ಸಮಾಜಕ್ಕೆ ಕೊಡುಗೆ ನೀಡುವ ಕೆಲಸವಾಗಲಿ


Team Udayavani, May 26, 2019, 3:00 AM IST

samajakke

ಮೈಸೂರು: ಮನುಷ್ಯ ಹುಟ್ಟಿದ ಮೇಲೆ ಭಗವಂತನ ಸೇವೆ ಮಾಡುವ ಮೂಲಕ ಸಮಾಜಕ್ಕೆ ಏನಾದರು ಕೊಡುಗೆ ನೀಡಬೇಕು ಎಂದು ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದರು. ನಗರದ ಸರಸ್ವತಿಪುರಂನಲ್ಲಿರುವ ಶ್ರೀ ಕೃಷ್ಣಧಾಮದ ರಜತ ಮಹೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.

ಮೈಸೂರು ನಗರಕ್ಕೆ ಕರಾವಳಿ ಭಕ್ತರು ನೀಡಿರುವ ಕೊಡುಗೆಗಳಲ್ಲಿ ಶ್ರೀ ಕೃಷ್ಣಧಾಮವೂ ಒಂದು. ಸಂಸ್ಕೃತಿ, ಧಾರ್ಮಿಕ ಸಂಸ್ಕಾರ, ಆಚಾರ ಪದ್ಧತಿಗಳನ್ನು ಪ್ರಸಾರ ಮಾಡುವ ಕೆಲಸವನ್ನು ಈ ಸಂಸ್ಥೆ ಮಾಡುತ್ತಿದೆ. ಕೆಂಪೇಗೌಡರು ಮೈಸೂರು ಮುಡಾ ಅಧ್ಯಕ್ಷರಾಗಿದ್ದಾಗ ಎರಡು ಸ್ಥಳಗಳಲ್ಲಿ ನಿವೇಶನವನ್ನು ನೀಡಿದರು.

ಒಂದು ಸ್ಥಳದಲ್ಲಿ ವಿಜಯ ವಿಠ್ಠಲ ವಿದ್ಯಾ ಸಂಸ್ಥೆ ನಿರ್ಮಾಣಗೊಂಡು ಜ್ಞಾನವನ್ನು ಪಸರಿಸಿದರೆ, ಮತ್ತೂಂದು ಸ್ಥಳದಲ್ಲಿ ಶ್ರೀ ಕೃಷ್ಣಧಾಮ ಸಮಾಜಕ್ಕೆ ಭಕ್ತಿಯನ್ನು ಪಸರಿಸುತ್ತಿದೆ. ಭಕ್ತಿ ಮತ್ತು ಜ್ಞಾನ ಸಮಾಜದ ಎರಡು ಕಣ್ಣುಗಳಿದ್ದಂತೆ ಎಂದರು.

ಸಂಸ್ಥೆಗೆ ವಯಸ್ಸಾದಂತೆ ಮೃತ್ಯುವಿನ ಭಯವಿರುವುದಿಲ್ಲ. ಬದಲಿಗೆ ಧೈರ್ಯ, ಹುಮ್ಮಸ್ಸು ಮತ್ತು ಅನುಭವ ಹೆಚ್ಚುತ್ತದೆ. ಜೊತೆಗೆ ಚಿರಂಜೀವಿಯಾಗಿ ಬೆಳೆಯುತ್ತಿರುತ್ತದೆ. ದೇವರ ಅನುಗ್ರಹ ಮತ್ತು ಮಾನವನ ಪ್ರಯತ್ನ ಇದ್ದರೆ ಮಾತ್ರ ಸಮಾಜದಲ್ಲಿ ಏಳಿಗೆ ಹಾಗೂ ಶಾಂತಿ ನೆಲೆಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಮಾನವನೆಂಬ ನಾವಿಕನಿಗೆ ದೀಪದ ಕಂಬಗಳಂತೆ ದಿಕ್ಕು ತೋರಿಸಲು ದೇಗುಲ, ಧಾರ್ಮಿಕ ಕೇಂದ್ರಗಳು, ಮಠ ಮಾನ್ಯಗಳು ಅಗತ್ಯವಾಗಿದೆ. ಇವುಗಳು ಮನುಷ್ಯನನ್ನು ಸರಿಯಾದ ದಾರಿಗೆ ಕೊಂಡೊಯ್ಯುತ್ತವೆ. ಮನುಷ್ಯ ಈ ಭೂಮಿಯಲ್ಲಿ ಹುಟ್ಟಿದ ಮೇಲೆ ಭಗವಂತನ ಆರಾಧನೆ, ಸೇವೆ ಮಾಡುವ ಮೂಲಕ ಸಮಾಜಕ್ಕೆ ಯಾವ ರೂಪದಲ್ಲಾದರೂ ಒಂದು ಕೊಡುಗೆ ನೀಡಬೇಕು ಎಂದರು.

