ಅಕ್ಷರ ಗುಡಿ ರಥ ಎಳೆಯೋಣ ಬನ್ನಿ.


Team Udayavani, May 27, 2019, 8:33 AM IST

gadaga-tdy-1..

ಗದಗ: ಬಸವೇಶ್ವರ ಶಾಲೆಯಲ್ಲಿ ಶಾಲಾ ಆರಂಭೋತ್ಸವಕ್ಕೆ ಸಿದ್ಧಗೊಳ್ಳುತ್ತಿರುವ 'ಅಕ್ಷರ ಗುಡಿ'.

ಗದಗ: ಸರಕಾರಿ ಶಾಲೆಗಳಿಗೆ ಮಕ್ಕಳನ್ನು ಸೆಳೆಯುವುದು, ಮೊದಲ ದಿನದಿಂದಲೇ ಮಕ್ಕಳು ಶಾಲೆಗೆ ಹಾಜರಾಗುವಂತೆ ಪ್ರೇರೇಪಿಸುವ ಉದ್ದೇಶದಿಂದ ಕೆಲ ವರ್ಷಗಳಿಂದ ಶಾಲಾ ಆರಂಭೋತ್ಸವ ದಿನವನ್ನು ಹಬ್ಬದಂತೆ ಆಚರಿಸಲಾಗುತ್ತದೆ. ಶಾಲೆಗಳಿಗೆ ತಳಿರು-ತೋರಣ ಕಟ್ಟಿ, ಚಕ್ಕಡಿಯಲ್ಲಿ ಮೆರವಣಿಗೆ ಮಾಡುವ ಮೂಲಕ ಪುಟಾಣಿಗಳನ್ನು ಆಕರ್ಷಿಸಲಾಗುತ್ತಿದೆ. ಮಧ್ಯಾಹ್ನ ಬಿಸಿಯೂಟದಲ್ಲಿ ಒಬ್ಬಟ್ಟು, ಪಾಯಸ, ಪೇಡೆ ಸೇರಿ ಹಬ್ಬದೂಟ ಉಣ ಬಡಿಸಲಾಗುತ್ತದೆ. ಅದರೊಂದಿಗೆ ಈ ಬಾರಿ ಸಾರ್ವಜನಿಕ ಶಿಕ್ಷಣ ಇಲಾಖೆ ಮೊದಲ ಬಾರಿ ‘ಅಕ್ಷರ ಗುಡಿ’ ರಥೋತ್ಸವ ನಡೆಸಲು ಸಿದ್ಧತೆ ನಡೆಸಿದೆ.

ಜಿಲ್ಲೆಯ ಪ್ರಮುಖ ಗುಡಿಗಳು, ಮಹಾನ್‌ ವ್ಯಕ್ತಿಗಳು ಮತ್ತು ಕನ್ನಡ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು, ಇಲಾಖೆಯ ಪ್ರೋತ್ಸಾಹದಾಯಕ ಕಾರ್ಯಕ್ರಮಗಳು ಹಾಗೂ ಶಿಕ್ಷಣದ ಮಹತ್ವ ಸಾರುವುದು ‘ಅಕ್ಷರ ಗುಡಿ’ಯ ಆಶಯ. ಇದು 12 ಅಡಿ ಎತ್ತರವಿದ್ದು, ಷಟ್ಕೋನಾಕೃತಿಯಲ್ಲಿ ಐದು ಸ್ಥರದಲ್ಲಿ ಅಕ್ಷರ ಗುಡಿಯನ್ನು ನಿರ್ಮಿಸಲಾಗುತ್ತಿದೆ.

ಮೊದಲ ಸ್ಥರದಲ್ಲಿ ಜಿಲ್ಲೆಯ ವೀರನಾರಾಯಣ ದೇವಸ್ಥಾನ, ವೀರೇಶ್ವರ ಪುಣ್ಯಾಶ್ರಮ, ಜ| ತೋಂಟದಾರ್ಯ ಮಠ, ಲಕ್ಕುಂಡಿ ಸೇರಿದಂತೆ ಪ್ರಮುಖ 12 ದೇವಾಲಯಗಳ ಚಿತ್ರಪಟಗಳನ್ನು ಪ್ರದರ್ಶಿಸಲಾಗುತ್ತದೆ. ಎರಡನೇ ಸ್ಥರದಲ್ಲಿ ಕುಮಾರವ್ಯಾಸ, ಚಾಮರಸ, ಭೀಮಸೇನ ಜೋಶಿ, ಪಂ| ಪುಟ್ಟರಾಜಕವಿ ಗವಾಯಿಗಳು, ದೇಶದ ಸಹಕಾರಿ ರಂಗದ ಜನಕ ರಾಮನಗೌಡ ಸಿದ್ಧನಗೌಡ ಪಾಟೀಲ ಅವರ ಭಾವಚಿತ್ರಗಳಿಂದ ಅಲಂಕರಿಸಲಾಗುತ್ತದೆ.

