ಶಂಕಿತ ಗೋ ರಕ್ಷಕರ ವಿರುದ್ಧ ಕಠಿನ ಕ್ರಮ: ಮ.ಪ್ರ. ಸರಕಾರಕ್ಕೆ ಮೆಹಬೂಬ ಆಗ್ರಹ
Team Udayavani, May 25, 2019, 4:05 PM IST
ಶ್ರೀನಗರ : ಮಧ್ಯ ಪ್ರದೇಶ ಸರಕಾರ ಶಂಕಿತ ಗೋ ರಕ್ಷಕರ ವಿರುದ್ದ ಕಠಿನ ಕ್ರಮ ತೆಗೆದುಕೊಳ್ಳಬೇಕು ಎಂದು ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬ ಮುಫ್ತಿ ಆಗ್ರಹಿಸಿದ್ದಾರೆ.
ಮಧ್ಯಪ್ರದೇಶದ ಸಿಯೋನಿ ಯಲ್ಲಿ ಶಂಕಿತ ಗೋ ರಕ್ಷಕರು ಇಬ್ಬರು ವ್ಯಕ್ತಿಗಳಿಗೆ ದೊಣ್ಣೆಯಿಂದ ಅಮಾನುಷವಾಗಿ ಹೊಡೆಯುತ್ತಿರುವ ವಿಡಿಯೋ ಚಿತ್ರಿಕೆಯೊಂದು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಸುತ್ತಾಡುತ್ತಿರುವುದನ್ನು ಆತಂಕದಿಂದ ಗಮನಿಸಿರುವ ಮೆಹಬೂಬ, ಶಂಕಿತ ಗೋ ರಕ್ಷಕರ ವಿರುದ್ಧ ಕಠಿನ ಕ್ರಮ ತೆಗೆದುಕೊಳ್ಳುವಂತೆ ಮಧ್ಯ ಪ್ರದೇಶ ಸರಕಾರವನ್ನು ಟ್ವಿಟರ್ ಮೂಲಕ ಒತ್ತಾಯಿಸಿದ್ದಾರೆ.
ಪೊಲೀಸರು ಈ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಐವರನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್
NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