ನಮಗೆ ಆಧ್ಯಾತ್ಮದ ಜೊತೆಗೆ ಆಧುನಿಕ ಶಿಕ್ಷಣವೂ ಅಗತ್ಯ. ಎಲ್ಲಾ ಭಾಷೆ, ಎಲ್ಲಾ ವಿದ್ಯೆಗಳು ಬೇಕು. ಭಾರತೀಯನ ಹೃದಯ ಅರಳಲು ಆಧ್ಯಾತ್ಮಿಕ ಶಿಕ್ಷಣದಿಂದ ಅರಳಲು ಮಾತ್ರ ಸಾಧ್ಯ ಎಂದು ಹೇಳಿದರು.

ವ್ಯಾಸರಾಜ ಮಠದ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ ಮಾತನಾಡಿ, ಒಂದು ಸಂಸ್ಥೆ ಪ್ರಗತಿ ಮತ್ತು ಏಳಿಗೆಯನ್ನು ಸಾಧಿಸಲು ಸಂಸ್ಥೆಯ ಸ್ಥಾಪನೆ ಯಾರಿಂದ, ಯಾವ ಹಿನ್ನೆಲೆಯಲ್ಲಿ ಆಯಿತು ಎಂಬುದು ಮುಖ್ಯ. ಇದರೊಟ್ಟಿಗೆ ಸಂಸ್ಥೆಯ ಕಾರ್ಯಕರ್ತರಲ್ಲಿ ವಿವೇಕ, ಮುಂದಿನ ನಡೆ ಬಗ್ಗೆ ದೂರ ದೃಷ್ಟಿ, ಹೊಂದಾಣಿಕೆಯ ಮನೋಭಾವವೂ ಮುಖ್ಯವಾಗಿರುತ್ತದೆ ಎಂದರು.

ಶ್ರೀ ಕೃಷ್ಣ ಟ್ರಸ್ಟ್‌ನ ಉಪಾಧ್ಯಕ್ಷ ಪಿ. ಜಯರಾಮ ಭಟ್‌, ಜೆ.ಎಲ್‌. ಅನಂತ ತಂತ್ರಿ, ಕಾರ್ಯದರ್ಶಿ ಎಚ್‌.ವಿ. ರಾಘವೇಂದ್ರ ಭಟ್‌, ಎಚ್‌.ಬಿ. ರಮಾಕಾಂತ್‌, ಶ್ರೀ ಕೃಷ್ಣ ಮಿತ್ರಮಂಡಳಿ ಅಧ್ಯಕ್ಷ ಪಿ.ವಿ. ನಾಗೇಶ್‌, ಉಪಾಧ್ಯಕ್ಷ ರವಿಶಾಸ್ತ್ರಿ ಸೇರಿದಂತೆ ಮತ್ತಿತರರು ಇದ್ದರು.

ನಮ್ಮಲ್ಲಿ ಶಿಕ್ಷಣವೇ ಬೇರೆ, ಆಧ್ಯಾತ್ಮವೇ ಬೇರೆ ಎಂಬ ಜಿಜ್ಞಾಸೆಗಳಿವೆ. ಆದರೆ ಭಾರತೀಯ ಪರಂಪರೆ ಮತ್ತು ತತ್ವಶಾಸ್ತ್ರದಲ್ಲಿ ಆಧ್ಯಾತ್ಮ ಮತ್ತು ಶಿಕ್ಷಣ ಎರಡಕ್ಕೂ ಅವಿನಾಭಾವ ಸಂಬಂಧವಿದೆ. ಪಾಶ್ಚಾತ್ಯ ಸಂಸ್ಕೃತಿಗೆ ಮಾರು ಹೋಗದೇ, ಆಧ್ಯಾತ್ಮಿಕ ಪ್ರಪಂಚದತ್ತ ನಾವುಗಳು ವಾಲಬೇಕಿದೆ. ನಮ್ಮ ಪರಂಪರೆ ಮತ್ತು ಆಧ್ಯಾತ್ಮಿಕ ಶ್ರೀಮಂತಿಕೆ ಇಂತಹ ಧಾರ್ಮಿಕ ಸಂಸ್ಥೆಗಳಿಂದ ಹೆಚ್ಚಿದೆ.
-ಪ್ರೊ.ಜಿ. ಹೇಮಂತ ಕುಮಾರ್‌, ಮೈಸೂರು ವಿವಿ ಕುಲಪತಿ

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.