ಮೂರನೇ ಸ್ಥರದಲ್ಲಿ ನಲಿಕಲಿ ಲೋಗೋ, ಕನ್ನಡ ಅಂಕಿ, ಅಕ್ಷರಗಳಿಂದ ಕಂಗೊಳಿಸುವಂತೆ ಮಾಡಲಾಗುತ್ತದೆ. ನಾಲ್ಕನೇ ಸ್ಥರದಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಎಂಟು ಮಂದಿ ಕನ್ನಡಿಗರ ಭಾವಚಿತ್ರಗಳು, ಐದನೇ ಸ್ಥರದಲ್ಲಿ ಕರ್ನಾಟಕ ಸರಕಾರದ ಲಾಂಛನ, ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಸರ್ವ ಶಿಕ್ಷಣ ಅಭಿಯಾನದ ಲಾಂಛನಗಳು ಹಾಗೂ ಕೊನೆಯದಾಗಿ ಗುಮ್ಮಟ ಹಾಗೂ ಕಳಶ, ‘ಅ’ ಅಕ್ಷರ ಧ್ವಜವನ್ನು ಹಾರಿಸಲಾಗುತ್ತದೆ.ಸ್ವಂತ ಖರ್ಚಿನಲ್ಲೇ ಗುಡಿ ಸಿದ್ಧ! ಶಾಲಾ ಆರಂಭೋತ್ಸವ ನಿಮಿತ್ತ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ರೂಪಿಸಿರುವ ‘ಅಕ್ಷರ ಗುಡಿ’ ಸ್ತಬ್ಧ ಚಿತ್ರದ ಮೆರವಣಿಗೆಗೆ ಸರಕಾರದಿಂದ ಯಾವುದೇ ಅನುದಾನ ಲಭ್ಯವಿಲ್ಲ. ಆದರೂ, ಮಕ್ಕಳು-ಪಾಲಕರು ಮತ್ತು ಸಾರ್ವಜನಿಕರ ಆಕರ್ಷಣೆಗಾಗಿ ಸುಮಾರು 20 ಸಾವಿರ ರೂ.ಗಳನ್ನು ಅಧಿಕಾರಿಗಳೇ ವಂತಿಗೆ ಸೇರಿಸಿ, ರೂಪಿಸುತ್ತಿದ್ದಾರೆ ಎಂದು ಹೇಳಲಾಗಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗ: ಮೇ 30 ರಂದು ನಗರದ ಭೂಮರೆಡ್ಡಿ ವೃತ್ತದಲ್ಲಿರುವ ಬಸವೇಶ್ವರ ಶಾಲೆಯಿಂದ ಸರಕಾರಿ ಶಾಲೆ ನಂ.8ರವರೆಗೆ ನಡೆಯಲಿರುವ ಶಾಲಾ ಆರಂಭೋತ್ಸವ‌ ಮೆರವಣಿಗೆ ಹಾಗೂ ಕಲಾತಂಡಗಳಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗ ನೀಡಲಿದೆ. ಅದರೊಂದಿಗೆ ಡಿಡಿಪಿಐ ರಚಿಸಿರುವ ಸಾಕ್ಷರತೆಯ ಹಿನ್ನೆಲೆಯ ಹಾಡು ಹಾಗೂ ಘೋಷವಾಕ್ಯಗಳೊಂದಿಗೆ ‘ಅಕ್ಷರ ಗುಡಿ’ ಮೆರವಣಿಗೆ ಸಾಗಲಿದೆ ಎಂದು ತಿಳಿದು ಬಂದಿದೆ.

ಜಿಲ್ಲೆಯ ಶಿಕ್ಷಣ ಇಲಾಖೆ ಅಧಿಕಾರಿಗಳು ನಡೆಸಿರುವ ಈ ರೀತಿಯ ಶಾಲಾ ಪ್ರಾರಂಭೋತ್ಸವಕ್ಕೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಶಾಲಾ ಪ್ರಾರಂಭೋತ್ಸವ ಎಂಬುದು ಮಕ್ಕಳಲ್ಲಿ ಹಬ್ಬದ ವಾತಾವರಣ ನಿರ್ಮಿಸಬೇಕು. ಮಕ್ಕಳಲ್ಲಿ ಶೈಕ್ಷಣಿಕ ವರ್ಷದ ಕೊನೆಯವರೆಗೂ ನೆನಪಿನಲ್ಲಿ ಉಳಿಯಬೇಕು ಎಂಬುದು ಇದರ ಪ್ರಯತ್ನ. ಜಿಲ್ಲೆ ಮತ್ತು ಪ್ರತಿ ತಾಲೂಕಿನಲ್ಲೂ ಅಕ್ಷರ ಗುಡಿ ನಿರ್ವಹಿಸಲು ಆದೇಶಿಸಿದ್ದೇನೆ. ಶಾಲಾ ಪ್ರಾರಂಭೋತ್ಸವಕ್ಕೆ ಸ್ಥಳೀಯ ಜನಪ್ರತಿನಿಧಿಗಳನ್ನು ಆಹ್ವಾನಿಸಲಾಗುತ್ತದೆ. -ಎನ್‌.ಎಚ್.ನಾಗೂರ, ಡಿಡಿಪಿಐ.

•ವೀರೇಂದ್ರ ನಾಗಲದಿನ್ನಿ

ಟಾಪ್ ನ್ಯೂಸ್

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Gadag

ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Gadag

ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.