ಆನಂದ ಜಿಗಜಿನ್ನಿ ಕುಟುಂಬದಲ್ಲಿ ಮುಗಿಲು ಮುಟ್ಟಿದ ಆಕ್ರಂದನ

•ಪುತ್ರಿಯ ಸಾವಿನ ಸುದ್ದಿಯಿಂದ ದುಃಖೀತರಾದ ಆನಂದ ದಂಪತಿ

Team Udayavani, May 27, 2019, 7:03 AM IST

bk-tdy-2..

ಬಾಗಲಕೋಟೆ: ನಗರದ ಹಿರಿಯ ಪತ್ರಕರ್ತ, ಕಾಂಗ್ರೆಸ್‌ ಪಕ್ಷದ ಜಿಲ್ಲಾ ವಕ್ತಾರರೂ ಆಗಿರುವ ಆನಂದ ಜಿಗಜಿನ್ನಿ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.

ಘಟನೆಯಲ್ಲಿ ಆನಂದ ಅವರ ಪುತ್ರಿ ವರ್ಷಾ ಜಿಗಜಿನ್ನಿ (12), ಸಹೋದರ ವಿನೋದ ಅವರ ಪುತ್ರ ಶರಣ (7), ಆನಂದ ಅವರ ಅಕ್ಕನ ಪತಿ ರವಿ ಹಂಡಿ (40), ಪುತ್ರಿ ಲೇಖಾಶ್ರೀ ಹಂಡಿ (18), ಪುತ್ರ ನವೀನಕುಮಾರ ಹಂಡಿ (14)ಮೃತಪಟ್ಟಿದ್ದು, ಇವರೆಲ್ಲರೂ ದಾವಣಗೆರೆಯಲ್ಲಿ ರವಿ ಹಂಡಿ ಅವರ ಸಹೋದರಿಯನ್ನು ಭೇಟಿ ಮಾಡಿ ಬಾಗಲಕೋಟೆಗೆ ಮರಳುತ್ತಿದ್ದರು. ಈ ವೇಳೆ ನರಗುಂದ-ನವಲಗುಂದ ಮಧ್ಯದ ಅಮರಗೋಳ ಬಳಿ ಕಾರಿನ ಟೈರ್‌ ಸಿಡಿದು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ಸಂಭವಿಸಿದ್ದು, ಜಿಗಜಿನ್ನಿಯವರ ಕುಟುಂಬದಲ್ಲಿ ದುಃಖ ಸಹಿಸಿಕೊಳ್ಳಲಾಗುತ್ತಿಲ್ಲವಾಗಿದೆ.

ಆನಂದ ಅವರ ಪುತ್ರಿ ವರ್ಷಾ ಬಸವೇಶ್ವರ ಸಿಬಿಎಸ್‌ಇ ಶಾಲೆಯಲ್ಲಿ 5ನೇ ತರಗತಿ ಓದುತ್ತಿದ್ದು, ಕಳೆದ ಫೆಬ್ರವರಿಯಲ್ಲಿ ಶಾಲೆಯ ಅತ್ಯುತ್ತಮ ವಿದ್ಯಾರ್ಥಿ ಪ್ರಶಸ್ತಿ ಪಡೆದಿದ್ದಳು. ಪುತ್ರಿಯ ಸಾವಿನ ಸುದ್ದಿ ತಿಳಿದು ತೀವ್ರ ದುಃಖೀತರಾಗಿದ್ದ ಆನಂದ ಮತ್ತು ಪತ್ನಿ ಹಾಗೂ ಪುತ್ರನನ್ನು ಕಳೆದುಕೊಂಡ ವಿನೋದ ಮತ್ತು ಅವರ ಪತ್ನಿಯ ಆಕ್ರಂದನ ಮುಗಿಲು ಮುಟ್ಟಿತ್ತು. ಸಾಂತ್ವನ ಹೇಳಲು ಬಂದವರಿಗೂ ದುಃಖ ಉಮ್ಮಳಿಸಿ ಬಂದಿತ್ತು.

ವಿಧಿಯ ಆಟ: ಕಳೆದ ರವಿವಾರ ನಡೆದ ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿ ವೇಳೆ, ಈ ಮಕ್ಕಳು ಹಾಗೂ ಆನಂದ ಅವರ ಮಾವ ಮೈದಾನಕ್ಕೆ ಬಂದು ಪತ್ರಕರ್ತರ ತಂಡಕ್ಕೆ ಶುಭ ಹಾರೈಸಿ ಕೆಲ ಕಾಲ ಕಳೆದಿದ್ದರು. ಅಲ್ಲದೇ ದಾವಣಗೆರೆಗೆ ಕಾರಿನಲ್ಲಿ ತೆರಳಿದ್ದ ಈ ಐವರು ಕಾರಿನಲ್ಲಿ ಕುಳಿತು ಸೆಲ್ಫಿ ತೆಗೆದು ತಮ್ಮ ತಂದೆಗೆ ಕಳುಹಿಸಿ, ಖುಷಿ ಹಂಚಿಕೊಂಡಿದ್ದರು. ಆದರೆ, ಮರಳಿ ಬರುವ ವೇಳೆ ಮಕ್ಕಳು, ಹಂಡಿ ಮತ್ತು ಜಿಗಜಿನ್ನಿ ಕುಟುಂಬದಲ್ಲಿ ವಿಧಿಯ ಆಟ ಮೆರೆದಿದೆ.

ಆಘಾತ ವ್ಯಕ್ತಪಡಿಸಿದ ಸಿದ್ದರಾಮಯ್ಯ: ಆನಂದ ಜಿಗಜಿನ್ನಿ ಅವರ ಕುಟುಂಬದವರ ಸಾವಿನ ಸುದ್ದಿ ತಿಳಿದು ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ತೀವ್ರ ಆಘಾತ ವ್ಯಕ್ತಪಡಿಸಿ, ಕುಟುಂಬಕ್ಕೆ ದುಃಖ ಸಹಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

ಗಣ್ಯರ ಸಾಂತ್ವನ: ಮಾಜಿ ಸಚಿವ ಎಚ್.ವೈ. ಮೇಟಿ, ನಗರದ ಹಲವು ಗಣ್ಯರು, ವೈದ್ಯರು, ಗೆಳೆಯರು, ಸಂಬಂಧಿಕರು, ಪತ್ರಕರ್ತರು ಮನೆಗೆ ಭೇಟಿ ನೀಡಿ, ಜಿಗಜಿನ್ನಿ ಕುಟುಂಬಕ್ಕೆ ಸಾಂತ್ವನ ಹೇಳುವ ಪ್ರಯತ್ನ ಮಾಡಿದರು.

ಟಾಪ್ ನ್ಯೂಸ್

6-time Madhya Pradesh MLA Ramniwas Rawat quits Congress, joins BJP

Madhya Pradesh; ರಾಹುಲ್‌ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್‌ ಶಾಸಕ!

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Implementation of secular law for Muslim succession: Supreme Court debate

Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್‌ ಚರ್ಚೆ

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-time Madhya Pradesh MLA Ramniwas Rawat quits Congress, joins BJP

Madhya Pradesh; ರಾಹುಲ್‌ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್‌ ಶಾಸಕ!

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Implementation of secular law for Muslim succession: Supreme Court debate

Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್‌ ಚರ್ಚೆ

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.