ಮೋದಿ ಹವಾ, ತನ್ನ ವಿರೋಧಿ ಅಲೆಯಲ್ಲಿ ಮೊಯ್ಲಿ ಸೋಲು
ಹ್ಯಾಟ್ರಿಕ್ ಗೆಲುವಿನ ವಸ್ತಿಲಲ್ಲಿ ಮುಗ್ಗರಿಸಿ ವೀರಪ್ಪ ಮೊಯ್ಲಿ ವರ್ಕೌಟ್ ಆಗದ ಮೈತ್ರಿ ಧರ್ಮ
Team Udayavani, May 25, 2019, 3:01 PM IST
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಲೋಕ ಸಭಾ ಕ್ಷೇತ್ರದ ಫಲಿತಾಂಶ ಒಂದು ರೀತಿಯಲ್ಲಿ ಮೋದಿ ಅಲೆಗಿಂತ ಮೊಯ್ಲಿ ವಿರೋಧಿ ಅಲೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದೆ ಎನ್ನುವುದು ಸ್ಪಷ್ಟವಾಗಿ ಗೋಚರಿಸಿದೆ.
ಕ್ಷೇತ್ರದ ವ್ಯಾಪ್ತಿಯಲ್ಲಿರುವ ಕಾಂಗ್ರೆಸ್ ಪ್ರಾಬಲ್ಯದ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿರುವುದು, ಬಿಜೆಪಿಯ ಬಿ.ಎನ್.ಬಚ್ಚೇಗೌಡ 1.81 ಲಕ್ಷದಷ್ಟು ಭಾರೀ ಮತಗಳ ಅಂತರದಿಂದ ಗೆಲುವು ಸಾಧಿಸಿರುವುದು ಕ್ಷೇತ್ರದಲ್ಲಿದ್ದ ಮೊಯ್ಲಿ ವಿರೋಧಿ ಅಲೆಯನ್ನು ಪುಷ್ಟೀಕರಿಸಿದೆ.
ಕೈ ಶಾಸಕರಿದ್ದರೂ ಬಿಜೆಪಿ ಮುನ್ನಡೆ: ಕ್ಷೇತ್ರದ ವ್ಯಾಪ್ತಿಗೆ ಬರುವ ಯಲಹಂಕ ವಿಧಾನಸಭಾ ಕ್ಷೇತ್ರ ಬಿಜೆಪಿ ಗೆಲುವಿಗೆ ದೊಡ್ಡ ಕೊಡುಗೆ ಕೊಟ್ಟಿದೆ. ಹೆಚ್ಚು ಒಕ್ಕಲಿಗ ಸಮುದಾಯ ಇರುವ ಕಾಂಗ್ರೆಸ್ ಪ್ರಾಬಲ್ಯದ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ 34 ಸಾವಿರದಷ್ಟು ಮತಗಳ ಅಂತರ ಕಾಂಗ್ರೆಸ್ಗಿಂತ ಬಿಜೆಪಿ ಪಡೆದಿದೆ.
ದೊಡ್ಡಬಳ್ಳಾಪುರದಲ್ಲಿ ಕಾಂಗ್ರೆಸ್ ಶಾಸಕರಿದ್ದರೂ ಬಿಜೆಪಿ 20 ಸಾವಿರಕ್ಕೂ ಅಧಿಕ ಮತಗಳ ಲೀಡ್ ಪಡೆದು ಕೊಂಡು ಗಮನ ಸೆಳೆದಿದೆ. ಮೊಯ್ಲಿ ಸೋಲಿಗೆ ಕಾಂಗ್ರೆಸ್, ಜೆಡಿಎಸ್ ಮೈತ್ರಿ ದೊಡ್ಡ ಪ್ರಮಾಣದಲ್ಲಿ ಹೊಡೆತ ಬಿದ್ದಿದೆ.
ಜಿಲ್ಲೆಯ ಬಹುತೇಕ ಕ್ಷೇತ್ರಗಳಲ್ಲಿ ಸ್ಥಳೀಯವಾಗಿ ಕಾಂಗ್ರೆಸ್, ಜೆಡಿಎಸ್ ನಾಯಕರ ವೈಮನಸ್ಸಿನಿಂದ ಮೈತ್ರಿ ಧರ್ಮ ಸಮರ್ಪಕವಾಗಿ ವರ್ಕೌಟ್ ಆಗದೇ ಲೋಕಸಭಾ ಚುನಾವಣೆಯಲ್ಲಿ ತನ್ನ ಭದ್ರಕೋಟೆ ಉಳಿಸಿಕೊಳ್ಳುವಲ್ಲಿ ಕಾಂಗ್ರೆಸ್ ವಿಫಲವಾಗಿದೆ. ಇನ್ನೂ ಕ್ಷೇತ್ರದ ಹಿಂದಿನ ಚುನಾವಣೆಗಳನ್ನು ಗಮನಿಸದೆ ಪ್ರತಿ ಬಾರಿ ಕೂಡ ತ್ರಿಕೋನ ಸ್ಪರ್ಧೆ ಏರ್ಪಟ್ಟಗೆಲ್ಲಾ ಕಾಂಗ್ರೆಸ್ಗೆ ದಲಿತ, ಹಿಂದುಳಿದ ಹಾಗೂ ಅಲ್ಪ ಸಂಖ್ಯಾತರ ಮತಗಳ ಆಸರೆಯಿಂದ ಸುಲಭವಾಗಿ ಗೆದ್ದು ಬರುತ್ತಿತ್ತು.
