ಧರ್ಮಸ್ಥಳಕ್ಕೆ ಕರವೇಯಿಂದ ನೀರು ಪೂರೈಕೆ

ಮಳೆ ಅಭಾವದಿಂದ ನೀರು ಮಿತವಾಗಿ ಬಳಸಿ: ತಹಶೀಲ್ದಾರ್‌ ಮಂಜುನಾಥ್‌

Team Udayavani, May 27, 2019, 7:32 AM IST

br-tdy-2..

ದೇವನಹಳ್ಳಿ ಮಿನಿ ವಿಧಾನಸೌಧದ ಆವರಣದಲ್ಲಿ ತಾಲೂಕು ಕರ್ನಾಟಕ ರಕ್ಷಣಾ ವೇದಿಕೆ ಯಿಂದ ಶ್ರೀಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಸನ್ನಿಧಿಗೆ ಕುಡಿಯುವ ನೀರಿನ ಸರಬರಾಜು ವಾಹನಕ್ಕೆ ತಹಶೀಲ್ದಾರ್‌ ಮಂಜುನಾಥ್‌ ಚಾಲನೆ ನೀಡಿದರು.

ದೇವನಹಳ್ಳಿ: ಹಿಂದಿನ ಕಾಲದಲ್ಲಿ ಮಳೆ ಪ್ರಮಾಣ ಹೇಗಿತ್ತು ಎಂಬುದರ ಬಗ್ಗೆ ತಿಳಿದಿದೆ. ಆದರೆ, ಈಗ ಮಳೆಯ ಅಭಾವ ಹೆಚ್ಚಾಗಿರು ವುದರಿಂದ ನೀರನ್ನು ಮಿತವಾಗಿ ಬಳಸಬೇಕೆಂದು ತಹಶೀಲ್ದಾರ್‌ ಮಂಜುನಾಥ್‌ ತಿಳಿಸಿದರು.

ನಗರದ ಮಿನಿ ವಿಧಾನಸೌಧದ ಆವರಣದಲ್ಲಿ ತಾಲೂಕು ಕರ್ನಾಟಕ ರಕ್ಷಣಾ ವೇದಿಕೆ(ಪ್ರವೀಣ್‌ ಶೆಟ್ಟಿ ಬಣ)ಯಿಂದ ಶ್ರೀಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಸನ್ನಿಧಿಗೆ ಕುಡಿಯುವ ನೀರಿನ ಸರಬರಾಜು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಕರವೇ ಸಾಮಾಜಿಕ ಕಾರ್ಯ ಅಭಿನಂದನೀಯ: ಧರ್ಮಸ್ಥಳಕ್ಕೆ 10ಸಾವಿರ ಲೀಟರ್‌ ನೀರು ಕಳುಹಿಸಿ ಕೊಡುತ್ತಿರುವ ಕರವೇಗೆ ತಾಲೂಕು ಆಡಳಿತದ ವತಿಯಿಂದ ಅಭಿನಂದಿಸುತ್ತೇನೆ. ಇಂತಹ ಸಾಮಾಜಿಕ ಕಾರ್ಯಗಳು ಹೆಚ್ಚಾಗ ಬೇಕು ಎಂದು ತಿಳಿಸಿದರು.

