ಮತ್ತೆ ಪ್ರತಾಪ ಮೆರೆದ ಸಿಂಹ: ವಿಜಯಿಯಾಗದ ಶಂಕರ


Team Udayavani, May 25, 2019, 6:10 AM IST

pratap-mereda-simha

ಮಡಿಕೇರಿ: ಬಲಿಷ್ಠವಾಗಿ ಬೆಳೆದ ಬಿಜೆಪಿಯನ್ನು ಕಟ್ಟಿ ಹಾಕುವ ಪ್ರಯತ್ನವಾಗಿ ಮೈತ್ರಿಕೂಟಗಳು ಹೆಣೆದ ತಂತ್ರಗಾರಿಕೆ ದೇಶದೆಲ್ಲೆಡೆ ವಿಫ‌ಲವಾದಂತೆ ಮೈಸೂರು, ಕೊಡಗು ಲೋಕಸಭಾ ಕ್ಷೇತ್ರದಲ್ಲೂ ಸೋಲಾಗಿದೆ. ಬಿಜೆಪಿಯ ಭದ್ರಕೋಟೆ ಕೊಡಗು ಜಿಲ್ಲೆ ಮತ್ತೆ ಬಿಜೆಪಿ ಅಭ್ಯರ್ಥಿ ಪ್ರತಾಪ್‌ ಸಿಂಹ ಕೈಹಿಡಿಯುವ ಮೂಲಕ ಭರ್ಜರಿ ಜಯ ತಂದುಕೊಟ್ಟಿದೆ.

ತೀವ್ರ ಕುತೂಹಲ ಮೂಡಿಸಿದ್ದ ಮೈಸೂರು-ಕೊಡಗು ಕ್ಷೇತ್ರದಲ್ಲಿ, ಪಕ್ಷದೊಳಗಿನ ಅಸಮಾಧಾನಗಳ ನಡುವೆಯೇ ಪ್ರತಾಪ ಸಿಂಹ ಅವರು ದ್ವಿತೀಯ ಬಾರಿಗೆ ಮೋದಿ ಅಲೆಯಲ್ಲಿ ತೇಲಿ ಗೆಲುವಿನ ದಡ ಸೇರಿದ್ದಾರೆ. ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಯಿಂದ ಎದುರಾಗಬಹುದಾದ‌ ಆತಂಕ ಮತ್ತು ಪಕ್ಷದೊಳಗೆಯೇ ಪ್ರತಾಪಸಿಂಹ ಅವರ ವಿರುದ್ಧ ನಿರ್ಮಾಣವಾಗಿದ್ದ ಅಸಮಾಧಾನ ಬಿಜೆಪಿಯನ್ನು ಸೋಲಿಸಿ ಬಿಡಬಹುದು ಎನ್ನುವ ನಿರೀಕ್ಷೆಗಳು ಹುಸಿಯಾಗಿದೆ. ಬಿಜೆಪಿ ಅಭ್ಯರ್ಥಿ ಪ್ರತಾಪ ಸಿಂಹ ಅವರು ಸರಿ ಸುಮಾರು 1.46 ಲಕ್ಷ ಮತಗಳ ಅಂತರದಿಂದ, ಪ್ರತಿಸ್ಪರ್ಧಿ ಕಾಂಗ್ರೆಸ್‌ನ ವಿಜಯಶಂಕರ್‌ ಅವರ ವಿರುದ್ಧ ಸ್ಪಷ್ಟ ಗೆಲುವನ್ನು ದಾಖಲಿಸಿದ್ದಾರೆ.

