ಬಿಜೆಪಿ ಬ್ಯಾನರ್ನಲ್ಲಿ ರಮೇಶ ಫೋಟೋ!
Team Udayavani, May 25, 2019, 6:00 AM IST
ಚಿಕ್ಕೋಡಿ: ಲೋಕಸಭಾ ಚುನಾವಣೆಯಲ್ಲಿ ಜಯಭೇರಿ ಬಾರಿಸಿದ ಬಿಜೆಪಿಗೆ ಅಭಿನಂದನಾ ಬ್ಯಾನರ್ವೊಂದರಲ್ಲಿ ಕಾಂಗ್ರೆಸ್ ಬಂಡಾಯ ಶಾಸಕ ರಮೇಶ ಜಾರಕಿಹೊಳಿ ಫೋಟೋ ಕಾಣಿಸಿಕೊಂಡಿರುವುದು ತೀವ್ರ ಕುತೂಹಲ ಮೂಡಿಸಿದೆ.
ನಿಪ್ಪಾಣಿಯ ಶ್ರೀರಾಮ ಸೇನೆ ಹಿಂದುಸ್ತಾನ್ ಸಂಘಟನೆ ಹಾಕಿರುವ ಅಭಿನಂದನಾ ಬ್ಯಾನರ್ನಲ್ಲಿ ಬಿಜೆಪಿ ಮುಖಂಡರ ಜತೆ ರಮೇಶ ಜಾರಕಿಹೊಳಿ ಫೋಟೋ ಹಾಕಲಾಗಿದೆ. ಚುನಾವಣೆಯಲ್ಲಿ ಬಿಜೆಪಿ ಪರ ಪರೋಕ್ಷವಾಗಿ ಕೆಲಸ ಮಾಡಿದ್ದ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಚಿಕ್ಕೋಡಿ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಗೆಲುವಿಗೆ ಪರೋಕ್ಷವಾಗಿ ಕಾರಣರಾಗಿದ್ದಾರೆ ಎನ್ನುವ ಸುದ್ದಿ ತೀವ್ರ ಚರ್ಚೆ ಹುಟ್ಟುಹಾಕಿದೆ.
ಆದರೆ, ಸಂಘಟನೆಯ ಚಿಕ್ಕೋಡಿ ಘಟಕದ ಅಧ್ಯಕ್ಷ ನಿಲೇಶ ಹತ್ತಿ, ‘ಜೊಲ್ಲೆ ಹಾಗೂ ರಮೇಶ ಜಾರಕಿಹೊಳಿ ಅವರು ಸಾಮಾಜಿಕ ಕೆಲಸ ಕಾರ್ಯಗಳಿಗೆ ನಮಗೆ ಸಹಾಯ ಮಾಡುತ್ತಾರೆ. ಹೀಗಾಗಿ ನಮ್ಮ ಸಂಘಟನೆ ವತಿಯಿಂದ ನಮಗೆ ಬೇಕಿರುವ ರಾಜಕಾರಣಿಗಳ ಫೋಟೋ ಬಳಕೆ ಮಾಡಿಕೊಳ್ಳಲಾಗಿದೆ.
ಇದಕ್ಕೆ ರಾಜಕೀಯ ಬಣ್ಣ ಬಳಿಯುವುದು ಬೇಡ. ಸಂಘಟನೆಗೂ, ರಾಜಕೀಯಕ್ಕೂ ಯಾವುದೇ ರೀತಿ ಸಂಬಂಧವಿಲ್ಲ’ ಎಂದು ಸಮಜಾಯಿಷಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