ಉಡುಪಿ ಶ್ರೀ ಕೃಷ್ಣನಿಗೆ ಸುವರ್ಣ ಗೋಪುರ, ರಜತ ಕಲಶ ಸಮರ್ಪಣೆ

ಜೂ.1: ವೈಭವದ ಶೋಭಾಯಾತ್ರೆ

Team Udayavani, May 26, 2019, 6:11 AM IST

krishna-mutt

ಉಡುಪಿ: ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಪಲಿಮಾರು ಮಠಾಧೀಶ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರ ನೇತೃತ್ವದಲ್ಲಿ ಕೃಷ್ಣನಿಗೆ ಸುವರ್ಣಗೋಪುರ ಸಮರ್ಪಣೆಯಾಗಲಿದ್ದು, ಜೂ.1ರಂದು ಅಪರಾಹ್ನ 4 ಗಂಟೆಗೆ ಶ್ರೀಕೃಷ್ಣ ಮುಖ್ಯಪ್ರಾಣ ಸೇವಾ ಸಮಿತಿ ಮತ್ತು ಕಿದಿಯೂರು ವಿಷ್ಣುಮೂರ್ತಿ ಹಾಗೂ ವನದುರ್ಗಾ ಸೇವಾ ಸಮಿತಿಯ ನೇತೃತ್ವದಲ್ಲಿ ಸುವರ್ಣ ಶಿಖರ ಮತ್ತು ರಜತ ಕಲಶದ ವೈಭವದ ಮೆರವಣಿಗೆ ನಡೆಯಲಿದೆ.

1008 ರಜತ ಕಲಶಗಳನ್ನು ಬ್ರಹ್ಮರಥದ ಮಾದರಿಯಲ್ಲಿ ಜೋಡಿಸಿ ಸ್ತಬ್ಧಚಿತ್ರ ನಿರ್ಮಿಸಲಾಗಿದೆ. ವಾದಿರಾಜ ಸ್ವಾಮೀಜಿಗಳ ನೇತೃತ್ವದಲ್ಲಿ ರಚಿತವಾದ 6 ಅಡಿಯ ಒಂದು, 4 ಅಡಿಯ 2 ಶಿಖರಗಳಿಗೆ ಸಂಪೂರ್ಣ ಚಿನ್ನದ ಹೊದಿಕೆಯನ್ನು ನಿರ್ಮಿಸಲಾಗಿದೆ.

4,000ಕ್ಕೂ ಅಧಿಕ ಭಜಕರು
ಮೆರವಣಿಗೆಯಲ್ಲಿ ವೈವಿಧ್ಯಮಯ ಟ್ಯಾಬ್ಲೊ, ವಿವಿಧ ತಂಡಗಳಿಂದ ಚೆಂಡೆ, ಬ್ಯಾಂಡ್‌ ಸೆಟ್‌, 65 ಮಂದಿಯ ಕೇರಳ ಚೆಂಡೆ, ಉಡುಪಿ ಜಿಲ್ಲಾ ಭಜನ ಒಕ್ಕೂಟದ ಸುಮಾರು 2,000 ಪುರುಷ -ಮಹಿಳೆಯರ ಭಜನ ತಂಡ, ಕಿದಿಯೂರಿನ 600 ಮಂದಿ ಪೂರ್ಣಕುಂಭಧಾರಿ ಮಹಿಳೆಯರು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ 1,500 ಪುರುಷರು, ಮಹಿಳೆಯರು ಪಾಲ್ಗೊಳ್ಳಲಿದ್ದಾರೆ.

ಮೆರವಣಿಗೆಯ ಮಾರ್ಗ
ಮೆರವಣಿಗೆಯು ಜೋಡುಕಟ್ಟೆಯಿಂದ ಆರಂಭವಾಗಿ ಹಳೆ ಡಯಾನ ವೃತ್ತ, ಕೆ.ಎಂ. ಮಾರ್ಗ, ಸರ್ವೀಸ್‌ ಬಸ್ಸು ನಿಲ್ದಾಣ, ಕಿದಿಯೂರು ಹೋಟೆಲ್‌ ಮುಂಭಾಗದಿಂದ ಹಾದು ಶಿರಿಬೀಡು, ಸಿಟಿಬಸ್‌ ನಿಲ್ದಾಣ, ಕಲ್ಸಂಕ, ರಾಜಾಂಗಣ ಪಾರ್ಕಿಂಗ್‌, ವಿದ್ಯೋದಯ ಶಾಲೆಯ ಮುಂಭಾಗದಿಂದ ರಥಬೀದಿಯನ್ನು ಪ್ರವೇಶಿಸಲಿದೆ.

ಉದ್ಘಾಟನಾ ಸಮಾರಂಭ
ಮೆರವಣಿಗೆಯನ್ನು ಪೇಜಾವರ ಹಿರಿಯ ಯತಿ ವಿಶ್ವೇಶತೀರ್ಥ ಶ್ರೀಪಾದರು ಮತ್ತು ಉತ್ತರಾದಿ ಮಠದ ಶ್ರೀ ಸತ್ಯಾತ್ಮತೀರ್ಥ ಶ್ರೀಗಳು ದೀಪ ಬೆಳಗಿ ಉದ್ಘಾಟಿಸಲಿದ್ದಾರೆ. ನಾಡೋಜ ಡಾ| ಜಿ. ಶಂಕರ್‌ ಶೋಭಾಯಾತ್ರೆಗೆ ಚಾಲನೆ ನೀಡುವರು. ಶಾಸಕ ರಘುಪತಿ ಭಟ್‌, ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌, ಮಣಿಪಾಲ ವಿವಿ ಸಹಕುಲಾಧಿಪತಿ ಡಾ| ಎಚ್‌.ಎಸ್‌. ಬಲ್ಲಾಳ್‌, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು, ಉದ್ಯಮಿಗಳಾದ ಪುರುಷೋತ್ತಮ ಶೆಟ್ಟಿ, ಮನೋಹರ ಶೆಟ್ಟಿ ಉಪಸ್ಥಿತರಿರುತ್ತಾರೆ ಎಂದು ಶ್ರೀಕೃಷ್ಣ ಮುಖ್ಯಪ್ರಾಣ ಸೇವಾ ಸಮಿತಿಯ ಸಂಚಾಲಕ ಭುವನೇಂದ್ರ ಕಿದಿಯೂರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಕೃಷ್ಣಾರ್ಜುನ, ಭೀಮ
ಶೋಭಾಯಾತ್ರೆಯಲ್ಲಿ ವಿಶೇಷ ಆಕರ್ಷಣೆಯಾಗಿ ಸ್ಟಾರ್‌ಪ್ಲಸ್‌ ಧಾರಾವಾಹಿಯ ಮಹಾಭಾರತ ಖ್ಯಾತಿಯ ಶ್ರೀಕೃಷ್ಣ, ಅರ್ಜುನ ಮತ್ತು ಭೀಮ ವೇಷಧಾರಿಗಳು ಗೀತೋಪದೇಶದ ರಥದಲ್ಲಿ ಕುಳಿತು ಸಾಗಿ ಬರುವ ಟ್ಯಾಬ್ಲೋ ಮೆರವಣಿಗೆಗೆ ಮೆರುಗು ನೀಡಲಿದೆ ಎಂದು ಸಮಿತಿಯ ಸಂಚಾಲಕ ಭುವನೇಂದ್ರ ಕಿದಿಯೂರು ತಿಳಿಸಿದ್ದಾರೆ.

ಟಾಪ್ ನ್ಯೂಸ್

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.