ಮೂರು ತಿಂಗಳಿಗೊಮ್ಮೆ ಜನಸಂಪರ್ಕ ಸಭೆ

ಹೊರವರ್ತುಲ ರಸ್ತೆ ನಿರ್ಮಾಣಕ್ಕಾಗಿ ಸರ್ಕಾರಕ್ಕೆ ಪ್ರಸ್ತಾವನೆ

Team Udayavani, May 27, 2019, 10:41 AM IST

sm-tdy-2..

ಸಾಗರ: ನಗರಸಭೆ ಚುನಾವಣೆ ಹಿನ್ನೆಲೆಯಲ್ಲಿ ನಗರ ಅಭಿವೃದ್ಧಿಗೆ ಸಂಬಂಧಪಟ್ಟಂತೆ ಶಾಸಕ ಹಾಲಪ್ಪ ನಗರದ ಅಣಲೆಕೊಪ್ಪದ ಪತ್ರಿಕಾ ಭವನದಲ್ಲಿ ಪಕ್ಷದ ಪ್ರಣಾಳಿಕೆ ಬಿಡುಗಡೆಗೊಳಿಸಿದರು.

ಸಾಗರ: ನಗರದ ವಿವಿಧೆಡೆ ಕುಂದುಕೊರತೆ ನಿವಾರಣಾ ಕೇಂದ್ರಗಳ ಸ್ಥಾಪನೆ, ಮೂರು ತಿಂಗಳಿಗೊಮ್ಮೆ 31 ವಾರ್ಡ್‌ನಲ್ಲೂ ಜನಸಂಪರ್ಕ ಸಭೆ ಮೊದಲಾದ ಭರವಸೆಗಳನ್ನುಳ್ಳ ಬಿಜೆಪಿ ಪ್ರಣಾಳಿಕೆಯನ್ನು ನಗರಸಭೆ ಚುನಾವಣೆ ಹಿನ್ನೆಲೆಯಲ್ಲಿ ನಗರ ಅಭಿವೃದ್ಧಿಗೆ ಸಂಬಂಧಪಟ್ಟಂತೆ ಶಾಸಕ ಎಚ್. ಹಾಲಪ್ಪ ನಗರದ ಅಣಲೆಕೊಪ್ಪದ ಪತ್ರಿಕಾ ಭವನದಲ್ಲಿ ಭಾನುವಾರ ಬಿಡುಗಡೆಗೊಳಿಸಿದರು.

ಬಿಜೆಪಿ ನಗರಸಭೆ ಚುನಾವಣೆ ಹಿನ್ನೆಲೆಯಲ್ಲಿ ಒಂದಷ್ಟು ಅಂಶಗಳನ್ನು ಪ್ರಣಾಳಿಕೆ ರೂಪದಲ್ಲಿ ಜನರ ಎದುರು ಇಡುತ್ತಿದೆ. ಭ್ರಷ್ಟಾಚಾರರಹಿತ ಜನಸ್ನೇಹಿ ಆಡಳಿತ, ಗುಣಮಟ್ಟದ ಕಾಮಗಾರಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಅನುದಾನದಡಿ ಗಣಪತಿ ಕೆರೆ ಸರ್ವಾಂಗೀಣ ಅಭಿವೃದ್ಧಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಯೋಗದೊಂದಿಗೆ ಸುಸಜ್ಜಿತ ಟ್ಯಾಗೋರ್‌ ಕಲ್ಚರಲ್ ಕಾಂಪ್ಲೆಕ್ಸ್‌ ರಂಗಮಂದಿರ ನಿರ್ಮಾಣದ ಕನಸು ನಮ್ಮದು. ಹೊರವರ್ತುಲ ರಸ್ತೆ ನಿರ್ಮಾಣ ಕುರಿತು ಚಿಂತನೆ ನಡೆಸಲಾಗಿದ್ದು, ಈಗಾಗಲೇ ಈ ಸಂಬಂಧ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಸಾಗರ ನಗರ ಜನರ ಬಹುಕಾಲದ ಬೇಡಿಕೆಯಾಗಿರುವ ಬಿಎಚ್ ರಸ್ತೆಯನ್ನು ಚತುಷ್ಪಥ ರಸ್ತೆಯಾಗಿ ಅಭಿವೃದ್ಧಿಪಡಿಸಲಾಗುತ್ತದೆ.