ಜಲ ಮೂಲ ಉಳಿಸಿ: ಧರ್ಮಸ್ಥಳದಲ್ಲಿ ನೀರಿನ ಅಭಾವ ಇರುವುದರಿಂದ ಹೆಚ್ಚಿನ ಭಕ್ತಾದಿಗಳು ಬರದಂತೆ ಧರ್ಮಾಧಿಕಾರಿಗಳು ಮನವಿ ಮಾಡಿರುವುದು ಅಲ್ಲಿನ ನೀರಿನ ಸಮಸ್ಯೆಗೆ ನಿದರ್ಶನವಾಗಿದೆ. ಇದು ಜನರಿಗೆ ತಿಳಿದ ವಿಚಾರವೂ ಆಗಿದೆ. ಪ್ರವಾಸಿಗರು ಹೆಚ್ಚು ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡುತ್ತಾರೆ. ಅಲ್ಲಿಯೇ ನೀರಿನ ಸಮಸ್ಯೆ ಉದ್ಭವಿಸಿದೆ. ಜಲ ಮೂಲಗಳನ್ನು ಉಳಿಸದಿದ್ದರೆ ಮುಂದೆ ಹೆಚ್ಚಿನ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಮಳೆ ಕೊಯ್ಲು ಪದ್ಧತಿ ಅಗತ್ಯ: ಜಿಲ್ಲಾಧಿ ಕಾರಿಗಳು ಜಿಲ್ಲೆಯಲ್ಲಿ ಈಗಾಗಲೇ ಮಳೆ ಕೊಯ್ಲು ಪದ್ಧತಿಯನ್ನು ಅಳವಡಿಸಿಕೊಳ್ಳಲು ಸೂಚಿಸಿದ್ದು, ಕೈಗಾರಿಕಾ ಪ್ರದೇಶ, ವಾಣಿಜ್ಯ ಮಳಿಗೆಗಳು, ಹೋಟೆಲ್, ಕಲ್ಯಾಣ ಮಂಟಪ, ಚಿತ್ರಮಂದಿರ ಇನ್ನಿತರೆ ಕಡೆಗಳಲ್ಲಿ ಮಳೆ ಕೊಯ್ಲು ಪದ್ಧತಿಯನ್ನು ಅಳವಡಿಸಿಕೊಳ್ಳಲು ನೋಟಿಸ್‌ ನೀಡಲಾಗಿದೆ. 49 ಲಕ್ಷ ಲೀಟರ್‌ ಮಳೆ ನೀರು ಸಂಗ್ರಹಿಸಿದರೆ ನೀರಿನ ಬವಣೆ ಸ್ವಲ್ಪ ಮಟ್ಟಿಗೆ ಕಡಿಮೆ ಆಗುತ್ತದೆ. ದೇವನಹಳ್ಳಿಯಲ್ಲೂ ಮಳೆ ಕೊಯ್ಲು ಪದ್ಧತಿಯನ್ನು ಅಳವಡಿಸಿ ಕೊಳ್ಳಲು ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಕರವೇ ರಾಜ್ಯ ಕಾರ್ಯದರ್ಶಿ ರಾಜಘಟಕ ರವಿ ಮಾತನಾಡಿ, ಕರವೇ ಸಾಕಷ್ಟು ಹೋರಾಟ ಗಳನ್ನು ಮಾಡಿಕೊಂಡು ಬಂದಿದೆ. ಧಾರ್ಮಿಕ ಕಾರ್ಯಕ್ರಮಗಳನ್ನು ಪ್ರೋತ್ಸಾಹಿಸಿಕೊಂಡು ಬಂದಿದೆ. ಧರ್ಮಸ್ಥಳದಲ್ಲಿ ಜನರಿಗೆ ನೀರಿನ ಅಭಾವ ಇರುವುದರಿಂದ ಆಡಳಿತ ಮಂಡಳಿಗೆ ದೂರವಾಣಿ ಮಾಡಿ ವಿಚಾರಿಸಿದಾಗ ನೀರು ಕಳುಹಿಸಿ ಕೊಡಿ ಎಂದಿದ್ದಾರೆ. ದಾನಿಗಳ ಸಹಕಾರದಿಂದ 10ಸಾವಿರ ಲೀಟರ್‌ ನೀರು ಕಳುಹಿಸುತ್ತಿದ್ದೇವೆ ಎಂದರು.

ಈ ವೇಳೆ ತಾಲೂಕು ಕರವೇ ಅಧ್ಯಕ್ಷ ಗಜೇಂದ್ರ, ಯಲಹಂಕ ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷ ಜಯಂತ್‌, ಸಾಂಸ್ಕೃತಿಕ ಘಟಕದ ಅಧ್ಯಕ್ಷ ಉದಯ್‌, ತಾಲೂಕು ಪ್ರಧಾನ ಸಂಚಾಲಕ ಧನೇಶ್‌ ಕುಮಾರ್‌, ಕಾರ್ಮಿಕ ಘಟಕದ ಉಪಾಧ್ಯಕ್ಷ ಕೆಂಪೇಗೌಡ, ತಾಲೂಕು ಉಪಾಧ್ಯಕ್ಷ ಸತೀಶ್‌ ಗೋಖರೆ, ಬಾಬು, ಜಂಟಿ ಕಾರ್ಯದರ್ಶಿ ಮುನಿಕೃಷ್ಣ, ಕರವೇ ಮುಖಂಡ ಮೈಲನಹಳ್ಳಿ ಪ್ರಕಾಶ್‌ ಇತರರಿದ್ದರು.

ಟಾಪ್ ನ್ಯೂಸ್

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Farooq Abdullah

ಪಾಕಿಸ್ತಾನದವರೇನು ಬಳೆ ಧರಿಸಿ ಕುಳಿತಿಲ್ಲ..; ವಿವಾದಾತ್ಮಕ ಹೇಳಿಕೆ ನೀಡಿದ ಫಾರೂಕ್ ಅಬ್ದುಲ್ಲಾ

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Delhi Police has busted a fake spice racket at Karawal Nagar

Delhi Police; ಮರದ ಪುಡಿ, ಕೆಮಿಕಲ್ ಬಳಸಿ ಮಸಾಲೆ ಪದಾರ್ಥ ತಯಾರು; ಮೂವರ ಬಂಧನ

Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!

Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Farooq Abdullah

ಪಾಕಿಸ್ತಾನದವರೇನು ಬಳೆ ಧರಿಸಿ ಕುಳಿತಿಲ್ಲ..; ವಿವಾದಾತ್ಮಕ ಹೇಳಿಕೆ ನೀಡಿದ ಫಾರೂಕ್ ಅಬ್ದುಲ್ಲಾ

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.