ಬಡವರಿಗೆ ವರವಾದ ಜನರಿಕ್‌ ಔಷಧ

ಜಿಲ್ಲೆಯ ನಾಲ್ಕೂ ತಾಲೂಕುಗಳ ಸರ್ಕಾರಿ ಆಸ್ಪತ್ರೆಗಳಲ್ಲಿ 8 ಜನರಿಕ್‌ ಔಷಧ ಮಳಿಗೆಆರಂಭ

Team Udayavani, May 25, 2019, 12:52 PM IST

BR-TDY-1..

ದೇವನಹಳ್ಳಿ ವಿಜಯಪುರ ರಸ್ತೆಯಲ್ಲಿರುವ ಸರ್ಕಾರಿ ಆಸ್ಪತ್ರೆ ಆವರಣದಲ್ಲಿರುವ ಜನರಿಕ್‌ ಔಷಧ ಕೇಂದ್ರದಲ್ಲಿ ಗ್ರಾಹಕರು ಔಷಧಿ ಖರೀದಿಸುತ್ತಿರುವುದು.

ದೇವನಹಳ್ಳಿ: ಜನಸಾಮಾನ್ಯರಿಗೆ ಉಪಯೋಗ ವಾಗಲೆಂದು ಸರ್ಕಾರ ಜಾರಿಗೆ ತಂದಿರುವ ಜನರಿಕ್‌ ಔಷಧಗಳಿಂದ ಬಡ ಜನರಿಗೆ ಅನುಕೂಲವಾಗುತ್ತಿರುವುದು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕಂಡುಬರುತ್ತಿದೆ. ಜಿಲ್ಲೆಯ ನಾಲ್ಕೂ ತಾಲೂಕುಗಳ ಸರ್ಕಾರಿ ಆಸ್ಪತ್ರೆಗಳಲ್ಲಿ 8ಜನರಿಕ್‌ ಔಷಧ ಮಳಿಗೆಗಳನ್ನು ಪ್ರಾರಂಭಿಸಲಾಗಿದೆ. ದೇವನಹಳ್ಳಿ ಮತ್ತುವಿಜಯಪುರ, ದೊಡ್ಡಬಳ್ಳಾಪುರದ 2 ಕಡೆ ಗಳಲ್ಲಿ ಹಾಗೂ ನೆಲಮಂಗಲ ಮತ್ತು ತ್ಯಾಮಗೊಂಡ್ಲು, ಹೊಸಕೋಟೆ ಮತ್ತು ಸೂಲಿಬೆಲೆಯಲ್ಲಿ  ಜನರಿಕ್‌ ಔಷಧ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ.

ಶೇ.50ಕಡಿಮೆ ಬೆಲೆಗೆ ಔಷಧ: ಬಡಜನರು ದುಬಾರಿ ಬೆಲೆ ತೆತ್ತು ಖಾಸಗಿ ಔಷಧಿ ಮಳಿಗೆಗಳಲ್ಲಿ ಔಷಧ ಖರೀದಿಸಬೇಕಾಗಿತ್ತು.ಆದರೆ, ಖಾಸಗಿ ಔಷಧ ಮಳಿಗೆಗಳಲ್ಲಿ 30ರೂ.ಗೆ ಸಿಗುವ ಔಷಧ ಜನರಿಕ್‌ ಔಷಧ ಕೇಂದ್ರಗಳಲ್ಲಿ 15ರಿಂದ 20ರೂ.ಗೆ ಸಿಗುತ್ತಿರುವುದು ಬಹುದೊಡ್ಡ ಅನುಕೂಲವಾಗಿದೆ. ಜನರಿಕ್‌ ಔಷಧ ಮಳಿಗೆಗಳ ಗೋಡೆಗಳ ಮೇಲೆ ಕೊಟ್ಟಿರುವ ಮಾಹಿತಿಯಂತೆ ಕನಿಷ್ಠ ಶೇ.50ಕಡಿಮೆ ಬೆಲೆಗೆ ಔಷಧ ದೊರೆಯುತ್ತದೆ.

ಜನೌಷಧ ಕೇಂದ್ರ: ಜನರಿಕ್‌ ಔಷಧಗಳ ಮಳಿಗೆಗಿಂತ ಕೇಂದ್ರ ಸರ್ಕಾರದ ಮೂಲಕ ಸ್ಥಾಪನೆ ಆಗಿರುವ ಜನೌಷಧ ಕೇಂದ್ರದಲ್ಲಿ ಬಹಳಷ್ಟು ಅಗ್ಗದ ದರದಲ್ಲಿ ಔಷಧಗಳು ಸಿಗುತ್ತವೆ. ಉದಾಹರಣೆಗೆ ಮಧುಮೇಹಿಗಳು ಸೇವಿಸುವ ಗ್ಲೆ„ಕೋಮೆಟ್‌ ಜಿಪಿ ಒಂದುಮಾತ್ರೆಗೆ 6ರೂ.ಇದ್ದು, ಜನರಿಕ್‌ ಔಷಧ ಮಳಿಗೆಯಲ್ಲಿ ಅದು 3ರೂ.ಗೆ ಸಿಗುತ್ತದೆ.