ಇದು ನಿಜಕ್ಕೂ ಪ್ರತಾಪ ಸಿಂಹ ಅವರ ಕಳೆದ ಐದು ವರ್ಷಗಳ ಅವಧಿಯ ಅವರ ಕಾರ್ಯವೈಖರಿಯಿಂದ ಬಂದಿದೆಯೇ, ಇಲ್ಲ ಮೈತ್ರಿ ಪಕ್ಷಗಳಾದ ಕಾಂಗ್ರೆಸ್‌-ಜೆಡಿಎಸ್‌ ಮೈತ್ತಿಯಲ್ಲಿ ಮೂಡಿದ ಗೊಂದಲಗಳಿಂದ ಬಂದಿದೆ‌ಯೇ ಎನ್ನುವುದನ್ನು ಗಮನಿಸಿದಾಗ ಪ್ರಧಾನಿ ಮೋದಿ ಅಲೆ ಎನ್ನುವ ಅಂಶ ಬಯಲಾಗುತ್ತದೆ. ಯಾಕೆಂದರೆ ಪ್ರತಾಪ್‌ ಸಿಂಹ ಅವರ ಕಾರ್ಯವೈಖರಿ ಈ ಕ್ಷೇತ್ರದ ಜನರ ಅಭಿಪ್ರಾಯದಂತೆ ತೃಪ್ತಿಕರವಾಗಿಲ್ಲ.

ಈ ಲೋಕಸಭಾ ಕ್ಷೇತ್ರದಲ್ಲಿ ಪ್ರತಾಪ ಸಿಂಹ ಅವರನ್ನು ನಿಜಕ್ಕೂ ಕೈಹಿಡಿದು ಗೆಲುವಿನ ದಡ ಸೇರಿಸಿದ್ದು, ಬಿಜೆಪಿ ಪಕ್ಷ ಆಳವಾಗಿ ಬೇರು ಬಿಟ್ಟ ಕೊಡಗು ಜಿಲ್ಲೆಯ ಎರಡು ವಿಧಾನ ಸಭಾ ಕ್ಷೇತ್ರಗಳೇ ಆಗಿದೆ.

ಶಾಸಕ ಅಪ್ಪಚ್ಚು ರಂಜನ್‌ ಅಭಿಪ್ರಾಯದಂತೆ ಪ್ರತಾಪ ಸಿಂಹ ಅವರಿಗೆ ಜಿಲ್ಲೆಯ ಮಡಿಕೇರಿ ಮತ್ತು ವೀರಾಜಪೇಟೆ ವಿಧಾನಸಭಾ ಕ್ಷೇತ್ರಗಳು ಸುಮಾರು 90 ಸಾವಿರಕ್ಕು ಹೆಚ್ಚಿನ ಮತಗಳ ಮುನ್ನಡೆಯನ್ನು ನೀಡಿವೆ. ಇದನ್ನು ಗಮನಿಸಿದಾಗ ಮೈಸೂರು ವಿಭಾಗದಲ್ಲಿ ಮಂಕಾದ ಪ್ರತಾಪ ಸಿಂಹ ಅವರು ಕೊಡಗು ಭಾಗದ ಮತಗಳಿಂದ ಸತತ ಎರಡನೇ ಬಾರಿ ಸಂಸತ್‌ನ್ನು ಪ್ರವೇಶಿಸುವ ಅವಕಾಶ ಗಿಟ್ಟಿಸಿದ್ದಾರೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಡುತ್ತಾರೆ.

ಮೈಸೂರು -ಕೊಡಗು ಕ್ಷೇತ್ರದ ಚುನಾವಣೆಯ ಉದ್ದಕ್ಕೂ ಇಲ್ಲಿನ ಎರಡು ಕ್ಷೇತ್ರಗಳಲ್ಲಿ ಜಾತಿ ಧರ್ಮದ ವಿಚಾರಗಳು ಹೆಚ್ಚಾಗಿ ಕೇಳಿ ಬಂದಿಲ್ಲ.
ಇದಕ್ಕೂ ಮಿಗಿಲಾದ ಕುತೂಹಲವೆಂದರೆ ಮತದಾರ ಅಭ್ಯರ್ಥಿಯ ಹೆಸರು ಪ್ರಸ್ತಾಪಿಸಿದ್ದು ವಿರಳವೆ. ಬದಲಾಗಿ ಫಿರ್‌ ಏಕ್‌ ಬಾರ್‌ ಮೋದಿ ಸರ್ಕಾರ್‌‌ ಎನ್ನುವ ಘೋಷಣೆಗೆ ತಕ್ಕಂತೆ ರಾಷ್ಟ್ರೀಯ ಹಿತಾಸಕ್ತಿಯ ಹೆಸರಿನಲ್ಲಿ ಮೋದಿಯ ಹೆಸರಿನಲ್ಲಿ ಬಿಜೆಪಿಗೆ ಮತ ಚಲಾಯಿಸಿರುವುದು ಪ್ರತಾಪ ಸಿಂಹ ಗೆಲುವಿನ ನಗುವಿಗೆ ಕಾರಣವಾಗಿದೆ.