2009, 2014 ಲೋಕಸಭಾ ಚುನಾವಣೆಗಳ ಫಲಿತಾಂಶ ಗಮನಿಸಿದರೆ ಸ್ಪಷ್ಟವಾಗುತ್ತದೆ. ಆದರೆ ಈ ಬಾರಿ ಕ್ಷೇತ್ರದಲ್ಲಿ ದ್ವಿಕೋನ ಸ್ಪರ್ಧೆ ಏರ್ಪಟ್ಟಿದ್ದರಿಂದ ಕ್ಷೇತ್ರದ ಪ್ರಬಲ ಸಮು ದಾಯ ಒಕ್ಕಲಿಗ ಮತಗಳು ಬಿಜೆಪಿ ಅಭ್ಯರ್ಥಿ ಬಚ್ಚೇಗೌಡ ಕೈ ಹಿಡಿದಿದ್ದರಿಂದ ದಳಪತಿ ಗಳು ಕೈ ಹಿಡಿಯದ ಕಾರಣ ದಿಂದ ಕ್ಷೇತ್ರದಲ್ಲಿ ಬಿಜೆಪಿ ಸುಲಭವಾಗಿ ಜಯ ಸಾಧಿಸಿ ಗೆಲುವಿನ ನಗೆ ಬೀರಿದೆ.
ಮೊಯ್ಲಿಗೆ ತಟ್ಟಿದ ನೀರಾವರಿ ಬಿಸಿ: ಮತ್ತೂಂದೆಡೆ ಕಾಂಗ್ರೆಸ್ ಅಭ್ಯರ್ಥಿ ಎಂ.ವೀರಪ್ಪ ಮೊಯ್ಲಿ ಸೋಲಿಗೆ ಮೈತ್ರಿ ಧರ್ಮಪಾಲನೆ ಆಗದಿರುವುದು ಒಂದೆಡೆಯಾದರೆ ಕ್ಷೇತ್ರದಲ್ಲಿ ಉಲ್ಬಣಿಸಿದ್ದ ನೀರಾ ವರಿ ಬಿಸಿ ಕೂಡ ಮೊಯ್ಲಿಗೆ ಬಿಸಿ ತುಪ್ಪವಾಗಿತ್ತು. ಸದಾ ಬರದಿಂದ ಕಂಗೆಟ್ಟಿರುವ ಜಿಲ್ಲೆಯ ಜನತೆ ದಶಕಗಳಿಂದಲೂ ಶಾಶ್ವತ ನೀರಾವರಿಗಾಗಿ ಧ್ಯಾನ ಮಾಡುತ್ತಿದ್ದಾರೆ. ಆದರೆ ಹತ್ತು ವರ್ಷ ಕ್ಷೇತ್ರದ ಸಂಸದರಾದರೂ ಕನಿಷ್ಠ ಈ ಭಾಗಕ್ಕೆ ಶುದ್ಧ ಕುಡಿಯುವ ನೀರು ಕಲ್ಪಿಸಲಿಲ್ಲ. ಎತ್ತಿನಹೊಳೆ ಯೋಜನೆ, ಹೆಬ್ಟಾಳ ಹಾಗೂ ನಾಗವಾರ ತ್ಯಾಜ್ಯ ನೀರನ್ನು ಕೂಡ ಸಕಾಲದಲ್ಲಿ ತಂದು ಕೆರೆಗಳಿಗೆ ತುಂಬಿಸಿ ಜಿಲ್ಲೆಯ ಅಂತರ್ಜಲ ವೃದ್ಧಿಗೆ ತ್ವರಿತವಾಗಿ ಕ್ರಮಗೊಳ್ಳಲಿಲ್ಲ ಎಂಬ ಅಸಮಾಧಾನ, ಆಕ್ರೋಶಕ್ಕೆ ಈ ಬಾರಿ ಮೊಯ್ಲಿ ತುತ್ತಾಗಬೇಕಾಯಿತು. ಒಂದು ರೀತಿ ಮೋದಿ ಹವಾ ಜೊತೆಗೆ ಕ್ಷೇತ್ರದಲ್ಲಿ ತೀವ್ರತರದಲ್ಲಿ ಸೃಷ್ಟಿಯಾಗಿದ್ದ ತನ್ನ ವಿರೋಧಿಅಲೆಗೆ ವಿರೋಧಿ ಮೊಯ್ಲಿ ಗೆಲುವು ಸಾಧಿಸ ಲಾಗದೇ ಬಿಜೆಪಿ ವಿರುದ್ಧ ಸೋಲು ಒಪ್ಪಿಕೊಳ್ಳಬೇಕಾಯಿತು.
● ಕಾಗತಿ ನಾಗರಾಜಪ್ಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Sandalwood: ಧೀರೇನ್ ರೀ ಇಂಟ್ರೊಡಕ್ಷನ್