ಎಲ್ಲಾ ರೀತಿಯ ಮಾತ್ರೆ ಸಿಗಬೇಕು:ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಜನರಿಕ್‌ ಔಷಧ ಸರಿಯಾಗಿ ನೀಡುತ್ತಿಲ್ಲ. ಸಕ್ಕರೆ ಖಾಯಿಲೆ ಮತ್ತು ರಕ್ತದೊತ್ತಡ ಮಾತ್ರೆ ಗಳು ಗ್ರಾಹಕರಿಗೆ ಹೆಚ್ಚಿನ ಅನುಕೂಲ ವಾಗುತ್ತಿವೆ. ನಗರಸಭೆ ಸಮೀಪ ಜನರಿಕ್‌ಔಷಧ ಮಳಿಗೆ ತಲೆಎತ್ತಿದ್ದು, ಸರಿಯಾದ ರೀತಿಯಲ್ಲಿ ಮಾತ್ರೆಗಳು ಸಿಗುತ್ತಿವೆ. ಇದು ಜನರಿಗೆ ಸಮಾಧಾನದ ಸಂಗತಿ. ಬೇರೆ ಖಾಯಿಲೆ ಗಳಿಗೂ ಹೆಚ್ಚಿನ ಮಾತ್ರೆ ಸಿಗಬೇಕೆಂದು ಸಾರ್ವಜನಿಕರು ಒತ್ತಾಯಿಸುತ್ತಾರೆ.

ಸಮಸ್ಯೆ ಆಗದಂತೆ ನೋಡಿಕೊಳ್ಳಿ: ಜಿಲ್ಲೆ ಯಲ್ಲಿ ಯಾವುದೇ ಸಮಸ್ಯೆಯಿಲ್ಲದೇ ಜನ ರಿಕ್‌ ಔಷಧಗಳ ಕೇಂದ್ರಗಳು ನಡೆಯುತ್ತಿವೆ.ಖಾಸಗಿ ಔಷಧ ಅಂಗಡಿಗಳಲ್ಲಿ ಒಂದು ಲಕ್ಷ ಔಷಧಗಳು ಜನರಿಕ್‌ ಕೇಂದ್ರದಲ್ಲಿ 25 ಸಾವಿರ ರೂ.ಗೆ ಸಿಗುತ್ತಿರುವುದು ಶ್ಲಾಘನೀಯ ವಾಗಿದೆ. ಎಲ್ಲಾ ಔಷಧಗಳು ಮುಗಿಯುತ್ತಿ ದ್ದಂತೆ ನಿಗದಿತ ವೇಳೆಗೆ ಬೇಡಿಕೆಗೆ ಅನುಗುಣ ವಾಗಿ ಔಷಧಗಳನ್ನು ತರಿಸಬೇಕು. ಜನರಿಗೆ ಯಾವುದೇ ಸಮಸ್ಯೆ ಆಗದಂತೆ ನೋಡಿಕೊಳ್ಳ ಬೇಕೆಂದು ಅಧಿಕಾರಿಗಳು ಔಷಧಾಲಯದ ಮೇಲ್ವಿ ಚಾರಕರಿಗೆ ಸೂಚಿಸಿದ್ದಾರೆ.

ಔಷಧಿಗೆ ಹೆಚ್ಚಿನ ಬೇಡಿಕೆ: ಜನರಿಕ್‌ ಔಷಧ ಕೇಂದ್ರದಲ್ಲಿ ಔಷಧ ಸಿಗದಿದ್ದಾಗ ಆಸ್ಪತ್ರೆ ಯಲ್ಲಿರುವ ಔಷಧಿ ನೀಡಬೇಕು. ಮುಗಿದ ತಕ್ಷಣ ಔಷಧಕ್ಕೆ ಬೇಡಿಕೆ ಸಲ್ಲಿಸಬೇಕು. ಈ ಕೇಂದ್ರಗಳಲ್ಲಿ ಬಡಜನರಿಗೆ ಔಷಧಗಳು ಕೈಗೆಟುಕುವ ದರದಲ್ಲಿ ಸಿಗುತ್ತಿರುವುದರಿಂದಔಷಧಿಗೆ ಹೆಚ್ಚಿನ ಬೇಡಿಕೆ ಇದೆ. ಗ್ರಾಹಕರ ಹೇಳಿಕೆ: ಖಾಸಗಿ ಔಷಧ ಅಂಗಡಿ ಗಳಲ್ಲಿ ಸಿಗುವಂತೆ ಎಲ್ಲಾ ಜನರಿಕ್‌ ಔಷಧ ಕೇಂದ್ರಗಳಲ್ಲೂ ಎಲ್ಲಾ ಔಷಧಗಳು ದೊರೆ ಯುವಂತಾಗಬೇಕು. ಜನರಿಕ್‌ ಔಷಧ ಕೇಂದ್ರದಿಂದ ಜನರಿಗೆ ಅನುಕೂಲವಾಗಿದೆಎಂದು ಗ್ರಾಹಕ ಶ್ರೀನಿವಾಸ್‌ ಹೇಳಿದರು.

  • ಎಸ್‌.ಮಹೇಶ್‌

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.