ಹೊಯ್ಸಳೇಶ್ವರ ದೇಗುಲಕ್ಕೆ ಅಧಿಕಾರಿಗಳ ಭೇಟಿ


Team Udayavani, May 25, 2019, 3:16 PM IST

hasan-tdy-2..

ವಿಶ್ವ ಪ್ರಸಿದ್ಧ್ದ ಹೊಯ್ಸಳೇಶ್ವರ ದೇವಾಲಯಕ್ಕೆ ಕೇಂದ್ರ ಪುರಾತತ್ವ ಇಲಾಖೆ ಮಹಾ ನಿರ್ದೇಶಕಿ ಉಷಾ ಶರ್ಮಭೇಟಿ ನೀಡಿ ಪರಿಶೀಲನೆ ನಡೆಸಿದರು.

ಹಳೇಬೀಡು: ವಿಶ್ವ ವಿಖ್ಯಾತ ಹೊಯ್ಸಳೇಶ್ವರ ದೇವಾಲಯದಲ್ಲಿ ನೀರಿನ ಸಮಸ್ಯೆ, ದೇವಾಲಯದ ಮಾರ್ಗದರ್ಶಕರ ಸಮಸ್ಯೆ, ಉದ್ಯಾನವನ ಕಳಪೆ ನಿರ್ವಹಣೆ, ನಗರೇಶ್ವರ ದೇವಾಲಯದ ಕಾಪೌಂಡ್‌ ಕಳಪೆ ಕಾಮಗಾರಿ ಸೇರಿದಂತೆ ದೇವಾಲಯ ಹಲವು ಸಮಸ್ಯೆಗಳ ಆಗಾರವಾಗಿದೆ ಎಂದು ಉದಯ ವಾಣಿ ದಿನ ಪತ್ರಿಕೆಯಲ್ಲಿ ವಿಸ್ತೃತವಾಗಿ ವರದಿ ಪ್ರಕಟವಾದ ನಂತರ ಅಧಿಕಾರಿಗಳ ತಂಡ ದಿಢೀರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಹೊಯ್ಸಳೇಶ್ವರ ದೇವಾಲಯ ಸೇರಿದಂತೆ ಹಳೇಬೀಡು ಸುತ್ತಮುತ್ತಲಿನ ರಾಷ್ಟ್ರೀಯ ಸ್ಮಾರಕಗಳ ಸೌಕರ್ಯಗಳ ಕೊರತೆ, ಹಾಗೂ ಕಳಪೆ ನಿರ್ವಹಣೆಯನ್ನು ಗಮನಿಸಿದ ಕೇಂದ್ರ ಪುರಾತತ್ವ ಇಲಾಖೆ ಮಹಾ ನಿರ್ದೇಶಕಿ ಉಷಾ ಶರ್ಮ ತೀವ್ರ ಅಸಮಧಾನ ವ್ಯಕ್ತಪಡಿಸಿದರು.

ಅಧಿಕಾರಿಗಳಿಗೆ ತರಾಟೆ: ದೇವಾಲಯದ ಆವರಣವನ್ನು ಸುಮಾರು ಒಂದು ಘಂಟೆಗೂ ಹೆಚ್ಚುಕಾಲ ವೀಕ್ಷಣೆ ಮಾಡಿ ಮಹಾ ನಿರ್ದೇಶಕಿ ನಿಯಮಗಳನ್ನು ಸರಿಯಾಗಿ ಪಾಲನೆ ಮಾಡದೇ ನಿರ್ಲಕ್ಷ್ಯವಹಿಸಲಾಗಿದೆ ಎಂದು ಕೇಂದ್ರ ಪುರಾತತ್ವ ಇಲಾಖೆಯ ಅಧೀಕ್ಷಕಿ ಮುರ್ತೇಶ್ವರಿ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

