ಹಾವೇರಿಯಲ್ಲಿ “ಕೈ’ ಕೊಟ್ಟ ಲಿಂಗಾಯತರು, ಮುಸ್ಲಿಮರು


Team Udayavani, May 25, 2019, 3:00 AM IST

Udayavani Kannada Newspaper

ಹಾವೇರಿ: ಹಾವೇರಿ ಲೋಕಸಭೆ ಕ್ಷೇತ್ರಕ್ಕೆ ಕಾಂಗ್ರೆಸ್‌ ಈ ಬಾರಿ ತನ್ನೆಲ್ಲ ಹಿಂದಿನ ಸಂಪ್ರದಾಯ ಮುರಿದು, ಸಾಕಷ್ಟು ಅಳೆದು ತೂಗಿ ಟಿಕೆಟ್‌ ನೀಡಿದರೂ ನಿರೀಕ್ಷಿತ ಫಲ ಪಡೆಯುವಲ್ಲಿ ವಿಫಲವಾಯಿತು.

ಕಾಂಗ್ರೆಸ್‌ ಪಕ್ಷ ಕ್ಷೇತ್ರದಲ್ಲಿ ಕಳೆದ ಆರು ದಶಕಗಳಿಂದ ಮುಸ್ಲಿಂ ಅಲ್ಪಸಂಖ್ಯಾತರಿಗೆ ಟಿಕೆಟ್‌ ನೀಡುತ್ತ ಬಂದಿತ್ತು. 2004ರಿಂದ ನಿರಂತರ ಮೂರು ಬಾರಿ ಸೋಲುಂಡಿದ್ದರಿಂದ ಈ ಬಾರಿ ಕ್ಷೇತ್ರವನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಬೇಕೆಂಬ ಉತ್ಕಟ ಇಚ್ಛೆ ಹೊಂದಿತ್ತು. ಅದಕ್ಕಾಗಿ ಇದೇ ಮೊದಲ ಬಾರಿಗೆ ತಾನು ಹಲವು ದಶಕಗಳಿಂದ ಪಾಲಿಸಿಕೊಂಡು ಬಂದ “ಮುಸ್ಲಿಂ ಮೀಸಲು’ ಸಂಪ್ರದಾಯವನ್ನು ತಾನೇ ಮುರಿದು ಹಿಂದುಗಳಿಗೆ ಟಿಕೆಟ್‌ ನೀಡಿತು.

ಇದರ ಜತೆಗೆ ಕ್ಷೇತ್ರದ ಜಾತಿ ಲೆಕ್ಕಾಚಾರ ಹಾಕಿ ಬಹುಸಂಖ್ಯಾತ ಲಿಂಗಾಯತರ ಮತ ಸೆಳೆಯಲು ರಡ್ಡಿ ಲಿಂಗಾ ಯತ ಸಮುದಾಯದ ಡಿ.ಆರ್‌. ಪಾಟೀಲ ಅವರಿಗೆ ಟಿಕೆಟ್‌ ನೀಡಿತು. ಆದರೆ, ಫಲಿತಾಂಶ ಮಾತ್ರ ಕಾಂಗ್ರೆಸ್‌ನ ಈ ಎಲ್ಲ ಲೆಕ್ಕಾಚಾರವನ್ನೂ ತಲೆಕೆಳಗಾಗಿಸಿದೆ.

ಈ ಮೊದಲು ಧಾರವಾಡ ದಕ್ಷಿಣ ಲೋಕಸಭೆ ಕ್ಷೇತ್ರವಾಗಿದ್ದ ಹಾವೇರಿ ಲೋಕಸಭೆ ಕ್ಷೇತ್ರ ಕಾಂಗ್ರೆಸ್‌ನ ಭದ್ರಕೋಟೆ. ಆದರೆ, 2004ರಿಂದ ಕ್ಷೇತ್ರದಲ್ಲಿ ನಿರಂತರವಾಗಿ ಕಮಲ ಅರಳುತ್ತ ಬಂದಿದೆ. 2004ರಲ್ಲಿ ಬಿಜೆಪಿಯಿಂದ ಮಂಜು ನಾಥ ಕುನ್ನೂರ ಆಯ್ಕೆಯಾದರೆ. 2009, 2014 ಹಾಗೂ ಈಗ ಮೂರನೇ ಬಾರಿ ಬಿಜೆಪಿಯ ಶಿವಕುಮಾರ ಉದಾಸಿ ಗೆದ್ದು ಹ್ಯಾಟ್ರಿಕ್‌ ಜಯ ಸಾಧಿಸಿದ್ದಾರೆ.