ಎಲ್ಲ ಬಡಾವಣೆ ಮತ್ತು ರಸ್ತೆಗಳಿಗೆ ನಾಮಫಲಕ ಅಳವಡಿಕೆ, ಬೀದಿದೀಪ ಮತ್ತು ಕುಡಿಯುವ ನೀರಿನ, ನೈರ್ಮಲ್ಯ ಕುರಿತು ಹೆಚ್ಚಿನ ನಿಗಾ ವಹಿಸುವುದು, ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ, ಕ್ರೀಡಾ ಚಟುವಟಿಕೆಗಳಿಗೆ ಆದ್ಯತೆ, ಯೋಗ ಚಟುವಟಿಕೆಗಳನ್ನು ನಡೆಸುವುದು, ಅವಶಕ್ಯತೆ ಇರುವ ಕಡೆಗಳಲ್ಲಿ ರೈಲ್ವೆ ಓವರ್‌ ಮತ್ತು ಅಂಡರ್‌ ಬ್ರಿಡ್ಜ್ ನಿರ್ಮಾಣ, ಹಾಲಿ ಇರುವ ಕ್ರೀಡಾಂಗಣ ಮೇಲ್ದರ್ಜೆಗೆ ಏರಿಸುವುದು, ಹೊಸ ಕ್ರೀಡಾಂಗಣ ನಿರ್ಮಾಣ, ನಗರದ ವಿವಿಧೆಡೆ ಡಿಜಿಟಲ್ ಗ್ರಂಥಾಲಯ ನಿರ್ಮಾಣ, ಎಲ್ಲ ಸಂಘ-ಸಂಸ್ಥೆಗಳು ಮತ್ತು ಸಮುದಾಯಗಳಿಗೆ ಆದ್ಯತೆ ಮೇಲೆ ನಿವೇಶನ ಹಂಚಿಕೆ ಅಗತ್ಯ ಇರುವ ಕಡೆಗಳಲ್ಲಿ ವಾಹನ ಪಾರ್ಕಿಂಗ್‌ ವ್ಯವಸ್ಥೆ, ಅರ್ಹರಿಗೆ ಆಶ್ರಯ ನಿವೇಶನ ಹಂಚಿಕೆ, ಅಗತ್ಯ ಇರುವ ಕಡೆಗಳಲ್ಲಿ ಬಸ್‌ ತಂಗುದಾಣ ನಿರ್ಮಾಣ, ಗಣಪತಿ ಕೆರೆ ಕೆಳಭಾಗದಲ್ಲಿ ಕೆಆರ್‌ಎಸ್‌ ಮಾದರಿಯ ಉದ್ಯಾನವನ ನಿರ್ಮಾಣ, ಸುಸಜ್ಜಿತ ಗೋಶಾಲೆ, ಸರ್ಕಾರಿ ಆಸ್ಪತ್ರೆಯ ಸರ್ವತೋಮುಖ ಅಭಿವೃದ್ಧಿಗೆ ಆರೋಗ್ಯ ಸಾಗರ ಯೋಜನೆ, ಮಹಿಳೆಯರಿಗೆ ಸ್ವಯಂ ಉದ್ಯೋಗ ಹೀಗೆ ಅನೇಕ ಯೋಜನೆಗಳನ್ನು ನಗರಸಭೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಮೊದಲ ಮೂರೂವರೆ ವರ್ಷದಲ್ಲಿ ಜಾರಿಗೆ ತರಲಾಗುತ್ತದೆ. ಒಂದೊಮ್ಮೆ ನಾವು ನೀಡಿದ ಭರವಸೆ ಈಡೇರಿಸದೆ ಹೋದಲ್ಲಿ ಜನರು ನಮ್ಮನ್ನು ಹಿಡಿದು ಪ್ರಶ್ನಿಸಬಹುದು ಎಂದರು.

ಸ್ಮಶಾನ ಒತ್ತುವರಿ: ನಗರದ ಯಳವರಸಿ ಸರ್ವೇ ನಂ. 14ರಲ್ಲಿ 10 ಎಕರೆ ಜಾಗವನ್ನು ಸ್ಮಶಾನಕ್ಕಾಗಿ ಮೀಸಲಿಡಲಾಗಿತ್ತು. 8 ಎಕರೆ ಹಿಂದೂ ರುದ್ರಭೂಮಿ ಹಾಗೂ 2 ಎಕರೆ ಕ್ರಿಶ್ಚಿಯನ್‌ ರುದ್ರಭೂಮಿಗೆ ಜಮೀನು ಮೀಸಲಿಡಲಾಗಿತ್ತು. ನಗರ ಬ್ಲಾಕ್‌ ಕಾಂಗ್ರೆಸ್‌ರ ಮಾವ 8 ಎಕರೆ ಜಾಗವನ್ನು ಒತ್ತುವರಿ ಮಾಡಿಕೊಂಡು ಅಲ್ಲಿ ರಬ್ಬರ್‌ ಸೇರಿದಂತೆ ಬೇರೆಬೇರೆ ಬೆಳೆಯನ್ನು ಬೆಳೆಯುತ್ತಿದ್ದಾರೆ. ಈತನಕ ಅಧಿಕಾರಿಗಳು, ನಗರಸಭೆ ಆಡಳಿತ ಇದರ ಬಗ್ಗೆ ಗಮನ ಹರಿಸಿಲ್ಲ. ಇಲ್ಲಿಯವರೆಗೆ ಎಲ್ಲರನ್ನೂ ಖರೀದಿ ಮಾಡಿ ಬಾಯಿ ಮುಚ್ಚಿಸುವ ಪ್ರಯತ್ನ ಮಾಡಿದ್ದಾರೆ ಎಂದರು. ಗೋಷ್ಠಿಯಲ್ಲಿ ಬಿಜೆಪಿ ತಾಲೂಕು ಅಧ್ಯಕ್ಷ ಪ್ರಸನ್ನ ಕೆರೆಕೈ, ನಗರ ಅಧ್ಯಕ್ಷ ಆರ್‌. ಶ್ರೀನಿವಾಸ್‌, ಜಿಲ್ಲಾ ಕಾರ್ಯದರ್ಶಿ ಟಿ.ಡಿ. ಮೇಘರಾಜ್‌, ನಗರಸಭೆ ಚುನಾವಣೆ ಉಸ್ತುವಾರಿ ಸಂತೋಷ್‌ ಶೇಟ್, ಪ್ರಮುಖರಾದ ಕೆ.ಜಿ. ಸಂತೋಷ್‌, ನಾರಾಯಣ, ಅರುಣ ಸೂರನಗದ್ದೆ ಇನ್ನಿತರರು ಇದ್ದರು.

ಟಾಪ್ ನ್ಯೂಸ್

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.