ತರಾತುರಿಯಲ್ಲಿ ನಡೆದ ಸ್ವಚ್ಛತೆ ಯನ್ನು ಗಮನಿಸಿದ್ದಲ್ಲದೇ ವಸ್ತು ಸಂಗ್ರಹಾಲಯದಲ್ಲಿ ತುಕ್ಕು ಹಿಡಿ ಯುತ್ತಿದ್ದ ಪೋಲೀಸ್‌ ಚೌಕಿ ಬಾಕ್ಸ್‌ನ್ನು ಕಾರ್ಮಿಕರ ಸಹಾಯದಿಂದ ಹೊರಹಾಕಲು ಸೂಚಿಸಿ, ಅದಕ್ಕೆ ಸರಿಯಾದ ರೂಪ ಕೊಟ್ಟು ಪೋಲೀಸರನ್ನು ಭದ್ರತೆಗೆ ನಿಯೋಜಿಸಿ ಎಂದು ತಾಕೀತು ಮಾಡಿದರು.

ಉತ್ಖನನ  ಸ್ಥಳ ಪರಿಶೀಲನೆ: ಹೊಸದಾಗಿ ದೇವಾಲಯದ ಆವರಣದಲ್ಲಿ ನಡೆಯು ತ್ತಿರುವ ಸ್ಥಳವನ್ನು ವೀಕ್ಷಣೆ ಮಾಡಿ, ಸರಿಯಾದ ಸಮಯಕ್ಕೆ ಹಾಗೂ ಯಾವುದೇ ಹೊಯ್ಸಳರ ಕಾಲದ ವಿಗ್ರಹಗಳಿಗೆ ತೊಂದರೆ ಯಾಗದಂತೆ ಸಂರಕ್ಷಣೆ ಮಾಡಬೇಕು ಹಾಗೂ ಪ್ರತಿ ಯೊಂದು ಉತ್ಖನದ ಮಾಹಿತಿ ಯನ್ನು ಸಮಯಕ್ಕೆ ಸರಿಯಾಗಿ ತಿಳಿಸುವಂತೆ ವಸ್ತು ಸಂಗ್ರಹಾಲಯದ ಸಂರಕ್ಷಣಾಧಿಕಾರಿ ಅರಾವಜಿ ಅವರಿಗೆ ಸೂಚಿಸಿದರು. ಜೊತೆಗೆ ಈ ಕಾರ್ಯದಲ್ಲಿ ತೊಡಗಿರುವ ಡಿ.ಜಿ. ಕಾರ್ಮಿಕರಿಗೆ ಸೂಕ್ತ ನೆರಳಿನ ವ್ಯವಸ್ಥೆ ಕಲ್ಪಸುವಂತೆ ತಿಳಿಸಿದರು.

