ಕರಾವಳಿಯಲ್ಲಿ ಮೋದಿ ಮೋಡಿ!
Team Udayavani, May 25, 2019, 6:00 AM IST
ಮಂಗಳೂರು: ಕರಾವಳಿಯ ಎರಡೂ ಸ್ಥಾನಗಳಲ್ಲಿ ಬಿಜೆಪಿ ಜಯ ಸಾಧಿಸುವುದಕ್ಕೆ ಮುಖ್ಯ ಕಾರಣ ಮಂಗಳೂರಿಗೆ ಪ್ರಧಾನಿ ಮೋದಿ ಭೇಟಿ ನೀಡಿ ಮೋಡಿ ಮಾಡಿದ್ದು ಎಂಬುದು ಸ್ಪಷ್ಟ.
ಮೋದಿ ಲೋಕಸಭೆ ಚುನಾವಣೆಗಷ್ಟೇ ಅಲ್ಲ; ಕಳೆದ ವರ್ಷ ನಡೆದಿದ್ದ ವಿಧಾನಸಭೆ ಚುನಾವಣೆ ಸಂದರ್ಭದಲ್ಲೂ ಪ್ರಚಾರಕ್ಕಾಗಿ ಕರಾವಳಿ ಭಾಗಕ್ಕೆ ಬಂದು ಹೋಗಿದ್ದರು. ಕೇವಲ ಎರಡು ಸ್ಥಾನ ಹೊಂದಿರುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗೆ ಇತ್ತೀಚೆಗಿನ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯ ಎರಡೂ ಸಂದರ್ಭ ಅವರು ಬಂದದ್ದು ಗಮನಾರ್ಹ.
ಇಷ್ಟು ಮಾತ್ರ ಅಲ್ಲದೆ ಇನ್ನಿತರ ಸಂದರ್ಭಗಳಲ್ಲೂ ಒಂದೆರಡು ಬಾರಿ ಜಿಲ್ಲೆಗೆ ಕಾಲಿರಿಸಿ ತನ್ನ ಹವಾ ಇಲ್ಲಿ ಸದಾ ಇರುವಂತೆ ನೋಡಿಕೊಂಡಿದ್ದರು ಮೋದಿ.
2014ರ ಚುನಾವಣೆ ವೇಳೆ ಗುಜರಾತ್ ಮುಖ್ಯಮಂತ್ರಿ ಆಗಿದ್ದ ಮೋದಿ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿ ಪ್ರಚಾರ ಭಾಷಣ ಮಾಡಿದ್ದರು. ಆ ಚುನಾವಣೆಯಲ್ಲಿ ಎರಡೂ ಕ್ಷೇತ್ರಗಳಲ್ಲೂ ಬಿಜೆಪಿ ಜಯ ಸಾಧಿಸಿತ್ತು. 2018ರ ವಿಧಾನಸಭಾ ಚುನಾವಣೆ ಸಂದರ್ಭ ಅವರು ಇಲ್ಲಿ ಪ್ರಚಾರ ನಡೆಸಿದ್ದು, ದ.ಕ. ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದಿದ್ದರೆ ಉಡುಪಿಯಲ್ಲಿ ಕ್ಲೀನ್ ಸ್ವೀಪ್ ಸಾಧಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