ಚುನಾವಣಾ ಪೂರ್ವದಲ್ಲಿ ಪ್ರತಾಪ ಸಿಂಹ ವಿರುದ್ಧವಾಗಿ ಮೂಡಿದ್ದ ಅಭಿಪ್ರಾಯಗಳು ಈ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಯ ಗೆಲುವಿನ ವಿಶ್ವಾಸವನ್ನು ಮೂಡಿಸಿತ್ತು.

ಹೀಗಿದ್ದೂ, ಮೈತ್ರಿ ಎಂಬುದೇ ಇಲ್ಲಿ ಸಮರ್ಪಕವಾಗಿ ಕೆಲಸ ನಿರ್ವಹಿಸದಿದ್ದುದರಿಂದ ಕಾಂಗ್ರೆಸ್‌ ಅಭ್ಯರ್ಥಿ ವಿಜಯಶಂಕರ್‌ರಿಗೆ ಗೆಲುವಿನ ಸಮೀಪಕ್ಕೂ ಹೋಗಲು ಸಾಧ್ಯವಾಗಿಲ್ಲ.

ಮಂಡ್ಯ ಚುನಾವಣೆಯಲ್ಲಿನ ಮೈತ್ರಿಗಳೊಳಗಿನ ಕಚ್ಚಾಟಗಳು ಮೈಸೂರು-ಕೊಡಗು ಕ್ಷೇತ್ರದ ಮೇಲೆ ನಿಚ್ಚಳ ಪರಿಣಾಮಗಳನ್ನು ಬೀರಿದೆ.

ಮನಃಪೂರ್ವಕವಾಗಿ ಕೊಡಗಿನಲ್ಲಿ ವಿಜಯಶಂಕರ್‌ ಪರ ಜೆಡಿಎಸ್‌ನಿಂದ ಕೆಲಸ ನಡೆಯದಿರುವುದಕ್ಕೆ ಫ‌ಲಿತಾಂಶ ಕೈಗನ್ನಡಿ ಹಿಡಿಯುತ್ತಿದ್ದರೆ, ಇದೇ ಸಂದರ್ಭ ಕಾಂಗ್ರೆಸ್‌ ಪಕ್ಷ ತನ್ನ ತಾಕತ್ತಿಗೆ ತಕ್ಕಂತ ಸಂಘಟನೆಯ ಮೂಲಕ ಮತದಾರರ ಮನವೊಲಿಸುವಲ್ಲಿ ವಿಫ‌ಲವಾಗಿರುವುದು ಕೂಡ ಗಮನಾರ್ಹ.
ಭಿನ್ನ ಅಭಿಪ್ರಾಯಗಳ ನಡುವೆಯೂ ಮೈಸೂರು, ಕೊಡಗು ಕ್ಷೇತ್ರದಲ್ಲಿ ಬಿಜೆಪಿ ಗೆಲುವನ್ನು ಸಾಧಿಸಿ ತನ್ನ ಅಸ್ತಿತ್ವವನ್ನು ಮತ್ತಷ್ಟು ಗಟ್ಟಿ ಮಾಡಿಕೊಂಡಿದೆ.

ಗೆಲುವನ್ನು ಸಾಧ್ಯಮಾಡಿಕೊಳ್ಳಬಹುದಾದ ಅವಕಾಶವನ್ನು ತಮ್ಮ ಸ್ವಯಂಕೃತ ಅಪರಾಧ‌ದಿಂದ ಕಾಂಗ್ರೆಸ್‌, ಜೆಡಿಎಸ್‌ ಮೈತ್ರಿ ಪಕ್ಷಗಳು ಕಳೆದುಕೊಂಡು ತಮ್ಮ ಅಸ್ತಿತ್ವಕ್ಕೆ ಧಕ್ಕೆಯನ್ನು ತಂದುಕೊಂಡಿವೆ.

ಟಾಪ್ ನ್ಯೂಸ್

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.