಲೆಯ ಜನರ ಬಗ್ಗೆ ಇದ್ದ ಅತಿಯಾದ ಆತ್ಮವಿಶ್ವಾಸವೂ ಕಾರಣ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ಏಳೂ ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಜೆಡಿಎಸ್‌ ನಾಯಕರು, ಕಾಂಗ್ರೆಸ್‌ ಪಕ್ಷವನ್ನು ಧೂಳಿಪಟ ಮಾಡಿ ಮಂಡ್ಯ ವನ್ನು ಭದ್ರಕೋಟೆ ಮಾಡಿಕೊಂಡಿದ್ದರು. ಈ ಕೋಟೆಯ ಮೇಲೆ ಹೊರಗಿನಿಂದ ಅಧಿಪತ್ಯ ಸಾಧಿಸಿದ್ದ ದೇವೇಗೌಡ ಹಾಗೂ ಕುಮಾರಸ್ವಾಮಿ ಯುವರಾಜನಾಗಿ ನಿಖಿಲ್‌ಗೆ ಪಟ್ಟಾಭಿಷೇಕ ನಡೆಸಲು ಮುಂದಾದರು.

ವಿರೋಧಿಗಳೇ ಇಲ್ಲದ ಸಕ್ಕರೆ ನಾಡಿನಲ್ಲಿ ಲೋಕಸಭಾ ಚುನಾವಣೆಯ ಗೆಲುವು ಸುಲಭ ತುತ್ತಾಗಬಹುದೆಂದೇ ದಳಪತಿಗಳು ಭಾವಿಸಿದ್ದರು. ನಿಖಿಲ್‌ಗೆ ರಾಜಕೀಯ ಪಟ್ಟಾಭಿಷೇಕ ಮಾಡುವ ಜೆಡಿಎಸ್‌ನ ತಂತ್ರಗಾರಿಕೆ “ಜಾಗ್ವಾರ್‌’ ಸಿನಿಮಾ ಆಡಿಯೋ ಬಿಡುಗಡೆ ಸಮಾರಂಭ ದಿಂದಲೇ ನಡೆದಿತ್ತು ಎನ್ನುವುದು ಜಿಲ್ಲೆಯ ಜನರಿಗೆ ಅರಿವಾಯಿತು. ಅಲ್ಲಿಂದಲೇ ದೇವೇಗೌಡರ ಕುಟುಂಬ ರಾಜಕಾರಣದ ಬಗ್ಗೆ ಜನಮಾನಸದಲ್ಲಿ ವಿರೋಧಿ ಅಲೆ ಸೃಷ್ಟಿಯಾಗಿತ್ತು.

ಇದೇ ಸಮಯಕ್ಕೆ ದಿವಂಗತ ಅಂಬರೀಶ್‌ ಪತ್ನಿ, ಸುಮಲತಾ ಚುನಾವಣಾ ಅಖಾಡ ಪ್ರವೇಶಕ್ಕೆ ಸನ್ನದ್ಧರಾದರು. ಗೌಡರ ಕುಟುಂಬ ರಾಜಕಾರಣಕ್ಕೆ ತಕ್ಕ ಪಾಠ ಕಲಿಸುವುದಕ್ಕೆ ಮತದಾರರಿಗೂ ಒಂದು ಅವಕಾಶ ಸಿಕ್ಕಿತು. ಮತದಾರರ ಒಲವು ಸುಮಲತಾ ಕಡೆಗೆ ತಿರುಗಿತು. ಜಿಲ್ಲೆಯ ಹಿರಿಯ ರಾಜಕೀಯ ಧುರೀಣರಾದ ಎಂ.ಕೆ.ಶಿವನಂಜಪ್ಪ, ಕೆ.ವಿ.ಶಂಕರಗೌಡ, ಎಸ್‌.ಎಂ.ಕೃಷ್ಣ, ಜಿ.ಮಾದೇಗೌಡ, ಅಂಬರೀಶ್‌,

ಕೆ.ಆರ್‌.ಪೇಟೆ ಕೃಷ್ಣ, ಎನ್‌.ಚಲುವರಾಯಸ್ವಾಮಿ, ಸಿ.ಎಸ್‌.ಪುಟ್ಟರಾಜು ಅಂತವರ ಸಾಲಿನಲ್ಲಿ ನಿಖಿಲ್‌ರನ್ನು ನೋಡುವುದಕ್ಕೆ ಜನ ಬಯಸಲಿಲ್ಲ. ನಿಖಿಲ್‌ ಜಿಲ್ಲಾ ರಾಜಕಾರಣ ಪ್ರವೇಶ ಸ್ವತ: ಜೆಡಿಎಸ್‌ ನಾಯಕರಿಗೇ ಇಷ್ಟವಿರಲಿಲ್ಲ. ಜಿಲ್ಲೆಯೊಳಗಿನ ವಾಸ್ತವ ಪರಿಸ್ಥಿತಿಯನ್ನೇ ಅರಿಯದೆ ಜೆಡಿಎಸ್‌ ವರಿಷ್ಠರು, ನಿಖಿಲ್‌ರನ್ನು ಅಭ್ಯರ್ಥಿಯನ್ನಾಗಿಸಿ ಗೆಲ್ಲುವ ಹುಂಬುತನ ಪ್ರದರ್ಶಿಸಿದರು.

ಜತೆಗೆ, ಸುಮಲತಾ ರಾಜಕೀಯ ಪ್ರವೇಶವನ್ನು ಸಹಿಸದೆ ಸಿಎಂ ಕುಮಾರಸ್ವಾಮಿ ಸೇರಿದಂತೆ ಜಿಲ್ಲೆಯ “ತೆನೆ’ ನಾಯಕರು ಅವರ ವಿರುದ್ಧ ಅವಾಚ್ಯ ಶಬ್ಧಗಳಿಂದ ಟೀಕಿಸಿ, ಪಕ್ಷದ ಭದ್ರಕೋಟೆಯೊಳಗೆ ಅಭ್ಯರ್ಥಿ ಸೋಲಿಗೆ ತಾವೇ ಕಾರಣರಾದರು.

* ಮಂಡ್ಯ ಮಂಜುನಾಥ್‌

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2011

ಬೆಂಗಳೂರಿನಲ್ಲೊಂದು ಟೈ ರೋಮಾಂಚನ

rajani-kanth

ಮೋದಿಯೂ ವರ್ಚಸ್ವಿ ನಾಯಕ

smruthi-irani

ಬರಿಗಾಲಲ್ಲೇ ವಿನಾಯಕ ದೇಗುಲಕ್ಕೆ ತೆರಳಿದ್ದ ಸ್ಮತಿ!

Asshivrda

ಮಾಜಿ ರಾಷ್ಟ್ರಪತಿ ಪ್ರಣಬ್ ರ ಆಶೀರ್ವಾದ ಪಡೆದ ಪ್ರಧಾನಿ ನರೇಂದ್ರ ಮೋದಿ

Lalu-head-scratch-700

ರಾಜೀನಾಮೆ ನೀಡುವ ರಾಹುಲ್‌ ನಿರ್ಧಾರ ಆತ್ಮಾಹುತಿಯದ್ದು : ಲಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.