ಅಲ್ಪಸಂಖ್ಯಾತರ ಆಕ್ರೋಶ: ಈ ಬಾರಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಯಾಗಿ ಚುನಾವಣೆ ಎದುರಿಸಿದ್ದರಿಂದ ಎರಡೂ ಪಕ್ಷಗಳ ಸಾಂಪ್ರದಾಯಿಕ ಅಲ್ಪಸಂಖ್ಯಾತ ಮತಗಳು ಪಕ್ಷಕ್ಕೆ ಅನುಕೂಲ ತಂದು ಕೊಡಲಿವೆ ಎಂಬ ಲೆಕ್ಕಾಚಾರದಲ್ಲಿ ಕಾಂಗ್ರೆಸ್‌ ಬಹು ನಂಬಿಕೆ ಇಟ್ಟುಕೊಂಡಿತ್ತು.

ಆದರೆ, ಕಾಂಗ್ರೆಸ್‌ ಈ ಬಾರಿ ಮುಸ್ಲಿಮೇತರರಿಗೆ ಟಿಕೆಟ್‌ ನೀಡಿದ್ದರಿಂದ ಮುಸ್ಲಿಮರು ಕಾಂಗ್ರೆಸ್‌ ವಿರುದ್ಧ ಸಿಡಿದೆದ್ದರು. ಮೈತ್ರಿ ಅಭ್ಯರ್ಥಿ ಸೋಲಿಸುವ ಮೂಲಕ ತಮ್ಮ ಪ್ರಾಬಲ್ಯ ಏನು ಎಂಬುದನ್ನು ತೋರಿಸಲು ನಿರ್ಧರಿಸಿದ್ದರು. ಮುಸ್ಲಿಮರ ಈ ನಡೆ ಕಾಂಗ್ರೆಸ್‌ ಮತ ಪೆಟ್ಟಿಗೆಗೆ ಭಾರಿ ಪೆಟ್ಟು ನೀಡಿತು.

ಲಿಂಗಾಯತರೂ “ಕೈ’ ಬಿಟ್ಟರು: ಇನ್ನು ಎದುರಾಳಿ ಬಿಜೆಪಿ ಅಭ್ಯರ್ಥಿ ಲಿಂಗಾಯತ ಆಗಿದ್ದು, ತಮ್ಮ ಅಭ್ಯರ್ಥಿಯೂ ಲಿಂಗಾಯತ. ಆದರೆ, ಕ್ಷೇತ್ರದ ಬಹುಸಂಖ್ಯಾತ ಲಿಂಗಾಯತ ಮತಗಳು ಸಹ ಕಾಂಗ್ರೆಸ್‌ಗೆ ಕೈ ಹಿಡಿಯಲಿವೆ ಎಂಬ ಜಾತಿ ಲೆಕ್ಕಾಚಾರವನ್ನು ಪಕ್ಷ ನಡೆಸಿತ್ತು.

ಈ ಲೆಕ್ಕಾಚಾರದ ಆಧಾರದಲ್ಲಿ ಕಾಂಗ್ರೆಸ್‌ ರಡ್ಡಿ ಲಿಂಗಾಯತ ಸಮುದಾಯಕ್ಕೆ ಸೇರಿದ ಡಿ.ಆರ್‌. ಪಾಟೀಲ ಅವರಿಗೆ ಟಿಕೆಟ್‌ ನೀಡಿತ್ತು. ಆದರೆ, ಇಲ್ಲಿಯೂ ಲಿಂಗಾಯತ ಮತಗಳು ಕೈಹಿಡಿಯ ಲಿಲ್ಲ. ಅವು ಮೋದಿ ಅಲೆಯಲ್ಲಿ ತೇಲಿ ಹೋಗಿ ಕಮಲ ಅರಳಿಸಿದವು. ಹೀಗಾಗಿ ಕಾಂಗ್ರೆಸ್‌ಗೆ ಜಾತಿ ಲೆಕ್ಕಾಚಾರವೂ ಸಹ ಕೈಕೊಟ್ಟಿತು.

* ಎಚ್‌.ಕೆ. ನಟರಾಜ

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.