ಸೋತವರನ್ನು ಸಂತೈಸುವುದು ದೊಡ್ಡ ಕೆಲಸ


Team Udayavani, May 26, 2019, 3:00 AM IST

sotavara

ಮೈಸೂರು: ಗೆದ್ದವರನ್ನು ಹೊತ್ತು ಮೆರೆಯುವ ಈ ದಿನಗಳಲ್ಲಿ , ಸೋತವರನ್ನು ಸಂತೈಸಿ ಗೆಲುವಿನ ಹಾದಿ ತೋರಿಸಲು ಮುಂದಾಗಿರುವುದು ಶ್ಲಾಘನೀಯ ಕ್ರಮ ಎಂದು ವಿಮರ್ಶಕ ಪ್ರೊ.ಸಿ.ನಾಗಣ್ಣ ಮೆಚ್ಚುಗೆ ವ್ಯಕ್ತಪಡಿಸಿದರು.

ಅಖೀಲ ಕರ್ನಾಟಕ ಪಿಯು ಕಾಲೇಜು ಉಪನ್ಯಾಸಕರ ಹಿತರಕ್ಷಣಾ ಸಂಘ ಹಾಗೂ ಮೈಸೂರು ಜಿಲ್ಲಾ ಪಿಯು ಒಕ್ಕೂಟದಿಂದ ನಗರದ ಚಾಮರಾಜ ಜೋಡಿ ರಸ್ತೆಯಲ್ಲಿರುವ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿರುವ ದ್ವಿತೀಯ ಪಿಯು ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಉಚಿತ ಬೋಧನಾ ತರಗತಿಗಳ ಶುಭ ಹಾರೈಕೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಈ ಪ್ರಪಂಚ ಯಾವತ್ತೂ ಕೂಡ ಗೆದ್ದವರ ಪರವಾಗಿಯೇ ಇರುತ್ತೆ. ಗೆದ್ದವರನ್ನು ಹೊಗಳುವ, ಹೆಗಲ ಮೇಲೆ ಹೊತ್ತು ಮೆರೆಯುವುದನ್ನು ರಾಜಕೀಯದಲ್ಲಿ ಹೆಚ್ಚಾಗಿ ಕಾಣಬಹುದು. ಅಂತೆಯೇ ರಾಜಕೀಯದಲ್ಲಿ ಸೋಲನ್ನೇ ಕಾಣದ ಘಟಾನುಘಟಿ ನಾಯಕರುಗಳೂ ಸೋತು ಸುಣ್ಣವಾದಾಗ ಏಕಾಂಗಿಯಾಗುವುದನ್ನೂ ಕಾಣಬಹುದು.

ಸೋತವರನ್ನು ಸಂತೈಸುವ, ಸಾಂತ್ವನ ಹೇಳಿ ಅವರು ಮತ್ತೆ ಎದ್ದು ನಿಲ್ಲುವಂತೆ ಪ್ರೋತ್ಸಾಹಿಸುವವರ ಸಂಖ್ಯೆ ಬಹಳ ವಿರಳ. ಇಂತಹ ದಿನಗಳಲ್ಲಿ ಈ ಸಂಸ್ಥೆ ಸೋತ ವಿದ್ಯಾರ್ಥಿಗಳನ್ನು ಸಂತೈಸಿ, ಗೆಲುವಿಗೆ ಹುರಿದುಂಬಿಸುವ ಕೆಲಸ ಮಾಡುತ್ತಿರುವುದು ಒಳ್ಳೆಯ ಪ್ರಯತ್ನ ಎಂದರು.

ಮನೆಯಲ್ಲಿ ಓದಿಗೆ ಅನುಕೂಲಕರ ವಾತಾವರಣ ಇಲ್ಲದಿರುವುದು, ಪೋಷಕರ ಪ್ರೋತ್ಸಾಹ ಸಿಗದಿರುವುದೂ ಕೂಡ ವಿದ್ಯಾರ್ಥಿಗಳು ಓದಿನಲ್ಲಿ ಹಿಂದೆ ಬೀಳಲು ಕಾರಣವಾಗಿದೆ. ಜೊತೆಗೆ ವಿದ್ಯಾರ್ಥಿಗಳ ಸಹವಾಸ ದೋಷದಿಂದ ಏಕಾಗ್ರತೆ ಕೊರತೆ ಸೇರಿದಂತೆ ಹಲವು ಕಾರಣಗಳಿವೆ. ವಿದ್ಯಾರ್ಥಿಗಳು ಇವುಗಳನ್ನೆಲ್ಲ ಮೆಟ್ಟಿನಿಂತು ಓದಿನಲ್ಲಿ ಗೆಲುವು ಸಾಧಿಸಿದಾಗ, ಜೀವನವನ್ನು ಗೆಲ್ಲಲು ಸಾಧ್ಯ ಎಂದು ಹೇಳಿದರು.

ಹದಿಹರೆಯದ ವಿದ್ಯಾರ್ಥಿಗಳ ಮನಸ್ಸು ಚಂಚಲ. ಮನೆಯಲ್ಲಿ ಹಿರಿಯರು ಮಾದರಿ ಬದುಕು ನಡೆಸುತ್ತಿದ್ದಲ್ಲಿ ಮಕ್ಕಳು ಕೂಡ ಅವರನ್ನು ಅನುಸರಿಸುತ್ತಾರೆ. ಮನೆಯಲ್ಲಿ ಮಕ್ಕಳ ಓದಿಗೆ ಪ್ರತ್ಯೇಕ ಕೊಠಡಿಯಿಲ್ಲದೆ ಟಿವಿ ಇರುವ ಹಾಲ್‌ನಲ್ಲೇ ಓದುವುದು ವಿದ್ಯಾರ್ಥಿಗಳಲ್ಲಿ ಏಕಾಗ್ರತೆ ತರದು. ಹೆಣ್ಣು ಮಕ್ಕಳು ಧಾರಾವಾಹಿ, ಬಿಗ್‌ಬಾಸ್‌ ನೋಡದೆ ಪುಸ್ತಕಗಳಿಗೆ ಮೊರೆ ಹೋದರೆ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಸೋಲಿನ ಅನುಭವದಿಂದ ಬಿಡುಗಡೆಯಾದಂತೆ ಎಂದು ಹೇಳಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಡಾ.ದಯಾನಂದ, ಕಾಲೇಜಿನ ಪ್ರಾಂಶುಪಾಲ ಎಚ್‌.ಎನ್‌.ಸತೀಶ್‌ ಕುಮಾರ್‌, ಸಂಘದ ರಾಜ್ಯಾಧ್ಯಕ್ಷ ಕಾಟ್ನೂರು ಶಿವೇಗೌಡ, ಮೈಸೂರು ಜಿಲ್ಲಾ ಪಿಯು ಒಕ್ಕೂಟದ ಗೌರವಾಧ್ಯಕ್ಷ ಬಾಲಸುಬ್ರಹ್ಮಣ್ಯಂ, ಹುಣಸೂರು ಸರ್ಕಾರಿ ಬಾಲಕಿಯರ ಪಿಯು ಕಾಲೇಜು ಪ್ರಾಂಶುಪಾಲ ಚಲುವಯ್ಯ,ರತ್ನ, ಎಚ್‌.ಎಂ.ನಂಜುಂಡಸ್ವಾಮಿ, ಪರಿಮಳ, ಜನಾರ್ದನ ಇತರರು ಹಾಜರಿದ್ದರು.

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.