ದೇವಾಲಯದ ಬಳಿ ಬಾರದ ಡಿ.ಜಿ.: ಪ್ರತಿ ನಿತ್ಯ ದೇವಾಲಯದ ವೀಕ್ಷಣೆಗೆ ಸಾವಿರಾರು ಪ್ರವಾಸಿಗರು ಬರುವ ಸ್ಥಳದಲ್ಲಿ ಸಾಕಷ್ಟು ಮೂಲಭೂತ ಸೌಲಭ್ಯಗಳ ಕೊರತೆಗಳಿಗೆ ಅವುಗಳ ಬಗ್ಗೆ ಕೇಂದ್ರ ಪುರಾತತ್ವ ಇಲಾಖೆ ಅಧಿಕಾರಿ ಉಷಾ ಶರ್ಮ ಅವರಿಗೆ ಗಮನಕ್ಕೆ ತರಲು ಕಾಯುತ್ತಿದ್ದ ಸ್ಥಳೀಯರು ದೇವಾಲಯದ ಮೆಟ್ಟಿಲನ್ನೂ ಹತ್ತದ ಅಧಿಕಾರಿಗಳ ವರ್ತನೆಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ದೇವಾಲಯ ವಸ್ತು ಸಂಗ್ರಹಾಲಯವನ್ನು ಹೊರತುಪಡಿಸಿ ಮತ್ತೆಲ್ಲೂ ನೀರಿನ ವ್ಯವಸ್ಥೆ ಇಲ್ಲ. ವಿದ್ಯುತ್‌ ದೀಪಗಳು ಉರಿಯದೇ ಹಲವು ವರ್ಷಗಳೇ ಕಳೆದಿವೆ. ದೇವಾಲಯದ ಒಳಭಾಗ ಕತ್ತಲೆಯ ಕೋಣೆಯಂತಾಗಿದೆ. ಸೂಕ್ತ ನಿರ್ವಹಣೆ ಇಲ್ಲದೇ ದೇವಾಲಯದ ಒಳಭಾಗದ ವಿಗ್ರಹಗಳು ಬಿಳಿ ಬಣ್ಣಕ್ಕೆ ತಿರುಗಿವೆ. ದೇವಾಲಯಕ್ಕೆ ಸಂಬಂಧಿಸಿದಂತೆ ಸೂಕ್ತ ನಾಮಫ‌ಲಕಗಳೂ ಇಲ್ಲ ಎಂಬ ಇತ್ಯಾದಿ ಸಮಸ್ಯೆಗಳನ್ನು ಅಧಿಕಾರಿಗಳಿಗೆ ತಿಳಿಸಲು ಕಾಯುತ್ತಿದ್ದೆವು ಆದರೆ ಸ್ಮಾರಕಗಳನ್ನೇ ಗಮನಿಸದ ಅಧಿಕಾರಿಗಳಿಗೆ ಮೇಲಧಿಕಾರಿಗಳು ದಾರಿ ತಪ್ಪಿಸಿದ್ದಾರೆ ಎಂದು ಸ್ಥಳೀ ಯರು ತಮ್ಮ ಸಹನೆಯನ್ನು ಹೊರಹಾಕಿದರು

ವ್ಯವಸ್ಥೆ ಸುಧಾರಣೆಗೆ ಕ್ರಮ: ಪ್ರಾಚ್ಯವಸ್ತು ಇಲಾಖೆ ಅಧೀನದಲ್ಲಿರುವ ಎಲ್ಲಾ ಸ್ಮಾರಕಗಳ ರಕ್ಷಣೆ ಹಾಗೂ ಉತ್ತಮ ನಿರ್ವಹಣೆಗೆ ಸಂಬಂಧಿಸಿದಂತೆ ಕೆಳ ಹಂತದಿಂದ ಯೋಜನೆ ಗಳನ್ನು ತಯಾರಿಸಿ ವಿಶೇಷ ಕ್ರಮ ಕೈಗೊಳ್ಳಲಾಗುವುದು ಎಂದು ಉಷಾ ಶರ್ಮ ಹೇಳಿದರು.

ಹೇಬೀಡು ದೇವಾಲಯದ ಅಭಿವೃದ್ಧಿಗೆ ಸಂಬಂಧಿಸಿದಂತೆ ನೀಲ ನಕ್ಷೆ ತಯಾರಿಸಲು ಅಧಿಕಾರಿಗಳಿಗೆ ಸೂಚಿಸಿ, ಇದಕ್ಕೆ ಸಂಬಂದಿಸಿ ದಂತೆ ನಿರ್ಲಕ್ಷ್ಯ ವಹಿಸಿದರೆ ಅಧಿಕಾರಿಗಳಿಗೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇನೆ ಎಂದು ಎಚ್ಚರಿಸಿದರು.

ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್‌, ಇಲಾಖೆ ಅಧಿಕಾರಿ ಶಿವಲಿಂಗಪ್ಪ ಕುಂಬಾರ್‌, ಪುರಾತತ್ವ ಸಂರಕ್ಷಣಾಧಿಕಾರಿ ಅರಾವಜಿ, ಸಹಾಯಕ ಸಂರಕ್ಷಣಾಧಿಕಾರಿ ಎಲ್.ಬಿ. ಕಾಮತ್‌ ಮುಂತಾದವರು ಹಾಜರಿದ್ದರು.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.